• ರಾಜ್ಯದಲ್ಲಿ ಒಟ್ಟು 40,998 ಕೆರೆಗಳಿದ್ದು, ಇವುಗಳ ಪೈಕಿ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ 26,365ಕೆರೆಗಳು, ಸಣ್ಣ ನೀರಾವರಿಯಲ್ಲಿ 3,247, ಬಿಬಿಎಂಪಿ ವ್ಯಾಪ್ತಿಯಲ್ಲಿ 117 ಕೆರೆಗಳಿವೆ.
• ರಾಜ್ಯದಲ್ಲಿ 30 ಸಾವಿರ ಕೆರೆಗಳ ಸರ್ವೇ ಕಾರ್ಯವನ್ನು ಕಂದಾಯ ಇಲಾಖೆ ಈಗಾಗಲೇ ಪೂರ್ಣಗೊಳಿಸಿದೆ. ಉಳಿದಿರುವ 10,754 ಕೆರೆಗಳ ಸಮೀಕ್ಷೆ ಕಾರ್ಯವನ್ನು ಆರು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು.
• ಕೆರೆ ಒತ್ತುವರಿ ತೆರವು ಕಾರ್ಯ ಬಾಕಿಯಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮಳೆಗಾಲದ ಒಳಗಾಗಿ ಕೆರೆ ಒತ್ತುವರಿಯನ್ನು ತೆರವುಗೊಳಿಸಿ, ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು.
• ಕೆರೆಗಳ ಸಂರಕ್ಷಣೆ ಕಾರ್ಯವನ್ನು ನರೇಗಾ ಅಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೈಗೆತ್ತಿಕೊಳ್ಳಬೇಕು.
• ಮೀನುಗಾರಿಕಾ ಇಲಾಖೆ ವತಿಯಿಂದ ಎಲ್ಲಾ ಕೆರೆಗಳಿಗೆ ಮೀನು ಮರಿಗಳನ್ನು ಬಿಡುವ ಕಾರ್ಯ ಮಾಡಿದರೆ ಆದಾಯ ಗಳಿಸಲು ಸಾಧ್ಯವಿದೆ.
• ನಗರ ಪ್ರದೇಶದ ಕೆರೆಗಳು ಮಾತ್ರವಲ್ಲದೆ, ರಾಜ್ಯದ ಎಲ್ಲಾ ಕೆರೆಗಳ ಮಾಲಿನ್ಯದ ಮಟ್ಟವನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಪರಿಶೀಲಿಸಿ ನಿಯಮಿತವಾಗಿ ವರದಿ ಸಲ್ಲಿಸಬೇಕು. ಈ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳು ಶ್ರೀ ಸಿದ್ಧರಾಮಯ್ಯ ಅವರು ಹಾಗೂ ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ N S ಬೋಸರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು