ಕೊಡಗು ಜಿಲ್ಲೆ ಗೋಣಿಕೊಪ್ಪಲು ಮಹಿಳಾ ದಸರಾದಲ್ಲಿ ಸಾಧಕ ಮಹಿಳೆಯರಿಗೆ ಸನ್ಮಾನ ಮಾಡಿ ಗೌರವಿಸಿರುತ್ತಾರೆ. ಶ್ರೀ ಕಾವೇರಿ ದಸರಾ ಸಮಿತಿ ಗೋಣಿಕೊಪ್ಪಲು ನಡೆದಂತಹ ಈ ಕಾರ್ಯಕ್ರಮದಲ್ಲಿ ಮಹಿಳಾ ದಸರಾದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶ್ರೀಮತಿ ಮಂಜುಳಾ ರವರು ವಹಿಸಿಕೊಂಡಿದ್ದರು. ಕಾರ್ಯಕ್ರಮವನ್ನು ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮಾನ್ ಕುಲ್ಲಚಂಡ ಪ್ರಮೋದ್ ಗಣಪತಿರವರು ಉದ್ಘಾಟಿಸಿದರು, ದಸರಾ ಸಮಿತಿಯ ಸರ್ವ ಸದಸ್ಯರು ಹಾಗೂ ಸಾರ್ವಜನಿಕರು ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
