ಮಂಡ್ಯ ಅರಳಿ ಮರದ ಕೆಳಗೆ ವಿರಮಿಸುತ್ತಿದ್ದ ರೈತನ ಕಾಲುಗಳ ಮೇಲೆ ಟಿಪ್ಪರ್ ಹರಿದ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಆಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುಟ್ಟೇಗೌಡ ಎಂಬುವವರ ಮೇಲೆ ಹರಿದ ಪರಿಣಾಮ ಎರಡು ಕಾಲುಗಳಿಗೆ ಗಂಭೀರ ಗಾಯವಾಗಿದೆ.
ಪುಟ್ಟೇಗೌಡರ ಎರಡು ಕಾಲುಗಳು ನಜ್ಜುಗುಜ್ಜಾಗಿದೆ.
ಗಾಯಾಳುವನ್ನ ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
