ಅರ್ಥ ಕಳೆದುಕೊಳ್ಳುತ್ತಿರುವ ಕಾರ್ಮಿಕ ದಿನ

Share

ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಮೇ 1 ನ್ನು ಅಂತರ್ ರಾಷ್ಟ್ರೀಯ ಕಾರ್ಮಿಕ ದಿನ ಎಂದು ಆಚರಿಸಲಾಗುತ್ತದೆ. ಈ ಕಾರ್ಮಿಕ ದಿನಾಚರಣೆಯ ಹಿನ್ನಲೆಯು ಆಸ್ಟ್ರೇಲಿಯಾ ಮತ್ತು ಅಮೇರಿಕಾ ದಿಂದ ಹುಟ್ಟಿದ್ದು ಆದರೇ ಅಲ್ಲಿ ಮೇ 1 ರಂದು ಕಾರ್ಮಿಕ ದಿನಾಚರಣೆ ಆಚರಿಸುವುದಿಲ್ಲ. ಕೆಂಪು ವರ್ಣೀಯ ಅಥವಾ ಕಮ್ಯುನಿಸ್ಟ್ ತತ್ವ ಸಿದ್ದಾಂಥಗಳ ಒತ್ತಡವು ಭಾರತದಂತಹ ಅಭಿವೃದ್ಧಿಶೀಲ ದೇಶಗಳ ಮೇಲೆ ಬಲವಂತವಾಗಿ ಹೇರಲ್ಪಡುತ್ತವೆ. ಭಾರತ ಸೇರಿದಂತೆ ಅಭಿವೃದ್ಧಿಶೀಲ ದೇಶಗಳು ಮೇ 1ನ್ನು ಅಂತರ್ ರಾಷ್ಟ್ರೀಯ ಕಾರ್ಮಿಕ ದಿನವೆಂದು ಆಚರಿಸಿ ಕಾರ್ಮಿಕರಿಗೆ ಸಿಹಿ ಹಂಚಿಯೋ ಅಂದು ರಜಾ ನೀಡಿಯೋ ಸುಮ್ಮನಾಗುತ್ತಾರೆ. ಅದೇ ಚೀನಾ , ಅಮೇರಿಕಾ ಆಸ್ಟ್ರೇಲಿಯಾ ನಂತಹ ಮುಂದುವರೆದ ದೇಶಗಳು ಕಾರ್ಮಿಕ ವರ್ಗವನ್ನು ಪ್ರಾಣಿಗಳಿಗಿಂತಲೂ ಕಡೆಯಾಗಿ ನೋಡುತ್ತಾರೆ. ಅಂತರ್ ರಾಷ್ಟ್ರೀಂiÀi ಮಾನವ ಹಕ್ಕುಗಳು ಸಮಾನ ದುಡಿಮೆಗೆ ಸಮಾನ ವೇತನ ನೌಕರನಂತೆ ಸಾಮಾನ್ಯ ಕಾರ್ಮಿಕನಿಗೆ ನೈಸರ್ಗಿಕ ಭತ್ಯೆಗಳನ್ನು ನೀಡಬೇಕೆಂದು ಕಮ್ಯುನಿಸ್ಟ್ ವಾದವನ್ನು ನಮ್ಮಂತಹ ಪ್ರಗತಿ ಶೀಲ ದೇಶಗಳ ಮುಂದೆ ಮಾನವೀಯತೆ ಮರೆಯಾಗಿರುತ್ತವೆ. ಭಾರತದಲ್ಲಿ ಕಾರ್ಮಿಕರ ದಿನಾಚರಣೆ ಆಚರಿಸಲು ಮೇ 1 ಏಕೆಂದರೆ ಉತ್ತರವಿಲ್ಲ. 1886ರ ಸುಮಾರಿಗೆ ಮೇ 1 ರಂದು ಆಸ್ಟ್ರೇಲಿಯಾದಲ್ಲಿ 8 ಗಂಟೆಗಳ ಕಾಲ ಕೆಲಸ ನಿರ್ವಹಿಸಲು ಮಾತ್ರ ಸಾಧ್ಯ ಎಂಬ ಹೋರಾಟ ಹೊತ್ತಿಕೊಂಡು ಅಮೇರಿಕದಲ್ಲಿಯೂ ಕೂಡ ಕಾರ್ಮಿಕ ದಂಗೆಗಳು ಮೇ 1 ರಿಂದ ಪ್ರಾರಂಭವಾಗಿದ್ದರಿಂದ ಮೇ 1ನ್ನು ಅಂತರ್ ರಾಷ್ಟ್ರೀಯ ಕಾರ್ಮಿಕ ದಿನವೆಂದು ಆಚರಿಸಲಾಗುತ್ತದೆ. ಆದರೇ ಅಮೇರಿಕ ಮತ್ತು ಆಸ್ಟ್ರೇಲಿಯಾಗಳಲ್ಲಿ ಅಲ್ಲ. ಭಾರತ ಮಟ್ದದಲ್ಲಿ ಹೇಳುವುದಾದರೇ ಕಾರ್ಮಿಕ ದಂಗೆಗಳು ಹಲವಾರು ನಡೆದಿವೆ. ಸೆಣಬು ಕಾರ್ಖಾನೆ ಕಾರ್ಮಿಕರ ದಂಗೆ, ರೈಲ್ವೆ ಕಾರ್ಮಿಕರ ದಂಗೆ, ಜವಳಿ ಕಾರ್ಮಿಕರ ದಂಗೆ , ಸರ್ಕಾರಿ ಮುದ್ರಣಾಲಯದ ಕೆಲಸಗಾರರ ದಂಗೆ ಹೀಗೆ ಬೆಳೆಯುತ್ತಾ ಹೋಗುತ್ತದೆ. ಅದರಲ್ಲಿಯೂ ಇತ್ತೀಚೆಗೆ ಅಂದರೆ ತಮಿಳುನಾಡಿನಲ್ಲಿ ದಿವಂಗತ ಜಯಲಲಿತ 2003 ರಲ್ಲಿ ಮುಷ್ಕರ ನಿರತ 1 ಲಕ್ಷದ 76 ಸಾವಿರ ಸರ್ಕಾರಿ ನೌಕರರು ಮತ್ತು ಶಿಕ್ಷಕರನ್ನು ವಜಾ ಮಾಡಿದ್ದು ಹೋರಾಟದ ಬಿಸಿಯಿಂದ ಮತ್ತೆ ಕೆಲಸಕ್ಕೆ ತೆಗೆದುಕೊಂಡಿದ್ದು ಇತಿಹಾಸದ ಪುಟದಲ್ಲಿ ಸ್ಪಷ್ಟವಾಗಿದ್ದರೂ ಕೂಡ ಮೇ 1ನ್ನು ನಾವೇಕೆ ಕಾರ್ಮಿಕ ದಿನಾಚರಣೆಯನ್ನಾಗಿ ಆಚರಿಸಬೇಕು?
ಇನ್ನೂ ಕಾರ್ಮಿಕ ದಿನಾಚರಣೆಯ ಅರ್ಥ ವ್ಯಾಪ್ತಿಯನ್ನು ಅರ್ಥೈಸುವುದಾದರೆ ಭಾರತವು ಅತ್ಯಂತ ಸಂಕೀರ್ಣ ಅರ್ಥ ವ್ಯವಸ್ಥೆಯ ದೇಶವಾಗಿದ್ದು ದೇಶದ ಅರ್ಥ ವ್ಯವಸ್ಥೆಯಲ್ಲಿ ಸರ್ಕಾರಿ ನೌಕರರು, ಖಾಸಗೀ ನೌಕರರು ಮತ್ತು ಅಸಂಘಟಿತ ಕಾರ್ಮಿಕ ವರ್ಗ ಎಂದು 3 ವಲಯಗಳಾಗಿ ವಿಂಗಡಿಸಬಹುದು. ಅಸಂಘಟಿತ ವಲಯ ಎಂದರೆ ಗಾರ್ಮೆಂಟ್ಸ್ ಉಧ್ಯಮ, ಖಾಸಗೀ ವಾಹನ ಚಾಲಕರು, ಗುತ್ತಿಗೆ ಆಧಾರದ ನೌಕರರು ಮತ್ತು ಸಣ್ಣ ಪುಟ್ಟ ಕಛೇರಿ, ಅಂಗಡಿಗಳ ಕೆಲಸಗಾರರು ಸೇರುತ್ತಾರೆ. ಈ ವಲಯದಲ್ಲಿ ಕೆಲಸದ ಅತಂತ್ರದ ಜೊತೆಗೆ ಹಲವಾರು ಸವಾಲುಗಳನ್ನು ಕಾರ್ಮಿಕ ವರ್ಗವು ಅನುಭವಿಸುತ್ತಿದೆ. ಸರ್ಕಾರವಾಗಲೀ, ಉಧ್ಯಮದಾರರಾಗಲೀ, ಕಾರ್ಮಿಕವರ್ಗದ ಸಮಸ್ಯೆಗಳತ್ತ ಗಮನ ಹರಿಸುತ್ತಿಲ್ಲ. ಇನ್ನು ಕಾರ್ಮಿಕರ ಹೆಸರಿನಲ್ಲಿ ಕೆಲವು ಕಾರ್ಮಿಕ ಸಂಘಟನೆಗಳು ಹುಟ್ಟಿಕೊಂಡು ಕಾರ್ಮಿಕರ ಹಿತ ಕಾಯುವ ಬದಲು ತಮ್ಮ ಲಾಭಿ ಮಾಡಿಕೊಳ್ಳುವುದು. ಮೋಜು ಮಸ್ತಿಯಲ್ಲಿ ತೊಡಗುವುದು, ಮಾಲೀಕರ ಪರವಾಗಿ ನಿಂತು ಕಾರ್ಮಿಕರಿಗೆ ಅನ್ಯಾಯ ಮಾಡುವುದೇ ಹೆಚ್ಚಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಕಾರ್ಮಿಕರು ದಿನದ 10 ರಿಂದ 15 ಗಂಟೆಗಳ ಕಾಲ ಪ್ರಾಣಿಗಳಂತೆ ದುಡಿಯುವ ಪರಿಸ್ಥಿತಿಗೆ ಬಂದು ನಿಂತಿದ್ದಾರೆ. ಏಕೆಂದರೆ ಜೀವನ ನಿರ್ವಹಣೆಗೆ, ಶಿಕ್ಷಣ ಮತ್ತು ಆರೋಗ್ಯದ ವ್ಯಾಪಾರೀಕರಣ, ಬೆಲೆ ಏರಿಕೆಯಂತಹ ಪರಿಸ್ಥಿತಿಗಳು ಸಾಮಾನ್ಯ ಕಾರ್ಮಿಕನ ಮೇಲೆ ಬರೆ ಎಳೆಯುತ್ತಿದೆ. ಜೊತೆಗೆ ಭಾರತದಂತಹ ಅಭಿವೃದ್ಧಿ ಶೀಲ ದೇಶಗಳಲ್ಲಿ ನವ ಉಧ್ಯಮ ಸೇರಿದಂತೆ ಸಣ್ಣ ಮತ್ತು ಮಧ್ಯಮ ಗಾತ್ರದ ಉಧ್ಯಮ ನಡೆಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ಹೀಗೆ ಇರುವಾಗ ರಜಾಕ್ಕಾಗಿ, ಸಿಹಿಗಾಗಿ, ಮೋಜು ಮಸ್ತಿಗಾಗಿ ಮೇ 1 ನ್ನು ಕಾರ್ಮಿಕ ದಿನ ಎಂದು ಆಚರಿಸಲಾಗುತ್ತಿದೆ.


