ಜೈನ ಭೋಧನೆ ಮತ್ತು ಇಂದಿನ ಜಗತ್ತು

Share

ಜೈನ ಧರ್ಮ ವಿಶ್ವದ ಅನಂತ ಸತ್ಯಗಳ ಮೇಲೆ ಆಧಾರಿತವಾದ ಧರ್ಮ. ಪಾರಂಪರಿಕ ನಂಬಿಕೆಯ ಅನುಸಾರ ವೃಷಭ ದೇವ ಈ ಸತ್ಯಗಳನ್ನು ಅರತ ಮೊದಲಿಗರೆನ್ನಬಹುದು. ಜೈನ ಧರ್ಮವು 23 ಜನ ತೀರ್ಥಂಕರರ ಸತ್ಯಗಳನ್ನೋಳಗೊಂಡ ಧರ್ಮವಾಗಿದ್ದು ವರ್ಧಮಾನ ಮಹಾವೀರರು ಕೊನೆಯ ತೀರ್ಥಂಕರರಾಗಿದ್ದಾರೆ. ಜೈನ ಎಂದರೆ ಜಿನ ಎಂಬ ಶಬ್ದದಿಂದ ಉತ್ಪತ್ತಿಯಾಗಿದ್ದು ಜಿನ ಎಂದರೆ ಇಂದ್ರಿಯಗಳನ್ನು ಗೆದ್ದವನು ಎಂದು ಹೇಳಬಹುದು. ಕರ್ಮದ ಕಟ್ಟನ್ನು ಮುರಿದು ಸಂಸಾರವನ್ನು ದಾಟಿ ಮುಕ್ತಿಯನ್ನು ಪಡೆದವರು. ಜೀನರು ಎಂದು ಕರೆಯುವುದರಿಂದ ಜೀನರಿಂದ ಉಪದೇಶಿಸಲ್ಪಟ್ಟ ಧರ್ಮವೇ ಜೈನ ಧರ್ಮ. ಜೈನ ಧರ್ಮವು ಸತ್ಯ ನೀತಿ , ಉತ್ತಮ ನಡವಳಿಕೆ, ಅಹಿಂಸೆ ಮತ್ತು ದಯೆಗಳನ್ನು ಜಗತ್ತಿಗೆ ಸಾರಿವೆ. ಬ್ರಹ್ಮಚರ್ಯ, ಪೂಜೆ ಧರ್ಮಮಾರ್ಗಗಳು ಜೈನ ಧರ್ಮದ ವಿಶೇಷತೆಯಿಂದ ಕೂಡಿದ್ದು ಜಗತ್ತಿಗೆ ಮಾದರಿಯಾಗಿದೆ.
ಇಂದಿನ ಜಗತ್ತು ಹಿಂಸೆ, ಕ್ರೂರತೆ, ಆಸೆ ಮತ್ತು ದುರಾಸೆಯಿಂದ ಕೂಡಿದ್ದು ಮನುಷ್ಯರು ಜಗತ್ತಿನೊಂದಿಗೆ ತನ್ನ ಹೋಲಿಕೆ ಮತ್ತು ಹೋರಾಟದಿಂದ ಮಾನಸೀಕ ಸ್ವಾಸ್ಥ್ಯವನ್ನು ಕಳೆದುಕೊಂಡಿದ್ದಾನೆ. ಮನುಷ್ಯನ ಈ ಮಾನಸಿಕ ಹೊಯ್ದಾಟಗಳು ಮತ್ತು ಕರ್ಮಾದಿಬಂಧಗಳು, ಆಧುನಿಕ ಆಸೆಗಳು ಮತ್ತು ಜಗತ್ತಿನ ಇಂದಿನ ಸಮಸ್ಯೆಗಳು ಪರಿಹಾರವಾಗಬೇಕಾದರೆ ಜೈನ ಧರ್ಮದ ತತ್ವಗಳು ಮಾನವನ ಮನಸ್ಸಿಗೆ ಮುಟ್ಟಬೇಕು. ಪ್ರಾಣಿ ಹಿಂಸೆಯಂತಹ ಆಚರಣೆಗಳು ಮನುಷ್ಯನ ಮೂಢನಂಬಿಕೆಗಳನ್ನು ಹೋಗಲಾಡಿಸುವುದು. ಜೈನ ಧರ್ಮದಲ್ಲಿ ಮಾರ್ಗಗಳುಂಟು. ಇಂದಿನ ಜಗತ್ತಿನಲ್ಲಿ ಧರ್ಮ ಮತ್ತು ದೇವರಿಂದ ದೂರನಿಲ್ಲುವ ನಾಸ್ತಿಕವಾದವು ಹೆಚ್ಚಾಗುತ್ತಿದ್ದು ವೈಜ್ಞಾನಿಕ ನೆಲೆಗಟ್ಟಿನಲ್ಲಿ ದೇವರನ್ನು ಸುಳ್ಳು ಎಂದು ಸಾರುವ ಜನ ಒಂದುಕಡೆಯಾದರೆ, ಧರ್ಮಾಧರಿತ ಜನ ಇನ್ನೋಂದು ಕಡೆ, ಬಲಪಂಕ್ತಿಯ ಮತ್ತು ಎಡ ಪಂಕ್ತಿಯ ನಡುವೆ ದೇವರನ್ನು ಜಗತ್ತಿನ ಕರ್ತೃ ಅಲ್ಲ ಎಂದು ನಂಬುವ ನಾಸ್ತಿಕರು ಹೆಚ್ಚಾಗಿದ್ದು ಈ ವಾದವನ್ನು ಜೈನ ಧರ್ಮವು ಕ್ರಿ.ಪೂ.6ನೇ ಶತಮಾನದಲ್ಲಿ ಹೇಳಿದ್ದು ದೇವರನ್ನು ಒಪ್ಪದಿದ್ದರೂ ಕೂಡ ಕರ್ಮ ಬಂಧಗಳಿಂದ ಮುಕ್ತವಾಗಲು ಪೂಜೆ ಮತ್ತು ಆರಾಧನೆ ಬಗ್ಗೆ ಜೈನ ಧರ್ಮವು ಸಸ್ಯಹಾರದ ಮಹತ್ವವನ್ನು ಸಾರಿದ್ದು ಎಲ್ಲಾ ರೀತಿಯ ಸಮಸ್ಯೆಗಳಿಂದ ಮುಕ್ತಿ ಹೊಂದಲು ಮನುಷ್ಯ ಅತ್ಯಂತ ಸರಳ ರೀತಿಯಿಂದ ಬೇರೆಬೇರೆ ತೊಂದರೆಯಾಗದಂತೆ ಬದುಕ ಬೇಕೆಂದು ಸಮ್ಯಕದರ್ಶನ, ಸಮ್ಯಕ ಜ್ಞಾನ, ಸಮ್ಯಕ ಚಾರಿತ್ರ್ಯ ಈ ಮೂರು ರತ್ನಗಳನ್ನು ಪಾಲಿಸಲು ಮತ್ತು ಅಹಿಂಸೆ, ಸತ್ಯ, ಅಸ್ತೆಯ, ಬ್ರಹ್ಮಚರ್ಯ, ಅಪರಿಗ್ರಹ ಮತ್ತು ಗೃಹಸ್ಥರಿಗೆ ಏಕಪತ್ನಿತ್ವ ಮತ್ತು ಸಂತೋಷದ ಜೊತೆಗೆ ಕರ್ಮಮಾರ್ಗಗಳನ್ನು ಅತ್ಯಂತ ಸರಳ ಆಡುಭಾಷೆಯಲ್ಲಿ ಮಾನವನಿಗೆ ಅರ್ಥವಾಗುವ ರೀತಿಯಲ್ಲಿ ಹೇಳಿದೆ. ಇಂದಿನ ಆಧುನಿಕತೆಯ ಜೀವನದ ಒತ್ತಡದ ಮಧ್ಯೆ ಕಷ್ಟಕರವಾದ ಧರ್ಮಗಳನ್ನು ಪಾಲಿಸುವುದು ಅಸಾಧ್ಯದ ಮಾತು. ಅತ್ಯಂತ ಸರಳ ಮತ್ತು ಮಾರ್ಗಯೋಗ್ಯವಾದ ಭೋಧನೆಯುಳ್ಳ ಜೈನ ಧರ್ಮವನ್ನು ಕೆನಡಾ, ಹಾಂಗ್‍ಕಾಂಗ್, ಜಪಾನ್, ಸಿಂಗಾಪುರ, ಸೇರಿದಂತೆ ಹಲವಾರು ದೇಶಗಳು ಮತ್ತು ಹಲವಾರು ಜನರು ಈ ಧರ್ಮವನ್ನು ಅಪ್ಪಿಕೊಂಡಿದ್ದಾರೆ. ಆಧುನಿಕತೆಯ ಬದುಕಿಗೆ ಹೊಂದಿಕೆ ಮತ್ತು ಸುಲಭ ಮೋಕ್ಷಕ್ಕೆ ದಾರಿಯಾದ ಜೈನ ಧರ್ಮವು ವಿಶ್ವವನ್ನು ಆಳುವಂತಾಗಲಿ. ಶಾಂತಿ, ನೆಮ್ಮದಿಯ ಬದುಕು ಮನುಷ್ಯನಿಗೆ ದೊರೆತು ಮಹಾವೀರರ ಆಸೆ ನೆರವೇರಲಿ.


Share

ಭಗವಾನ್ ಮಹಾವೀರರ ಬೋಧನೆಗಳು

Share

ಭಗವಾನ್ ಮಹಾವೀರರು ಈ ವರ್ತಮಾನ ಕಾಲದ ಭರತ ಕ್ಷೇತ್ರದ 24 ನೇಯ (ಅಂತಿಮ) ತೀರ್ಥಂಕರರು. ಈಗ ನಡೆಯುತ್ತಿರುವುದು ಅವರ ತೀರ್ಥಕಾಲ ಚೈತ್ರ ಶುಕ್ಲ ತ್ರಯೋದಶಿ ಶುಭಯೋಗ ಸ್ವಾತಿ ನಕ್ಷತ್ರದಲ್ಲಿ ಸುಮಾರು 5621 ವರ್ಷಗಳ ಹಿಂದೆ ಭಗವಾನ್ ಮಹಾವೀರರ ಜನನವಾಯಿತು. ಕುಂಡಲಪುರದ ಅರಸ ಸಿದ್ದಾರ್ಥ ರಾಜ ಮತ್ತು ತ್ರಿಶಲಾ ರ ಏಕಮಾತ್ರ ಸುಪುತ್ರ ಇವರು. ಇವರ ಜನನಕ್ಕೆ 6 ತಿಂಗಳು ಮುಂಚಿತವಾಗಿಯೇ ಸಿದ್ಧಾರ್ಥ ರಾಜನ ಅರಮನೆಯ ಅಂಗಳದಲ್ಲಿ ಪ್ರತಿದಿನ ಮೂರುಬಾರಿ ಮೂರುವರೆ ಕೋಟಿ ಮುತ್ತು ರತ್ನಗಳ ಸುರಿಮಳೆ ಆಗುವುದಕ್ಕೆ ಪ್ರಾರಂಭವಾಯಿತು. ಒಟ್ಟು ಹದಿನೈದು ತಿಂಗಳು ಈ ರತ್ನವೃಷ್ಟಿ ಮುಂದುವರೆದು ಧನ-ಧನ್ಯಾದಿಗಳಿಂದ ರಾಜ್ಯ ಸುಭೀಕ್ಷವಾಯಿತು. ಮಹಾಪುರುಷರೆಂದರೆ ಹೀಗೆ ಪುಣ್ಯದ ಹೊಳೆಯೇ ಹರಿಯುತ್ತದೆ.
ತೀರ್ಥಂಕರರು:- ತೀರ್ಥಂಕರರೆಂದರೆ ಧರ್ಮ ತೀರ್ಥ ಪ್ರವರ್ತಕರು ‘ತರಂತಿ ಸಂಸಾರ ಮಹಾರ್ಣವಂ ಏಸ ತತ್ ತೀರ್ಥಂ’
ಅರ್ಥ:- ಯಾರ ಉಪದೇಶದ ಮುಖಾಂತರವಾಗಿ ಈ ಸಂಸಾರ ಸಾಗರವನ್ನು ದಾಟಲು ಸಾಧ್ಯವಾಗುತ್ತದೆಯೋ ಅದೇ ತೀರ್ಥವಾಗಿದೆ.(ಕಲ್ಯಾಣಕಾರಿಯಾಗಿದೆ)
ಭಗವಾನ್ ಮಹಾವೀರರ ಜನ್ಮಕಲ್ಯಾಣೋತ್ಸವದಂದು ಅವರ ಉನ್ನತ ವಿಚಾರಗಳ , ತತ್ವಗಳ ಸಿದ್ದಾಂತಗಳನ್ನು ಅರಿತು ಅದರಂತೆ ನಡೆಯುವುದು ಕಲ್ಯಾಣಕರವಾಗಿದೆ.
ಮಹಾವೀರರ ಸಿದ್ಧಾಂತಗಳು:- ಜೈನ ತತ್ವಗಳಾದ ಅಹಿಂಸೆ, ಅಪರಿಗೃಹ ಮತ್ತು ಅನೇಕಾಂತವಾದಗಳು ಭಗವಾನ್ ಮಹಾವೀರರ ಕಾಲದಲ್ಲಿ ಪ್ರಚಾರವಾಗಿ ಪುನರ್ ಸ್ಥಾಪನೆಗೊಂಡವು. ಇವುಗಳ ಪ್ರಚಾರ ಮಾಡಿ ಭಗವಾನ್ ಮಹಾವೀರರು ತಾವು ಉತ್ತಮ ಸಮಾಜ ಶಾಸ್ತ್ರಜ್ಞರು ಮತ್ತು ಸಮಾಜ ಸುಧಾರಕರು ಎಂಬುದನ್ನು ನಿರೂಪಿಸಿದರು. ಈ ಸಿದ್ಧಾಂತಗಳನ್ನು ಪಾಲಿಸುವುದರಿಂದ ಹೇಗೆ ಜೀವನವನ್ನು ಸ್ವರ್ಗಸಮಾನವನ್ನಾಗಿ ಮಾಡಿಕೊಂಡು ಬಾಳಬಹುದು ಎಂದು ಭೋಧಿಸಿದರು. ಇಷ್ಟಲ್ಲದೇ ಶಾಶ್ವತ ಸುಖವನ್ನು ಪಡೆಯುವ ಮೋಕ್ಷಮಾರ್ಗ , ರತ್ನತ್ರಯ ಮಾರ್ಗವನ್ನೂ ಭೋಧಿಸಿದರು.
ಅಹಿಂಸೆ:- ಅಹಿಂಸಾ ಪರಮೋಧರ್ಮ: ಬಾಳು ಮತ್ತು ಬಾಳಗೊಡು ಐive ಚಿಟಿಜ ಐeಣ ಐive ಇವು ಮಹಾವೀರರ ವಿಚಾರ. ಈ ಪ್ರಪಂಚದಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೆ ಬದುಕುವ ಹಕ್ಕಿದೆ . ಆ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅಧಿಕಾರವಿಲ್ಲ. ಕೇವಲ ತಮ್ಮ ನಾಲಗೆಯ ರುಚಿಗಾಗಿ ಮತ್ತೊಂದು ಜೀವಿಯನ್ನು ಕೊಂದು ತಿನ್ನುವುದು ಮಹಾಪಾಪ ಎಂದು ಮಾನವರಿಗೆ ಭೋಧಿಸಿದರು. ನಮ್ಮ ಸುತ್ತಮುತ್ತಲು ಇರುವ ಏಕೇಂದ್ರಿಯದಿಂದ ಪಂಚೇದ್ರಿಯ ಜೀವಿಗಳ ವರೆಗೆ ಯಾವ ಜೀವಿಗೂ ಉದ್ದೇಶಪೂರ್ವಕವಾಗಿ ಹಿಂಸೆ ಮಾಡಬಾರದು ಎಂದರು. ಸಾವಿರರು ವರ್ಷಗಳ ಹಿಂದೆಯೇ ಭಗವಾನ್ ಮಹಾವೀರರು ಪರಿಸರ ಸಂರಕ್ಷಣೆಯ ವಿಚಾರವಾಗಿ ಒತ್ತುಕೊಟ್ಟರು. ಮನುಜ ಇಂದು ತನ್ನ ಸ್ವಾರ್ಥ ಮತ್ತು ದುರಾಸೆಯಿಂದ ಪ್ರಕೃತಿಯ ಮೇಲೆ, ಪರಿಸರದ ಮೇಲೆ ಪ್ರಹಾರ ಮಾಡುತ್ತಾ ದಬ್ಬಾಳಿಕೆ ನಡೆಸುತ್ತಿದ್ದಾನೆ. ಗುಡ್ಡ ಬೆಟ್ಟ , ನದಿ ಸಮುದ್ರ, ಗಿಡ ಮರ, ಅರಣ್ಯಗಳ ಸಂಪತ್ತನ್ನೆಲ್ಲಾ ಲೂಟಿ ಮಾಡಲು ಅವನ್ನು ನಾಶಮಾಡುತ್ತಿದ್ದಾನೆ, ಕಲುಷಿತಗೊಳಿಸುತ್ತಿದ್ದಾನೆ. ನಮ್ಮ ಪರಿಸರದಲ್ಲಿ ತುಂಬಿರುವ ಏಕೇಂದ್ರಿಯ ಜೀವಿಗಳಿಗೆ ಮತ್ತು ತ್ರಸ ಜೀವಿಗಳಿಗೂ ಇದರಿಂದ ಅಪಾರ ಹಿಂಸೆಯಗುತ್ತಿದೆ. ಈ ಹಿಂಸೆಯಿಂದಾಗಿಯೇ ಇಂದು ಮನುಕುಲ ಅನೇಕ ಪ್ರಾಕೃತಿಕ ವಿಕೋಪಗಳಿಗೆ ಗುರಿಯಾಗಿದೆ. ಮಾನವನ ದಬ್ಬಾಳಿಕೆಗೆ ಪ್ರಕೃತಿ ಈಗ ಸಿಡಿದೆದ್ದಿದೆ. ಗ್ಲೋಬಲ್ ವಾರ್ಮಿಂಗ್, ಸುನಾಮಿ, ಭೂಕಂಪ ,ಚಂಡಮಾರುತ ಬರ ಮುಂತಾದವುಗಳು ಹೆಚ್ಚಾಗುತ್ತಿವೆ. ಕೊರೋನಾ ಸಮಯದಲ್ಲಿ ಆಕ್ಸಿಜನ್‍ಗಾಗಿ ಮನುಷ್ಯರು ಪರದಾಡಿ ಪರಿಪಾಟಲು ಪಟ್ಟರು. ಪರಿಸರವನ್ನು ಸಂರಕ್ಷಿಸಿ ಆಗ ನೀವೂ ಸುರಕ್ಷಿತ ಎಂದೂ ಭಗವಾನ್ ಮಹಾವೀರರು ಆ ಕಾಲದಲ್ಲೇ ಬೋಧಿಸಿದ್ದರು.
ಪರಸ್ಪರೋಪಗೃಹೋ ಜೀವಾನಾಮ್- ಜೀವಿಗಳು ಬದುಕಿಗಾಗಿ ಪರಸ್ಪರ ಅವಲಂಭಿಸಿರುತ್ತವೆ. ಆದ್ದರಿಂದ ಸರ್ವಹಿತವನ್ನು ಬಯಸುವುದೇ ಧರ್ಮ ಎಂದು ಭಗವಾನ್ ಮಹಾವೀರರು ಭೋಧಿಸಿದರು.
ಧರ್ಮ:-

  1. ಯಾವುದನ್ನು ನೀನು ನಿನಗಾಗಿ ಬಯಸುತ್ತಿಯೋ ಅದನ್ನು ಬೇರೆಯವರಿಗೂ ಬಯಸಬೇಕು. ಯಾವುದನ್ನು ನೀನು ನಿನಗಾಗಿ ಬಯಸುವುದಿಲ್ಲವೋ ಅದನ್ನು ಬೇರೆಯವರಿಗೂ ಬಯಸಬಾರದು.
  2. ಧರ್ಮದ ಹೆಸರಿನಲ್ಲಿ ಹಿಂಸೆ ಮಾಡಿದರೆ ಅದು ಧರ್ಮವನ್ನೇ ಕೊಲೆ ಮಾಡಿದಂತೆ.
  3. ಧರ್ಮೋ ರಕ್ಷತಿ ರಕ್ಷಿತಃ:- ಯಾರು ಧರ್ಮವನ್ನು ರಕ್ಷಿಸುತ್ತಾರೋ ಅವರನ್ನು ಧರ್ಮವು ರಕ್ಷಿಸುತ್ತದೆ.

ಮುಪ್ಪು ನಮ್ಮನ್ನಾವರಿಸುವ ಮುನ್ನ, ಇಂದ್ರಿಯಾಗಳು ಶಿಥಿಲವಾಗುವ ಮುನ್ನ ಬೇನೆ ಬೇಸರಿಕೆಗಳು ಬೆಳೆಯುವ ಮುನ್ನ ಧರ್ಮವನ್ನಾಚರಿಸಬೇಕು ಎಂದು ಭಗವಾನ್ ಮಹಾವೀರರು ಭೋಧಿಸಿದರು.
ಸ್ವಹಿಂಸೆ, ಪರಹಿಂಸೆ ಎರಡನ್ನು ಮಾಡಬಾರದು ಕ್ರೋಧ, ಮಾನ, ಮಾಯಾ, ಲೋಭಗಳು ನಮ್ಮ ಆತ್ಮಘಾತವನ್ನು ಮಾಡಿ ನಮ್ಮನ್ನು ಅಧೋಗತಿಗೆ ದೂಡುತ್ತವೆ. ಆದ್ದರಿಂದ ನಾವು ಕಷಾಯಗಳನ್ನು ಕಡಿಮೆ ಮಾಡಿಕೊಳ್ಳುವ ನಿರಂತರ ಪ್ರಯತ್ನವನ್ನು ಮಾಡಬೇಕು.
ಅನೇಕಾಂತವಾದ:- ಯಾವುದೇ ವಸ್ತುವನ್ನಾಗಲೀ, ವಿಷಯವನ್ನಾಗಲೀ ವಿವಿಧ ದೃಷ್ಟಿಕೋನಗಳಿಂದ ವೀಕ್ಷಿಸಿದಾಗಲೇ ಸತ್ಯ ಗೋಚರಿಸುತ್ತದೆ. ಇನ್ನು ಸಮಾಜದಲ್ಲಿ ಸಹ ಅಸ್ತಿತ್ವ, ಹೋಂದಾಣಿಕೆ ಇರಬೇಕೆಂದರೆ ಅನೇಕಾಂತ ದೃಷ್ಟಿ ಇರಬೇಕು. ನಾನೇ ಸರಿ, ನನ್ನದು ಮಾತ್ರ ಸರಿ ಎಂದರೆ ಅದು ಏಕಾಂತವಾದ ಆಗುತ್ತದೆ. ಏಕಾಂತದಲ್ಲಿ ವಾದ, ವಿವಾದ, ಕಲಹವಿದೆ. ಅನೇಕಾಂತದಲ್ಲಿ ಸಂವಾದವಿದೆ, ಸ್ನೇಹವಿದೆ. ಅನೇಕಾಂತ ದೃಷ್ಟಿಕೋನವಿದ್ದರೆ ಈ ವಿಶ್ವದಲ್ಲಿ ಮಹಾಯುದ್ಧಗಳೇ ಸಂಭವಿಸುತ್ತಿರಲಿಲ್ಲ. ಸಾಮಾಜಿಕ ಸಂಘರ್ಷಣೆಗಳು ಕಡಿಮೆಯಾಗುತ್ತಿದ್ದವು. ಲೋಕ ಹಿತವಾಗುತ್ತಿತ್ತು.

