ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗಂಗೆ ಕೊಳ್ಳದಲ್ಲಿ, ಮೀನುಗಾರಿಕೆಗೆ ಬಂದಿದ್ದ ಒರಿಸ್ಸಾ ರಾಜ್ಯದ ಕಾರ್ಮಿಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ.ರಾಜಸ್ಥಾನದ ಸಂಬಲಪುರದ ನಿವಾಸಿ ನಿರಂಜನ ಎಂಬಾತ ಮೃತಪಟ್ಟ ಕಾರ್ಮಿಕ ಎನ್ನಲಾಗಿದ್ದು ಮೀನುಗಾರಿಕೆಗಾಗಿ ಒರಿಸ್ಸಾದಿಂದ ಗೋಕರ್ಣಕ್ಕೆ ಬಂದಿದ್ದ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗೋಕರ್ಣ ಪೊಲೀಸರು ದಾವಿಸಿದ್ದು ಗೋಕರ್ಣ ಸರ್ಕಾರಿ ಆಸ್ಪತ್ರೆಗೆ ಶವ ರವಾನಿಸಲಾಗಿದೆ.
ಈ ಕುರಿತು ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