Share

ಸ್ವಾಮಿ ವಿವೇಕಾನಂದ

Share

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ 12, 1863 – ಜುಲೈ 4, 1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ.
ಜನನ
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863, ಜನವರಿ 12ರಂದು ಕೊಲ್ಕತ್ತದಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿμï ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ರಾಮಕೃಷ್ಣರ ಒಡನಾಟ :
ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವಡ್ಸ್ರ್ವವರ್ತ್ ಅವರ “ದ ಎಕ್ಸ್ಸಕರ್ಶನ್” ಎಂಬ ಕವಿತೆಯಲ್ಲಿನ “ಸಮಾಧಿ” ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.
1881ನೇ ಇಸವಿ ನವೆಂಬರದಲ್ಲಿ ಎಫ್.ಎ (ಲಲಿತಕಲೆ) ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.
1882 ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.
ಮೊದಮೊದಲಿಗೆ ರಾಮಕೃಷ್ಣರ ಭಾವಪರವಶತೆಯ ಮತ್ತು ದೂರದೃಷ್ಟಿಯನ್ನು ಕೇವಲ ಕಾಲ್ಪನಿಕ ಬರಿ ಭ್ರಮೆ ಎಂದು ಭಾವಿಸಿದ್ದರು. 1884 ಇಸವಿಯಲ್ಲಿ ಅನಿರೀಕ್ಷಿತವಾಗಿ ನರೇಂದ್ರರ ತಂದೆಯವರು ಇಹಲೋಕ ತ್ಯಜಿಸಿದರು. ಅವರ ಮರಣಾ ನಂತರ ಕುಟುಂಬ ದಿವಾಳಿಯಾಯಿತು, ಸಾಲಗಾರರ ಬಾಧೆ ಶುರುವಾಯಿತು.ಅವರ ಕುಟುಂಬದವರು ಪೂರ್ವಜರ ಮನೆಯಿಂದ ಹೊರಗೆ ಹಾಕಿದರು.
ಅವರು ಕೆಲಸ ಹುಡುಕುವುದರಲ್ಲಿ ವಿಫಲರಾದಾಗ, ದೇವರ ಅಸ್ತಿತ್ವದ ಬಗ್ಗೆಯೇ ಸಂದೇಹಪಟ್ಟರು. ಆದರೆ ರಾಮಕೃಷ್ಣರ ಸಾನಿಧ್ಯ ಅವರಿಗೆ ಸಾಂತ್ವನ ನೀಡುತಿತ್ತು. ಒಂದು ದಿನ ನರೇಂದ್ರರು ಅವರ ಕುಟುಂಬದ ಅಭ್ಯುದಯಕ್ಕೋಸ್ಕರ ಕಾಳಿ ದೇವಿಯನ್ನು ಪ್ರಾರ್ಥಿಸುವಂತೆ ರಾಮಕೃಷ್ಣರನ್ನು ಕೇಳಿಕೊಂಡರು. ಅದಕ್ಕೆ ಅವರು ನೀನೊಬ್ಬನೇ ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ಪ್ರಾರ್ಥಿಸು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಎರಡು, ಮೂರು ಸಲ ದೇವಸ್ಥಾನಕ್ಕೆ ಹೋದರು.
ಆದರೆ ಅವರು ಯಾವುದೇ ರೀತಿಯ ಲೌಕಿಕ ಅವಶ್ಯಕತೆಗಳನ್ನು ಪೂರೈಸಲು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುವುದರಲ್ಲಿ ವಿಫಲರಾದರು. ಆದರೆ ಪ್ರತಿ ಬಾರಿಯು ಮುಕ್ತಿಗಾಗಿ ಕೇಳಿಕೊಳ್ಳಲμÉ್ಟೀ ಶಕ್ತರಾದರು. ಕೊನೆಗೆ ಅವರು ಸರ್ವಸಂಗ ಪರಿತ್ಯಾಗ ಮಾಡಿ ರಾಮಕೃಷ್ಣರನ್ನು ಗುರುಗಳನ್ನಾಗಿ ಸ್ವೀಕಾರ ಮಾಡಿದರು. 1885 ರಲ್ಲಿ ರಾಮಕೃಷ್ಣರು ಕಲ್ಕತ್ತಾದ ಕೊಸ್ಸಿಪುರದಲ್ಲಿ ಇರುವ ಅವರ ತೋಟದ ಮನೆಯಲ್ಲಿ ಗಂಟಲಿನ ಹುಣ್ಣಿನಿಂದ ಬಳಲುತಿದ್ದರು.
ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು 1886, ಆಗಸ್ಟ 16 ರಂದು ನಿಧನ ಹೊಂದಿದರು.
ರಾಮಕೃಷ್ಣ ಮಠದ ಸ್ಥಾಪನೆ
ರಾಮಕೃಷ್ಣರ ಮರಣಾ ನಂತರ ಅವರ ಮಠಕ್ಕೆ ಬರುವ ಆದಾಯವು ಕಡಿಮೆಯಾಯಿತು. ಇದರಿಂದಾಗಿ ಅವರು ಬೇರೆ ಜಾಗವನ್ನು ಹುಡುಕಬೇಕಾಯಿತು. ಬಾರನಗರದಲ್ಲಿ ನರೇಂದ್ರರು ಶಿಥಿಲವಾದ ಮನೆಯನ್ನು ಖರೀದಿಸಿ, ಆ ಮನೆಯನ್ನು ಅವರು ಮಠವನ್ನಾಗಿ ಪರಿವರ್ತಿಸಲು ಆಲೋಚಿಸಿದರು. ಆ ಮನೆಯ ಬಾಡಿಗೆಯನ್ನು ಭಿಕ್ಷಾಟನೆ ಮೂಲಕ ತುಂಬುತಿದ್ದರು.
ಈ ಮನೆಯೆ ರಾಮಕೃಷ್ಣರ ಮಠದ ಮೊದಲ ಶಾಖೆಯಾಯಿತು. ಅಲ್ಲಿ ನರೇಂದ್ರ ಮತ್ತು ಅವರ ಶಿಷ್ಶರು ಹೆಚ್ಚಿನ ಸಮಯವನ್ನು ಧ್ಯಾನ ಮತ್ತು ಧಾರ್ಮಿಕ ವಿಷಯಗಳನ್ನು ಅಭ್ಯಾಸ ಮಾಡುವಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದರು. ಮುಂದಿನ ಆ ದಿನಗಳನ್ನು ನೆನೆಸುತ್ತಾ “ಪ್ರತಿದಿನ ಬೆಳಿಗ್ಗೆ 3 ರಿಂದ ರಾತ್ರಿಯವರೆಗು ನಾವು ಧ್ಯಾನದಲ್ಲೆ ಕಳೆಯುತ್ತಿದ್ದೆವು.
ಜಗತ್ತಿನ ಪರಿವೆಯೆ ಇಲ್ಲದೆ, ನಮ್ಮ ಸಾಧನಾ ಪ್ರಪಂಚದಲ್ಲಿ ಮುಳುಗಿದ್ದೆವು” 1881 ನೇ ಇಸವಿಯಲ್ಲಿ ನರೇಂದ್ರರು ವೈಷ್ಣವ ಚರಣ್ ಬಾಸ್ಕರವರ ಜೊತೆ ಬಂಗಾಳಿ ಭಾμÉಯ ಕವಿತೆಗಳನ್ನೊಳಗೊಂಡ “ಸಂಗೀತ ಕಲ್ಪತರು “ಎಂಬ ಪುಸ್ತಕವನ್ನು ಸಂಗ್ರಹಿಸಿದರು. ಆದರೆ ಹಲವು ಸಮಸ್ಯೆಗಳಿಂದ ಅದನ್ನು ಪ್ರಕಟಿಸಲಾಗಲಿಲ್ಲ..
ವಿವೇಕಾನಂದರ ಭಾರತ ಪರ್ಯಟನೆ
1888 ನರೇಂದ್ರರು ಭಾರತ ಪರ್ಯಟನೆಗೆ ಹೊರಟರು. ಅವರು ಪರ್ಯಟನೆಗೆ ಹೋಗುವಾಗ ಅವರ ಜೊತೆಗೆ ಕಮಂಡಲು ದಂಡ ಮತ್ತು ಅವರಿಗೆ ಪ್ರಿಯವಾದ ಭಗವದ್ಗೀತೆ ಹಾಗೂ “ದಿ ಇಮಿಟೆಶ್ನ್ ಆಫ್ ಕ್ರೈಸ್ತ್” ಎಂಬೆರಡು ಪುಸ್ತಕಗಳನ್ನು ತಮ್ಮ ಜೊತೆಗೆ ಒಯ್ಯುತ್ತಿದ್ದರು. ನರೇಂದ್ರರು ಸತತವಾಗಿ ಐದು ವರ್ಷಗಳ ಕಾಲ ಭಾರತವನ್ನು ಸಂಚರಿಸಿದರು.
ಉತ್ತರ ಭಾರತ
1888 ರಲ್ಲಿ ಗೌತಮ ಬುದ್ಧ ಮತ್ತು ಆದಿ ಶಂಕರಾಚಾರ್ಯರು ಧರ್ಮ ಪ್ರಚಾರ ಮಾಡಿದ ವಾರಣಾಸಿಗೆ ಭೇಟಿ ನೀಡಿದರು. ಅಲ್ಲಿ ಅವರು ಬಂಗಾಳಿ ಬರಹಗಾರ ಭೂದೇವ ಮುಖ್ಯೋಪಾಧ್ಯಾಯ ಮತ್ತು ಹಿಂದು ಸಂತ ತ್ರ್ಯೆಲಂಗರನ್ನು ಭೇಟಿ ಮಾಡಿದರು. ಭೂದೇವ ಮುಖ್ಯೋಪಾಧ್ಯಾಯರು “ಇಂತಹ ದೂರದೃಷ್ಟಿ ಮತ್ತು ವಿಚಾರವಾದವನ್ನು ಇಷ್ಟು ಕಿರಿಯ ಪ್ರಾಯದಲ್ಲಿ ಪಡೆದುಕೊಂಡ ನೀನು ಮುಂದೊಂದು ದಿನ ದೊಡ್ಡ ವ್ಯಕ್ತಿಯಾಗುವೆ” ಎಂದು ಪ್ರಶಂಸಿಸಿದರು. ನಂತರ ಸಂಸ್ಕ್ರತ ಮತ್ತು ವ್ಯೆದಿಕ ವಿದ್ವಾಂಸರಾದ ಬಾಬು ಪರಮದಾಸ್ ಮಿತ್ರ ಅವರನ್ನು ಭೇಟಿ ಮಾಡಿದರು. ನಂತರ ಅವರು ಅಯೋಧ್ಯಾ, ಲಕ್ನೋ ವೃಂದಾವನ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದರು.
ಅದ್ವೈತ ಸಿದ್ಧಾಂತದ ಉಪಯುಕ್ತತೆ
ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು.
ಇದೇ ಅವರ ಮಂತ್ರವಾಯಿತು ಮತ್ತು ಅವರ “ದರಿದ್ರ ನಾರಾಯಣ ಸೇವೆ’ ಎಂಬ ತತ್ತ್ವಕ್ಕೆ ದಾರಿ ಮಾಡಿ ಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು.
ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ.
ವಿವೇಕಾನಂದರ ವಿಶ್ವಪರ್ಯಟನೆ
ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. *ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕøತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸರ್ವಧರ್ಮಸಮ್ಮೇಳನದಲ್ಲಿ ಮಾಡಿದ ಭಾಷಣ
ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು1893 ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು. ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು. ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾಥರ್ಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39 ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.
ಸ್ವದೇಶ ಮಂತ್ರ
ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!
ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು. *ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‍ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.
ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು ತಮ್ಮಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.