ಅಪರಿಗೃಹ:-ಮಾನವನ ಪರಿಗ್ರಹ ಬುದ್ಧಿ, ಅತಿ ಆಸೆ, ಅತಿ ಸಂಗ್ರಹಣೆ ಮಾಡುವ ಬುದ್ಧಿಯೇ ಇದು ಇಡೀ ಸಮಾಜದ ಅಧಃಪತನಕ್ಕೆ ಕಾರಣ. ಧನಿಕ, ಬಡವ ಎನ್ನುವ ಅಂತರ ಹೆಚ್ಚಾದಷ್ಟು ಸಾಮಾಜಿಕ ಸ್ವಾಸ್ಥ್ಯ ಹದಗೆಡುತ್ತದೆ. ಕಳ್ಳತನ, ಕೊಲೆ, ಸುಲಿಗೆ, ದರೋಡೆ, ಮುಂತಾದವು ಹೆಚ್ಚುತ್ತದೆ. ಆದ್ದರಿಂದ ಇವನ್ನೆಲ್ಲಾ ತಡೆಗಟ್ಟಲು ಇದ್ದವರು, ಇಲ್ಲದವರಿಗೆ ದಾನ ನೀಡಬೇಕು. ಸಾಮಾಜಿಕ ಸಮಾನತೆಗಾಗಿ ಪ್ರಯತ್ನಪಡಬೇಕು ಎಂದು ಚತುರ್ವಿಧ ದಾನಗಳನ್ನು ಭೋಧಿಸಿದರು. ಆಹಾರ ದಾನ, ಆಭಯದಾನ, ಔಷಧದಾನ ಮತ್ತು ಜ್ಞಾನದಾನ ಪ್ರತಿಯೊಬ್ಬ ಶ್ರಾವಕನೂ ಯಥಾಶಕ್ತಿ ದಾನ ನೀಡಿ ಸಮಾಜದ ಋಣವನ್ನು ತೀರಿಸಬೇಕು ಎಂದು ಭೋಧಿಸಿದರು.
ಭಗವಾನ್ ಮಹಾವೀರರ ತತ್ವ ಸಿದ್ಧಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಮ್ಮ ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳೋಣ.

ಲೇಖಕಿ:-ಡಾ|| ನೀರಜಾ ನಾಗೇಂದ್ರ ಕುಮಾರ್
ಅಶ್ವಿನಿ ಕ್ಲಿನಿಕ್
ಬೆಂಗಳೂರು-75


Share

ಬಸವಣ್ಣ ಮತ್ತು ಪ್ರಸ್ತುತತೆ

Share

ದೃಷ್ಠಿಯಿಂದ ಸಮಷ್ಠಿಯವರೆಗೆ, ರಾಜ್ಯದಿಂದ ದೇಶದವರೆಗೆ, ರಾಷ್ಟ್ರದಿಂದ ಅಂತರ್ ರಾಷ್ಟ್ರದವರೆಗೆ, ಅಂತಿಮವಾಗಿ ಜಗತ್ತಿನ ಸರ್ವೋತ್ತಮ ಅಭಿವೃದ್ಧಿಯಾಗಬೇಕಾದರೆ ಕೆಲವೊಂದು ನೀತಿ, ನಿಯಮ, ತತ್ವ ಸಿದ್ಧಾಂತಗಳು ಅನಿವಾರ್ಯವಾಗುತ್ತವೆ. ಸಕಲ ಜೀವಾತ್ಮರಿಗೆ ಲೇಸನ್ನೆ ಬಯಸುವ ಸರ್ವ ಸಮನಾನತೆಯ ಸಂದೇಶವನ್ನು ಸಾರುವ ಸಾಮಾಜಿಕ, ಆರ್ಥಿಕ, ರಾಜಕೀಯ, ಸಾಹಿತ್ಯಿಕ ಹಾಗೂ ಆಧ್ಯಾತ್ಮಿಕ ತತ್ವ ಸಿದ್ಧಾಂತಗಳನ್ನು ಪರಿ ಪಾಲಿಸಿದ್ದೆಯಾದರೆ ಇವುಗಳೆಲ್ಲವುಗಳಲ್ಲಿ ಸ್ಥಿರತೆಯನ್ನು ತರಬಹುದು. ಪ್ರಜಾಪ್ರಭುತ್ವ ಸರ್ಕಾರಗಳಾಗಲಿ, ರಾಜ ತಾಂತ್ರಿಕ ಸರ್ಕಾರಗಳಾಗಲಿ ಅಥವಾ ನೌಕರಶಾಹಿ ವ್ಯವಸ್ಥೆಗಳಾಗಲಿ, ಮೂಲಭೂತವಾಗಿ ಕೆಲವು ಧ್ಯೇಯೋದ್ಧೇಶ ತತ್ವಗಳನ್ನು ಅಳವಡಿಸಿಕೊಳ್ಳಬೇಕಾಗುತ್ತದೆ. ಇದರಿಂದಾಗಿ ಜನತೆ ಶಾಂತಿ, ಸೌಖ್ಯ, ಸಾಮರಸ್ಯ, ಸೌಹಾರ್ದತೆಗಳಿಂದ ಬಾಳಲು ಸಾಧ್ಯವಾಗುತ್ತದೆ. ಇದನ್ನೇ ಕೆಲವು ಇತಿಹಾಸಕಾರರು, ಚಿಂತಕರು, ಮೇಧಾವಿಗಳು ಹೇಳುತ್ತಲೇ ಬಂದಿದ್ದಾರೆ. ಇದಕ್ಕಾಗಿ ಕೆಲವು ಉದ್ ಗ್ರಂಥಗಳು ರಚನೆಯಾಗಿವೆ. ಅವುಗಳ ಆಧಾರದಿಂದ ಜನ ಜೀವನ ಸುಖಮಯವಾಗಿಸಲು ಪ್ರಯತ್ನಗಳು ನಡೆದಿವೆ. ಅನೇಕ ದಾರ್ಶನಿಕರು , ಮಹಾತ್ಮರು ಇದಕ್ಕಾಗಿ ಅಹರ್ನಿಶಿ ದುಡಿದಿದ್ದಾರೆ.
ಭಾರತೀಯ ನೆಲೆಯಲ್ಲಿ ಅನೇಕ ಸಾಧು ಸಂತರು , ಧಾರ್ಮಿಕ ವ್ಯಕ್ತಿಗಳು, ರಾಜಕೀಯ ವ್ಯವಸ್ಥೆ, ಮುತ್ಸದಿಗಳು ಆಗಿ ಹೋಗಿದ್ದಾರೆ. ಕ್ರಿಸ್ತ ಪೂರ್ವದಲ್ಲೇ ಬುದ್ಧ ದೇವ ಸರ್ವಸಮಾನತೆಯನ್ನು ಶಾಂತಿ ಸೌಹಾರ್ದತೆಯನ್ನು ಭೋಧಿಸಿದರು. ಅವರ ನಂತರ ಹನ್ನೇರಡನೇ ಶತಮಾನದಲ್ಲಿ ಬಸವಾದಿ ಶರಣರು ಕರ್ನಾಟಕದಲ್ಲಿ ಉದಯಿಸಿ ಸಾಮಾಜಿಕ ಕ್ರಾಂತಿಯನ್ನೇ ಉಂಟುಮಾಡಿದರು. ಅವರ ಬಗ್ಗೆ ರಾಷ್ಟ್ರಪಿತ ಮಹಾತ್ಮಗಾಂಧಿಜಿಯವರು ಹೇಳುತ್ತಾರೆ ಬಸವಣ್ಣನವರು 800 ವರ್ಷಗಳ ಹಿಂದೆ ಮಾಡಿದಂತ ಸಾಮಾಜಿಕ ಸುಧಾರಣೆಯನ್ನು ಇನ್ನಾರು ಮಾಡಲು ಸಾಧ್ಯವಿಲ್ಲ. ಅವರು ನೀಡಿದ ತತ್ವಗಳನ್ನು ಸಿದ್ಧಾಂತಗಳನ್ನು ಪರಿಪೂರ್ಣವಾಗಿ ಕಾರ್ಯ ರೂಪಕ್ಕೆ ತಂದಿದ್ದೇಯಾದರೇ ಭಾರತವಷ್ಟೇ ಅಲ್ಲ ಇಡೀ ಜಗತ್ತನ್ನೇ ಸಂವೃದ್ಧಿ ಪಥದಲ್ಲಿ ಕೊಂಡೋಯ್ಯಬಹುದೆಂದು ಈ ವಿಚಾರಗಳನ್ನೇಲ್ಲಾ ಪರಿಭಾವಿಸಿ ವಿಶ್ವ ಸಂಸ್ಥೆಯು ಭಾರತೀಯ ಮೂಲದ ಸಾಮಾಜಿಕ ಸಾಂಸ್ಕøತಿಕ ಸಂದೇಶಗಳನ್ನು ಪರಿಪಾಲಿಸಿದ್ದೆ ಆದರೆ ಲೋಕ ಕಲ್ಯಾಣವಾಗುವುದರಲ್ಲಿ ಸಂಶಯವಿಲ್ಲ.
ಪ್ರಸ್ತುತ ಸಾಮಾಜಿಕ ಸಂಧರ್ಭ ಸಮಸ್ಯೆಗಳ ಸುಳಿಯಲ್ಲಿ ಮುಳುಗಿ ಹೋಗಿದೆ. ಜಾತಿಜಗಳ, ಅಸಮಾನತೆ, ಪ್ರತ್ಯೆಕತೆ, ಶೋಷಣೆಯಂತಹ ಜ್ವಲಂತ ಸಮಸ್ಯೆಗಳು ಈಗ ಮತ್ತಷ್ಟು ಉರಿಯುತ್ತದೆ. ಅಧಿಕಾರವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ಅನೇಕರು ಸಮಸ್ಯೆಗಳನ್ನು ಹುಟ್ಟುಹಾಕುತ್ತಿದ್ದಾರೆ. ಪರಿಸರ ದಿನಿತ್ಯ ಮಲೀನವಾಗುತ್ತಿದೆ. ನಿಸರ್ಗ ಸಮತೋಲನವನ್ನು ಕಳೆದುಕೊಂಡು ಜಾಗತೀಕರಣವು ತುಚ್ಚೀಕರಿಸುತ್ತಾ ಸಾಗುತ್ತಿದೆ. ಇಂತಹ ಪ್ರಕ್ಷುಬ್ಧ ವಾತಾವರಣದಲ್ಲಿ ಅನೇಕ ಚಿಂತಕರ ಚಿಂತನೆಗಳು ನಮಗೆ ಮಾರ್ಗದರ್ಶನವಾಗಬಲ್ಲವು. ಬುದ್ಧನ ಜೀವನ ಪ್ರೀತಿ, ಬಸವಣ್ಣನ ದಯೆ, ಅಂಬೇಡ್ಕರರ ಹೋರಾಟ, ಗಾಂಧೀಜಿಯ ಸರಳತೆ, ಮತ್ತೆಮತ್ತೆ ನಮ್ಮ ಚಿಂತನೆಯ ಮೊರೆಯಲ್ಲಿ ಮೂಡಿಬಂದಾಗ ಹೊಸ ಬೆಳಕನ್ನು ಕಾಣಬಹುದಾಗಿದೆ.
ಈಗಿನ ಜಗತ್ತು ಜಾಗತೀಕರಣ, ಉದಾರೀಕರಣ ಮತ್ತು ಖಾಸಗೀಕರಣದಿಂದಾಗಿ ಹೊರಗಿನ ಶೃಂಗಾರ ಒಳಗಣ ರಣರಂಗದಂತಾಗಿ ಮಾನಸೀಕ ಸ್ಥಿರತೆಯನ್ನು ಕಳೆದುಕೊಂಡಿದೆ. ವಿಜ್ಞಾನ ತಂತ್ರಜಾÐನದ ಕಾರಣದಿಂದಾಗಿ ವಿವೇಕವನ್ನು ಕಳೆದುಕೊಂಡು ಅಮಾನುಷವಾಗಿ ವರ್ತಿಸುತ್ತಾ ಕಡಿವಾಣವಿಲ್ಲದ ಕುದುರೆಯಂತೆ ಎತ್ತೆತ್ತಲೋ ಓಡುತ್ತಿದೆ. ಅದನ್ನು ತಹಬದಿಗೆ ತರಬೇಕಾದರೆ, ಸಮಾಜಿಕ ಪರಿವರ್ತನೆಯಾಗಬೇಕಾದರೆ ಒಂದು ರೂಢಿ ಮೂಲವಾದ ಪರಂಪರೆ ಬೇಕಾಗುತ್ತದೆ. ನೀತಿ ನಿಯಮ ಸ್ಥಿರತೆಯ ಪ್ರಜ್ಞೆ ಆಳುವವರಲ್ಲಿ ಮೂಢ ಬೇಕಾಗುತ್ತದೆ.
ಪ್ರಸ್ತುತ ಸಮಾಜಿಕ ಸಂಧರ್ಭದಲ್ಲಿ ಅನೇಕ ಜ್ವಲಂತ ಸಮಸ್ಯೆಗಳಿಗೆ ಬಸವಣ್ಣನವರು , ಶರಣರ ವಚನಗಳಲ್ಲಿ ಉತ್ತರವಿದೆ. ಹನ್ನೇರಡನೆ ಶತಮಾನದಲ್ಲಿ ವಚನ ಚಳುವಳಿಯನ್ನು ಹುಟ್ಟುಹಾಕಿ ಸಹಸ್ರಾರು ನೊಂದ ಜೀವಿಗಳ ಧನಿಯಾಗಿ ನಿಂತ ಬಸವಾದಿ ಪ್ರಮಥರು ಅನೇಕ ನಿಷ್ಟುರತೆ ಪರಿಹಾರಗಳನ್ನು ಸೂಚಿಸಿದ್ದಾರೆ. ಅಲ್ಲಿಯ ಅನೇಕ ವಿಚಾರಗಳು ಇಂದಿಗೂ ಪ್ರಸ್ತುತವೆನಿಸಿವೆ. ಶರಣರ ಆದರ್ಶ ಜೀವನ ಮಾರ್ಗಗಳು ಅಂತರಂಗ ಬಹಿರಂಗ ಶುದ್ಧತೆಗೆ ಅಣಿ ಮಾಡಿದವುಗಳಾಗಿವೆ. ದಯೆ, ಕರುಣೆ, ಕಾಯಕ, ದಾಸೋಹ, ಸ್ತ್ರೀ ಸಮಾನತೆ, ಅಹಿಂಸೆಗಳನ್ನು ರೂಪಿಸಿ ವಚನಗಳಲ್ಲಿ ಬರೆದಂತೆ ಬದುಕಿ ತೋರಿಸಿದ್ದಾರೆ. ವೈಯಕ್ತಿಕ ವಿಕಾಸದೊಂದಿಗೆ ಸಾಮಾಜಿಕ ವಿಕಾಸವಾದವು ಹೇಗೆ ಪ್ರತಿಫಲಿತವಾಗಬಹುದೆಂಬುದನ್ನು ಸಾಕ್ಷ ಭೂತವಾಗಿ ತೋರಿಸಿಕೊಟ್ಟಿದ್ದಾರೆ.
ಶುದ್ಧ ಮನಸ್ಸಿನವರಾಗಿ ಕಾಯಕ ಜೀವಿಯಾಗಿ ಮಾನವೀಯ ಗುಣಗಳಿಂದ ಹೇಗೆ ಜೀವನ ನಡೆಸ ಬಹುದೆಂಬುದನ್ನು ಶರಣ ನುಲಿಯ ಚಂದಯ್ಯ ಈ ವಚನದಲ್ಲಿ ಹೇಳಿದ್ದಾರೆ.
ನೇಮದ ಕೂಲಿ ಅಂದಿನ ನಿತ್ಯ ನೇಮದಲ್ಲಿ ಸಂದಿರಬೇಕು
ನೇಮದ ಕೂಲಿಯ ಬಿಟ್ಟು ಹೇಮದಾಸೆಗೆ ಕಾಮಿಸಿ
ನಿನ್ನಾಸೆಯ ವೇಷದ ಪಾಶಕ್ಕೆ ನೀನೆ ಹೋಗುವೆ
ಚಂದೇಶ್ವರ ಲಿಂಗಕ್ಕೆ ದೂರಾಗುವೆ.
ಪ್ರತಿಯೊಬ್ಬನು ಆಸೆ ಆಮಿಷಕ್ಕೆ ಬಲಿಬೀಳದೆ ಸತ್ಯ ಪ್ರಮಾಣಿಕವಾಗಿ ಸ್ವ ದುಡಿಮೆ ಮಾಡಿದರೆ ಅವನ ಬದುಕಿನಲ್ಲಿ ಶ್ರೇಷ್ಟತೆ ಇರುತ್ತದೆ. ಅವನನ್ನು ದೇವರು ಮೆಚ್ಚುವನು. ಆಗಿಲ್ಲದಿದ್ದರೆ ವೇಷದ ಪಾಶಕ್ಕೆ ಹೋಗುವೆ ಎಂದು ಎಚ್ಚರಿಸುತ್ತಾರೆ. ವಚನಕಾರರು ಭ್ರಷ್ಟರನ್ನು ಅನಾಚಾರಿಗಳನ್ನು ಮತ್ತು ವೇಷಾಧಾರಿಗಳನ್ನು ಕಟುವಾಗಿ ಟೀಕಿಸಿದ್ದಾರೆ. ಶಿವಶರಣೆ ಅಕ್ಕಮ್ಮ ವಚನವೊಂದರಲ್ಲಿ ಹೀಗೆ ಹೇಳುತ್ತಾಳೆ.
ಗುರುವಾದಡೂ ಆಚಾರ ಭ್ರಷ್ಟನಾದಡೆ ಅನುಸರಿಸಲಾಗದು
ಜಂಗಮವಾದಡೂ ಆಚಾರ ದೋಷವಾದಲ್ಲಿ ಪೂಜಿಸಲಾಗದು.
ಲಿಂಗವಾದಡೂ ಆಚಾರ ಅನುಸರಣೆಯಾಗದಿದ್ದರೆ ಕೂಡಲಾಗದು
ಆಚಾರವೇ ವ್ರತ, ಪ್ರಾಣ ಕ್ರಿಯೆ, ಜ್ಞಾನ ಆಚಾರವೇ ಪ್ರಾಣವಾಗಿಪ್ಪ
ರಾಮೇಶ್ವರ ಲಿಂಗವು
ಇಂತಹ ಮೌಲ್ಯಯುತವಾದ ಸಾಮಾಜಿಕ ಅನಿವಾರ್ಯತೆಗಳಾದ ತತ್ವ ಸಿದ್ಧಾಂತಗಳನ್ನು ಬೆಳೆಸುವುದರ ಮೂಲಕ ಅಧಿಕಾರ ಅಂತಸ್ತು ಸಾಂಸ್ಕøತಿಕ ಸಮಾನತೆಯ ಅರಿವನ್ನುಂಟುಮಾಡಿ ಅದನ್ನು ಪಾಲಿಸುವುದರ ಮೂಲಕ ಏಕತೆಯಲ್ಲಿ ಐಕ್ಯತೆಯನ್ನು ಕಾಣಬಹುದಾಗಿದೆ. ಭಯೋತ್ಪಾದನೆ, ಕೋಮುಗಲಭೆ, ಜಾತಿ ವೈಷಮ್ಯ, ಲಿಂಗಭೇದಗಳಿಗೆ ಸಿದ್ಧೌಷಧವನ್ನು ಶರಣರು ತಮ್ಮ ವಚನಗಳಲ್ಲಿ ಪ್ರತಿಪಾದಿಸಸಿದ್ದಾರೆ. ಮೇಲು-ಕೀಳು ಭಾವನೆಗಳನ್ನು ತೊಡೆದು ಹಾಕುವುದು, ರಾಜಕೀಯ ವೈಷಮ್ಯಗಳನ್ನು ನಿಲ್ಲಿಸಿ ಏಕೋಭಾವನೆಯಿಂದ ರಾಷ್ಟ್ರಾಭಿವೃದ್ಧಿಗೆ ಶ್ರಮಿಸುವುದು, ಅಹಂಕಾರ ಮಮಕಾರಗಳನ್ನು ತೊರೆದು ಸಮಷ್ಠಿ ಪ್ರಜ್ಞೆಯನ್ನು ತಾಳುವುದು ಈಗಿನ ಸಂಧರ್ಭದಲ್ಲಿ ಪ್ರಸ್ತುತವೆನಿಸಿದೆ. ಇದಲ್ಲದೆ ಈ ಕೆಳಕಂಡ ಕೆಲವಂಶಗಳನ್ನು ತಮ್ಮ ವಚನಗಳಲ್ಲಿ ಪ್ರತಿಬಿಂಬಿಸಿದ್ದಾರೆ.ಅವುಗಳೆಂದರೆ

