ಹುಣಸೂರು ತಾಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ. ಸಾರ್ವಜನಿಕರು ಬಿಳಿಕೆರೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಸ್ ಪಿ. ವಿಷ್ಣುವರ್ಧನ್. ಡಿವೈಎಸ್ಪಿ. ಗೋಪಾಲಕೃಷ್ಣ. ಸಂತೋಷ್ ಕಷ್ಯಪ್. ಸಬ್ ಇನ್ಸ್ಪೆಕ್ಟರ್ ಪೂಜಾ. ಭೇಟಿ ನೀಡಿದ್ದಾರೆ. ಮೃತರ ಬಗ್ಗೆ ಮಾಹಿತಿ ಕಲೆಹಾಕಲು ಪೊಲೀಸರು ಮುಂದಾಗಿದ್ದಾರೆ.