Share

ವಿಶ್ವ ಕುಟುಂಬ ದಿನದ (Global Family Day)ಪ್ರಯುಕ್ತ ವಿಶೇಷ ಲೇಖನ

Share

ಕುಟುಂಬವು ಸಮಾಜದ ಬಹು ಮುಖ್ಯ ಅಂಗವಾಗಿದೆ.ಉತ್ತಮ ಕುಟುಂಬದಿಂದಲೇ ಅತ್ಯುತ್ತಮ ಸಮಾಜ ನರ್ಮಾಣ ಸಾಧ್ಯ.”ವಸುದೈವ ಕುಟುಂಬಕಂ” ಎಂಬೊಂದು ನುಡಿಯಿದೆ.ಇದರ ರ್ಥ ಇಡೀ ವಿಶ್ವವೇ ನಮ್ಮ ಕುಟುಂಬ ಎಂದು. ಇದು ಕುಟುಂಬವೊಂದರ ಮಹತ್ವವನ್ನು ಸಾರುತ್ತದೆ. ಈ ಕುಟುಂಬ ಎಂಬ ಪರಿಕಲ್ಪನೆ ತುಂಬಾ ಪವಿತ್ರ ಮತ್ತು ಮಹತ್ವವಾದದ್ದು. ಬಹಳಷ್ಟು ಸಂದರ್ಭಗಳಲ್ಲಿ ಮಕ್ಕಳು ಜನರೊಂದಿಗೆ ಬೆರೆತು ಸಾಮಾಜಿಕವಾಗಿ ಸಮರ್ಥರಾಗಲು ಕುಟುಂಬ ಒಂದು ಅಗತ್ಯ ಸಂಸ್ಥೆಯಾಗಿ ನಿಲ್ಲುತ್ತದೆ. ಆಧುನಿಕ ಜೀವನಕ್ಕೆ ಹೊಂದಿಕೊಂಡಂತೆ ಕುಟುಂಬಗಳು ಸಣ್ಣದಾಗತೊಡಗಿವೆ. ಬಾಲ್ಯದಲ್ಲಿ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುವ ತಂದೆ-ತಾಯಿಯನ್ನು ವೃದ್ಧಾಪ್ಯದಲ್ಲಿ ಆಶ್ರಮಕ್ಕೆ ದೂಡುವ ಮಕ್ಕಳಿಗೆ ಕುಟುಂಬದ ಮಹತ್ವವನ್ನು ತಿಳಿಸಿಕೊಡುವ ಕಾರ್ಯವಾಗಬೇಕು. ಪ್ರತಿಯೋರ್ವ ವ್ಯಕ್ತಿ ಮತ್ತು ಸಮಾಜವನ್ನು ಒಂದೆಡೆ ಕೇಂದ್ರಿಕರಿಸುವ ಈ ವ್ಯವಸ್ಥೆ ನಮ್ಮ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಬಹುಶಃ ಕುಟುಂಬವೆಂಬ ಪರಿಕಲ್ಪನೆ ಇಲ್ಲದಿದ್ದರೆ. ಇಡೀ ಜಗತ್ತನ್ನು ಊಹಿಸಲು ಅಸಾಧ್ಯವಾಗುತ್ತಿತ್ತು. ಅಷ್ಟರ ಮಟ್ಟಿಗೆ ಕುಟುಂಬದ ಅಗತ್ಯ ನಮ್ಮ ವಿಶ್ವಕ್ಕೆ ಇದೆ.ಮುಂದೆ ಕೂಡಾ ಜಗತ್ತು ಶಾಂತಿ, ಸಂಯಮದ ಹಾದಿಯಲ್ಲಿ ಸಾಗಬೇಕಿದ್ದರೆ ಅದಕ್ಕೆ ಕುಟುಂಬದ ತಳಪಾಯ ಅತಿ ಅಗತ್ಯ.ಅದು ನಮ್ಮ ದೇಶವಾಗಿರಲಿ ಅಥವಾ ವಿದೇಶವಾಗಿರಲಿ ಎಲ್ಲಾ ಕಡೆಯೂ ಕುಟುಂಬವೆಂಬ ಭದ್ರ ಬುನಾದಿ ಇದ್ದೇ ಇದೆ. ಆದ್ದರಿಂದಲೇ ನಮ್ಮ ವಿಶ್ವ ಇಂದು ಉಳಿದುಕೊಂಡು ಮುಂದಕ್ಕೆ ಬೆಳೆಯುತ್ತಿದೆ.
ಭಾರತದ ಇತಿಹಾಸ ಹಾಗೂ ಸಂಸ್ಕøತಿಯನ್ನು ಅವಲೋಕಿಸಿದಾಗ, ಕುಟುಂಬವನ್ನು ಅವಿಭಕ್ತ ಹಾಗೂ ವಿಭಕ್ತ ಎಂದು ವರ್ಗಿಕರಿಸಬಹುದು. ವಿದೇಶಿ ಸಂಸ್ಕೃತಿಯ ಪ್ರಭಾವದಿಂದಾಗಿ ಇತ್ತೀಚಿಗೆ ಏಕ ಪೆÇೀಷಕ ಕುಟುಂಬವೊಂದು ನಿರ್ಮಾಣವಾಗಿದೆ ಅದುವೇ ವಿಭಕ್ತ ಕುಟುಂಬ.
ಅವಿಭಕ್ತ ಕುಟುಂಬ ಅಥವಾ ಕೂಡು ಕುಟುಂಬ ಇದ್ದಾಗ ಮಾತ್ರ ಸಮಾಜದ ನಿರ್ಮಾಣಕ್ಕೆ ನಾಂದಿ ಎನ್ನುವ ಮಾತಿದೆ. ಒಂದೇ ಕಡೆಯಲ್ಲಿ ಅನೇಕ ದಂಪತಿಗಳು ಇರುವಂತಹ ಕುಟುಂಬ. ಸಾಮಾನ್ಯವಾಗಿ ಹಿರಿಯರೊಬ್ಬರು ಇದಕ್ಕೆ ಯಜಮಾನರಾಗಿರುತ್ತಾರೆ. ಅವಿಭಕ್ತ ಕುಟುಂಬ ಎಂದರೆ ಒಂದೇ ಮನೆಯಲ್ಲಿ ಎರಡು ಅಥವಾ ಅದಕ್ಕಿಂತ ಹೆಚ್ಚಿನ ತಲೆಮಾರಿನವರು ವಾಸಿಸುವುದನ್ನು ಅವಿಭಕ್ತ ಕುಟುಂಬ ಎನ್ನಲಾಗುತ್ತದೆ. ಭಾರತೀಯ ಪರಂಪರೆಯಲ್ಲಿ ಕುಟುಂಬಕ್ಕೆ ಅದರದ್ದೇ ಆದ ಪ್ರಾಮುಖ್ಯವಿದೆ. ಅವಿಭಕ್ತ ಕುಟುಂಬಗಳನ್ನು ಹೊಂದಿದ್ದ ಭಾರತೀಯ ಸಂಸ್ಕೃತಿಯೂ ಕೂಡಿ ಬಾಳುವುದನ್ನು ಕಲಿಸಿಕೊಡುತ್ತದೆ. ಇಲ್ಲಿ ಪ್ರೀತಿ, ಒಗ್ಗಟ್ಟುಗಳೇ ಮೂಲಮಂತ್ರ. ಒಂದು ಮಗು ಸಮಾಜದ ಉತ್ತಮ ಪ್ರಜೆಯಾಗಿ ರೂಪುಗೊಂಡರೆ ಅದರಲ್ಲಿ ಆ ಮಗುವಿನ ಶಕ್ತಿಗಿಂತ ಆತನನ್ನು ಆ ರೀತಿ ರೂಪಿಸಿದ ಕುಟುಂಬದ ಸಂಸ್ಕೃತಿಯನ್ನು ಹೊಗಳುವ ಒಂದು ಕಾಲಘಟ್ಟವಿತ್ತು. ಆದರೆ ಇಂದು ಕಾಲ ಬದಲಾಗಿದೆ. ಜತೆಗೆ ಜಗತ್ತಿನಾದ್ಯಂತ ಕುಟುಂಬ ರೂಪೀಕರಣದ ಪದ್ಧತಿಯೂ ಬದಲಾಗಿದೆ. ಅವಿಭಕ್ತ ಕುಟುಂಬಗಳು ವಿಭಕ್ತ ಕುಟುಂಬಗಳಾಗಿ ಬದಲಾಗಿವೆ. ಅಜ್ಜ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ, ದೊಡ್ಡಪ್ಪ,ದೊಡ್ಡಮ್ಮ, ಅಳಿಯ, ಮಾವ, ಅತ್ತೆ, ಸೊಸೆ, ಅಪ್ಪ, ಅಮ್ಮ ಮಕ್ಕಳು ಮತ್ತು ಮೊಮ್ಮಕ್ಕಳು ತುಂಬಿತುಳುಕುತ್ತಿದ್ದ ಮನೆಗಳಲ್ಲಿ ಅಮ್ಮನ ಕೈ ತುತ್ತು, ಅಪ್ಪನ ಕಿವಿ ಮಾತು, ಅಜ್ಜಿಯ ಕಾಗೆ ಗುಬ್ಬಕ್ಕನ ಕತೆ, ಅಜ್ಜನ ಮನೆಯ ಜವಬ್ದಾರಿ. ಒಬ್ಬರಿಗೆ ಕಷ್ಟ ಬಂದರೆ ಸಾಕು ತಮಗೇ ಬಂದಿದ್ದೇನೋ ಎಂಬಂತೆ ಸಹಾಯಕ್ಕೆ ಬರುವ ಮನಸ್ಸುಗಳು. ಒಬ್ಬರನ್ನೊಬ್ಬರು ರ್ಥ ಮಾಡಿಕೊಂಡು ಜೀವನ ನಡೆಸುವುದು. ಅಲ್ಲಿ ಹಿರಿಯರ ಮಾತೇ ಅಂತಿಮ ನರ್ಣಯ. ಅವರ ಮಾತನ್ನು ಉಲ್ಲಂಘಿಸುವವರಿಲ್ಲ.