  1. ಧರ್ಮದ ಹೆಸರಿನಲ್ಲಿ ನಡೆಯುವ ಅನಾಚಾರಗಳನ್ನು ತಪ್ಪಿಸಿ ಸಾಮಾಜಿಕ ಭಯ ಭೀತಿಗಳನ್ನು ದೂರಿಕರಿಸುವುದು.
  2. ಜಾತಿ ವ್ಯವಸ್ಥೆಯನ್ನು ತಡೆದು ಎಲ್ಲರೂ ನಮ್ಮವರೆಂದು ಅಪ್ಪಿಕೊಳ್ಳುವುದು. ಅದನ್ನೇ ಬಸವಣ್ಣ “ಇವನಾರವ ಎನಿಸದಿರಯ್ಯ ಇವ ನಮ್ಮವನೆನಿಸಯ್ಯ” ಎಂದು ಹಾಡಿದ್ದಾರೆ.
  3. ಮೂಢನಂಬಿಕೆಗಳನ್ನು , ಅಂಧಸಂಪ್ರಾದಾಯಗಳನ್ನು ತಡೆದು ಜನರಲ್ಲಿ ವೈಚಾರಿಕ ಪ್ರಜ್ಞೆಯನ್ನು ಬೆಳೆಸುವುದು.
  4. ಕಾಯಕ-ದುಡಿಮೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು. ಯಾವ ಕಾಯಕವಾದರೂ ಶ್ರೇಷ್ಠವೇ ಅದರಿಂದ ಪ್ರಮಾಣಿಕವಾದ ಆರ್ಥಿಕ ಸಮಾನತೆಯನ್ನು ತರುವುದು.
  5. ಮಹಿಳೆಯರಿಗೆ ಸಮಾನ ಸ್ಥಾನಮಾನ ನೀಡಿ ಅವರು ಸಾಂಸ್ಕøತಿಕವಾಗಿ ಸಾಮಾಜಿಕವಾಗಿ ಬೆಳೆಯಲು ಕಾರಣವಾಗುವುದು.
  6. ಅಹಿಂಸೆಯನ್ನು ಪ್ರತಿಪಾದಿಸುವುದು, ಸಕಲ ಜೀವಾತ್ಮರಿಗೆ ಲೇಸನೆ ಬಯುಸುವುದು ಅದನ್ನೇ ಬಸÀವಣ್ಣನವರು “ಕಳಬೇಡ ಕೊಲಬೇಡ ಹುಸಿಯನುಡಿಯಲು ಬೆಡ ತನ್ನ ಬಣ್ಣಿಸಬೇಡ ಇದಿರ ಅಳಿಯಲು ಬೇಡ” ಎಂಬ ಸಪ್ತ ಸೂತ್ರಗಳಲ್ಲಿ ಹೇಳಿದ್ದಾರೆ.
  7. ಅಸ್ಪøಶ್ಯತೆಯನ್ನು ಹೋಗಲಾಡಿಸಿ ಗುರು ಹಿರಿಯರಲ್ಲಿ ಭಕ್ತಿಭಾವದಿಂದ ವರ್ತಿಸುವುದು.
  8. ಸಾಂಘೀಕ ಜೀವನಕ್ಕೆ ಮಹತ್ವ ನೀಡುವುದು. ಅನುಭವ ಮಂಟಪವನ್ನು ಸ್ಥಾಪಿಸಿ, ನಿರಕ್ಷರ ಕುಕ್ಷಿಗಳಿಗೆ ಶಿಕ್ಷಣ ನೀಡಿದ್ದು ಮತ್ತು ವಚನ ಸಾಹಿತ್ಯವನ್ನು ರಚಿಸಿ ಜ್ಞಾನ ಪ್ರಸಾರ ಮಾಡಿದ್ದು ಶರಣರ ಹೆಗ್ಗಳಿಕೆ.
  9. ಧಾರ್ಮಿಕ ಕ್ಷೇತ್ರಗಳಲ್ಲಿ ಸರಳತೆ ನೈಜತೆಯಿಂದ ಏಕೋದೇವೋಪಾಸನೆಯನ್ನು ತರುವುದು.
  10. ಪರಿಸರ ಸಂರಕ್ಷಣೆ “ಮರಕ್ಕೆ ಬಾಯಿ ಬೇರೆಂದು ತಳಕ್ಕೆ ನೀರೆರೆದರೆ ಮೇಲೆ ಫಲ್ಲವಿಸಿತ್ತು ನೋಡಾ”
  11. ಆತ್ಮ ನಿರೀಕ್ಷಣೆ ಪ್ರತಿಯೊಬ್ಬನು ತನ್ನನ್ನು ತಾನು ಪ್ರಶ್ನಸಿಕೊಳ್ಳುವುದು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸುವುದು.
  12. ಅಪರಿಗ್ರಹ “ಬಯಸಿ ಬಂದುದು ಲಿಂಗಭೋಗ, ಬಯಸದೇ ಬಂದುದು ಅಂಗ ಭೋಗ” ಆಸೆ ಅಮಿಷಗಳನ್ನು ತೊರೆದು ಸಹಜವಾಗಿ ಬದುಕುವುದು.
  13. ಸ್ವಾಭಿಮಾನದಿಂದ ಬದುಕುವುದು, ಅರಸೊತ್ತಿಗೆಯ ಪರಿಸರದಲ್ಲಿದ್ದರೂ “ಆಸು ಓಲಿದಂತೆ ಹಾಡುವೆ ಎನ್ನುವಂತೆ’ “ಶರಣರಿಗೂ ಅಂಜುವವನಲ್ಲ” ಎಂಬ ಸ್ವಾಭಿಮಾನಿಯಾಗುವುದು.
  14. ಮಾನವೀಯತೆಯನ್ನು ಬೆಳೆಸಿಕೊಳ್ಳುವುದು, ಇಂತಹ ಅನೇಕ ಸಂಗತಿಗಳನ್ನು ಶರಣರು ತಮ್ಮ ವಚನಗಳಲ್ಲಿ ಹೇಳಿದ್ದಾರೆ. ಅದರಂತೆ ಅನುಸರಿಸಿದರೆ ಮಾನವನ ಬಾಳು ಬಂಗಾರವಾಗದಿರದು.
    ಇಂತಹ ವಿಷಯಗಳನ್ನು ಅನೇಕ ವಚನಗಳಲ್ಲಿ ಹೇಳಿರುವ ಸಂಗತಿಗಳು ಇಂದಿನ ಸಾಮಾಜಿಕ ಸಂದರ್ಭಕ್ಕೆ ತೀರಾ ಅಗತ್ಯವಗಿದೆ. ಬದುಕಿನ ಅದಮ್ಯತೆಯನ್ನು ಹೇಳಿದ ಬಸವಾದಿ ಪ್ರಮಾಥರು ಜೀವನೋತ್ಸವದ ಜತೆಗೆ ಜೀವದ ಪ್ರೀತಿಯನ್ನು ಕಲಿಸಿದವರು ಮಾನವೀಯ ಮೌಲ್ಯಗಳು ಬೆಳೆದಾಗ ಮನುಷ್ಯ ಬೆಳೆಯಬಲ್ಲನು. ಕೇವಲ ಆರ್ಥಿಕ , ಸಾಮಾಜಿಕ, ಸಮಾನತೆ ಬಂದಾಕ್ಷಣ ಮನುಷ್ಯ ಎತ್ತರಕ್ಕೆ ಹೇರಲಾರ ಮಾನವೀಯತೆ ಬೆಳೆದಾಗ ಮಾತ್ರ ಇದು ಸಾಧ್ಯ. ಇಂತಹ ಮಾನವೀಯ ಮೌಲ್ಯಗಳನ್ನು ಕೊಟ್ಟ ಬಸವಾದಿ ಪ್ರಮಥರ ವಿಚಾರಗಳು ಇಂದಿಗೂ ಸ್ವಾಗತಾರ್ಹವಾಗಿವೆ. ಎಂಟುನೂರು ವರ್ಷಗಳ ಹಿಂದೆ ಆಲೋಚಿಸಿದ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ.
    ಕೆ.ಎಂ ರೇವಣ್ಣ
    ನಿವೃತ್ತ ತಹಸೀಲ್ದಾರರು
    ಬೆಂಗಳೂರು

Share

ಅಕ್ಷಯ ತೃತೀಯಾ

Share

ವೈಶಾಖ ಮಾಸದಲ್ಲಿ ಬರುವ ಅತಿ ಮುಖ್ಯವಾದ ವ್ರತ, ಪರ್ವಗಳಲ್ಲಿ ಅಕ್ಷಯ ತೃತೀಯಾ ಮುಖ್ಯವಾದದ್ದು. ಗಂಗಾಸ್ನಾನಕ್ಕೆ ಮತ್ತು ಶ್ರೀ ಕೃಷ್ಣನನ್ನು ಧೂಪ, ದೀಪ ಹೂವು ಮತ್ತು ವಿಶೇಷವಾಗಿ ಚಂದನ ಲೇಪದಿಂದ ಅರ್ಚನೆ ಮಾಡುವುದಕ್ಕೆ ಈ ದಿವನ್ನು ಅತಿ ಪ್ರಶಸ್ತವನ್ನಾಗಿ ಹೇಳಿದೆ.
‘ಬೆನ್ನು ಗೂನಾಗಿ ಕೋಲೂರಿ ನಡೆಯುತ್ತಾ ಕೆಮ್ಮುತ್ತಿರುವ ಸ್ಥಿತಿಯು ಬರುವುದಕ್ಕೆ ಮೊದಲೇ ಬದರೀ ತೀರ್ಥಯಾತ್ರೆ ಮಾಡು, ಅದು ಮುಕ್ತಿದ್ವಾರ’ ಎಂದು ಭಕ್ತ ಶ್ರೇಷ್ಠರಾದ ತಿರುಮಂಗೈ ಆಳ್ವಾರ್ ಅವರು ಘೋಷಿಸುತ್ತಾರೆ. ಇಂತಹ ಪವಿತ್ರವಾದ ಬದರೀ ನಾರಾಯಣ ಮಂದಿರದ ದ್ವಾರವನ್ನು ತೆರೆಯುವುದು ಅಕ್ಷಯ ತೃತೀಯೆಯಂದು. ಅದು ಮುಕ್ತಿ ದ್ವಾರವನ್ನು ತೆರೆಯುವ ತಿಥಿ ಎಂದು ಪರ್ಯಾಯವಾಗಿ ಹೇಳಬಹುದು.
ಭಗವಂತನ ದಶಾವತಾರಗಳಲ್ಲಿ ಆರನೇಯದಾಗಿ ‘ಬ್ರಹ್ಮ-ಕ್ಷತ್ರ ಅವತಾರ’ ಎನಿಸಿರುವ ಪರಶುರಾಮದೇವರ ಶ್ರೀ ಜಯಂತಿಯೂ ಈ ದಿನದಲ್ಲಿ ಕೂಡಿಬರುತ್ತದೆ.
ದೇವತೆಗಳ ಪೂಜೆಗೆ ಮಾತ್ರವಲ್ಲದೇ ಪಿತ್ರಗಳ ಪೂಜೆಗೂ ಪ್ರಶಸ್ತವೆನಿಸಿರುವ ತಿಥಿ ಅಕ್ಷಯ ತೃತೀಯಾ ಪರ್ವ.
ಎಲ್ಲಾ ಯುಗಗಳಿಗೂ ಆಧ್ಯವಾಗಿರುವ ಸತ್ಯಯುಗಕ್ಕೆ ಆದಿ ದಿನವಾದ ‘ಕೃತಯುಗಾದಿ’ ಎಂದೂ ಇದು ಪರಿಗಣಿತವಾಗಿದೆ. ಕ್ಷೇತ್ರಗಳಲ್ಲಿ ಬೀಜವನ್ನು ಬಿತ್ತುವುದಕ್ಕೂ, ಇದನ್ನು ಪ್ರಶಸ್ತ ದಿನವನ್ನಾಗಿ ಲೆಕ್ಕಿಸುತ್ತಾರೆ. ಈ ಹಬ್ಬದಲ್ಲಿ ಆಚರಿಸುವ ಸ್ನಾನ, ಜಪ, ತಪಸ್ಸು, ಅಧ್ಯಯನ, ತರ್ಪಣ, ದಾನಾದಿಗಳೆರಲ್ಲವೂ ಅಕ್ಷಯವಾದ ಫಲವನ್ನು ನೀಡುವ ಉದರಿಂದ ಇದನ್ನು ಅಕ್ಷಯ ತೃತೀಯಾ ( ಅಕ್ಷಯ ಫಲ ತೃತೀಯಾ) ಎಂದು ಕರೆಯಲಾಗಿದೆ. ಅಕ್ಷಯವಾದ ಮೋಕ್ಷಕ್ಕೆ ಕಾರಣವಾಗಿರುವುದರಿಂದಲೂ ಇದಕ್ಕೆ ಆ ಹೆಸರು ಹೊಂದಿಕೆಯಾಗುತ್ತದೆ. ಕನ್ನಡ ಭಾಷೆಯಲ್ಲಿರುವ ‘ಅಕ್ಷಯ ತದಿಗೆ’ ಎಂಬುದು ಈ ಅಕ್ಷಯ ತೃತೀಯೆಯ ದೇಶೀಯರೂಪ. ಈ ದಿವಸದಲ್ಲಿಸೋಮವಾರ ಅಥವಾ ಬುಧವಾರ ಮತ್ತು ರೋಹಿಣಿ ನಕ್ಷತ್ರಗಳು ಕೂಡಿ ಬಂದರೆ ಅದು ಅಕ್ಷಯವಾದ ಸುಕೃತದ ಫಲವಾದ ಯೋಗವೆಂದು ಯೊಗಿಗಳು ಹೇಳುತ್ತಾರೆ. ಏಕೆಂದರೆ ಆ ವಾರ ಮತ್ತು ನಕ್ಷತ್ರಗಳು ಶ್ರೀ ಕೃಷ್ಣನ ಪೂಜೆಗೆ ಅತ್ಯಂತ ಪ್ರಶಸ್ತವಾದವು. ಈ ದಿನ ಬೆಳಗ್ಗೆ ಸಂಕಲ್ಪ ಸಹಿತ ಗಂಗಾನದಿಯಲ್ಲಿ ಸ್ನಾನ ಮಾಡಬೇಕು. ಸಾಕ್ಷಾತ್ ಗಂಗಾನದಿಯಲ್ಲಿ ಸ್ನಾನ ಮಾಡುವ ಅವಕಾಶವಿಲ್ಲದವರು ತಾವು ಸ್ನಾನ ಮಾಡುವ ನೀರಿನಲ್ಲಿಯೇ ಗಂಗೆಯನ್ನು ಆವಾಹನೆ ಮಾಡಿ, ಆರಾಧಿಸಿ, ಅದರಲ್ಲಿ ಅವಗಾಹನೆ ಮಾಡಬೇಕು. ಗಂಗಾ ಶಬ್ದಕ್ಕೆ ಸದ್ಗತಿಯನ್ನು ಹೊಂದಿಸುವುದು. (‘ಸದ್ಗತಿಂ ಗಮಯತೀತಿ ಗಂಗಾ’) ಎಂದು ಅರ್ಥ. ಈ ಶಬ್ದವು ಒಂದು ದೇವತೆಗೂ ಮತ್ತು ಅದರಿಂದ ಅಧಿಷ್ಠಿತವಾಗಿರುವ ಒಂದು ನದಿಗೂ ಅನ್ವಯಿಸುತ್ತದೆ. ಗಂಗೆಯೂ ಭಗವಂತನ ಜಲರೂಪವಾದ ‘ಮೂರ್ತಿ’ಯೇ ಆಗಿದೆ. ಆಕೆಯನ್ನು ಪೂಜಿಸಿದರೆ ಎಲ್ಲಾ ದೇವತೆಗಳನ್ನೂ ಪೂಜಿಸಿದಂತೆ. ಪರಮಾತ್ಮ ದರ್ಶನದಿಂದ ಯಾವ ಫಲವೋ ಅದೇ ಫಲವು ಅದರ ದರ್ಶನದಿಂದ ಉಂಟಾಗುತ್ತದೆ. ಗಂಗಾನದಿಯ ಆರೋಗ್ಯಕರ ಗುಣಗಳಿಗೆ ಸನಾತನ ಧರ್ಮಿಯರು ಮಾತ್ರವಲ್ಲ, ಇತರ ಮತದವರೂ ಕುಡ ಆಕರ್ಷಿತರಾದರು. ಉದಾಹರಣೆಗೆ ಸುಲ್ತಾನ್ ತುಘಲಕ್‍ನು ದೌಲತಾಬಾದನಿಂದ ನಿರಂತರವಾಗಿ ಗಂಗಾ ಜಲವನ್ನು ತರಿಸಿಕೊಳ್ಳುತ್ತಿದ್ದನು. ಇದು ಅವನ ಬಳೀಗೆ ತಲುಪಲು ನಲವತ್ತು ದಿನಗಳು ಹಿಡಿಸುತ್ತಿದ್ದವೆಂದು ಇಬ್ನಾ ಬೂತಾತ್ ಎಂಬ ಆ ಕಾಲದ ಯಾತ್ರಿಕ ಲೇಖಕ ಹೇಳುತ್ತಾನೆ. ಅಡುಗೆ ಮಾಡಲು ಮಳೆಯನೀರನ್ನು ಅಥವಾ ಯಮುನಾಜಲವನ್ನು ಉಪಯೋಗಿಸಿದರೂ ಅದಕ್ಕೆ ಸ್ವಲ್ಪ ಗಂಗಾಜಲವನ್ನೂ ಸೇರಿಸಲಾಗುತ್ತದೆ.’ ಇದು ಅಕ್ಬರನ ವಿಷಯದಲ್ಲಿ ‘ಆಯಿನೇ ಅಕ್ಬರಿ’ ಎಂಬ ಗ್ರಂಥವಿ ತಿಳಿಸುತ್ತದೆ. ಇಂತಹ ಇನ್ನೂ ಅನೇಕ ಉದಾಹರಣೆಗಳ ದಾಖಲೆಗಳು ಇವೆ. ‘ತೃತೀಯೆಯಂದು ಶ್ರೀ ಕ್ರಷ್ಣನನ್ನು ಗಂಧದಿಂದ ಅಲಂಕರಿಸಿ ಅವನಿಗೆ ಧಾನ್ಯರಾಜನಾದ ಯವೆ(ಜವೆಗೋಧಿ)ಯನ್ನು ಸಮರ್ಪಿಸುವವನು ವೈಕುಂಠವನ್ನು ಹೊದುತ್ತಾನೆ’, ಎಂಬುದು ಈ ಹಬ್ಬದ ಮಹತ್ವ.
ಜೈನಧರ್ಮೀಯರೂ ಈ ಹಬ್ಬವನ್ನು ಆಚರಿಸುತ್ತಾರೆ. ಇದು ಆದಿ ತೀರ್ಥಕರನಾದ ವೃಷಭನಾಥ ತಪಸ್ವಿಯಾಗಿದ್ದ ಸಮಯದಲ್ಲಿ ಮೊದಲನೆಯ ಆಹಾರದಾನ ಪಡೆದ ನಿಮಿತ್ತದ ಪರ್ವದಿನ. ಮಹಾರಾಜ ಶ್ರೇಯಾಂಸ ತನ್ನ ಅಣ್ಣನೊಡನೆ ಬಂದು ವೃಷಭನಿಗೆ ಕಬ್ಬಿನ ಹಾಲಿ ರೂಪದಲ್ಲಿ ಆಹಾರವನ್ನು ಕೊಟ್ಟನೆಂದು ಅದರಿಂದ ಅವನ ದೇಶದಲ್ಲಿ ಆಹಾರ ಅಕ್ಷಯವಾಯಿತೆಂದೂ ಪ್ರತೀತಿ. ವೃಷಭ ತೀರ್ಥಂಕರನಿಗೆ ಅಂದು ನಡೆದ ಅಭಿಷೇಕದಲ್ಲಿ ಕಬ್ಬಿನ ಹಾಲು ವಿಶೇಷ ವಸ್ತು. ಮಿಕ್ಕಂತೆ ಗೃಹಸ್ಥರ ಮನೆಗಳಲ್ಲಿ ದಾನ ಧರ್ಮ ವೃಷಭ ಚರಿತ್ರೆಯ ಪಠಣ , ಉತ್ಸವ ನಡೆಯುತ್ತವೆ. ವೈಶಾಖ ಶುಕ್ಲ ತೃತೀಯಾ ಕೃತಯುಗದ ಪ್ರಾರಂಭದ ದಿನ. ಈ ದಿನದಿಂದ ಜಗತ್ತಿನಲ್ಲಿ ಸೃಷ್ಟಿ ಆರಂಭವಾಯಿತು ಎಂಬುದು ನಂಬಿಕೆ. ವರ್ಷದ ಅತ್ಯಂತ ಪವಿತ್ರವಾದ ಮೂರುವರೆ ದಿಗಳಲ್ಲಿ ಇದನ್ನು ಅರ್ಧದಿನ ಎಂದು ಕರೆಯುತ್ತಾರೆ.


Share

ಸಿದ್ದಗಂಗೆಯ ಸಿದ್ಧಿಪುರುಷ

Share

ಉದ್ದಾನ ಶ್ರೀಗಳ ಅನುಗ್ರಹ ಪಡೆದು
ಉದ್ದರಿಸಿ ಸಲಹಿದೆ ಹಗಲಿರುಳು ದುಡಿದು
ಸಿದ್ದಗಂಗೆಯ ಕ್ಷೇತ್ರ ಪಾವನ ತೀರ್ಥ
ಮಾಡಿದ ಗುರುವೆ ನಿಮಗೆ ನನ್ನ ನಮನ||

ಹಸಿದವರಿಗೆ ಅನ್ನ, ನೊಂದವರಿಗೆ ಅಭಯ
ಬಡಮಕ್ಕಳಿಗೆ ವಿದ್ಯೆ ಇದು ನಿಮ್ಮ ಶ್ರದ್ಧೆ
ತ್ರಿವಿಧ ದಾಸೋಹ ನಿಮ್ಮಯ ಉಸಿರು
ಅಳಿಯದೇ ಉಳಿಸಿದೆ ನಿಮ್ಮ ಹೆಸರು||

ಬಂಜರು ನೆಲದಲ್ಲಿ ಹೊನ್ನಬೆಳೆಗೆ ಟೊಂಕಕಟ್ಟಿ
ಭಕ್ತರಿಗೆ ಸಮತೆಯ ಸಾರುವ ಮಠಕಟ್ಟಿ
ಪಾಠಶಾಲೆಯಲ್ಲಿ ಬೆಳಗಿದ ಜ್ಯೋತಿ ನಂದಲೇ ಇಲ್ಲ
ಪಾಕಶಾಲೆಯಲ್ಲಿ ಹಚ್ಚಿದ ಒಲೆ ಆರಲೇ ಇಲ್ಲ
ಇದು ನಿಮ್ಮ ಶ್ರಮದ ಕುರುಹಲ್ಲವೇ ?

ಒಂದೆರಡು ಮಕ್ಕಳಿಂದು ಸಾಕುವುದೇ ಕಷ್ಟ
ಸಾವಿರಾರು ಮಕ್ಕಳ ಸಾಕುವುದೇ ನಿಮಗಿಷ್ಟ
ಹಡೆದ ತಾಯಂದಿರು ಹಾಕಿದರು ನಿಮ್ಮ ಉಡಿಗೆ
ಪಡೆದ ತಾಯಾಗಿ ಸಾಕಿದ ನೀ ಮಾತೃ ಹೃದಯಿ||

ಬಂಧುಗಳಿಗೆ ಮಠಕಟ್ಟಿ, ಬಲಿತವರ ಬೆನ್ನುತಟ್ಟಿ
ಬದುಕುವ ಕಾವಿಗಳೇ ಇಂದು ಹೆಚ್ಚು
ಆದರೆ . . . ನಿಮಗೆ
ಬಡವರಿಗೆ ಮಠಕಟ್ಟಿ, ಬಂದವರ ಬೆನ್ನುಟ್ಟಿ
ನೊಂದವರ ಮೊಗದಲ್ಲಿ ನಗುವ ನೋಡುವ ಹುಚ್ಚು ||

ಸ್ಥಾವರಕೆ ಅಳಿವುಂಟು, ಜಂಗಮಕೆ ಅಳಿವಿಲ್ಲ
ಎಂದು ಸಾರಿದರು ಕಲ್ಯಾಣದಲಿ ಬಸವ
ಅನ್ನದಾಸೋಹಕೆ ಜೋಳಿಗೆ ಹಿಡಿದು
ದಣಿವರಿಯದೇ ನೀವು ನಾಡಲ್ಲಿ ನಡೆದು
ಅಳಿಯದೇ ಜಂಗಮನಾಗಿ ಉಳಿದೆ||

ಸಿದ್ದಗಂಗೆಯ ಕ್ಷೇತ್ರ ಕಲ್ಯಾಣ ಮಾಡಿ,
ಜ್ಞಾನ ಮಂಟಪಕಟ್ಟಿ ಬಸವಣ್ಣನಾಗಿ
ಬಸವತತ್ವವ ಬರೀ ಬೋಧಿಸದೇ ನೀವು
ಸಾಧಿಸಿ ತೋರಿದಿರಿ ಬರುವವರೆಗೆ ಸಾವು||

ಸನ್ಮಾನಗಳ ಹುಡುಕಿ ಹೋಗಲಿಲ್ಲ
ಕಾಯಕವ ಮಾಡುವುದ ಮರೆಯಲಿಲ್ಲ
ಆದರೂ ನಿಮಗೆ ಬರಲಿಲ್ಲ “ಭಾರತ ರತ್ನ”
ಅದೇಕೆ? ನೀವೆ ಇರುವಾಗ “ಅನಘ್ರ್ಯರತ್ನ” ||

ಕ್ರಮಿಸಿದಿರಿ ಬಾಳ ಪಯಣದಿ 111 ವರುಷ
ಶ್ರಮಿಸಿದ ನಿಮ್ಮ ನಿಲುವು ಇನ್ನೊಂದು ಹರುಷ
ಬಾರದ ಲೋಕಕ್ಕೆ ನಿಮ್ಮ ಕರೆದೊಯ್ದಿದೆ ಸಾವು
ಮಾಡಿದ ನಿಮ್ಮ ಸೇವೆಯ ಮರೆವೆವೇ ನಾವು||

ಆಧುನಿಕ ಬಸವಣ್ಣನಾಗಿ ಜನಿಸಿ ಬಂದೆ
ಸಮತೆಯ ಸಂದೇಶ ಹೊತ್ತು ತಂದೆ
ಉಳಿದಿರುವುದೀಗ ನಿಮ್ಮ ನೆನವೊಂದೆ
ಮತ್ತೊಮ್ಮೆ ಹುಟ್ಟಿಬಾ ಬೆಳಕಾಗಿ ತಂದೆ.

-ಸಿ.ಮ.ಗುರುಬಸವರಾಜ
ಹವ್ಯಾಸಿ ಬರಹಗಾರರು


Share

ಸ್ವಾಮಿ ವಿವೇಕಾನಂದ

Share

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ 12, 1863 – ಜುಲೈ 4, 1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ.
ಜನನ
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863, ಜನವರಿ 12ರಂದು ಕೊಲ್ಕತ್ತದಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿμï ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ರಾಮಕೃಷ್ಣರ ಒಡನಾಟ :
ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವಡ್ಸ್ರ್ವವರ್ತ್ ಅವರ “ದ ಎಕ್ಸ್ಸಕರ್ಶನ್” ಎಂಬ ಕವಿತೆಯಲ್ಲಿನ “ಸಮಾಧಿ” ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.
1881ನೇ ಇಸವಿ ನವೆಂಬರದಲ್ಲಿ ಎಫ್.ಎ (ಲಲಿತಕಲೆ) ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.
1882 ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.
ಮೊದಮೊದಲಿಗೆ ರಾಮಕೃಷ್ಣರ ಭಾವಪರವಶತೆಯ ಮತ್ತು ದೂರದೃಷ್ಟಿಯನ್ನು ಕೇವಲ ಕಾಲ್ಪನಿಕ ಬರಿ ಭ್ರಮೆ ಎಂದು ಭಾವಿಸಿದ್ದರು. 1884 ಇಸವಿಯಲ್ಲಿ ಅನಿರೀಕ್ಷಿತವಾಗಿ ನರೇಂದ್ರರ ತಂದೆಯವರು ಇಹಲೋಕ ತ್ಯಜಿಸಿದರು. ಅವರ ಮರಣಾ ನಂತರ ಕುಟುಂಬ ದಿವಾಳಿಯಾಯಿತು, ಸಾಲಗಾರರ ಬಾಧೆ ಶುರುವಾಯಿತು.ಅವರ ಕುಟುಂಬದವರು ಪೂರ್ವಜರ ಮನೆಯಿಂದ ಹೊರಗೆ ಹಾಕಿದರು.
ಅವರು ಕೆಲಸ ಹುಡುಕುವುದರಲ್ಲಿ ವಿಫಲರಾದಾಗ, ದೇವರ ಅಸ್ತಿತ್ವದ ಬಗ್ಗೆಯೇ ಸಂದೇಹಪಟ್ಟರು. ಆದರೆ ರಾಮಕೃಷ್ಣರ ಸಾನಿಧ್ಯ ಅವರಿಗೆ ಸಾಂತ್ವನ ನೀಡುತಿತ್ತು. ಒಂದು ದಿನ ನರೇಂದ್ರರು ಅವರ ಕುಟುಂಬದ ಅಭ್ಯುದಯಕ್ಕೋಸ್ಕರ ಕಾಳಿ ದೇವಿಯನ್ನು ಪ್ರಾರ್ಥಿಸುವಂತೆ ರಾಮಕೃಷ್ಣರನ್ನು ಕೇಳಿಕೊಂಡರು. ಅದಕ್ಕೆ ಅವರು ನೀನೊಬ್ಬನೇ ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ಪ್ರಾರ್ಥಿಸು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಎರಡು, ಮೂರು ಸಲ ದೇವಸ್ಥಾನಕ್ಕೆ ಹೋದರು.
ಆದರೆ ಅವರು ಯಾವುದೇ ರೀತಿಯ ಲೌಕಿಕ ಅವಶ್ಯಕತೆಗಳನ್ನು ಪೂರೈಸಲು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುವುದರಲ್ಲಿ ವಿಫಲರಾದರು. ಆದರೆ ಪ್ರತಿ ಬಾರಿಯು ಮುಕ್ತಿಗಾಗಿ ಕೇಳಿಕೊಳ್ಳಲμÉ್ಟೀ ಶಕ್ತರಾದರು. ಕೊನೆಗೆ ಅವರು ಸರ್ವಸಂಗ ಪರಿತ್ಯಾಗ ಮಾಡಿ ರಾಮಕೃಷ್ಣರನ್ನು ಗುರುಗಳನ್ನಾಗಿ ಸ್ವೀಕಾರ ಮಾಡಿದರು. 1885 ರಲ್ಲಿ ರಾಮಕೃಷ್ಣರು ಕಲ್ಕತ್ತಾದ ಕೊಸ್ಸಿಪುರದಲ್ಲಿ ಇರುವ ಅವರ ತೋಟದ ಮನೆಯಲ್ಲಿ ಗಂಟಲಿನ ಹುಣ್ಣಿನಿಂದ ಬಳಲುತಿದ್ದರು.
ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು 1886, ಆಗಸ್ಟ 16 ರಂದು ನಿಧನ ಹೊಂದಿದರು.
ರಾಮಕೃಷ್ಣ ಮಠದ ಸ್ಥಾಪನೆ
ರಾಮಕೃಷ್ಣರ ಮರಣಾ ನಂತರ ಅವರ ಮಠಕ್ಕೆ ಬರುವ ಆದಾಯವು ಕಡಿಮೆಯಾಯಿತು. ಇದರಿಂದಾಗಿ ಅವರು ಬೇರೆ ಜಾಗವನ್ನು ಹುಡುಕಬೇಕಾಯಿತು. ಬಾರನಗರದಲ್ಲಿ ನರೇಂದ್ರರು ಶಿಥಿಲವಾದ ಮನೆಯನ್ನು ಖರೀದಿಸಿ, ಆ ಮನೆಯನ್ನು ಅವರು ಮಠವನ್ನಾಗಿ ಪರಿವರ್ತಿಸಲು ಆಲೋಚಿಸಿದರು. ಆ ಮನೆಯ ಬಾಡಿಗೆಯನ್ನು ಭಿಕ್ಷಾಟನೆ ಮೂಲಕ ತುಂಬುತಿದ್ದರು.
ಈ ಮನೆಯೆ ರಾಮಕೃಷ್ಣರ ಮಠದ ಮೊದಲ ಶಾಖೆಯಾಯಿತು. ಅಲ್ಲಿ ನರೇಂದ್ರ ಮತ್ತು ಅವರ ಶಿಷ್ಶರು ಹೆಚ್ಚಿನ ಸಮಯವನ್ನು ಧ್ಯಾನ ಮತ್ತು ಧಾರ್ಮಿಕ ವಿಷಯಗಳನ್ನು ಅಭ್ಯಾಸ ಮಾಡುವಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದರು. ಮುಂದಿನ ಆ ದಿನಗಳನ್ನು ನೆನೆಸುತ್ತಾ “ಪ್ರತಿದಿನ ಬೆಳಿಗ್ಗೆ 3 ರಿಂದ ರಾತ್ರಿಯವರೆಗು ನಾವು ಧ್ಯಾನದಲ್ಲೆ ಕಳೆಯುತ್ತಿದ್ದೆವು.
ಜಗತ್ತಿನ ಪರಿವೆಯೆ ಇಲ್ಲದೆ, ನಮ್ಮ ಸಾಧನಾ ಪ್ರಪಂಚದಲ್ಲಿ ಮುಳುಗಿದ್ದೆವು” 1881 ನೇ ಇಸವಿಯಲ್ಲಿ ನರೇಂದ್ರರು ವೈಷ್ಣವ ಚರಣ್ ಬಾಸ್ಕರವರ ಜೊತೆ ಬಂಗಾಳಿ ಭಾμÉಯ ಕವಿತೆಗಳನ್ನೊಳಗೊಂಡ “ಸಂಗೀತ ಕಲ್ಪತರು “ಎಂಬ ಪುಸ್ತಕವನ್ನು ಸಂಗ್ರಹಿಸಿದರು. ಆದರೆ ಹಲವು ಸಮಸ್ಯೆಗಳಿಂದ ಅದನ್ನು ಪ್ರಕಟಿಸಲಾಗಲಿಲ್ಲ..
ವಿವೇಕಾನಂದರ ಭಾರತ ಪರ್ಯಟನೆ
1888 ನರೇಂದ್ರರು ಭಾರತ ಪರ್ಯಟನೆಗೆ ಹೊರಟರು. ಅವರು ಪರ್ಯಟನೆಗೆ ಹೋಗುವಾಗ ಅವರ ಜೊತೆಗೆ ಕಮಂಡಲು ದಂಡ ಮತ್ತು ಅವರಿಗೆ ಪ್ರಿಯವಾದ ಭಗವದ್ಗೀತೆ ಹಾಗೂ “ದಿ ಇಮಿಟೆಶ್ನ್ ಆಫ್ ಕ್ರೈಸ್ತ್” ಎಂಬೆರಡು ಪುಸ್ತಕಗಳನ್ನು ತಮ್ಮ ಜೊತೆಗೆ ಒಯ್ಯುತ್ತಿದ್ದರು. ನರೇಂದ್ರರು ಸತತವಾಗಿ ಐದು ವರ್ಷಗಳ ಕಾಲ ಭಾರತವನ್ನು ಸಂಚರಿಸಿದರು.
ಉತ್ತರ ಭಾರತ
1888 ರಲ್ಲಿ ಗೌತಮ ಬುದ್ಧ ಮತ್ತು ಆದಿ ಶಂಕರಾಚಾರ್ಯರು ಧರ್ಮ ಪ್ರಚಾರ ಮಾಡಿದ ವಾರಣಾಸಿಗೆ ಭೇಟಿ ನೀಡಿದರು. ಅಲ್ಲಿ ಅವರು ಬಂಗಾಳಿ ಬರಹಗಾರ ಭೂದೇವ ಮುಖ್ಯೋಪಾಧ್ಯಾಯ ಮತ್ತು ಹಿಂದು ಸಂತ ತ್ರ್ಯೆಲಂಗರನ್ನು ಭೇಟಿ ಮಾಡಿದರು. ಭೂದೇವ ಮುಖ್ಯೋಪಾಧ್ಯಾಯರು “ಇಂತಹ ದೂರದೃಷ್ಟಿ ಮತ್ತು ವಿಚಾರವಾದವನ್ನು ಇಷ್ಟು ಕಿರಿಯ ಪ್ರಾಯದಲ್ಲಿ ಪಡೆದುಕೊಂಡ ನೀನು ಮುಂದೊಂದು ದಿನ ದೊಡ್ಡ ವ್ಯಕ್ತಿಯಾಗುವೆ” ಎಂದು ಪ್ರಶಂಸಿಸಿದರು. ನಂತರ ಸಂಸ್ಕ್ರತ ಮತ್ತು ವ್ಯೆದಿಕ ವಿದ್ವಾಂಸರಾದ ಬಾಬು ಪರಮದಾಸ್ ಮಿತ್ರ ಅವರನ್ನು ಭೇಟಿ ಮಾಡಿದರು. ನಂತರ ಅವರು ಅಯೋಧ್ಯಾ, ಲಕ್ನೋ ವೃಂದಾವನ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದರು.
ಅದ್ವೈತ ಸಿದ್ಧಾಂತದ ಉಪಯುಕ್ತತೆ
ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು.
ಇದೇ ಅವರ ಮಂತ್ರವಾಯಿತು ಮತ್ತು ಅವರ “ದರಿದ್ರ ನಾರಾಯಣ ಸೇವೆ’ ಎಂಬ ತತ್ತ್ವಕ್ಕೆ ದಾರಿ ಮಾಡಿ ಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು.
ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ.
ವಿವೇಕಾನಂದರ ವಿಶ್ವಪರ್ಯಟನೆ
ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. *ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕøತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸರ್ವಧರ್ಮಸಮ್ಮೇಳನದಲ್ಲಿ ಮಾಡಿದ ಭಾಷಣ
ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು1893 ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು. ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು. ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾಥರ್ಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39 ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.
ಸ್ವದೇಶ ಮಂತ್ರ
ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!
ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು. *ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‍ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.
ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು ತಮ್ಮಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.