ಅಲ್ಲಿ ಚಿಕ್ಕವರು ದೊಡ್ಡವರೆಂಬ ಕೀಳರಿಮೆಯಿಲ್ಲ ಎಲ್ಲರೂ ಒಂದೇ ಎನ್ನುವ ಭಾವನೆ ಅವಿಭಕ್ತ ಕುಟುಂಬದಲ್ಲಿ ಇರುತ್ತದೆ. ಆದರೆ ಈಗ ಕೇವಲ ಗಂಡ, ಹೆಂಡತಿ, ಮಕ್ಕಳು ಮಾತ್ರ ಕಾಣಸಿಗುತ್ತಾರೆ. ಕುಟುಂಬದಲ್ಲಿ ಜನಸಂಖ್ಯೆ ಕಡಿಮೆಯಾಗುತ್ತಾ ಹೋದಂತೆ ಅಲ್ಲಿ ಭಾವನೆಗಳೂ ಬೆಲೆ ಕಳೆದು ಕೊಳ್ಳಲಾರಂಭಿಸುತ್ತವೆ. ಹೆತ್ತವರ, ಮಕ್ಕಳ ತರಾತುರಿಯ ಜೀವನದ ನಡುವೆ ಮುಖಕ್ಕೆ ಮುಖ ಕೊಟ್ಟು ಮಾತನಾಡುವಷ್ಟು ಸಮಯವಿಲ್ಲದೆ ಕೇವಲ ಯಂತ್ರಗಳಂತೆ ಬದುಕಬಹುದಾಗಿದೆ. ಆದರೆ ಇಂದಿನ ದಿನಗಳಲ್ಲಿ ಕುಟುಂಬದ ಮಾದರಿಯು ತುಂಬಾ ಬದಲಾಗಿದೆ. ಹಿಂದೆ ತುಂಬಾ ಜನರಿಂದ ಕೂಡಿದ ಅವಿಭಕ್ತ ಕುಟುಂಬವಿತ್ತು. ಎಲ್ಲರೂ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು.ಆದರೆ ಇಂದಿನ ದಿನಗಳಲ್ಲಿ ಎಲ್ಲವೂ ಬದಲಾಗಿದೆ. ಹೀಗಾಗಿ ಇಂದಿನ ದಿನಗಳಲ್ಲಿ ಹೆಚ್ಚಾಗಿ ವಿಭಕ್ತ ಕುಟುಂಬಗಳಿವೆ. ಅವಿಭಕ್ತ ಕುಟುಂಬಗಳು ಇಂದು ದೊಡ್ಡ ಹೊರೆ ಮತ್ತು ಹಲವರಿಗೆ ಸಮಸ್ಯೆಯಾಗುತ್ತಿದೆ. ಇದಕ್ಕೆ ಪಾಶ್ಚಿಮಾತ್ಯ ಸಂಸ್ಕೃತಿ ಕಾರಣವೋ ಅಥವಾ ಸಂಸ್ಕಾರದ ಕೊರತೆಯೋ ಅಥವಾ ಸ್ವರ್ಥವೋ? ಏನೆಂದು ಗೊತ್ತಾಗುತ್ತಿಲ್ಲ. ಆದ್ದರಿಂದ ಇಂದಿನ ವಿಭಕ್ತ ಕುಟುಂಬಕ್ಕೆ ಕುಟುಂಬದ ಮಹತ್ವವನ್ನು ತಿಳಿಸುವ ಸಲುವಾಗಿ ಅಂತರರಾಷ್ಟ್ರೀಯ ಕುಟುಂಬ ದಿನವನ್ನು ಜನೆವರಿ 01 ರಂದು ಆಚರಿಸಲಾಗುತ್ತದೆ.
ಕಳೆದ ವರ್ಷ ಕೊರೊನಾ ಸಂದಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನತಾರ್ಪ್ಯೂಗೆ ಕರೆ ನೀಡಿದಾಗ ಕೊರೊನಾ ವಾರಿರ್ಸ್ ಗಳಿಗೆ ದೀಪ ಬೆಳಗುವ ಮೂಲಕ ಗೌರವಿಸಿ, ದೇಶದ ಜನರೆಲ್ಲ ಅಭೂತಪರ್ವವಾಗಿ ಸ್ಪಂದಿಸಿದ್ದರು. ಇದು ನಮ್ಮಲ್ಲಿನ ಕೌಟುಂಬಿಕ ವ್ಯವಸ್ಥೆಯ ಸಂಕೇತವನ್ನು ತಿಳಿಸುತ್ತದೆ. ಕೊರೊನಾ ಸಮಯದಲ್ಲಿ ವಿದೇಶಗಳಲ್ಲಿ ಏನೇ ಕಳವಳವಾದರೂ, ಭಾರತದಲ್ಲಿ ಸಶಕ್ತವಾಗಿ ಎದುರಿಸಿದೆವು. ಇದಕ್ಕೆ ಕೌಟುಂಬಿಕ ವ್ಯವಸ್ಥೆಯೇ ಕಾರಣ ಎಂದು ಹೇಳಲಾಗುತ್ತದೆ. ಕೌಟುಂಬಿಕ ವ್ಯವಸ್ಥೆಯನ್ನು ಬಲಗೊಳಿಸಲು ನಾವು ಮುಂದಾಗಬೇಕಿದೆ. ವಾರಕ್ಕೆ ಒಂದು ಬಾರಿಯಾದರೂ ಜೊತೆಗೆ ಕುಳಿತು ಭಜನೆ ಹಾಗೂ ಭೋಜನಗಳಲ್ಲಿ ತೊಡಗುವುದು, ಹಬ್ಬ ಆಚರಣೆ, ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಮೂಲಕ ನಮ್ಮ ಕುಟುಂಬದ ಸದಸ್ಯರ ಒಡನಾಟ ಹೆಚ್ಚಾಗಿ ಕುಟುಂಬ ವ್ಯವಸ್ಥೆ ಇನ್ನೂ ಗಟ್ಟಿಯಾಗಿ ನೆಲೆ ಕಂಡುಕೊಳ್ಳಲು ಸಾಧ್ಯ ಹಾಗೂ ಹಬ್ಬ ಹರಿದಿನಗಳು ಬಂದರೆ ಸಾಕು ಮನೆಯಲ್ಲಾ ಸಂಪರ್ಣ ಅಲಂಕಾರ. ಬಗೆ ಬಗೆಯ ತಿಂಡಿ ತಿನಿಸುಗಳು, ಅಜ್ಜಿಯ ಚಕ್ಕುಲಿ, ನಿಪ್ಪಟ್ಟು ವಾಹ್! ಎಲ್ಲರೂ ಸಮಯಕ್ಕೆ ಸರಿಯಾಗಿ ಕೂತು ಒಟ್ಟಿಗೆ ಹರಟುತ್ತಾ, ಹಂಚಿ ಊಟ ಮಾಡುವುದರಲ್ಲಿ ಇರುವ ಸಂತೋಷವೇ ಬೇರೆ.
ಒಟ್ಟಾರೆಯಾಗಿ ಕುಟುಂಬದಲ್ಲಿನ ಮಕ್ಕಳ ಏಳಿಗೆಗಾಗಿ ಎಲ್ಲವನ್ನೂ ಸಹಿಸಿಕೊಂಡು ಸಂಸಾರ ತೂಗಿಸಿಕೊಂಡು ಹೋಗುವ ನಾರಿಯನ್ನು ಭಾರತದಲ್ಲಿ ಮಾತ್ರ ನೋಡಲು ಸಾಧ್ಯ. ವಿದೇಶಗಳಲ್ಲಿ ಸಣ್ಣಪುಟ್ಟ ಕಾರಣಗಳಿಗೂ ವಿಚ್ಛೇದನಗಳಿಂದಾಗಿ ತಂದೆ ತಾಯಿಯ ಆರೈಕೆಯಿಲ್ಲದೆ ಬೀದಿಗೆ ಬೀಳುವ ಮಕ್ಕಳು ಸಮಾಜ ಕಂಟಕರಾಗುತ್ತಿರುವುದು ಅಧ್ಯಯನಗಳಿಂದ ದೃಢಪಟ್ಟಿದೆ ಎಂದು ಹೇಳಲಾಗಿದೆ. ಮಹಿಳೆಯರಿಗೆ ಸಿಕ್ಕಿರುವ ಮೀಸಲಾತಿ ಅವಕಾಶ ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಮುಖ್ಯವಾಹಿನಿಗೆ ಬಂದಾಗ ಮಾತ್ರ ನಮ್ಮ ಕುಟುಂಬದಲ್ಲಿನ ನೋವು ನಲಿವುಗಳೆರಡನ್ನೂ ಹಂಚಿಕೊಂಡು ಸೋಲು ಗೆಲುವುಗಳಿಗೆ ಜತೆಯಾಗುವಂತಹ ಕುಟುಂಬ ಇದ್ದಾಗ ಮಾತ್ರ ವ್ಯಕ್ತಿ ಪರಿಪರ್ಣನಾಗುತ್ತಾನೆ. ಇದ್ದ ಕುಟುಂಬವನ್ನು ದೂರ ಮಾಡಿಕೊಳ್ಳದೆ ದೂರ ಇರುವ ಕುಟುಂಬದ ಸದಸ್ಯರನ್ನು ಮತ್ತೆ ಜೋಡಿಸಿಕೊಂಡು, ಕೂಡಿ ಬಾಳಿದರೆ ಸ್ವರ್ಗ ಸುಖ ಎನ್ನುವ ನಮ್ಮ ಹಿರಿಯರ ಆಶಯದಂತೆ,ಕೂಡಿ ಬಾಳುವುದರಲ್ಲಿರುವ ಪ್ರೀತಿ, ಪ್ರೇಮ, ಭದ್ರತೆ, ಕೊಡುಕೊಳ್ಳುವಿಕೆಯಿಂದ ಈ ರ್ಷದ ಕುಟುಂಬ ದಿನವನ್ನು ರ್ಷ ಸಂಭ್ರಮದಿಂದ ಆಚರಿಸಬೇಕೆಂಬುವುದು ನಮ್ಮ ನಿಮ್ಮೆಲ್ಲರ ಆಶಯವಾಗಬೇಕಾಗಿದೆ.