Share

ಮಕರ ಸಂಕ್ರಾಂತಿ

Share

ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಸಂಕ್ರಾಂತಿಯನ್ನು ಧಾರ್ಮಿಕ ತತ್ವಗಳಿಂದ ಸ್ವತಂತ್ರವಾಗಿ ಆಚರಿಸಲಾಗುತ್ತದೆಯಾದರೂ ವೇದಾಂಗ ಜ್ಯೋತಿಷ್ಯ ಶಾಸ್ತ್ರದ ತಳಹದಿ ಹೊಂದಿರುವುದರಿಂದ ಮುಖ್ಯವಾಗಿ ಹಿಂದೂ ಧರ್ಮದವರಿಂದ ಆಚರಿಸಲ್ಪಡುತ್ತದೆ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು.
ಜ್ಯೋತಿಷ್ಯದ ತಳಹದಿ
ಸನಾತನ ಹಿಂದೂ ಧರ್ಮದ ಬುನಾದಿಯಾಗಿರುವ ವೇದಗಳ ಅಂಗಗಳೆಂದೇ ಪ್ರಸಿದ್ಧವಾಗಿರುವ ಆರು ವೇದಾಂಗಗಳಲ್ಲಿ ಒಂದಾದ ಜ್ಯೋತಿಷ್ಯವನ್ನು ವೇದಗಳ ಕಣ್ಣೆಂದು ಗುರುತಿಸುತ್ತಾರೆ. ವೇದದಳ ಕಾಲದಿಂದಲೂ ಶುಭಕಾರ್ಯಗಳಿಗೆ ಮುಹೂರ್ತಾದಿ ಕಾಲವನ್ನು ನಿರ್ಣಯಿಸಿ, ಗ್ರಹಗಳ ಸ್ಥಿತಿ-ಗತಿ, ರಾಶಿ-ನಕ್ಷತ್ರ, ಗ್ರಹಣ, ಅಸ್ತೋದಯಗಳನ್ನು ನಿರ್ಣಯಿಸಿ, ಶುಭಾಶುಭ ಫಲಗಳನ್ನು ತೋರುತ್ತಾ, ಹಬ್ಬ-ಹರಿದಿನಗಳನ್ನು ಋತುಗಳಿಗನುಸಾರವಾಗಿ ಲೆಕ್ಕಾಚಾರ ಹಾಕಿ ಗುರುತಿಸುತ್ತಿದ್ದ ಶಾಸ್ತ್ರವೇ ಜ್ಯೋತಿಷ.
ಈ ಶಾಸ್ತ್ರದಂತೆ, ಸೂರ್ಯನು ನಿರ್ಯಾಣ ಮಕರರಾಶಿಯನ್ನು ಪ್ರವೇಶಿಸಿದಾಗ, “ಮಕರ ಸಂಕ್ರಾಂತಿ” ಯಾಗುತ್ತದೆ. ಈ ಕಾಲವು ಪ್ರತಿವರ್ಷ ಗ್ರೆಗೋರಿಯನ್ ಪಂಚಾಂಗದ ಜನವರಿ 14ರ ಸುಮಾರಿಗೆ ಬೀಳುತ್ತದೆ. ಹಿಂದೆ, ಈ ಕಾಲವೇ ಉತ್ತರಾಯಣ ಅಥವಾ ಸೂರ್ಯನ ಉತ್ತರದಿಕ್ಕಿನ ಪಯಣದ ಆರಂಭವನ್ನು ಸೂಚಿಸುವ ಕಾಲವೂ ಆಗಿತ್ತಾದ್ದರಿಂದ ಭೂಮಿಯ ಉತ್ತರಾರ್ಧಗೋಳದಲ್ಲಿ ಚಳಿ-ಬೆಚ್ಚನೆಯ ವಾತಾವರಣ ಆರಂಭವಾಗಿ, ಬೆಳೆ ಕಟಾವಿನ ಕಾಲವೂ ಆಗಿತ್ತು.
ಈಗ ಉತ್ತರಾಯಣ ಡಿಸೆಂಬರ್ 22ಕ್ಕೇ ಆದರೂ, ಹಿಂದಿನಂತೆಯೇ ಜನವರಿ 14 ರಂದು ನಡೆಯುವ ಮಕರಸಂಕ್ರಾಂತಿಯಂದೇ ಉತ್ತರಾಯಣದ ಆಚರಣೆಯೂ ನಡೆಯುತ್ತದೆ. ಮಹಾಭಾರತದ ಕತೆಯಲ್ಲಿ ಇಚ್ಚಾ ಮರಣಿಯಾದ. ಭೀಷ್ಮರು ಪ್ರಾಣ ಬಿಡಲು ಉತ್ತರಾಯಣ ಪರ್ವ ಕಾಲವನ್ನು ಕಾದಿದ್ದರು ಎಂಬ ಉಲ್ಲೆಖವಿದೆ. ಸಂಪರ್ಕದ ಹೆಸರು
ಖಗೋಳ ಶಾಸ್ತ್ರದ ಪ್ರಕಾರ
ಸೂರ್ಯೋದಯ ಪೂರ್ವದಲ್ಲಿ ಮತ್ತು ಸೂರ್ಯಾಸ್ತಮಾನ ಪಶ್ಚಿಮದಲ್ಲಿ ಎಂದು ಹೇಳುವುದಾದರೂ, ಯಾವುದೇ ಸ್ಥಳದಲ್ಲಿ ಕರಾರುವಾಕ್ಕಾಗಿ ಪೂರ್ವದಲ್ಲೇ ಸೂರ್ಯೋದಯವಾಗುವುದು ಮತ್ತು ಪಶ್ಚಿಮದಲ್ಲೇ ಸೂರ್ಯಾಸ್ತಮಾನವಾಗುವುದು ವರ್ಷದಲ್ಲಿ ಎರಡೇ ದಿನಗಳಂದು. ಆ ದಿನಗಳನ್ನು ಈಕ್ವಿನಾಕ್ಸ್ (equiಟಿox)ಎಂದು ಕರೆಯುತ್ತಾರೆ. ಅಂದು ಹಗಲಿರುಳುಗಳು ದಿನವನ್ನು ಸಮಪಾಲಾಗಿ, ಅಂದರೆ 12ಗಂಟೆಗಳಾಗಿ ಹಂಚಿಕೊಳ್ಳುತ್ತವೆ. ವರ್ಷದ ಉಳಿದ ದಿನಗಳಲ್ಲಿ ಹಗಲಿರುಳುಗಳ ಪಾಲು ಸಮವಾಗಿರುವುದಿಲ್ಲ.
ಬೇಸಗೆಯಲ್ಲಿ ಹಗಲು ಹೆಚ್ಚು, ಇರುಳು ಕಮ್ಮಿ. ಚಳಿಗಾಲದಲ್ಲಿ ಹಗಲು ಕಮ್ಮಿ, ಇರುಳು ಹೆಚ್ಚು. ಈಕ್ವಿನಾಕ್ಸ್ ದಿವಸಗಳ ಹೊರತಾಗಿ ಸೂರ್ಯನ ಉದಯ ಪೂರ್ವದ ಬಲಕ್ಕೆ (ಅಂದರೆ ಉತ್ತರಕ್ಕೆ) ಅಥವಾ ಎಡಕ್ಕೆ (ಅಂದರೆ ದಕ್ಷಿಣಕ್ಕೆ) ಆಗುತ್ತದೆ. ಚಳಿಗಾಲ (ಅಂದರೆ ಇರುಳಿನ ಪ್ರಮಾಣ) ಹೆಚ್ಚಾದಂತೆ ಸೂರ್ಯನ ಉದಯ ಹೆಚ್ಚು ದಕ್ಷಿಣ ದಿಕ್ಕಿಗೆ ಚಲಿಸುವುದು ಗೋಚರಿಸುತ್ತದೆ. ಕೊನೆಗೆ ಒಂದು ದಿನ ದಕ್ಷಿಣದ ತುತ್ತ ತುದಿಯ ಹಂತವನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುಧ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ. ಅಂದರೆ ಸೂರ್ಯ ಇನ್ನು ದಕ್ಷಿಣ ದಿಕ್ಕಿನತ್ತದ ತನ್ನ ಚಲನವನ್ನು ನಿಲ್ಲಿಸಿ ಉತ್ತರಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಈ ದಿನ ಉತ್ತರಾಯಣದ ದಿನ. ಇದು ಚಳಿಗಾಲ ಮುಗಿದು ಮುಂಬರುವ ಬೇಸಗೆಯ ಮುನ್ಸೂಚನೆ. ತಿiಟಿಣeಡಿ soಟsಣiಛಿe ಎಂದೂ ಕರೆಯಲ್ಪಡುತ್ತದೆ. ಸುಮಾರು ಡಿಸೆಂಬರ್ 22 ಈ ದಿನ. ಈ ದಿನವನ್ನು ಮಕರ ಸಂಕ್ರಾಂತಿಯೆಂದು ಗುರುತಿಸಬೇಕಾಗಿದ್ದರೂ ಸಾಂಪ್ರದಾಯಿಕವಾಗಿ ಜನವರಿ ತಿಂಗಳ ನಡುವಿನಲ್ಲಿ ಮಕರ ಸಂಕ್ರಾಂತಿಯನ್ನು ಆಚರಿಸುತ್ತೇವೆ.
ಇಲ್ಲಿಂದ ಸೂರ್ಯೋದಯ ಇನ್ನು ಆರು ತಿಂಗಳು ಉತ್ತರದ ದಿಕ್ಕಿನಲ್ಲಿ ಚಲಿಸುತ್ತಾ ನಡುವೆ ಮತ್ತೆ ಈಕ್ವಿನಾಕ್ಸ್ದಿ ನವನ್ನೂ ತಲುಪಿ, ಇನ್ನೂ ಅದೇ ದಿಕ್ಕಿನಲ್ಲಿ (ಉತ್ತರಕ್ಕೆ)ಚಲಿಸುತ್ತಾ ಹೋಗುತ್ತದೆ. ಉತ್ತರಕ್ಕೆ ಹೆಚ್ಚು ಹೋದಂತೆಲ್ಲಾ ಹಗಲಿನ ಪ್ರಮಾಣ ಹೆಚ್ಚಾಗಿ ಇರುಳು ಕಮ್ಮಿಯಾಗುತ್ತಾ ಹೋಗುತ್ತದೆ. ಸೂರ್ಯನ ತಾಪ ಹೆಚ್ಚಾಗುತ್ತಾ ಬೇಸಗೆಯನ್ನು ಅನುಭವಿಸುತ್ತೇವೆ. ಕೊನೆಗೆ ಒಂದು ದಿನ ಉತ್ತರದ ತುತ್ತ ತುದಿಯನ್ನು ತಲುಪಿ, ಅಚಲವೆಂಬಂತೆ ಕಂಡು, ಮರುದಿನದಿಂದ ಸೂರ್ಯನ ಉದಯ ಮರಳಿ ವಿರುದ್ಧ ದಿಕ್ಕಿನಲ್ಲಿ ಆಗುತ್ತಾ ಚಲಿಸುತ್ತದೆ.
ಅಂದರೆ ಸೂರ್ಯ ಇನ್ನು ಉತ್ತರ ದಿಕ್ಕಿನತ್ತದ ತನ್ನ ಚಲನೆಯನ್ನು ನಿಲ್ಲಿಸಿ ದಕ್ಷಿಣಕ್ಕೆ ಚಲಿಸಲು ಪ್ರಾರಂಭಿಸುತ್ತಾನೆ. ಇದು ದಕ್ಷಣಯಾನದ ದಿನ. ಬೇಸಗೆ ಮುಗಿದು ಮುಂಬರುವ ಚಳಿಗಾಲದ ಮುನ್ಸೂಚನೆ. ಈ ದಿನವನ್ನು ಕರ್ಕಾಟಕ ಸಂಕ್ರಾಂತಿ ಎಂದು ಗುರುತಿಸುತ್ತಾರೆ. summeಡಿ soಟsಣiಛಿe ಎಂದೂ ಕರೆಯಲ್ಪಡುತ್ತದೆ. ಸುಮಾರು ಜೂನ್ 21 ಈ ದಿನ. ಇμÉ್ಟಲ್ಲಾ ವಿವರಣೆ ಅನ್ವಯಿಸುವುದು ಭೂಮಂಡಲದ ಭೂಮಧ್ಯರೇಖೆಯ ಉತ್ತರಾರ್ತ. ಇದೇ ರೀತಿಯ ಆದರೆ ತದ್ವಿರುದ್ಧವಾದ ವಿವರಣೆ ದಕ್ಷಿಣಾರ್ಧಕ್ಕೆ ಅನ್ವಯಿಸುತ್ತದೆ.
ಹೀಗೆ ಕಾಣುವ ಸೂರ್ಯನ ಚಲನೆಗೆ ಭೂಮಿಯ ಅಕ್ಷರೇಖೆ (ಚಿxis) ಸುಮಾರು 22 1/2 ಜegಡಿee ವಾಲಿರುವುದು ಕಾರಣ. ಯಾವುದಾದರೂ ಒಂದು ನಿಗದಿತ ಜಾಗದಲ್ಲಿ ದಿನಾಲು ನಿಂತು, ದಿನದ ಒಂದೇ ನಿಗದಿತ ಸಮಯದಲ್ಲಿ, ಆಗಸದಲ್ಲಿ ಸೂರ್ಯನ ಸ್ಥಾನವನ್ನು ಗುರುತು ಹಾಕಿಕೊಂಡು, ಈ ರೀತಿ ವರ್ಷವಿಡೀ ಮಾಡಿದರೆ, ಗುರುತು ಹಾಕಿಕೊಂಡ ಆ ಬಿಂದುಗಳೆಲ್ಲಾ ಸುಮಾರು ‘8’ರ ಆಕೃತಿಯಲ್ಲಿ ಕಾಣುತ್ತವೆ.
ಈ ವಿನ್ಯಾಸವನ್ನು ಚಿಟಿಚಿಟemmಚಿ ಎನ್ನುತ್ತಾರೆ. ‘8’ರ ಆಕೃತಿಯ ನೆತ್ತಿಯ ಬಿಂದು summeಡಿ soಟsಣiಛಿe ದಿನದಂದು ಆಗುತ್ತದೆ. ಆ ಆಕೃತಿಯ ಅಡಿಯ ಬಿಂದು ತಿiಟಿಣeಡಿ soಟsಣiಛಿe, ಅಂದರೆ ಮಕರ ಸಂಕ್ರಾಂತಿಯ ದಿನದಂದು ಆಗುತ್ತದೆ. ನಡುವೆ ರೇಖೆಗಳು ಪರಸ್ಪರ ಹಾದು ಹೋಗುವ ಬಿಂದು equiಟಿox ದಿನಗಳು. 8 ರ ಆಕೃತಿಯ ನೆತ್ತಿಯಿಂದ ಅದರ ಅಡಿಯ ಬಿಂದುವಿನ ತನಕದ ದಿನಗಳು ವರ್ಷದ ದಕ್ಷಿಣಾಯನದ ದಿನಗಳು. ಆ ಆಕೃತಿಯ ಅಡಿಯಿಂದ ಅದರ ನೆತ್ತಿಯ ಬಿಂದುವಿನ ತನಕದ ದಿನಗಳು ಉತ್ತರಾಯಣದ ದಿನಗಳು.
ಇದೆ ಕಾಲಕ್ಕೆ ಚಳಿಗಾಲ ಮುಗಿದು ಹೋಗುತ್ತದೆ ಮನುಷ್ಯ ದೇಹದಲ್ಲಿ ಚಳಿಯಿಂದ ಚರ್ಮ ಎಣ್ಣೆ ಅಂಶ ಕಡಿಮೆಯಾಗುತ್ತದೆ ಅದಕ್ಕೆ ಏಣ್ಣಿನ ಅಂಶ ಇರುವ ಎಳ್ಳು ತಿನ್ನಿ ಅನ್ನೋವುದು ವಾಡಿಕೆ ಇರಬಹುದು ಆದರೆ ವೈಜ್ಞಾನಿಕವಾಗಿ ಅದು ಸಾಭೀತಾಗಿದೆ
ಆಚರಣೆ
ಕರ್ನಾಟಕ
ಕರ್ನಾಟಕದಲ್ಲಿ ಸಂಕ್ರಾಂತಿಗೆ ಸಂಬಂಧಪಟ್ಟ ಆಚರಣೆಗಳಲ್ಲಿ ಮುಖ್ಯವಾಗಿ ಕಂಡುಬರುವುದು “ಎಳ್ಳು ಬೆಲ್ಲ”. ಮನೆಯಲ್ಲಿ ಎಳ್ಳ್ಳು ಬೆಲ್ಲವನ್ನು ತಯಾರಿಸಿ ಸುತ್ತಲಿನ ಮನೆಗಳಿಗೆ “ಎಳ್ಳುಹಂಚುವುದು” ಸಂಕ್ರಾಂತಿಯ ಸಂಪ್ರದಾಯ. ಎಳ್ಳಿನ ಜೊತೆಗೆ ಸಕ್ಕರೆ ಅಚ್ಚುಗಳು, ಹಣ್ಣು ಮತ್ತು ಕಬ್ಬಿನ ತುಂಡುಗಳನ್ನು ಸಹ ಬೀರುವುದುಂಟು.ಸಣ್ಣ ಸಣ್ಣ ಚೂರುಗಳಾಗಿ ಕತ್ತರಿಸಿದ ಬೆಲ್ಲ, ಒಣ ಕೊಬ್ಬರಿ, ಹುರಿಗಡಲೆ, ಸಿಪ್ಪೆ ತೆಗೆದ ಕಡಲೇಕಾಯಿ ಬೀಜ ಹಾಗೂ ಹುರಿದ ಬಿಳಿ ಎಳ್ಳನ್ನು ಸೇರಿಸಿ “ಎಳ್ಳು ಬೆಲ್ಲ” ತಯಾರಿಸಲಾಗುತ್ತದೆ.
ಕರ್ನಾಟಕದ ರೈತರಿಗೆ ಸುಗ್ಗಿ ಅಥವಾ ಸುಗ್ಗಿಯ ಹಬ್ಬ. ಈ ಮಂಗಳಕರ ದಿನದಂದು, ಯುವ ಹೆಣ್ಣುಮಕ್ಕಳು ಮಕ್ಕಳು ಮತ್ತು ಹದಿಹರೆಯದವರು ಹೊಸ ಬಟ್ಟೆಗಳನ್ನು ಧರಿಸಿ ಒಂದು ತಟ್ಟೆಯಲ್ಲಿ ಎಳ್ಳುಬೆಲ್ಲದೊಂದಿಗೆ ಹತ್ತಿರದ ಜನರನ್ನು ಮತ್ತು ಸಂಬಂಧಿಗಳನ್ನು ಭೇಟಿಯಾಗಿ ಎಳ್ಳುಬೆಲ್ಲವನ್ನು ವಿನಿಮಯ ಮಾಡಿಕೊಳ್ಳುತ್ತಾರೆ. “ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತಾಡೋಣ” ಎಂದು ಹೇಳಿಕೊಳ್ಳುತ್ತಾರೆ. ಪ್ಲೇಟ್ ಸಹ ಕಬ್ಬಿನ ತುಂಡು ವಿವಿಧ ಆಕಾರಗಳನ್ನು ಸಕ್ಕರೆ ಅಚ್ಚುಗಳನ್ನು ಹೊಂದಿರುತ್ತದೆ.
ಕಬ್ಬು (ಈ ಭಾಗಗಳಲ್ಲಿ ಪ್ರಧಾನ ಏಕೆಂದರೆ ಹಬ್ಬದ ಋತುವಿನ ಸುಗ್ಗಿಯ ಸೂಚಿಸುತ್ತದೆ) ಕರ್ನಾಟಕದ ಕೆಲವು ಭಾಗಗಳಲ್ಲಿ, ಹೊಸದಾಗಿ ಮದುವೆಯಾದ ಮಹಿಳೆ ಯರು ತನ್ನ ಮದುವೆಯ ಮೊದಲ ವರ್ಷದಿಂದ ಐದು ವರ್ಷಗಳ ಕಾಲ ಬಾಳೆಹಣ್ಣುಗಳನ್ನು ಮುತ್ತೈದೆಯರಿಗೆ ಕೊಡುವ ಸಂಪ್ರದಾಯ ಇದೆ. ಬಾಳೆಹಣ್ಣುಗಳ ಸಂಖ್ಯೆಯನ್ನು ಪ್ರತಿವರ್ಷ ಐದರಿಂದ ಹೆಚ್ಚಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ, ಸಮುದಾಯದ ಸದಸ್ಯರೊಂದಿಗೆ ಗಾಳಿಪಟ ಹಾರಿಸುವ ಸಂಪ್ರದಾಯವಿದೆ.
ಮಹಿಳೆಯರು ಗುಂಪು ಗುಂಪಾಗಿ ರಂಗೋಲಿಯನ್ನು ಬಿಡಿಸುವುದು ಸಂಕ್ರಾಂತಿಯ ಸಮಯದ ಮತ್ತೊಂದು ಜನಪ್ರಿಯ ಘಟನೆಯಾಗಿದೆ. (ದನಕರುಗಳನ್ನು ಸಿಂಗರಿಸುವುದು ಮತ್ತು ಮೆರವಣಿಗೆ ಮಾಡುವುದು ಇನ್ನೊಂದು ಧಾರ್ಮಿಕ ಪದ್ಧತಿಯಾಗಿದೆ. ಅವುಗಳನ್ನು “ಕಿಚ್ಚು ಹಾಯಿಸುವುದು” ಹಳ್ಳಿಗಳಲ್ಲಿ ಸಾಮಾನ್ಯವಾಗಿದೆ.)
ತಮಿಳುನಾಡು
ತಮಿಳುನಾಡಿನಲ್ಲಿ ಈ ಹಬ್ಬವನ್ನು “ಪೆÇಂಗಲ್” ಎಂದು ಕರೆಯಲಾಗುತ್ತದೆ. ಇಲ್ಲಿ ಇದು ನಾಲ್ಕು ದಿನಗಳ ಹಬ್ಬ – ಈ ನಾಲ್ಕು ದಿನಗಳು ಮತ್ತು ಆ ದಿನಗಳಲ್ಲಿನ ಆಚರಣೆಗಳು ಹೀಗಿವೆ:
ಭೋಗಿ : ಹೊಸ ಬಟ್ಟೆಗಳು, ಪೆÇಂಗಲ್: ಸಮೃದ್ಧಿಯ ಸಂಕೇತವಾಗಿ ಹಾಲು-ಬೆಲ್ಲಗಳನ್ನು ಪಾತ್ರೆಯಲ್ಲಿ ಕುದಿಸಿ ಉಕ್ಕಿಸಲಾಗುತ್ತದೆ ಮಾಟ್ಟು ಪೆÇಂಗಲ್: ಗೋಪ್ರಜೆ, ಕೆಲವು ಕಡೆಗಳಲ್ಲಿ “ಜಲ್ಲಿಕಟ್ಟು” ಎಂಬ ಗೂಳಿಯನ್ನು ಪಳಗಿಸುವ ಆಟ ನಡೆಯುತ್ತದೆ