Share

ಕ್ಷಮಿಸು ಬಿಡು ನವೀನಾ ! ನಿನ್ನ ಸಾವಿಗೆ ನಾವೇ ಕಾರಣ !

Share

ಕರ್ನಾಟಕ ಮೂಲದ ನವೀನ ಶೇಖರಪ್ಪ ಗ್ಯಾನಗೌಡರ ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಿಗೇರಿಯ ಒಬ್ಬ ಪ್ರತಿಭಾವಂತ ವಿದ್ಯಾರ್ಥಿ ರಷ್ಯಾ ಉಕ್ರೇನ್ ಯುದ್ದದ ಸಂಧÀರ್ಭದಲ್ಲಿ ಹತ್ಯೆಯಾಗಿರುವ ಈತ ಅತ್ಯಂತ ಬುದ್ದಿವಂತ 10ನೇ ವಯಸ್ಸಿನಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ಬರೆದು ಆದರ್ಶ ಶಾಲೆ ಸೇರಿದ. ನವೀನನ ತಂದೆ ಶೇಕರಪ್ಪ ಸೌತ್ ಇಂಡಿಯಾ ಪೇಪರ್ ಮಿಲ್‍ನ ವೆಹಿಕಲ್ ಮೆಂಟೇನೆನ್ಸ್ ವಿಭಾಗದಲ್ಲಿ ನಂಜನಗೂಡಿನಲ್ಲಿ ಕೆಲಸ ಮಾಡುತ್ತಿದ್ದರು. ಈ ಕಾರಣ ಮತ್ತು ಮಗನ ಬುದ್ದಿವಂತಿಕೆಯಿಂದ ನಂಜನಗೂಡಿನ ಆದರ್ಶ ಶಾಲೆಯಲ್ಲಿ 6ನೇ ತರಗತಿಯಿಂದ 10ನೇ ತರಗತಿಯ ವರೆಗೆ ವ್ಯಾಸಂಗ ಮಾಡಿದ್ದಾನೆ. ಎಸ್.ಎಸ್.ಎಲ್.ಸಿ ಯಲ್ಲಿ 625 ಅಂಕಗಳಿಗೆ 604 ಅಂಕಗಳನ್ನು ಪಡೆದು ಆದರ್ಶ ಶಾಲೆಗೆ ಮೊದಲಿಗರಾಗಿ ಉತ್ತೀರ್ಣರಾಗಿದ್ದಾರೆ. ನಂತರ ಮೈಸೂರಿನ ಯೂನಿಟಿ ಕಾಲೇಜಿಗೆ ಸೇರಿ ಪಿ.ಯು.ಸಿ ವಿಜಾÐನ ವಿಭಾಗದಲ್ಲಿ ಶೇ.92.2% ರಷ್ಟು ಪ್ರತಿಶತ ಪಡೆದರೂ ಸಹ ಕರ್ನಾಟಕ ಸೇರಿದಂತೆ ಭಾರತದಲ್ಲಿ ಮೆಡಿಕಲ್ ಸೀಟ್ ಸಿಗಲಿಲ್ಲ ಬುದ್ದಿವಂತ ಮಗನ ಕನಸು ನನಸಾಗಿಸುವ ಪ್ರಯತ್ನದಲ್ಲಿ ತಂದೆ ಕಷ್ಟಪಟ್ಟು ಉಕ್ರೆನ್ ದೇಶದಲ್ಲಿ ವೈದ್ಯಕೀಯ ಕೋರ್ಸನ್ನು ಓದಿಸುತ್ತಿದ್ದರು. ಉಕ್ರೆನ್ ಮೆಡಿಕಲ್ ಕಾಲೇಜಿನಲ್ಲೂ ನವೀನ ತುಂಬಾ ಕ್ರಿಯಾಶೀಲವಾಗಿ ಓದುತ್ತಿದ್ದು ಕನ್ನಡದ ಅಭಿಮಾನವನ್ನು ಮೆರೆದಿದ್ದ. ಆದರೆ ಮೊನ್ನೆ ರಷ್ಯಾದ ಶೆಲ್ ದಾಳಿಗೆ ಬಲಿಯಾಗಿದ್ದಾನೆ. ತನಗೆ ಮತ್ತು ತನ್ನ ಗೆಳೆಯರಿಗಾಗಿ ಊಟ ಮತ್ತು ದಿನಸಿ ತರಲು ಹೋಗಿ ರಷ್ಯಾದ ಸೈನ್ಯಕ್ಕೆ ಬಲಿಯಾಗಿದ್ದಾನೆ. ನವೀನ್ ಮತ್ತು ಚಂದನ್ ಜಿಂದಾಲ್ ಭಾರತೀಯ ವಿದ್ಯಾರ್ಥಿಗಳು ಸೇರಿದಂತೆ ವಿದೇಶಿಯ ಅದೆಷ್ಟೋ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಸಾವು ನೋವುಗಳ ಮಧ್ಯೆ ಆ ಎಲ್ಲಾ ಸಾವುಗಳಿಗೆ ಯಾರು ಹೊಣೆಯೆಂದು ಕೇಳಿದರೆ ತಕ್ಷಣ ಉತ್ತರಿಸುತ್ತೇವೆ. ರಷ್ಯಾ ಮತ್ತು ಉಕ್ರೇನ್ ಎಂದು ಇಂದಿನ ಭಾರತ ವಿದೇಶಾಂಗ ನೀತಿಗಳ ಮತ್ತು ಭಾರತವು ಈಗ ವಿಶ್ವದ ಗುರು ಆಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಧ್ವಜ ಒಂದು ಉಕ್ರೆನ್‍ನಲ್ಲಿ ವಾಸವಿರುವ ಭಾರತೀಯರ ಜೀವ ಉಳಿಸುವುದರ ಜೊತೆಗೆ ವಿದೇಶಿಯರ ಜೀವ ಉಳಿಸಿರುವ ಹೆಮ್ಮೆ ನಮಗಿದೆ. ಉಕ್ರೆನ್‍ನಿಂದ ಮರುಳುತ್ತಿರುವ ಹಲವಾರು ವಿದ್ಯಾರ್ಥಿಗಳು ಮತ್ತು ನಾಗರೀಕರು ಆಫ್ರೆಷನ್ ಗಂಗಾ ಕಾರ್ಯಕ್ರಮವನ್ನು ಹಾಡಿ ಹೊಗಳುತ್ತಿದ್ದಾರೆ. ಏರ್ ಇಂಡಿಯಾ ವಿಮಾನಗಳ ಜೊತೆಗೆ ಸ್ಪೈಸ್ ಜೆಟ್ ಕೂಡ ಕೈ ಜೋಡಿಸಿ ನಮ್ಮ ವಾಯು ಸೇನೆಯ ಬಲವನ್ನು ಹೆಚ್ಚಿಸಿವೆ. ಹಲವಾರು ಪ್ರಯತ್ನಗಳಿಂದ ಭಾರತೀಯರನ್ನು ರಕ್ಷಿಸುವ ಪ್ರಯತ್ನವನ್ನು ಭಾರತ ಸರ್ಕಾರವು ಪ್ರಮಾಣಿಕವಾಗಿ ಮಾಡುತ್ತಿವೆ. ಆದರೆ ಕೆಲವು ವಿರೋದಿಗಳು ಜ್ಞಾನವಿಲ್ಲದೆ ಉಕ್ರೆನಿಗೆ ಹೋದ ವಿದ್ಯಾರ್ಥಿಗಳು ಬಾಯಿಗೆ ಬಂದಂತೆ ದೇಶದ ವ್ಯವಸ್ಥೆಯನ್ನು ಬೈಯುತ್ತಿದ್ದಾರೆ. ಹಣದ ಮದದಿಂದ ಮತ್ತು ಎನ್.ಇ.ಇ.ಟಿ ಪರೀಕ್ಷೆಯನ್ನು ಪಾಸಾಗದ ಅಯೋಗ್ಯರಿಂದ ಅಂತಹ ಮಾತುಗಳು ಕೇಳಿ ಬರುವುದು ಸಾಮಾನ್ಯ ಯುದ್ಧದ ಸಂಧರ್ಭದಲ್ಲಿ ವಿದೇಶಾಂಗ ನೀತಿಗಳು 2 ಬೇರೆ ಬೇರೆ ದೇಶಗಳ ನಡುವೆ ನಡೆಯುವ ಯುದ್ಧದ ಸಂಧರ್ಭದಲ್ಲಿ ಇನ್ನೊಂದು ದೇಶದ ನಾಗರೀಕರ ರಕ್ಷಣೆಯ ಹೊಣೆ ಮತ್ತು ಅಂತರ ರಾಷ್ರ್ಟೀಯ ನಿಯಮ ನಿಭಂದನೆಗಳು ಗೊತ್ತಿಲ್ಲದ ಶಿಕ್ಷಣ ಪಡೆದ ಅಜ್ಞಾನಿಗಳಿಂದ ಇಂತಹ ಕೀಳು ಮಟ್ಟದ ಮಾತುಗಳು ಕೇಳಿ ಬರುವುದು ಸಾಮಾನ್ಯ ಅದರಲ್ಲಿ ಒಬ್ಬ ವಿದ್ಯಾರ್ಥಿ ಹೇಳುತ್ತಾನೆ ತಿನ್ನಲು ಅನ್ನ, ನೀರು ಸಿಗಲಿಲ್ಲ ಎಂದು ಯುದ್ಧದ ಸಂಧರ್ಭದಲ್ಲಿ ಸೈನಿಕರು ಸೇರಿದಂತೆ ನಾಗರೀಕರಿಗೆ ಅದೆಷ್ಟೋ ತೊಂದರೆಗಳಾಗಿರುತ್ತವೆ. ಆತ ಮುಂದುವರೆದು ಹೇಳುತ್ತಾನೆ ಭಾರತೀಯ ಸೈನ್ಯವು ನಮ್ಮನ್ನು ರಕ್ಷಿಸಲು ದೇಶದ ಒಳಗಡೆ ಬರಲಿಲ್ಲ ನಾವೇ ಗಡಿವರೆಗೆ ಬರಬೇಕಾಯಿತು ಎರಡು ದೇಶಗಳ ಯುದ್ಧದ ಮಧ್ಯೆ ಇನ್ನೊಂದು ದೇಶದ ಸೈನಿಕರು ಬರುವುದು ಅತಿಕ್ರಮಣವಾಗುತ್ತದೆ ಎಂಬ ಸಾಮಾನ್ಯ ಜ್ಞಾನವೂ ಇಲ್ಲ ಇಂತಹ ಹಲವಾರು ದೇಶ ಬಿಟ್ಟು ಓದಲು ಹೋದ ವಿದ್ಯಾರ್ಥಿಗಳ ಮಧ್ಯೆಯೇ ಕನ್ನಡ ಮತ್ತು ದೇಶದ ಅಭಿಮಾನ ಹೊಂದಿದ ನವೀನನ ವಿಚಾರವೇ ಬೇರೆ ನವೀನನ ತಂದೆಗೆ ಪ್ರಧಾನಿ ಮೋದಿಯವರೇ ಕರೆ ಮಾಡಿ ಸಾಂತ್ವಾನ ಹೇಳಿದರೂ ಕೂಡ ನವೀನನ ಆತ್ಮಕ್ಕೆ ಮುಕ್ತಿ ಸಿಗುವುದೇ ಡೌಟ್ ! ಏಕೆಂದರೆ ನವೀನನ ತಂದೆಯ ಒಂದು ಹೇಳಿಕೆಯು ದೇಶದ ವ್ಯವಸ್ಥೆಯನ್ನು ಮುಟ್ಟಿ ನೋಡಿಕೊಳ್ಳುವಂತಿದೆ “ಮಗ ನವೀನ್‍ಗೆ ಮೀಸಲಾತಿಯಿಂದ ಇಲ್ಲಿ ಸೀಟ್ ಸಿಗಲಿಲ್ಲ. ಇದು ಅತ್ಯಂತ ಬೇಸರದ ವಿಷಯ ಪ್ರತಿಭೆಯಿರುವ ಬಡ ವಿದ್ಯಾರ್ಥಿಗಳಿಗೆ ದೇಶದ ಅವಕಾಶಗಳಲ್ಲಿ ಅಷ್ಟು ಅಂಕ ಪಡೆದರು ಸರ್ಕಾರದ ಮೀಸಲಾತಿ ಮತ್ತು ನಿಯಮಗಳಿಂದ ನನ್ನ ಮಗನಿಗೆ ಮೆಡಿಕಲ್ ಸೀಟ್ ಸಿಗಲಿಲ್ಲ ಮತ್ತು ದೇಶದಲ್ಲಿ ಖಾಸಗಿಯಾಗಿ ಮೆಡಿಕಲ್ ಓದ ಬೇಕಾದರೆ 1.5 ಕೋಟಿ ಯಿಂದ 2 ಕೋಟಿ ಹಣ ಬೇಕಾಗುತ್ತದೆ. ಅಭಿವೃದ್ಧಿ ಶೀ¯ ದೇಶದಲ್ಲಿ ಇಷ್ಟು ಖರ್ಚಾದರೆ ನಮ್ಮಂತಹ ಬಡವರು ಓದಿಸುವುದು ಹೇಗೆ? ಉಕ್ರೆನ್ ನಂತಹ ಸಣ್ಣ ರಾಷ್ರ್ಟಗಳಲ್ಲಿ 25ರಿಂದ 30 ಲಕ್ಷಗಳಲ್ಲಿ ವೈದ್ಯಕೀಯ ಶಿಕ್ಷಣವನ್ನು ಮುಗಿಸಬಹುದು. ನಮ್ಮ ದೇಶದ ಸರ್ಕಾರ ಮತ್ತು ವ್ಯವಸ್ಥೆ ಮೊದಲು ಬದಲಾಗಬೇಕು.” ಎಂಬ ಹೇಳಿಕೆಯು ಭಾರತದ ವ್ಯವಸ್ಥೆಯನ್ನು ಮತ್ತೊಮ್ಮೆ ಮುಟ್ಟಿ ನೋಡಿಕೊಳ್ಳಬೇಕಾದ ಹಂತಕ್ಕೆ ಬಂದು ನಿಂತಿದೆ. ನವೀನನ ಸಾವಿನಲ್ಲಿಯೂ ರಾಜಕೀಯ ಮಾಡುತ್ತಿರುವ ದೇಶದ ರಾಜಕೀಯ ವ್ಯವಸ್ಥೆಯು ಒಂದು ಸಾರಿ ತಲೆ ತಗ್ಗಿಸಿ ನಿಲ್ಲಬೇಕು. ಸಿದ್ದರಾಮಯ್ಯ ಹೇಳುವಂತೆ ನವೀನನ ಸಾವಿಗೆ ಕೇಂದ್ರ ಸರ್ಕಾರವೇ ಕಾರಣ. ಇತ್ತ ಯು.ಟಿ ಖಾದರ ಹೇಳುತ್ತಾರೆ ನವೀನ ಶಿಕ್ಷಣದ ಖರ್ಚನ್ನು ಮರಳಿ ಕೊಡಬೇಕು. ಡಿ.ಕೆ.ಶಿವಕುಮಾರ ಹೇಳುತ್ತಾರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿರ್ಲಕ್ಷದಿಂದ ನೂರಾರು ಕನ್ನಡಿಗರು ಸಂಕಷ್ಟದಲ್ಲಿದ್ದಾರೆ. ಬಿ.ಜೆ.ಪಿ ಯ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಪ್ರಕಾರ ಭಾರತೀಯರನ್ನು ಉಕ್ರೆನ್‍ನಿಂದ ಕರೆತರುವಲ್ಲಿ ಮೋದಿ ಸರ್ಕಾರವು ಯಶಸ್ವಿಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಬನವರಾಜ್ ಬೊಮ್ಮಾಯಿಯವರು ಹೇಳುತ್ತಾರೆ ಮೃತ ದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನವನ್ನು ಮಾಡಲಾಗುತ್ತಿದೆ. ಇತ್ತ ಹೆಚ್.ಡಿ.ಕುಮಾರಸ್ವಾಮಿಯವರ ಒಂದು ವಿಚಾರವು ಗಮನಾರ್ಹ ಚರ್ಚೆಗೆ ಒಳಗಾಗಿದೆ. ಕೇಂದ್ರ ಸರ್ಕಾರವನ್ನು ಆಪಾಧನೆ ಮಾಡುತ್ತಾ ಉಕ್ರೆನ್ ಭಾರತೀಯ ರಾಯಭಾರಿ ಕಛೇರಿ ಸೂಕ್ತವಾಗಿ ಸ್ಪಂಧಿಸುತ್ತಿಲ್ಲ ಎಂಬ ಆಪಾಧನೆಯನ್ನು ಕೂಡ ಮಾಡುತ್ತಾರೆ. ಜೊತೆಗೆ ಹೆಚ್.ಡಿ.ಕುಮಾರಸ್ವಾಮಿಯವರು ಎನ್.ಇ.ಇ.ಟಿ ಪರೀಕ್ಷೆಯಿಂದ ನವೀನ್‍ಗೆ ರಾಜ್ಯದಲ್ಲಿ ಮೆಡಿಕಲ್ ಕಾಲೇಜಿನಲ್ಲಿ ಸೀಟ್ ಸಿಗದೆ ಪ್ರತಿಭಾವಂತನನ್ನು ಕಳೆದು ಕೊಂಡಿದ್ದೇವೆ.