ಕೇರಳದ ಶಬರಿಮಲೆ
ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ ಕಾಣುವ ಮಕರಜ್ಯೋತಿಗೆ ಹೆಚ್ಚಿನ ಪ್ರಾಧಾನ್ಯತೆ ಇದೆ. ಅಯ್ಯಪ್ಪ ವೃತಾಧಾರಿಗಳಾದ ಜನರು ಶಬರಿಮಲೆಗೆ ತೆರಳಿ ತಮ್ಮ ಸ್ವಾಮಿಯ ಪಾದಕ್ಕೆರಗಿ ಮಕರ ಜ್ಯೋತಿಯ ದರ್ಶನವನ್ನು ಪಡೆದರೆ ಜನ್ಮ ಸಾರ್ಥಕವಾಗುವುದೆಂಬ ನಂಬಿಕೆ ಯಿಂದಾಗಿ ಲಕ್ಷೋಪಲಕ್ಷ ಜನರು ಈ ಜ್ಯೋತಿಯ ದರ್ಶನಕ್ಕಾಗಿ ವಷರ್ಂಪ್ರತಿ ಶಬರಿಮಲೆ ಸನ್ನಿಧಾನಕ್ಕಾಗಮಿಸುತ್ತಾರೆ. “ಮಕರ ವಿಳಕ್ಕು”ಎಂದು ಕರೆಯಲ್ಪಡುವ ಈ ಜ್ಯೋತಿಯು ಶಬರಿಮಲೆಯ ಬೆಟ್ಟದಿಂದ ಮೂರು ಬಾರಿ ಗೋಚರವಾಗುತ್ತದೆ.
ಅಂತೂ ಇದು ವೈಜ್ಞಾನಿಕವಾಗಿ ಸಾಬೀತಾಗಿ ಲ್ಲವಾದರೂ, ಪ್ರಸ್ತುತ ಕಾಲದಲ್ಲಿಯೂ ಆಧ್ಯಾತ್ಮಿಕತೆಯ ಕುರುಹನ್ನು ತೋರಿಸುತ್ತದೆ ಎನ್ನುತ್ತಾರೆ ಭಕ್ತರು. ಒಟ್ಟಿನಲ್ಲಿ ಸೂರ್ಯನು ಮಕರ ರಾಶಿಗೆ ಪ್ರವೇಶಿಸಿ ಲೋಕದ ಕಾರಿರುಳನ್ನು ಹೋಗಲಾಡಿಸುವಂತೆ ಜನರು ಈ ಕಾಲದಲ್ಲಿ ಪುಣ್ಯ ಕಾರ್ಯಗಳಲ್ಲಿಯೂ ಆಧ್ಯಾತ್ಮಿಕ ಚಿಂತೆಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡು ಮುಕ್ತಿ ಮಾರ್ಗದಲ್ಲಿ ಸಾಗುವಂತೆ ಈ ಆಚರಣೆಯು ಪ್ರೇರಣೆಯನ್ನು ನೀಡುತ್ತದೆ.
ಇತರ ಸ್ಥಳಗಳು
ಮುಖ್ಯವಾಗಿ ದಕ್ಷಿಣ ಭಾರತದ ಹಬ್ಬವಾದರೂ, ಇತರ ಸ್ಥಳಗಳಲ್ಲಿ ಸಹ ಬೇರೆ ಬೇರೆ ಹೆಸರುಗಳಲ್ಲಿ ಸಂಕ್ರಾಂತಿಯನ್ನು ಆಚರಿಸಲಾಗುತ್ತದೆ.
ಗುಜರಾತ್ ಮತ್ತು ಮಹಾರಾಷ್ಟ್ರಗಳಲ್ಲಿ ಸಂಕ್ರಾಂತಿಯ ದಿನದಂದು ಗಾಳಿಪಟಗಳನ್ನು ಹಾರಿಬಿಡುವ ಸಂಪ್ರದಾಯವುಂಟು. ಮಹಾರಾಷ್ಟ್ರದಲ್ಲಿಯೂ, ಎಳ್ಳು ಮತ್ತು ಸಕ್ಕರೆಯ ಕುಸುರಿಕಾಳನ್ನು ಬಂಧು ಮಿತ್ರರಿಗೆ ಹಂಚುವ ರೂಢಿ ಇದೆ. ಪ್ರಮುಖವಾಗಿ ಅವರು, ಎಳ್ಳಿನ ಉಂಡೆ ಗಳನ್ನು ಹಂಚುತ್ತಾರೆ. ಅದಕ್ಕೆ ಅವರು ಲಡ್ಡು ಎನ್ನುತ್ತಾರೆ. ಕರ್ನಾಟಕದ ಸಂಪ್ರದಾಯದ ತರಹ ಬಿಡಿ ಕಾಳುಗಳನ್ನು ಹಂಚುವ ಪದ್ಧತಿಯಿಲ್ಲ. ಎಳ್ಳುಂಡೆಕೊಡುವಾಗ ತಪ್ಪದೆ, ” ತಿಳ್ಗುಳ್ ಘ್ಯಾ, ಅಣಿ ಗೋಡ್ ಗೋಡ್ ಬೋಲ” (ಅಂದರೆ ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆಯ ಮಾತಾಡಿ) ಎನ್ನುವ ಮಾತು ಹೇಳುವುದನ್ನು ಮರೆಯುವುದಿಲ್ಲ !
ಪಂಜಾಬ್ ಮತ್ತು ಹರಿಯಾಣಗಳಲ್ಲಿ ಸಂಕ್ರಾಂತಿಗೆ “ಲೋಹರಿ,” ಎಂದು ಹೆಸರು.
ಉತ್ತರಾಯಣ ಆರಂಭದ ದಿನ
ಸಂಕ್ರಾಂತಿ ಸೂರ್ಯಾರಾಧನೆಯ ಹಬ್ಬವಾಗಿದೆ. ಮಕರ ಸಂಕ್ರಾಂತಿ ಪ್ರಸಿದ್ದವಾಗಿರುವ ಸುಗ್ಗಿಯ ಕಾಲದ ಹಬ್ಬ. ಇದನ್ನು ಪೆÇಂಗಲ್ ಎಂದು ಕರೆಯಲಾಗುತ್ತದೆ. ಪೆÇಂಗಲ್ ಎಂದರೆ ಅಕ್ಕಿ ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಖಾದ್ಯ. ಸುಗ್ಗಿಯ ಉತ್ಪನ್ನಗಳಿಂದ ಮಾಡಿದ ಇದನ್ನು ಸೂರ್ಯದೇವನಿಗೆ ನೈವೇದ್ಯಮಾಡಲಾಗುವುದು.
ಕರ್ನಾಟಕದಲ್ಲಿ ಎಳ್ಳು, ಸಕ್ಕರೆ – ಅಚ್ಚುಗಳನ್ನು ನೆರೆಯವರಿಗೆ ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ ಈ ಹಬ್ಬದ ಒಂದು ವಿಶೇಷ. ದನಕರುಗಳಿಗೆ ಮೈ ತೊಳೆದು – ಭೂತಪೀಡೆಗಳಿಂದ ಅವುಗಳನ್ನು ರಕ್ಷಿಸುವ ಸಲುವಾಗಿ – ಬೀದಿಗಳಲ್ಲಿ ಹೊತ್ತಿಸಿದ ಬೆಂಕಿಯನ್ನು ನೆಗೆದು ದಾಟಿಸುವುದು ಉಂಟು.
ಜಗಚ್ಚಕ್ಷುವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಯನ್ನು ಪ್ರವೇಶಿಸುವ ಸಂಧಿ ಕಾಲಕ್ಕೆ ಸಂಕ್ರಾಂತಿ ಅಥವಾ ಸಂಕ್ರಮಣ ಎಂದು ಹೆಸರು ಸೌರಮಾನದ ಪ್ರಕಾರ ಸೂರ್ಯನು ಮೇμÁದಿ ಹನ್ನೆರಡು ರಾಶಿಗಳನ್ನು ಪ್ರವೇಶಿಸುವಾಗಲೂ ಸಂಕ್ರಾಂತಿ ಬರುತ್ತದೆ. ಆದರೆ ಅವುಗಳಲ್ಲಿ ಕರ್ಕಾಟಕ ಸಂಕ್ರಾಂತಿ ಹಾಗೂ ಮಕರ ಸಂಕ್ರಾಂತಿಗಳು ದಕ್ಷಿಣಾಯನ, ಉತ್ತರಾಯಣಗಳ ಪ್ರಾರಂಭದ ದಿನಗಳಾದ್ದರಿಂದ ವಿಶೇಷ ಮಹತ್ವವುಳ್ಳವುಗಳಾಗಿವೆ. ಸಂಕ್ರಾಂತಿ ಒಂದು ವಿಧದಲ್ಲಿ ಸೂರ್ಯಾರಾಧನೆ. ಸೂರ್ಯ ಆತ್ಮಾ ಜಗತಃ ತಸ್ಥುಷಶ್ಚ ಸೂರ್ಯದೇವ ವಿಶ್ವದ ಆತ್ಮ; ಜಗತ್ತಿನ ಕಣ್ಣು; ಮಳೆ ಬೀಳಲು, ಬೆಳೆ-ಬೆಳೆಯಲು, ಇಳೆ ಬೆಳಗಲು ಸೂರ್ಯನೇ ಕಾರಣ ಆ ಸವಿತೃ ದೇವನ ದಿವ್ಯ ತೇಜಸ್ಸು ನಮಗೆ ಸಿದ್ದಿ ಬುದ್ದಿ ಸಮೃದ್ದಿಗಳನ್ನು ನೀಡಬಲ್ಲದು.
ಉತ್ತರಾಯಣ ಪುಣ್ಯ ಕಾಲ : ಸಾಮಾನ್ಯವಾಗಿ ಪುಷ್ಯ ಮಾಸದಲ್ಲಿ ಬರುವ (ಜನವರಿ 13 ಅಥವಾ 14 ರಂದು) ಮಕರ ಸಂಕ್ರಾಂತಿಯನ್ನು ಉತ್ತರಾಯಣ ಪುಣ್ಯಕಾಲವೆಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಉತ್ತರಾಯಣ ಪುಣ್ಯಕಾಲ ಶ್ರೇಷ್ಠವೆಂದು ಹೇಳಲಾಗಿದೆ. ಅದಕ್ಕಾಗಿಯೇ ಭೀಷ್ಮ ದೇಹ ತ್ಯಜಿಸಲು, ಉತ್ತರಾಯಣದ ಕಾಲದವರೆಗೂ, ಶರಶಯ್ಯೆಯಲ್ಲಿ ಹರಿಸ್ಮರಣೆ ಮಾಡುತ್ತಾ ಕಾದಿದ್ದರು. ಉತ್ತರಾಯಣ, ದೇವತೆಗಳ ಕಾಲ, ದಕ್ಷಿಣಾಯನ ಪಿತೃಗಳ ಕಾಲವಾಗಿರುತ್ತದೆ. ಆದ್ದರಿಂದ ಯಜ್ಞ ಯಾಗಾದಿಗಳಿಗೆ, ಸಮಸ್ತ ದೇವತಾ ಕಾರ್ಯ ಶುಭಕಾರ್ಯಗಳಿಗೆ ಉತ್ತರಾಯಣ ಕಾಲ ಶ್ರೇಷ್ಠವಾಗಿದೆ.
ಸೂರ್ಯನು ಇದೇ ಜನವರಿ 13 ರಂದು ರಾತ್ರಿ 12 ಗಂಟೆ 57 ನಿಮಿಷಕ್ಕೆ ನಿರಯಣ ಮಕರ ರಾಶಿಗೆ ಪ್ರವೇಶಿಸುತ್ತಾನೆ. ಈ ವೇಳೆಗೆ ರಾತ್ರಿಯಾಗಿದ್ದರಿಂದ ಜನವರಿ 14ರಂದು ಮಕರ ಸಂಕ್ರಾತಿಯನ್ನು ಆಚರಿಸಲಾಗುತ್ತದೆ. 14ರಂದು ಹಗಲು ಪೂರ್ತಿ ಅಂದರೆ ಸೂರ್ಯೋದಯದಿಂದ ಸೂರ್ಯಾಸ್ತದವರೆಗೆ ಪುಣ್ಯ ಕಾಲವಿರುತ್ತದೆ. ಈ ಪುಣ್ಯ ಕಾಲದಲ್ಲಿ ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ, ಎಳ್ಳು ದಾನ ಮಾಡಬೇಕು. ದೇವಸ್ಥಾನಗಳಲ್ಲಿ ಎಳ್ಳೆಣ್ಣೆ ದೀಪ ಹಚ್ಚಬೇಕು. ಮಾಡಿದ ದಾನ, ಜನ್ಮ ಜನ್ಮದಲೂ ಸದಾ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ. ಇದಕ್ಕಾಗಿಯೇ ಎಳ್ಳು – ಬೆಲ್ಲ ಹಂಚುವುದು.
ಜನವರಿ 14ರಂದು ಎಳ್ಳು – ಬೆಲ್ಲವನ್ನು ಬಂಧು ಮಿತ್ರರಿಗೆ ಹಂಚುವ ನಲ್ಮೆಯ ಸಾಮಾಜಿಕ ಸಂಪ್ರದಾಯ, ಮಕರ ಸಂಕ್ರಾಂತಿಯ ಒಂದು ವಿಶೇಷ. ಸೂರ್ಯನು ಒಂದು ರಾಶಿಯಿಂದ, ಮತ್ತೊಂದು ರಾಶಿಗೆ ಪ್ರವೇಶಿಸುವುದಕ್ಕೆ ಸಂಕ್ರಾಂತಿ ಎಂದು ಹೆಸರು. ಈ ಸಂಕ್ರಾಂತಿಯ ಕಾಲ, ಪುಣ್ಯ ಕಾಲವಾಗಿರುತ್ತದೆ. ಮೇಷ ಸಂಕ್ರಾಂತಿ – ವಿಷುವತ್ ಪುಣ್ಯಕಾಲ, ವೃಷಭ ಸಂಕ್ರಾಂತಿ – ವಿಷ್ಣುಪದ ಪುಣ್ಯಕಾಲ, ಮಿಥುನ ಸಂಕ್ರಾಂತಿ – ಷಡಶೀತಿ ಪುಣ್ಯಕಾಲ, ಕಟಕ ಸಂಕ್ರಾಂತಿ – ದಕ್ಷಿಣಾಯನ ಪುಣ್ಯಕಾಲ, ಸಿಂಹ ಸಂಕ್ರಾಂತಿ ವಿಷ್ಣುಪದ ಪುಣ್ಯಕಾಲ, ಕನ್ಯಾ ಸಂಕ್ರಾಂತಿ – ಷಡಶೀತಿ ಪುಣ್ಯಕಾಲ, ತುಲಾ ಸಂಕ್ರಾಂತಿ – ವಿಷುವತ್ ಪುಣ್ಯಕಾಲ, ವೃಶ್ಚಿಕ ಸಂಕ್ರಾಂತಿ – ವಿಷ್ಣುಪದ ಪುಣ್ಯಕಾಲ, ಧನಸ್ಸು ಸಂಕ್ರಾಂತಿ – ಷಡಶೀತಿ ಪುಣ್ಯಕಾಲ, ಮಕರ ಸಂಕ್ರಾಂತಿ – ಉತ್ತರಾಯಣ ಪುಣ್ಯಕಾಲ, ಕುಂಭ ಸಂಕ್ರಾಂತಿ – ವಿಷ್ಣುಪದ ಪುಣ್ಯಕಾಲ, ಮೀನ ಸಂಕ್ರಾಂತಿ – ಷಡಶೀತಿ ಪುಣ್ಯಕಾಲವೆಂದು ಪ್ರಸಿದ್ದಿಯಾಗಿದೆ.
ವಿಷ್ಣುಪದ ಪುಣ್ಯಕಾಲಕ್ಕಿಂತಲೂ, ಷಡಶೀತಿ ಪುಣ್ಯಕಾಲ ಶ್ರೇಷ್ಠವಾಗಿದೆ. ಷಡಶೀತಿ ಪುಣ್ಯ ಕಾಲಕ್ಕಿಂತಲೂ, ವಿಷ್ಣುವತ್ ಪುಣ್ಯಕಾಲ ಶ್ರೇಷ್ಠವಾಗಿದೆ. ವಿಷ್ಣುವತ್ ಪುಣ್ಯಕಾಲಕ್ಕಿಂತಲೂ ಆಯನ ಪುಣ್ಯ ಕಾಲ ಅತ್ಯಂತ ಶ್ರೇಷ್ಠವಾಗಿದೆ. ದಕ್ಷಿಣಾಯನ ಕಾಲಕ್ಕಿಂತಲೂ ಉತ್ತರಾಯಣ ಕಾಲ ಶ್ರೇಷ್ಠವಾಗಿದೆ.
ಸಂಕ್ರಾಂತಿ ಪುಣ್ಯ ಕಾಲದಲ್ಲಿ, ನದಿ ಸ್ನಾನ, ದೇವತೆಗಳಿಗೆ, ಪಿತೃಗಳಿಗೆ ತರ್ಪಣ, ಉಪವಾಸ, ಹೋಮ, ಜಪ, ದಾನಗಳಿಗೆ ಪ್ರಶಸ್ತವೆನಿಸಿದ್ದು, ವಿದ್ಯುಕ್ತವಾಗಿ ನಡೆಸಬೇಕಾದ ಕಾರ್ಯಗಳು.
ಆಯನವೆಂದರೆ ಸೂರ್ಯನು ಚಲಿಸುವಮಾರ್ಗ, ಸೂರ್ಯನು ಕಟಕ ಸಂಕ್ರಾಂತಿಯಿಂದ ದಕ್ಷಿಣದತ್ತ ವಾಲಿ ಚಲಿಸುತ್ತಿದ್ದು, ಮಕರ ಸಂಕ್ರಾಂತ್ರಿಯಿಂದ ತನ್ನ ಮಾರ್ಗವನ್ನು ಬದಲಾಯಿಸಿ, ಉತ್ತರದ ಕಡೆ ವಾಲಿ ಚಲಿಸುತ್ತಾನೆ. ಹಗಲು ಜಾಸ್ತಿಯಾಗಿ, ಕತ್ತಲು ಕಡಿಮೆಯಾಗುತ್ತದೆ. ದೇವತೆಗಳಿಗೆ ಹಗಲು, ರಾಕ್ಷಸರಿಗೆ ರಾತ್ರಿ ಪ್ರಾರಂಭವೆಂದು ಪುರಾಣದಲ್ಲಿದೆ. ದಕ್ಷಿಣಾಯನದಲ್ಲಿ ಮುಚ್ಚಿದ ಸ್ವರ್ಗದ ಬಾಗಿಲು, ಈ ಉತ್ತರಾಯಣದಲ್ಲಿ ತೆರೆಯುತ್ತದೆ.
ಈ ದಿನ ಶ್ರೀರಾಮ ರಾವಣನನ್ನು ಸಂಹರಿಸಿ ಸೀತೆಯನ್ನು ತಂದ ದಿನವೆಂದು ಹೇಳುತ್ತಾರೆ. ಅಲ್ಲದೆ ಸ್ವರ್ಗಸ್ಥರಾದ ಪಿತೃಗಳು ಅದೃಶ್ಯರಾಗಿ ಈ ದಿನ ತಮ್ಮ-ತಮ್ಮ ಮನೆಯಂಗಳಕ್ಕೆ ಬರುತ್ತಾರೆಂದು ಹೇಳಲಾಗುತ್ತದೆ.
ಶಾಸ್ತ್ತ್ರ ದೃಷ್ಟಿಯಲ್ಲಿ ಸಂಕ್ರಾಂತಿ ನಿರ್ಣಯಸಿಂಧುವಿನಲ್ಲಿ ಈ ಹಬ್ಬದ ವಿಚಾರವಾಗಿ ಹೀಗೆ ಹೇಳಿದೆ
ಶಿತಸ್ಯಾಂ ಕೃಷ್ಣತೈಲೈಃ ಸ್ನಾನ ಕಾಯರ್ಂ ಚೋದ್ವರ್ತನಂ ಶುಭೈಃ, ತಿಲಾ ದೇಯಾಶ್ಚ ವಿಪ್ರೇಭ್ಯೌ ಸರ್ವದೇವೋತ್ತರಾಯಣೇ, ತಿಲ ತೈಲೇನ ದೀಪಾಶ್ಚ ದೇಯಾಃ ದೇವಗೃಹೇ ಶುಭಾಃಷಿ, ಸಂಕ್ರಾಂತಿಯಂದು ಕಪ್ಪು ಎಳ್ಳಿನೊಂದಿಗೆ ಸ್ನಾನ ಮಾಡಿ, ಬ್ರಾಹ್ಮಣರಿಗೆ ಎಳ್ಳು ದಾನ ಕೊಡಬೇಕು. ದೇವಾಲಯಗಳಲ್ಲಿ ಎಳ್ಳೆಣ್ಣೆಯ ದೀಪ ಬೆಳಗಬೇಕು.
ಧರ್ಮ ಸಿಂಧುವಿನಲ್ಲಿ ಹೀಗೆ ಹೇಳಿದೆ
ಶಿಸಂಕ್ರಾಂತೌ ಯಾನಿ ದತ್ತಾನಿ ಹವ್ಯ – ಕವ್ಯಾನಿ ದಾತೃಭಿಃ, ತಾನಿ ನಿತ್ಯಂ ದದಾತ್ಯಕರ್ಃ ಪುನರ್ಜನ್ಮನಿ ಜನ್ಮನಿ|, ತಿಲಾ ದೇಯಾಶ್ಚ ಹೋತವ್ಯಾ ಭಕ್ಷಾಶ್ಚೈವೋತ್ತರಾಯಣೇಷಿ ಅಂದರೆ ಉತ್ತರಾಯಣದ ಪುಣ್ಯಕಾಲದಂದು ನಾವು ಮಾಡಿದ ದಾನ ಧರ್ಮಗಳು ಜನ್ಮ ಜನ್ಮದಲ್ಲೂ ಸದಾ ನಮಗೆ ಸಿಗುವಂತೆ ಸೂರ್ಯನು ಅನುಗ್ರಹಿಸುತ್ತಾನೆ. ಈ ಶುಭದಿನ ತಿಲದಾನ, ತಿಲಹೋಮ, ತಿಲಭಕ್ಷಣಗಳಿಗೆ ವಿಶೇಷ ಪ್ರಾಶಸ್ತ್ಯವಿದೆ.
ಈ ಹಬ್ಬಕ್ಕೂ ಎಳ್ಳಿಗೂ ನಿಕಟ ಸಂಬಂಧವಿದೆ. ಎಳ್ಳು-ಚಿಗಳಿ ಸಂಕ್ರಾಂತಿ ಎಳ್ಳು, ಎಳ್ಳು ಬೀಸಿ ಬೆಲ್ಲ ಹಾಕಿ ಮಾಡಿದ ಎಳ್ಳು ನೀರು ಅಪ್ಯಾಯಮಾನವಾಗಿರುತ್ತದೆ. ಶೀತ-ವಾತ ಜನ್ಯವಾದ ಜಡ್ಡು ಅಲಸ್ಯಗಳನ್ನು ದೂರ ಮಾಡುವ ಸ್ನೇಹ ದ್ರವ್ಯಗಳ ಹಂಚಿಕೆ, ಸೇವೆನೆ, ದಾನ-ಧರ್ಮ ಈ ಹಬ್ಬದ ವೈಶಿಷ್ಟ್ಯ. ಯುಗಾದಿಯಂದು ಬೇವು-ಬೆಲ್ಲ ಹಂಚುವಂತೆ, ಇಲ್ಲಿ ಎಳ್ಳು-ಬೆಲ್ಲ ಹಂಚುವುದು, ಮನಸ್ಸಿನ ಕಹಿ ಭಾವನೆ ಮರೆತು ಸಿಹಿ ಭಾವ ತುಂಬಿ ಅಮೃತ ಪುತ್ರರಾಗೋಣ ಎಂಬುದರ ದ್ಯೌತಕವಾಗಿದೆ. ಗಣೇಶಚತುರ್ಥಿ, ದೀಪಾವಳಿಗಳಂದು ಕಂಡುಬರುವ ಬಾಹ್ಯಾಡಂಬರ, ಬಾಣ ಬಿರುಸುಗಳೇ ಮುಂತಾದ ವ್ಯರ್ಥವಾದ ಖರ್ಚು-ವೆಚ್ಚಗಳು ಇಲ್ಲದಿರುವುದು ಈ ಹಬ್ಬದ ಅಗ್ಗಳಿಕೆಯೆನ್ನಬಹುದು.
ಎಳ್ಳು – ಬೆಲ್ಲ, ಶೀತ – ವಾತದಿಂದ ಉಂಟಾಗುವ ಜಡ್ಡು, ಆಲಸ್ಯಗಳನ್ನು ದೂರಮಾಡುವ ಸ್ನೇಹ ದ್ರವ್ಯಗಳ ಹಂಚಿಕೆ, ಸೇವನೆ, ದಾನ ಈ ಸಂಕ್ರಾಂತಿಯ ವೈಶಿಷ್ಟ. ಶಿಎಳ್ಳು – ಬೆಲ್ಲ ತಿಂದು ಒಳ್ಳೆ ಮಾತಾಡುಷಿ ಎನ್ನುವುದೇ ಮಕರ ಸಂಕ್ರಾಂತಿಯ ಸಂದೇಶವಾಗಿದೆ.