“ಅಭ್ಯರ್ಥಿಯು ಜಿ.ಎಮ್.ಎ.ಟಿ ಅಥವಾ ಜಿ.ಆರ್.ಇ ನಲ್ಲಿ 97% ಸ್ಕೋರ್ ಮಾಡಬೇಕಾದರೆ ಅವನು ಬೇರೆ ಯಾವುದಾದರೂ ದೇಶದಲ್ಲಿದ್ದರೆ ಅವನು ಹಾವರ್ಡ್ ಅಥವಾ ಸ್ಕ್ಯಾನ್ ಪೋರ್ಡ್‍ನಲ್ಲಿ ಸಂಪೂರ್ಣ ಅನುದಾನಿತ ವಿದ್ಯಾರ್ಥಿ ವೇತನದಲ್ಲಿ ಓದಬಹುದು ಆದರೆ ದುಃಖದ ಸಂಗತಿಯೆಂದರೆ ನವೀನ್ ಮೆರಿಟ್‍ನಲ್ಲಿ ಭಾರತದಲ್ಲಿ ವೈದ್ಯಕೀಯ ಸೀಟು ಪಡೆಯಲು ಸಾಧ್ಯವಾಗಲಿಲ್ಲ” ಐ.ಪಿ.ಎಸ್ ಅಧಿಕಾರಿ ಕಾರ್ತೀಕೇಯ.ಜಿ. ಟ್ವಿಟ್ ಮಾಡುವ ಮೂಲಕ ವ್ಯವಸ್ಥೆಯ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಇನ್ನು ಉಕ್ರೆನ್‍ನಿಂದ ಜೀವಂತ ಇರುವವರನ್ನೆ ಕರೆತರುವುದು ಕಷ್ಟ ಇಂತಹದರಲ್ಲಿ ಮೃತ ದೇಹವನ್ನು ತರುವುದು ಇನ್ನೂ ಕಷ್ಟ ನವೀನ್ ಮೃತ ದೇಹ ತರುವ ಜಾಗದಲ್ಲಿ 10 ಮಂದಿಯನ್ನು ಕರೆತರಬಹುದು ಎಂದು ಶಾಸಕ ಅರವಿಂದ್ ಬೆಲ್ಲದ್ ಬೇಜಾವಾಬ್ದಾರಿ ಹೇಳಿಕೆಯಿಂದ ರಾಜಕಾರಣಿಗಳ ಬುದ್ದಿ ಪ್ರಬುದ್ದತೆ ಪಡೆದಿಲ್ಲ ಎಂಬ ವಿಚಾರವಾದವನ್ನು ಮತ್ತೊಮ್ಮೆ ಸಾಬೀತು ಪಡೆಸಿದ್ದಾರೆ. ಬೇರೆಯವರಿಗಿಂತ ನವೀನನ ವಿಚಾರವನ್ನಿಟ್ಟುಕೊಂಡು ಇಷ್ಟೊಂದು ವಿಶ್ಲೇಷಣೆ ಮಾಡಲು ಕಾರಣ ನವೀನನ ದೇಹವನ್ನು ರಷ್ಯಾ ಸೈನಿಕರು ಉಕ್ರೆನ್‍ನಲ್ಲಿ ಹತ್ಯೆ ಮಾಡಿರಬಹುದು ಆದರೆ ನವೀನ ನಂತಹ ಮೆಲ್ವರ್ಗದ ಪ್ರತಿಭಾವಂತನ ಕನಸುಗಳನ್ನು ಈ ದೇಶದ ವ್ಯವಸ್ಥೆ ಹತ್ಯೆ ಮಾಡಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಾಗಲೂ ಜಾತಿ, ಧರ್ಮ, ಭಾಷೆಯ ಆಧಾರದಲ್ಲಿ ಮೀಸಲಾತಿ ನೀಡುವುದು ಎಷ್ಟು ಸರಿ? ಈ ದೇಶದ ಪಾರ್ಲಿಮೆಂಟ್ ಇತಿಹಾಸದಲ್ಲಿ ಜನ ಪ್ರತಿನಿಧಿಯ ಕಾಯ್ದೆಗಳು ಸಂಬಳ ಹೆಚ್ಚಳ ಮತ್ತು ಜಾತಿ ಮೀಸಲಾತಿಯ ಕಾಯ್ದೆಗಳು ಯಾವುದೇ ವಿರೋಧವಿಲ್ಲದೆ ಅಂಗೀಕಾರ ಗೊಳ್ಳುತ್ತಿರುವುದೇ ದುರಂತ ಒಂದು ದೇಶದ ಸ್ವಾತಂತ್ರ್ಯ ಅಥವಾ ಹುಟ್ಟು ಅಥವಾ ಸ್ವಂತ ವ್ಯವಸ್ಥೆಯಲ್ಲಿ ಆಡಳಿತ ಮಾಡಿ 75 ವರ್ಷಗಳು ಕಳೆದರೂ ಹಿಂದುಳಿದವರನ್ನು ಅಲ್ಪಸಂಖ್ಯಾತರನ್ನು ಮತ್ತು ಹಿಂದುಳಿದ ಜಾತಿಯನ್ನು ಸುಧಾರಿಸಲು ಆಗಿಲ್ಲ ಅಂದರೆ ನಾಚಿಕೆಯಾಗಬೇಕು. ಒಬ್ಬ ಮನುಷ್ಯನ ಸಾಮಾನ್ಯ ಆಯುಷ್ಯವೇ 60 ವರ್ಷ ಆಗಿರುವುದರಿಂದ ಆದರೆ 75 ವರ್ಷ ಕಳೆದ ಬಾರತದಲ್ಲಿ ಮೀಸಲಾತಿ ಪದ್ದತಿಗಳು ಇನ್ನೂ ಜೀವಂತವಾಗಿಟ್ಟಿದ್ದೇವೆ ಎಂದರೆ 5-6 ದಶಕಗಳ ವರೆಗೆ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷಕ್ಕೆ ಆತ್ಮ ಸಾಕ್ಷಿ ಅನ್ನುವುದೇ ಇಲ್ಲವೇ. ಕಾಂಗ್ರೆಸ್ ಮತ್ತು ಬಿ.ಜೆ.ಪಿ ಸೇರಿದಂತೆ ಈ ದೇಶವನ್ನಾಳುತ್ತಿರುವ ಪಕ್ಷಗಳು ಮತ್ತು ರಾಜಕಾರಣೀಗಳು ಆತ್ಮ ಸಾಕ್ಷಿಯನ್ನೊಮ್ಮೆ ಮುಟ್ಟಿ ನೋಡಿಕೊಳ್ಳಬೇಕು. ಹಿಂದುಳಿದವರ ಮತ್ತು ಅಲ್ಪ ಸಂಖ್ಯಾತರ ಹೆಸರಿನಲ್ಲಿ ಪ್ರತಿಭಾವಂತರಿಗೆ ಮೋಸ ಮಾಡುತ್ತಿದ್ದೀರಿ ಜೊತೆಗೆ ಹಿಂದುಳಿದವರಿಗೆ ಮತ್ತು ಅಲ್ಪಸಂಖ್ಯಾತರಿಗೂ ಮೋಸ ಮಾಡುತ್ತಿದ್ದೀರಿ ಏಕೆಂದರೆ ಸ್ಪರ್ಧೆಯಿದ್ದರೆ ಮಾತ್ರ ಗೆಲುವು ಮತ್ತು ಸಂತೋಷ ಸಾಧ್ಯ ಹಿಂದುಳಿದವರು ಮತ್ತು ಅಲ್ಪ ಸಂಖ್ಯಾತರನ್ನು ಮಾನಸಿಕವಾಗಿ ತುಳಿಯುತ್ತಿದ್ದೀರಿ. ಮತ್ತು ಪ್ರತಿಭಾವಂತರನ್ನ ಹತ್ಯೆ ಮಾಡುತ್ತಿದ್ದೀರಿ. ಹಾಗಾದರೇ ಇದೇ ಸತ್ಯವಲ್ಲವೇ ನವೀನನ ಸಾವಿಗೆ ನಾವೇ ಅಂದರೆ ನಮ್ಮ ವ್ಯವಸ್ಥೆಯೇ ಕಾರಣ ಆತನನ್ನು ರಷ್ಯಾ ಸೈನಿಕರು ದೈಹಿಕವಾಗಿ ಕೊಂದರೆ ನಾವು ಮಾನಸಿಕವಾಗಿ ಕನಸುಗಳನ್ನು ಕೊಂದಿಲ್ಲವೇ ಇಂತಹ ಅನಿಷ್ಟ ಪದ್ಧತಿಗಳನ್ನು ನೀರು ಗೊಬ್ಬರ ಹಾಕಿ ಬೆಳೆಸುತ್ತಿರುವ ರಾಜಕಾರಣಿಗಳನ್ನು ಮತ್ತು ರಾಜಕೀಯ ವ್ಯವಸ್ತೆಯನ್ನು ಬೆಂಬಲಿಸಿವುದೂ ಕೂಡ ಅಪರಾಧವಲ್ಲವೇ? ನವೀನನ ಕನಸುಗಳ ಹತ್ಯೆಯೊಂದಿಗೆ ನಮ್ಮ ವ್ಯವಸ್ಥೆಯ ದುರಂತವು ಕಣ್ಣು ಮುಂದೆ ಬರುತ್ತದೆ. ಇನ್ನು ಎಷ್ಟು ದಿನ ಸಹಿಸಿಕೊಳ್ಳುತ್ತೀರಿ?