Share

ಹೋಳಿ ಪುರಾಣ ಕಾರಣ

Share

ಪುರಾಣದಲ್ಲಿ ಉಲ್ಲೇಖವಿರುವ ಕಾಮದಹನದಲ್ಲಿ- ತಾರಕಾಸುರನೆಂಬ ರಾಕ್ಷಸ ರಾಜ ಬ್ರಹ್ಮನ ವರಬಲದ ಸೊಕ್ಕಿನಿಂದ ಲೋಕದಲ್ಲಿ ಮೆರೆಯತೊಡಗಿದಾಗ, ಆತನ ಉಪಟಳ ತಾಳಲಾರದೆ, ಅವನ ಸಂಹಾರಕ್ಕೆ ದೇವತೆಗಳು ಉಪಾಯ ಹೂಡುತ್ತಾರೆ. ಶಿವನಿಗೆ ಜನಿಸಿದ ಏಳು ದಿನದ ಮಗುವಿನಿಂದ ಮಾತ್ರವೇ ತನಗೆ ಸಾವು ಎಂಬ ವರಬಲವೇ ಆತನ ಮದಕ್ಕೆ ಕಾರಣ. ಆದರೆ ಆ ಸಂದರ್ಭದಲ್ಲಿ ಶಿವನು ದಕ್ಷ ಯಜ್ಞದಲ್ಲಿ ದಾಕ್ಷಾಯಿಣಿಯನ್ನು ಕಳೆದುಕೊಂಡು ಭೋಗಸಮಾಧಿಯಲ್ಲಿದ್ದ ಕಾರಣ, ಮತ್ತೊಂದೆಡೆ ಶಿವೆಯೂ ಶಿವನಿಗಾಗಿ ತಪಸ್ಸು ಮಾಡುತ್ತಿದ್ದ ಕಾರಣ, ಅವರಿಬ್ಬರೂ ಒಂದುಗೂಡುವಂತಿರಲಿಲ್ಲ. ದೇವತೆಗಳು ಕಾಮ (ಮನ್ಮಥ)ನ ಮೊರೆ ಹೋದರು. ತತ್ಫಲವಾಗಿ ತನ್ನ ನಿರ್ನಾಮದ ಅರಿವಿದ್ದೂ, ಲೋಕಕಲ್ಯಾಣವೆಂಬ ಅತಿಶಯವಾದ ಪರೋಪಕಾರಾರ್ಥವಾಗಿ ಕಾಮನು ತನ್ನ ಹೂಬಾಣಗಳಿಂದ ಶಿವನನ್ನು ಬಡಿದೆಬ್ಬಿಸಿ, ತಪೆÇೀಭಂಗ ಮಾಡುತ್ತಾನೆ. ಕೆರಳಿ ಮೂರನೇ ಚಕ್ಷುವನ್ನು ತೆರೆದ ಈಶ್ವರನ ಕ್ರೋಧಾಗ್ನಿಗೆ ಕಾಮನು ಸುಟ್ಟು ಭಸ್ಮವಾಗುತ್ತಾನೆ. ಕಾಮನರಸಿ ರತಿದೇವಿಯು ಪರಿಪರಿಯಾಗಿ ಶಿವನಲ್ಲಿ ಪತಿಭಿಕ್ಷೆ ಯಾಚಿಸಲು, ಕಾಮನು ಅನಂಗನಾಗಿಯೇ ಇರುತ್ತಾನೆ. ಆದರೆ ಪತ್ನಿಗೆ ಮಾತ್ರ ಶರೀರಿಯಾಗಿ ಕಾಣಿಸುತ್ತಾನೆ ಎಂದು ಶಿವನು ಅಭಯ ನೀಡಿದನೆಂಬುದು ಪುರಾಣ ಕಥನ.
ಮತ್ತೊಂದು ಪಾಠಾಂತರದ ಪ್ರಕಾರ- ಪೂರ್ವದಲ್ಲಿ ತಾರಕಾಸುರನೆಂಬ ರಾಕ್ಷಸನಿದ್ದ. ದುರಹಂಕಾರಿಯೂ ಕ್ರೂರಿಯೂ ಆದ ತಾರಕಾಸುರನು ಲೋಕಕಂಟಕನಾಗಿ ಮೆರೆಯುತ್ತಿದ್ದ. ತನಗೆ ಮರಣವು ಬಾರದಿರಲಿ, ಬಂದರೂ ಅದು ಶಿವನಿಗೆ ಜನಿಸಿದ ಏಳು ದಿನದ ಶಿಶುವಿನಿಂದ ಬರಲಿ ಅಂದು ಬ್ರಹ್ಮನಲ್ಲಿ ವರವನ್ನು ಬೇಡಿದ್ದ. ಭೋಗಸಮಾಧಿಯಲ್ಲಿದ್ದ ಶಿವ, ಪಾರ್ವತಿಯ ಜೊತೆ ಸಮಾಗಮ ಹೊಂದಲು ಸಾದ್ಯವಿರಲಿಲ್ಲ. ದೇವತೆಗಳು ನಿರುಪಾಯರಾಗಿ ಪಾರ್ವತಿಯಲ್ಲಿ ಮೋಹ ಹೊಂದುವಂತೆ ಮಾಡಲು ಕಾಮನಲ್ಲಿ ಬೇಡಿದರು. ಕಾಮ (ಮನ್ಮಥ) ಮತ್ತು ಅವನ ಪತ್ನಿ ರತಿದೇವಿ ಈ ಸತ್ಕಾರ್ಯಕ್ಕೆ ಒಪ್ಪಿದರು. ಭೋಗಸಮಾಧಿಯಲ್ಲಿದ್ದ ಶಿವನಿಗೆ ಹೂ ಬಾಣಗಳಿಂದ ಹೊಡೆದು ಸಮಾಧಿಯಿಂದ ಎಚ್ಚರಿಸಿದರು. ಇದರಿಂದ ಕುಪಿತಗೊಂಡ ಶಿವನು ತನ್ನ ಮೂರನೇ ಕಣ್ಣಿಂದ ಕಾಮನನ್ನು ಸುಟ್ಟು ಭಸ್ಮ ಮಾಡಿದನು. ರತಿದೇವಿ ದು:ಖದಿಂದ ಶಿವನಲ್ಲಿ ಪತಿಭಿಕ್ಷೆಯನ್ನು ಬೇಡಿದಳು. ಶಾಂತಗೊಂಡ ಶಿವನು ಪತ್ನಿಯೊಡನೆ ಮಾತ್ರ ಶರೀರಿಯಾಗುವಂತೆ ಕಾಮನಿಗೆ ವರ ಕೊಟ್ಟನು. ಲೋಕಕಲ್ಯಾಣಕ್ಕಾಗಿ ಮನ್ಮಥನು ಅನಂಗನಾದ. ಈ ಘಟನೆ ನಡೆದದ್ದು ಫಾಲ್ಗುಣ ಶುದ್ಧ ಪೂರ್ಣಿಮೆಯಂದು. ಆದ್ದರಿಂದ ಈ ದಿನವನ್ನು “ಕಾಮನ ಹುಣ್ಣಿಮೆ”ಯಾಗಿ ಆಚರಿಸಲ್ಪಡುತ್ತದೆ.
ನಾರದ ಪುರಾಣದಲ್ಲಿ ಮತ್ತೊಂದು ಕಥೆ ಬರುತ್ತದೆ. ತಾನೇ ದೇವರು ಎಂದು ಒಪ್ಪಿಕೊಳ್ಳದೆ ಶ್ರೀಹರಿಯನ್ನೇ ಜಗನ್ನಿಯಾಮಕನೆಂದು ಪರಿಭಾವಿಸುವ ತನ್ನದೇ ಕರುಳ ಕುಡಿ ಪ್ರಹ್ಲಾದನನ್ನು ಕೊಲ್ಲಲು, ದೈತ್ಯರಾಜ ಹಿರಣ್ಯಕಶ್ಯಪು ನಾನಾ ವಿಧದ ಪ್ರಯತ್ನಗಳನ್ನು ಮಾಡಿಯೂ ವಿಫಲನಾಗಿ, ಕೊನೆಗೆ, ಬೆಂಕಿಯಿಂದ ರಕ್ಷಣೆ ನೀಡುವ ವಸ್ತ್ರ ಹೊಂದಿರುವ ತಂಗಿ ಹೋಳಿಕಾ (ಹೋಲಿಕಾ)ಳ ಮೊರೆ ಹೋಗುತ್ತಾನೆ. ಅಣ್ಣನ ಅನುಜ್ಞೆಯಂತೆ ಬಾಲ ಪ್ರಹ್ಲಾದನನ್ನು ಹೊತ್ತುಕೊಂಡ ಹೋಳಿಕಾ, ಅಗ್ನಿಕುಂಡ ಪ್ರವೇಶಿಸುತ್ತಾಳೆ. ಆಗ ವಸ್ತ್ರವು ಹಾರಿಹೋಗುತ್ತದೆ, ಹೋಳಿಕಾಳ ದಹನವಾಗುತ್ತದೆ. ವಿಷ್ಣು ಭಕ್ತಾಗ್ರೇಸರ ಪ್ರಹ್ಲಾದ ಬದುಕುಳಿಯುತ್ತಾನೆ.
ಮೇಲೆ ಹೇಳಿದ ಎರಡೂ ಪುರಾಣ ಕಥನಗಳ ಸಂದೇಶ ಒಂದೇ. ಕೆಟ್ಟದ್ದನ್ನು ಸುಟ್ಟು ಬಿಡುವುದು; ಕಾಮಕ್ರೋಧಾದಿ ಅರಿಷಡ್ವರ್ಗಗಳನ್ನು ಅಗ್ನಿಕುಂಡದಲ್ಲಿ ಸುಟ್ಟು, ಸದಾಚಾರವನ್ನು ರೂಢಿಸಿಕೊಳ್ಳುವುದು. ಆಸುರೀ ಶಕ್ತಿಗಳ ನಿರ್ನಾಮದ ದ್ಯೋತಕವಾಗಿ ಹೋಳಿ ಅಂದರೆ ಉತ್ಸವಾಗ್ನಿ ಹಾಕುವ ಪದ್ಧತಿ ಉತ್ತರ ಭಾರತದಲ್ಲಿ ಹೆಚ್ಚಾಗಿ ಆಚರಣೆಯಲ್ಲಿದೆ. ಇಂಥದ್ದೊಂದು ಅಮೂಲ್ಯ ಸಂದೇಶ ಸಾರುವ ಮತ್ತು ಆ ಮೂಲಕ ಕೆಡುಕಿಗೆ ಯಾವತ್ತೂ ಸೋಲು ಕಾದಿದೆ ಎಂಬ ಸಂದೇಶ ಸಾರುವ ಹೋಳಿ ಹಬ್ಬ ಅಥವಾ ಕಾಮನ ಹಬ್ಬದ ಆಚರಣೆಯಲ್ಲಿ ಸದುದ್ದೇಶವಿದೆ.
ಆಚರಣೆ
ಈ ದಿನದಂದು ಅಕ್ಕಿಹಿಟ್ಟು ಮತ್ತು ಅರಿಶಿನ ಬೆರೆಸಿದ ಗುಲಾಲು ತಯಾರಿಸಿ, ಬಿದಿರಿನಿಂದ ಪಿಚಕಾರಿ ತಯಾರಿಸಿ ಬಣ್ಣದಾಟ ಆಡುವರು. onam in kannada story blodsky ರಂಗಿನಾಟದ ನಂತರ ಅಭ್ಯಂಜನ ಸ್ನಾನ ಮಾಡಿ ದೇವರಲ್ಲಿ ಪ್ರಾರ್ಥಿಸಿ ಮನೆಗಳಲ್ಲಿ ವಿಶೇಷ ಅಡಿಗೆಗಳನ್ನು ತಯಾರಿಸುವರು. ಈ ಪ್ರದೇಶದಲ್ಲಿ ಜೋಳದ ಹಿಟ್ಟಿನ ಗುಜಿಯಾ ಹಾಗೂ ಪಾಪ್ಡಿ ಜನಪ್ರಿಯವಾಗಿದೆ.

ದೆಹಲಿಯಲ್ಲಿ ಈ ದಿನದಂದು ಹತ್ತು ತಲೆಯ ರಾವಣನ ಮೂರ್ತಿಯನ್ನು ಬಿದಿರಿನಿಂದ ತಯಾರಿಸಿ, ಅದಕ್ಕೆ ಹಳೇ ಬಟ್ಟೆಗಳನ್ನೇಲ್ಲ ಧರಿಸಿ ಗಣ್ಯರನ್ನೇಲ್ಲ ಕರೆದು, ಅವರ ಸಮ್ಮುಖದಲ್ಲಿ ಲಂಕೇಶನನ್ನು ಸುಡುವುದು ವಾಡಿಕೆ.
ಗ್ರಾಮೀಣ ಪ್ರದೇಶಗಳಲ್ಲಿ ಆ ದಿನ ಊರಿನವರ ಮನೆಯಲ್ಲಿ ಸಿಗುವ ಬೇಡದ ವಸ್ತುಗಳನ್ನೆಲ್ಲ ತಂದು ಒಂದೆಡೆ ಗುಡ್ಡೆ ಮಾಡಿ, ರಾತ್ರಿ ಹುಡುಗನೊಬ್ಬನಿಗೆ ಶಿಖಂಡಿಯ ವೇಷ ಹಾಕಿಸಿ, ಅವನಿಂದ ಊರಿನ ಐದು ಮನೆಗಳಲ್ಲಿ ಭಿಕ್ಷೆ ಬೇಡಿಸಿ ಕರೆತಂದು ಅವನಿಂದ ಆ ಬೇಡದ ವಸ್ತುಗಳ ಗುಡ್ಡೆಗೆ ಬೆಂಕಿ ಇಡಿಸುತ್ತಾರೆ. ಅದೇ ಅವರ ಕಾಮದಹನದ ಹಬ್ಬ.


Share

ಅಕ್ಕಿಹೆಬ್ಬಾಳ ಕರ್ನಾಟಕದ ಲಂಡನ್

Share

ಹೇಮಾವತಿ ನದಿ ತೀರದಲ್ಲಿರುವ ಅಕ್ಕಿಹೆಬ್ಬಾಳು ಗ್ರಾಮವು ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕಿನ ಹೋಬಳಿ ಕೇಂದ್ರ, ಇದು ಭೇರ್ಯ ಮತ್ತು ಕೃಷ್ಣರಾಜಪೇಟೆ ನಡುವೆ ಬರುವ ಒಂದು ಸುಂದರ ಗ್ರಾಮ, ಅಕ್ಕಿಹೆಬ್ಬಾಳು ಕೃಷ್ಣರಾಜಪೇಟೆಯಿಂದ ಸುಮಾರು 15 ಕಿ.ಮೀ ದೂರದಲ್ಲಿದೆ. ಭೌಗೋಳಿಕ ವಿಸ್ತೀರ್ಣ 152.46 ಹೆಕ್ಟೇರ್‍ಗಳು, ಅಕ್ಕಿಹೆಬ್ಬಾಳು ಗ್ರಾಮದ ಬಗ್ಗೆ ಬೆಳಕು ಚೆಲ್ಲುವ ಐತಿಹಾಸಿಕ ಆಧಾರಗಳು ಬಹಳಷ್ಟು ದೊರೆಯುವುದಿಲ್ಲ. ಹೊಯ್ಸಳರ ಕಾಲದ ಎರಡು ಶಾಸನಗಳು ಕೊಂಕಣೇಶ್ವರ ಶಿವಾಲಯದಲ್ಲಿ ದೊರೆತಿದೆ. ಈ ಶಾಸನವು ಅಕ್ಕಿಹೆಬ್ಬಾಳು ಗ್ರಾಮದ ಹಳೆಯ ಹೆಸರು ಮತ್ತು ಕೊಂಕಣೇಶ್ವರ ದೇವರ ಬಗ್ಗೆ ಮಾಹಿತಿ ನೀಡುತ್ತದೆ. ಹೇಮಾವತಿ ನದಿಯ ತೀರದಲ್ಲಿರುವ ಈ ಗ್ರಾಮದಲ್ಲಿ ಹೆಚ್ಚಾಗಿ ಭತ್ತ ಬೆಳೆಯುತ್ತಾರೆ ಆ ಕಾರಣಕ್ಕೆ ಅಕ್ಕಿಹೆಬ್ಬಾಳು ಎಂದು ಹೆಸರು ಬಂತು ಎಂಬ ಹೇಳಲಾಗಿದೆ. ಗ್ರಾಮದ ಬಳಿ ಹರಿಯುತ್ತಿದ್ದ ಹೇಮಾವತಿ ನದಿಯನ್ನು ಹೊಯ್ಸಳರ ಕಾಲದಲ್ಲಿ ಹೆಬ್ಬಹಳ್ಳ ಎಂದು ಕರೆಯುತ್ತಿದ್ದರು. ಈ ಎರಡು ಹೆಸರು ಸೇರಿಸಿ ಅಕ್ಕಿಹೆಬ್ಬಾಳು ಎಂದು ನಮ್ಮ ಹಿರಿಯರು ನಾಮಕರಣ ಮಾಡಿದ್ದರು. ಆಗಿನ ಕಾಲದಲ್ಲಿ ಹೊಯ್ಸಳರು ಅಕ್ಕಿಹೆಬ್ಬಾಳನ್ನು “ಲಂಡನ್” ಎಂದು ಕರೆಯುತ್ತಿದರು. ಎ.ಎನ್.ಮೂರ್ತಿರಾವ್ ಅವರು ಬರೆದಿರುವ “ಸಂಜೆಗಣ್ಣಿನ ಹಿನ್ನೋಟ” ಪುಸ್ತಕದಲ್ಲಿ ಅಕ್ಕಿಹೆಬ್ಬಾಳಿನ ಹಳೆಯ ಹೆಸರು “ತಂಡಲಪುರ” ಎಂದು ಹೇಳಿದ್ದಾರೆ.
ಇಲ್ಲಿನ ಶಾಸನವೊಂದು ಈಶ್ವರ ದೇವರನ್ನು ಕೋಗಳೇಶ್ವರ ಎಂದು ಹೆಸರಿಸಿದೆ. ದೇವಾಲಯದ ಹೆಸರು ಅಳತೆಯ ಒಂದು ಪರಂಪರಾಗತ ಸಾಧನವಾದ ಕೊಳಗದ ಹೆಸರಿನಿಂದ ಬಂದಿರಬಹುದು. ಕೊಳಗದಲ್ಲಿ ಅಳತೆ ಮಾಡಿ ಸುಂಕವನ್ನು ಪಡೆಯಿತ್ತಿದ್ದ ಪ್ರದೇಶದಲ್ಲಿ ಇದ್ದುದರಿಂದ ಈ ದೇವಾಲಯವನ್ನು ಕೊಂಕಣೇಶ್ವರ ಎಂದು ಹೆಸರು ಬಂತ್ತು. ಈ ಗ್ರಾಮದಲ್ಲಿ ಸಿಕ್ಕಿರುವ ಆಧಾರದ ಮೇಲೆ ಈ ದೇವಾಲಯಗಳು 12ನೇ ಶತಮಾನದ ದೇವಾಲಯಗಳು ಎಂದು ಹೇಳುತ್ತಾರೆ.
ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಎರಡು ಪ್ರದೇಶಗಳು ಇದೆ. ಹಳೇ ಊರು ಮತ್ತು ಹೊಸ ಊರು ಎಂಬ ಎರಡು ಪ್ರದೇಶಗಳಿವೆ. ಹಳೇ ಊರಿನಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯ, ಶ್ರೀ ಕೊಂಕಣೇಶ್ವರ ದೇವಾಲಯ ಮತ್ತು ಇತ್ತೀಚೆಗೆ ನಿರ್ಮಿಸಿರುವ ಯಾತ್ರಿನಿವಾಸ್, ಸಮುದಾಯ ಭವನ ಹಾಗೂ ಮತ್ತು ಹೇಮಾವತಿ ನದಿ ಹರಿಯುವುದನ್ನು ಬಿಟ್ಟರೆ ಇನ್ನೇನು ಅಲ್ಲಿ ಉಳಿದಿಲ್ಲ. ಹಳೇ ಊರಿನಲ್ಲಿ ಈಗ ಜನರು ವಾಸಿಸುವುದಿಲ್ಲ. ಹಳೇ ಊರಿನಲ್ಲಿ ಹಸಿರಿನಿಂದ ಕೂಡಿದ ಗದ್ದೆಗಳು ಮತ್ತು ತೋಟಗಳಿವೆ. ಹಿಂದಿನ ಕಾಲದಲ್ಲಿ ಹಳೇ ಊರಿನಲ್ಲಿ ಜನರು ವಾಸಿಸುತ್ತಿದ್ದರು. ಮಲೇರಿಯಾ ರೋಗ ಬಂದ ಕಾರಣಕ್ಕೆ ಅಲ್ಲೇ 3 ಕಿ.ಮೀ ದೂರದಲ್ಲಿ ಹೊಸ ಊರನ್ನು ನಮ್ಮ ಹಿರಿಯರು ನಿರ್ಮಾಣ ಮಾಡಿದ್ದರು. ಈಗ ಅಕ್ಕಿಹೆಬ್ಬಾಳಿನ ಹೊಸ ಊರಿನಲ್ಲಿ ಜನರು ವಾಸ ಮಾಡುತ್ತಿದ್ದಾರೆ. ಹಳೇ ಊರಿನಲ್ಲಿ ಇದ್ದ ಕೆಲವು ದೇವರ ವಿಗ್ರಹಗಳನ್ನು ತೆಗೆದುಕೊಂಡು ಹೋಗಿ ಹೊಸ ಊರಿನಲ್ಲಿ ಅನೇಕ ದೇವಾಲಯಗಳನ್ನು ನಿರ್ಮಾಣ ಮಾಡಿಕೊಂಡರು ಎಂದು ನಮ್ಮ ಹಿರಿಯರು ಹೊಸ ಊರು ನಿರ್ಮಾಣದ ಇತಿಹಾಸವನ್ನು ಹೇಳುತ್ತಾರೆ.
ಕೃತಾಯುಗದಲ್ಲಿ ಗೌತಮ ಮಹರ್ಷಿಗಳು ಮುಂದೆ ಕಲಿಯುಗದಲ್ಲಿ ಜನರು ಕಷ್ಟಗಳನ್ನು ತಮ್ಮ ದಿವ್ಯದೃಷ್ಠಿಯಿಂದ ತಿಳಿದು ಆ ಕಷ್ಟಗಳನ್ನು ಪರಿಹರಿಸಬೇಕು ಎಂದು ಶ್ರೀಮನ್ನಾರಾಯಣನ ಅವತಾರವಾದ ಶ್ರೀಲಕ್ಷ್ಮೀನರಸಿಂಹ ಸ್ವಾಮಿಯನ್ನು ಕುರಿತು ಹಲವಾರು ವರ್ಷಗಳ ಕಾಲ ಇಲ್ಲಿನ ಬದರಿಕಾವೃಕ್ಷದ ಕೆಳಗೆ ಕುಳಿತು ತಪಸ್ಸು ಮಾಡಿದ್ದರು. ಮಹರ್ಷಿಗಳ ತಪಸ್ಸಿಗೆ ಪ್ರಸಾದ ಎಂಬ ಫಲಕ್ಕೆ ನರಸಿಂಹಸ್ವಾಮಿ ಲಕ್ಷ್ಮೀ ಸಮೇತವಾಗಿ ಅಕ್ಕಿಹೆಬ್ಬಾಳಿನಲ್ಲಿ ನೆಲೆಸಿದ್ದಾರೆ ಆ ಕಾರಣಕ್ಕೆ ಈ ಊರಿಗೆ “ದಕ್ಷಿಣ ಬದಾರೀಕಾಶ್ರಮ” ಎಂದು ಕರೆಯುತ್ತಾರೆ. ಎಂದು ಎ.ಎನ್.ಮೂರ್ತಿರಾವ್ ಅವರ ಪುಸ್ತಕದಲ್ಲಿ ನಮೂದಿಸಿದ್ದಾರೆ.