Share

ರಾತ್ರೋರಾತ್ರಿ ಹಠಾತ್ತನೇ ಲಾಕ್ ಡೌನ್ ಘೋಷಿಸಿದ ಅಬು ಧಾಬಿ

Share

ಯುನೈಟೆಡ್ ಅರಬ್ ಎಮಿರೇಟ್ಸ್ ರಾಜಧಾನಿ ಅಬುಧಾಬಿಯಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ಆತಂಕದ ಹಿನ್ನೆಲೆಯಲ್ಲಿ ದಿಢೀರನೆ ಗುರುವಾರ ತಡರಾತ್ರಿ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ.

ದೇಶದ ಉಳಿದ ಭಾಗಗಳು ಪ್ರವಾಸೋದ್ಯಮಕ್ಕೆ ಮುಕ್ತವಾಗಿದ್ದರೂ ಸಹ ಅಬುಧಾಬಿ ಮಾತ್ರ ಈ ನಿರ್ಧಾರಕ್ಕೆ ಬಂದಿದೆ.  ಸೋಮವಾರದಿಂದ ಲಾಕ್‌ಡೌನ್ ಪ್ರಾರಂಬಿವಾಗಲಿದ್ದು, ಪ್ರತಿದಿನ ಮಧ್ಯರಾತ್ರಿ 12 ರಿಂದ ಬೆಳಿಗ್ಗೆ 5 ಗಂಟೆವರೆಗೆ ಇರುತ್ತದೆ ಎಂದು ಸರ್ಕಾರಿ ಸ್ವಾಮ್ಯದ ಡಬ್ಲ್ಯುಎಎಂ ಸುದ್ದಿ ಸಂಸ್ಥೆ ತಿಳಿಸಿದೆ.

ಸೋಮವಾರದಿಂದ ಯುಎಇಯಲ್ಲಿ ಯುಎಇ ಸುದೀರ್ಘ ಈದ್ ಅಲ್-ಅಧಾ ರಜಾದಿನಗಳು ಆರಂಭವಾಗುತ್ತಿವೆ. ಹೀಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಅಬುಧಾಬಿ ಪ್ರವೇಶಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಲಾಕ್‌ಡೌನ್ ಘೋಷಿಸಲಾಗಿದೆ ಎನ್ನಲಾಗಿದೆ.

ವರ್ಷದ ಹಿಂದೆ ದುಬೈ ಪ್ರವಾಸೋದ್ಯಮಕ್ಕೆ ಅನುಮತಿ ನೀಡಿದ ನಂತರ ಅಬುಧಾಬಿ ಕಠಿಣ ನಿಲುವು ತಳೆದಿತ್ತು. ಅಬುಧಾಬಿ ಪ್ರವೇಶಿಸುವವರಿಗೆ ಆರ್‌ಟಿ–ಪಿಸಿಆರ್ ಪರೀಕ್ಷಾ ವರದಿ ಕಡ್ಡಾಯಗೊಳಿಸಲಾಗಿತ್ತು. ಸಾಮೂಹಿಕ ಲಸಿಕಾ ಕಾರ್ಯಕ್ರಮದ ಹೊರತಾಗಿಯೂ ದುಬೈನಲ್ಲಿ ನಿತ್ಯ 1,500 ಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ದೃಢಪಡುತ್ತಿವೆ.


Share

ಪ್ರಮುಖ ಹುದ್ದೆಗಳಿಗೆ ಭಾರತೀಯ-ಅಮೆರಿಕನ್ ವೈದ್ಯರನ್ನು ನೇಮಿಸಿದ ಅಮೆರಿಕ ಅಧ್ಯಕ್ಷ ಜೋ ಬೈಡನ್

Share

ವಾಷಿಂಗ್ ಟನ್: ಅಮೆರಿಕದ ಪ್ರಮುಖ ಹುದ್ದೆಗಳಿಗೆ ಅಧ್ಯಕ್ಷ ಜೋ ಬೈಡನ್ ಭಾರತೀಯ-ಅಮೆರಿಕನ್ ವೈದ್ಯರನ್ನು ನೇಮಕ ಮಾಡಿದ್ದಾರೆ. ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿದ್ದ ಡಾ. ರಾಹುಲ್ ಗುಪ್ತಾ ಅವರನ್ನು ಜೋ ಬೈಡನ್ ಅಮೆರಿಕದ ರಾಷ್ಟ್ರೀಯ ಔಷಧ ನಿಯಂತ್ರಣ ನೀತಿಯ ನಿರ್ದೇಶಕರನ್ನಾಗಿ ನೇಮಕ ಮಾಡಿದ್ದಾರೆ.

ಶಸ್ತ್ರಚಿಕಿತ್ಸಕರಾಗಿರುವ ಡಾ. ಅತುಲ್ ಗವಾಂಡೆ ಅವರನ್ನು ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ ಇರುವ ಅಮೆರಿಕಾದ ಏಜೆನ್ಸಿಯ ಜಾಗತಿಕ ಆರೋಗ್ಯ ವಿಭಾಗದ ಸಹಾಯಕ ಆಡಳಿತಗಾರರನ್ನಾಗಿ ನೇಮಕ ಮಾಡಲಾಗಿದೆ.

25 ವರ್ಷಗಳಿಂದ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ. ಗುಪ್ತಾ ಅವರಿಗೆ ಇಬ್ಬರು ಗೌರ್ನರ್ ಗಳ ಅವಧಿಯಲ್ಲಿ ವೆಸ್ಟ್ ವರ್ಜೀನಿಯಾದ ಆರೋಗ್ಯ ಆಯುಕ್ತರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ.

ರಾಜ್ಯದ ಮುಖ್ಯ ಆರೋಗ್ಯ ಅಧಿಕಾರಿಯಾಗಿ ಡಾ.ಗುಪ್ತಾ ಅವರು ಹಲವಾರು ಒಪಿಯಾಡ್ ಬಿಕ್ಕಟ್ಟು ಸ್ಪಂದನೆ ಪ್ರಯತ್ನಗಳ ನೇತೃತ್ವವವನ್ನು ವಹಿಸಿದ್ದು, ನಜಾತ ಶಿಶುಗಳಲ್ಲಿ ಕಂಡುಬರುವ ನಿಯೋನೇಟಲ್ ಆಬ್ಸ್ಟಿನೆನ್ಸ್ ಸಿಂಡ್ರೋಮ್ ಗೆ ತುತ್ತಾಗಲು ಅತಿ ಹೆಚ್ಚು ಅಪಾಯ ಹೊಂದಿರುವ ಮಕ್ಕಳನ್ನು ಗುರುತಿಸಲು ಬರ್ತ್ಕ್ಸೋರ್ ಯೋಜನೆಯನ್ನು ರೂಪಿಸುವುದು ಸೇರಿದಂತೆ ಹಲವು ಸಾರ್ವಜನಿಕ ಆರೋಗ್ಯ ಉಪಕ್ರಮಗಳ ಪ್ರವರ್ತಕರೆಂದೇ ಖ್ಯಾತಿ ಪಡೆದಿದ್ದಾರೆ.

ಎಬೋಲಾ ವೈರಾಣು ಭೀತಿಯ ಸಂದರ್ಭದಲ್ಲಿ ರಾಜ್ಯದ ಝಿಕಾ ಕ್ರಿಯಾ ಯೋಜನೆಯ ಅಭಿವೃದ್ಧಿಯ ನೇತೃತ್ವವನ್ನೂ ಗುಪ್ತಾ ಅವರು ವಹಿಸಿಕೊಂಡಿದ್ದು ಗಮನಾರ್ಹವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಹಲವಾರು ಸಾಧನೆ ಮಾಡಿರುವ ಗುಪ್ತಾ ಅವರು ಹಲವು ಸಂಘಟನೆಗಳಿಗೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನು ಭಾರತದ ರಾಯಭಾರಿಯ ಪುತ್ರರಾಗಿರುವ ರಾಹುಲ್ ಜನಿಸಿದ್ದು ಭಾರತದಲ್ಲಿ. ವಾಷಿಂಗ್ ಟನ್ ಡಿಸಿಯ ಉಪನಗರಗಳಲ್ಲಿ ಬೆಳೆದ ಇವರು, 21 ನೇ ವಯಸ್ಸಿನಲ್ಲಿ ದೆಹಲಿಯ ವಿಶ್ವವಿದ್ಯಾನಿಲಯದಲ್ಲಿ ವೈದ್ಯಕೀಯ ವ್ಯಾಸಂಗ ಮಾಡಿದ್ದರು.

ಅಲಬಾಮಾ-ಬರ್ಮಿಂಗ್ಹ್ಯಾಮ್ ನ ವಿವಿಯಿಂದ ಸಾರ್ವಜನಿಕ ಆರೋಗ್ಯದ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದ ರಾಹುಲ್, ಲಂಡನ್ ಸ್ಕೂಲ್ ಅಫ್ ಬ್ಯುಸಿನೆಸ್& ಫೈನಾನ್ಸ್ ನ ವಿಭಾಗದಲ್ಲಿ ವ್ಯವಹಾರ ಆಡಳಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ.


Share