ಕಲಿಯುಗದಲ್ಲಿ ಜನರು ಹಲವಾರು ಸಂಕಷ್ಟಗಳಿಗೆ ಗುರಿಯಾಗುತ್ತದೆ. ಆ ಸಂಕಷ್ಟಗಳಿಂದ ನೀನು ಲಕ್ಷ್ಮಿ ಸಮೇತನಾಗಿ ಸ್ಥಿರವಾಗಿ ಭೂಮಿಯಲ್ಲಿ ನೆಲೆಸಿ, ನಿನ್ನನ್ನು ಪೂಜಿಸುವುದರಿಂದ ಸಂಕಷ್ಟಗಳನ್ನು ಪರಿಹರಿಸಬೇಕು ಎಂದುಕೇಳಿಕೊಂಡರು. ಲೋಕ ಕಲ್ಯಾಣಕಾರಕವಾದ ಮುನಿಯ ಬಯಕೆಯನ್ನು ಶ್ರೀ ಹರಿಯುಒಪ್ಪಿ ನರಸಿಂಹಾವತಾರದಲ್ಲಿ ಭಕ್ತರ ಸಂಕಷ್ಟ ಪರಿಹರಿಸಲು ಭೂಮಿಯ ಮೇಲೆ ನೆಲೆ ನಿಂತನು. ಅಂತಹ ಪುಣ್ಯಕ್ಷೇತ್ರವೇ ಅಕ್ಕಿಹೆಬ್ಬಾಳಿನ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯಿರುವ ಆ ಆಲಯವೇ ಗೌತಮಕ್ಷೇತ್ರ ಎಂದು ಹೇಳಿದ್ದರು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ವಾಸ್ತು:
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವರನ್ನು ಹಳೆಯ ಊರಿನಲ್ಲಿರುವ ದೇವಸ್ಥಾನದಲ್ಲಿ ಪೂಜಿಸಲಾಗುತ್ತಿದೆ. ಇದು ಚೌಕಾಕೃತಿಯ ಪ್ರಾಕಾರದ ಒಳಗೆ ಇದೆ. ಸುತ್ತಲೂ ಕಲ್ಲಿನಿಂದ ನಿರ್ಮಿತವಾದ ಪ್ರಾಕಾರದ ಗೋಡೆಗಳನ್ನು ಹೊಂದಿದೆ. ಪ್ರಾಕಾರದ ಮಧ್ಯದಲ್ಲಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ವಿಗ್ರಹ ಇದೆ. ಈ ದೇವಾಲಯದ ಉತ್ತರಕ್ಕೆ ಏಕ ಕೊಠಡಿಯ ಲಕ್ಷ್ಮೀಗುಡಿ ಹಾಗೂ ಆಗ್ನೆಯ ಮೂಲೆಯಲ್ಲಿ ಯಜ್ಞ ಶಾಲೆ ಇದೆ. ದೇವಾಲಯವು ಪಶ್ಚಿಮ ದಿಕ್ಕಿನಲ್ಲಿ ಪ್ರವೇಶದ್ವಾರವನ್ನು ಹೊಂದಿದೆ. ಮೂರ್ತಿಯು ಸಹ ಪಶ್ಚಿಮಾಭಿಮುಖವಾಗಿದೆ. ದೇವಾಲಯವು ಗರ್ಭಗೃಹ, ಅಂತರಾಳ, ಮಹಾ ಮಂಟಪ ಮತ್ತು ಮುಖ ಮಂಟಪಗಳನ್ನು ಹೊಂದಿದೆ. ಈ ದೇವಾಲಯದ ರಚನಾ ಶೈಲಿಯು ವಿಜಯನಗರದ ನಂತರದ ಕಾಲದ್ದೆಂದು ತಿಳಿದು ಬರುತ್ತದೆ. ಆದರೆ ಗರ್ಭಗೃಹದಲ್ಲಿ ಇರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿಯ ವಿಗ್ರಹವು ಹೊಯ್ಸಳ ಶೈಲಿಗೆ ಸೇರುತ್ತದೆ. ದೇವಾಲಯದ ಕಂಬಗಳು ಅತ್ಯಂತ ಸರಳವಾಗಿ ನಿರ್ಮಿತವಾಗಿವೆ. ಕಂಬಗಳು ಕೆಳಗಿನ ಭಾಗದಲ್ಲಿ ಚೌಕಾಕಾರವಾಗಿದ್ದು, ಮಧ್ಯದಲ್ಲಿ ಅಳಭುಜಾಕೃತಿಯನ್ನು ಹೊಂದಿದ್ದು, ಮೇಲೆ ಪುನಃ ಉರುಳೆಯಾಕರವಾಗಿದೆ. ನವರಂಗದ ಪೂರ್ವದ ಗೋಡೆಯಲ್ಲಿ ಅಂದರೆ ಅಂತರಾಳದ ಪ್ರವೇಶದ್ವಾರದ ಬಲ ಮತ್ತು ಎಡ ಭಾಗಗಳಲ್ಲಿ ನಿರ್ಮಿತವಾದ ಅಲಂಕೃತ ಗೂಡುಗಳು ಮತ್ತು ಅದರಲ್ಲಿ ದೇವದೇವಿಯರ ವಿಗ್ರಹಗಳಿವೆ. ಇದಲ್ಲದೆ ಪ್ರಾಕಾರದ ಪಶ್ಚಿಮದ ಗೋಡೆಗೆ ಸೇರಿದಂತೆ, ಅಂದರೆ ಮುಖ್ಯದ್ವಾರದ ಎರಡು ಪಕ್ಕಗಳಲ್ಲಿ ಕೈಸಾಲೆಗಳಿವೆ, ಮುಖ್ಯದ್ವಾರದ ಮೇಲೆ ಇಟ್ಟಿಗೆ ಗಾರೆಯಿಂದ ನಿರ್ಮಿತವಾಗಿರುವ ಮೂರು ತಲಗಳನ್ನೂ ಮತ್ತು ಕಳಶಗಳನ್ನು ಹೊಂದಿದ ಗೋಪುರವಿದೆ. ಈ ಗೋಪುರದ ರಚನೆಯಲ್ಲಿ ಮೈಸೂರು ಒಡೆಯರ ಕಾಲದ ಕುಶಲ ಕರ್ಮಿಗಳ ಕಲೆಗಾರಿಕೆಯನ್ನು ಕಾಣುತ್ತೇವೆ. ಗರ್ಭಗೃಹದ ಮೇಲೆ ಅತ್ಯಂತ ಸುಂದರವಾಗಿ ನಿರ್ಮಿತವಾದ ವಿಮಾನಗೋಪುರವಿದೆ, ಇದು ಸಹ ಇಟ್ಟಿಗೆಗಾರೆಯಿಂದ ನಿರ್ಮಿತವಾಗಿದೆ. ಲಕ್ಷ್ಮೀನರಸಿಂಹಸ್ವಾಮಿ ವಿಗ್ರಹವು ಸುಖಾಸಿನ ಭಂಗಿಯಲ್ಲಿಗರುಡ ಪೀಠದ ಮೇಲೆ ಕುಳಿತಿದೆ. ಸ್ವಾಮಿಯ ಎಡತೊಡೆಯ ಮೇಲೆ ಮಹಾಲಕ್ಷ್ಮಿಯ ವಿಗ್ರಹವು ಸುಖಾಸನದಲ್ಲಿದೆ. ಮೂರ್ತಿಯು ನಾಲ್ಕು ಕೈಗಳನ್ನೂ ಹೊಂದಿದ್ದು, ಮೇಲಿನ ಎಡಗೈಯಲ್ಲಿ ಶಂಖವನ್ನು, ಬಲಗೈಯಲ್ಲಿ ಚಕ್ರವನ್ನು ಹಿಡಿದಿದೆ. ಲಕ್ಷ್ಮಿಯು ಕೇವಲ ಎರಡು ಕೈಗಳನ್ನು ಹೊಂದಿದ್ದು ಬಲಗೈಯಲ್ಲಿ ಸ್ವಾಮಿಯನ್ನು ಆಲಂಗಿಸಿರುವ ರೀತಿಯಲ್ಲಿ ರೂಪಿಸಲಾಗಿದೆ. ಎಡಗೈಯಲ್ಲಿ ಅಮೃತ ಕಳಶವಿದೆ. ದೇವತೆಯ ವಿಗ್ರಹವು ಅತ್ಯಂತ ಸುಂದರವಾಗಿದೆ. ಸಂಪೂರ್ಣ ಹೊಯ್ಸಳ ಶೈಲಿಗೆ ಸೇರುವ ಈ ವಿಗ್ರಹವನ್ನು ಬೇರೆಡೆಯಿಂದ ತಂದು ಸ್ಥಾಪಿಸಿರಬಹುದೆಂದು ಊಹಿಸಲಾಗಿದೆ. ಅಮ್ಮನವರ ವಿಗ್ರಹವು ವಿಜಯನಗರದ ಕಾಲಕ್ಕೆ ಸೇರುತ್ತದೆ. ಈದೇವಾಲಯದ ರಚನೆಯ ಕಾಲವನ್ನು ಸರಿಸುಮಾರು 17-18ನೆ ಶತಮಾನಕ್ಕೆ ಕೊಂಡೊಯ್ಯಬಹುದು.
ಗರುಡ ಬೃಂದಾವನ ಕಟ್ಟೆ : ಈ ಗರುಡ ಬೃಂದಾವನಕಟ್ಟೆಯು ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಮುಂದೆ ಇದೆ. ಬೃಂದಾವನಕಟ್ಟೆಯನ್ನು ಸುಮಾರು 600 ವರ್ಷಗಳ ಹಿಂದೆ ಚೋಳರು ನಿರ್ಮಾಣ ಮಾಡಿದ್ದಾರೆ. ಈ ಬೃಂದಾವನ ಕಟ್ಟೆಯಲ್ಲಿ ತುಳಸಿ ಸಸ್ಯವನ್ನು ನೆಟ್ಟಿ ಪೆÇೀಷಿಸುತ್ತಿದ್ದಾರೆ. ಅಕ್ಕಿಹೆಬ್ಬಾಳು ಕ್ಷೇತ್ರದಲ್ಲಿ ಧ್ವಜಸ್ತಂಭ ಇಲ್ಲದ ಕಾರಣೀಗರುಡ ಬೃಂದಾವನವನ್ನು ಹಿಂದಿನ ಕಾಲದಲ್ಲಿ ಚೋಳರು ನಿರ್ಮಾಣ ಮಾಡಿದ್ದಾರೆ. ದಿನಾಂಕ 13-02-1979ರಂದು ತಮಿಳುನಾಡಿನ ಮೂಲದ ಒಬ್ಬ ವ್ಯಕ್ತಿಯು ಅಕ್ಕಿಹೆಬ್ಬಾಳು ಕ್ಷೇತ್ರ ಬಂದವರು ಗರುಡ ಬೃಂದಾವನವನ್ನು ಪೂಜಿಸಿ ಸಂಖ್ಯಾಶಾಸ್ತ್ರವೂ ಸಹ ಇದಕ್ಕೆ ಪುಷ್ಟಿ ನೀಡುತ್ತದೆ. 256 ಸಲ ಪ್ರದಕ್ಷಣೆ ಮಾಡಿದರೆ ಮನಸ್ಸಿನಲ್ಲಿ ಇರುವ ಆಸೆಗಳು ಫಲಿಸುತ್ತದೆ ಎಂದು ಹೇಳಿದರು. ಈಗಲೂ ಈ ಗರುಡ ಬೃಂದಾವನಕಟ್ಟೆಯನ್ನು ಭಕ್ತರು ಪ್ರದಕ್ಷಣೆ ಮಾಡುತ್ತಾರೆ.

ಅಕ್ಕಿಹೆಬ್ಬಾಳಿನ ಜಾತ್ರೆ : ಭಾರತೀಯ ಸಂಸ್ಕøತಿಯಲ್ಲಿ ಐದು ದಿನದ ಜಾತ್ರೆ, ಏಳು ದಿನದ ಜಾತ್ರೆ ಮತ್ತು ಒಂಭತ್ತು ದಿನದಜಾತ್ರೆ ಎಂಬ ಮೂರು ವಿಧಗಳ ಜಾತ್ರೆಗಳಿವೆ. ನಮ್ಮ ಅಕ್ಕಿಹೆಬ್ಬಾಳಿನಲ್ಲಿ ಐದು ದಿನದ ಪಂಚಮಿ ರಥೋತ್ಸವ ಮಾಡುತ್ತಾರೆ. ಅಕ್ಕಿಹೆಬ್ಬಾಳು ಗ್ರಾಮದ ಗೌತಮಕ್ಷೇತ್ರದಲ್ಲಿ ಹೇಮಗಿರಿಯ ರಥೋತ್ಸವ ಕಳೆದ ಒಂದು ವಾರದ ನಂತರಜಾತ್ರೆ ನಡೆಸುತ್ತಾರೆ. ಈ ಜಾತ್ರೆಯು ಮಾಘ ಮಾಸದ ಕೃಷ್ಣಪಕ್ಷ, ಪ್ರತಿಪತ್ /ದ್ವಿತೀಯ ಮಹಾನಕ್ಷತ್ರದ ದಿನ ನಡೆಯುತ್ತದೆ. ಜಾತ್ರೆ ನಡೆಯುವ ಐದು ದಿನ ನಾನಾ ರೀತಿಯ ಪೂಜೆಗಳನ್ನು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವರಿಗೆ ಸಲ್ಲಿಸುತ್ತಾರೆ. ಮೊದಲನೆಯ ದಿನ ಅಭಿμÉೀಕ, ಎರಡನೆಯ ದಿನ ಕಲ್ಯಾಣೋತ್ಸವ, ಮೂರನೆಯ ದಿನ ಪಲ್ಲಕಿ ಉತ್ಸವ, ನಾಲ್ಕನೆಯ ದಿನ ರಥೋತ್ಸವ ಮತ್ತು ಐದನೆ ದಿನ ತೆಪೆÇ್ಪೀತ್ಸವ ಕಾರ್ಯಕ್ರಮಗಳು ನಡೆಯುತ್ತವೆ. ಈ ಐದು ದಿನದಕಾರ್ಯಕ್ರಮ ನೋಡಲುದೇಶದ ಮೂಲೆ ಮೂಲೆಯಿಂದ ಭಕ್ತರು ಆಗಮಿಸುತ್ತಾರೆ.
ಅಭಿμÉೀಕ : ಜಾತ್ರೆಯ ಮೊದಲನೆಯ ದಿನ ಮತ್ತು ವಿಶೇಷ ದಿನಗಳಲ್ಲಿ ಅಕ್ಕಿಹೆಬ್ಬಾಳು ಶ್ರೀಲಕ್ಷ್ಮೀನರಸಿಂಹಸ್ವಾಮಿಗೆ ಅಭಿμÉೀಕ ನಡೆಯುತ್ತದೆ. ಹಾಲು, ಮೊಸರು, ತುಪ್ಪ, ಜೇನುತುಪ್ಪ ಮತ್ತು ಸಕ್ಕರೆ ಸೇರಿಸಿ ದೇವರಿಗೆ ಪಂಚಾಮೃತಾ ಅಭಿμÉೀಕ ಮಾಡುತ್ತಾರೆ. ಈ ದೇವಾಲಯದಲ್ಲಿ ನಿತ್ಯ ಪಾನೀಯ ಅಭಿμÉೀಕ ನಡೆಯುತ್ತದೆ.
ಕಲ್ಯಾಣೋತ್ಸವ : ಜಾತ್ರೆಯಎರಡನೆಯ ದಿನ ನಡೆಯುವ ಕಾರ್ಯಕ್ರಮವೇ ಕಲ್ಯಾಣೋತ್ಸವ ಈ ದಿನ ವಿಷ್ಣು ಮತ್ತು ಲಕ್ಷ್ಮೀ ಅಮ್ಮನವರಿಗೆ ಕಲ್ಯಾಣ ಮಾಡಿಸುತ್ತಾರೆ. ಈ ಉತ್ಸವ ನೋಡಲು ದೇವತೆಗಳು ಬರುತ್ತಾರೆ. ಹಾಗೂ ಮಳಕಿತರಾಗುತ್ತಾರೆ ಎಂದು ಪ್ರತೀತಿ ಇದೆ. ಈ ದೃಶ್ಯವನ್ನು ನೋಡಿ ಕಣ್ಣು ತುಂಬಿಕೊಳ್ಳತ್ತಾರೆ ಎಂದು ಇಲ್ಲಿನ ಅರ್ಚಕರು ಹೇಳುತ್ತಾರೆ.
ಪಲ್ಲಕಿ ಉತ್ಸವ : ಜಾತ್ರೆಯ ಮೂರನೆಯ ದಿನ ನಡೆಯುವ ಉತ್ಸವವೇ ಪಲ್ಲಕ್ಕಿ ಉತ್ಸವ. ಈ ಉತ್ಸವದಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿಯಲ್ಲಿ ಹೂಗಳಿಂದ ಸುಂದರವಾಗಿ ಅಲಂಕಾರ ಮಾಡುತ್ತಾರೆ. ಈ ಉತ್ಸವದಲ್ಲಿ ಮುಖ್ಯವಾದುದ್ದು ಎಂದರೆ ಹೂ ಅಲಂಕರವಾಗಿರು. ದೇವರನ್ನು ರಾತ್ರಿ ವೇಳೆಯಲ್ಲಿ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನ ವಿವಿಧ ಜನಪದ ಕಲಾ ತಂಡಗಳ ಜೊತೆಯಲ್ಲಿ ಶ್ರೀಲಕ್ಷ್ಮೀನರಸಿಂಹಸ್ವಾಮಿಯನ್ನು ಮೆರವಣಿಗೆ ಮಾಡುತ್ತಾರೆ. ದೇವರನ್ನು ಶ್ರೀಲಕ್ಷ್ಮೀನರಸಿಂಹಸ್ವಾಮಿಯ ದೇವಾಲಯದಿಂದ ಅಕ್ಕಿಹೆಬ್ಬಾಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಮತ್ತೇ ದೇವಾಲಯಕ್ಕೆ ಮಧ್ಯರಾತ್ರಿ ಮೂರುಗಂಟೆ ಸುಮಾರಿಗೆ ತೆಗೆದುಕೊಂಡು ಹೋಗಿ ಗುಡಿ ದುಂಬಿಸಲಾಗುತ್ತದೆ.
ರಥೋತ್ಸವ : ಜಾತ್ರೆಯ ನಾಲ್ಕನೆಯ ದಿನ ನಡೆಯುವ ಸುಂದರ ಉತ್ಸವವೇ ಈ ರಥೋತ್ಸವ. ಈ ರಥೋತ್ಸವ ದಿನ ಪಲ್ಲಕ್ಕಿ ಉತ್ಸವ ಮುಗಿಸಿಕೊಂಡು ಬಂದಿರುವ ದೇವರನ್ನು ರಥದಲ್ಲಿ ಕೂರಿಸಿ ಜಾತ್ರೆ ನಡೆಸುತ್ತಾರೆ. ರಥೋತ್ಸವದ ದಿನ ವಿಷ್ಣುವಿನ ವಾಹನ ಗರುಡ ಆಜ್ಞೆ ನೀಡಿದರೆ ಮಾತ್ರ ಜಾತ್ರೆಯನ್ನು ನಡೆಸುತ್ತಾರೆ. ಜಾತ್ರೆಯ ದಿನ ಹಣ್ಣುಕಾಯಿ ಮತ್ತು ಇತರೆ ಪೂಜೆಗಳನ್ನು ಭಕ್ತರು ನಡೆಸುತ್ತಾರೆ. ಈ ಉತ್ಸವಕ್ಕೆ ಬಂದಿರುವ ಭಕ್ತರಿಗೆ ಪ್ರಸಾದ ವಿನಿಯೋಗ ಮಾಡುತ್ತಾರೆ. ಈ ಉತ್ಸವ ನೋಡಲು ದೇಶ-ವಿದೇಶಗಳಿಂದ ಭಕ್ತರು ಬಂದು ದೇವರ ದರ್ಶನ ಮಾಡುತ್ತಾರೆ.
ತೆಪೆÇ್ಪೀತ್ಸವ : ಜಾತ್ರೆಯ ಐದನೆಯ ಮತ್ತು ಕೊನೆಯ ದಿನ ನಡೆಯವ ಉತ್ಸವವೇ ತೆಪೆÇ್ಪೀತ್ಸವ. ಈ ದಿನ ದೇವರಿಗೆ ಸ್ನಾನ ಮಾಡಿಸಿ ದೇವರು ಹೇಗೆ ಮೊದಲನೆಯ ದಿನ ಇರುತ್ತೋ ಹಾಗೆ ಇರಿಸುತ್ತಾರೆ. ರಥದ ಮೇಲೆ ಇರುವ ಹಾಗೆ ತೆಪ್ಪದ ಮೇಲೆ ದೇವರಿಗೆ ಜಲಕ್ರೀಡೆ ಆಡಿಸಿ ದೇವಾಲಯಕ್ಕೆ ಕರೆದುಕೊಂಡು ಹೋಗುತ್ತಾರೆ.
ಆಕಾಶದಲ್ಲಿ ಗರುಡ ಪಕ್ಷಿಯ ಪ್ರದಕ್ಷಿಣೆ ಮತ್ತು ರಥೋತ್ಸವ : ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ರಥೋತ್ಸವವು ಪ್ರತಿ ವರ್ಷವು ರಥಸಪ್ತಮಿಯಾದ ಒಂದು ವಾರದ ನಂತರ ನಡೆಯುತ್ತದೆ. ಈ ರಥೋತ್ಸವದ ವಿಶೇಷವೆಂದರೆ ಆಕಾಶದಲ್ಲಿ ಗರುಡ ಪಕ್ಷಿಗಳು ರಥದ ಮೇಲ್ಬಾಗದಲ್ಲಿ 50ರಿಂದ 60 ಅಡಿ ಅಂತರದಲ್ಲಿ ಪ್ರದಕ್ಷಿಣೆ ಹಾಕಿದ ನಂತರ ರಥೋತ್ಸವವನ್ನು ಮುನ್ನಡೆಸಲಾಗುತ್ತದೆ. ಈ ದೃಶ್ಯವಂತೂ ವೈಜ್ಞಾನಿಕ ಲೋಕಕ್ಕೆ ಸವಾಲೆಸೆಯುವಂತಾಗಿದೆ ಎಂಬ ಭಾವ ಪ್ರತಿಯೊಬ್ಬ ಪ್ರತ್ಯಕ್ಷದರ್ಶಿ ಭಕ್ತಾದಿಗಳಲ್ಲಿ ಮೂಡುಯತ್ತದೆ. ಇದು ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವರ ಮಹಿಮೆಗೆ ಸಾಕ್ಷಿಯಾಗಿದೆ.
ದಕ್ಷಿಣ ಬದರಿಕಾಶ್ರಮ : ಗೌತಮ ಮಹರ್ಷಿಗಳು ಅನೇಕ ಕಾಲ ಹೇಮಾವತಿ ನದಿ ಪಶ್ಚಿಮ ಮುಖನಾಗಿ ಹರಿಯುವ ದಿವ್ಯ ಸ್ಥಳದಲ್ಲಿ ಸ್ನಾನ ಆಹರ್ನಿಕಾದಿಗಳನ್ನು ಮಾಡುತ್ತಾ ಒಂದು ಬದರಿ ವೃಕ್ಷದ ಕೆಳಗೆ ಕೂತು ತಪಸ್ಸು ಮಾಡುತ್ತಾ ಇರಲು, ಭಕ್ತವತ್ಸಲನಾದ ಮಹಾವಿಷ್ಣವು ಗೌತಮ ಮಹರ್ಷಿಯನ್ನು ಹೆಚ್ಚು ಪರೀಕ್ಷೆ ಮಾಡಬಾರದೆಂಬ ಮನಸ್ಸಿನಿಂದ ಶ್ರೀ ಲಕ್ಷ್ಮೀ ಸಮೇತನಾಗಿ ನರಸಿಂಹ ರೂಪಿನಿಂದ ದರ್ಶನವನ್ನು ಕೊಡಲು ಗೌತಮ ಮಹರ್ಷಿ ಸಾμÁ್ಟಂಗ ಸಮಸ್ಕಾರಗಳನ್ನು ಮಾಡುತ್ತಾ ಅನೇಕ ವಿಧವಾದ ಸ್ತೋತ್ರಗಳನ್ನು ಮಾಡುತ್ತಾ ಕಣ್ಣಿನಿಂದ ಆನಂದಾಶ್ರುಗಳನ್ನು ಸುರಿಸುತ್ತಾ ನಿಂತಿರಲು ಭಗವಂತನು ಏತಕ್ಕೋಸ್ಕರ ನನ್ನನ್ನು ಕುರಿತು ತಪಸ್ಸು ಮಾಡಿದೆ ನಿನ್ನಕೋರಿಕೆ ಏನು ಹೇಳು ಎನ್ನಲು, ಗೌತಮನು ಆನಂದಪರವಶನಾಗಿ ‘ಹೇ ಭಗವಂತ, ಮುಂದೆ ಕಲಿಯುಗದಲ್ಲಿ ಮನುμÁ್ಯದಿಗಳು ಅನೇಕ ಕಷ್ಟಕಾರ್ಪಣ್ಯಕ್ಕೆ ಸಿಕ್ಕಿ ಸಂಕಟಪಡುತ್ತಾರೆ. ಅವರ ಕಷ್ಟಗಳು ಸುಲಭೋಪಾಯವಾಗಿ ಪರಿಹಾರವಾಗಲಿ ಎಂದು ನಿನ್ನನ್ನು ಕುರಿತು ತಪಸ್ಸು ಮಾಡಿದೆ. ರಾಮಾವತಾರವಾದರೋ ಅನೇಕ ಸಹಸವರ್ಷಗಳು, ಕೃμÁ್ಣವತಾರವೂ ಅμÉ್ಟ, ನಿನ್ನ ಅವತಾರಗಳು ಕೇವಲ ಘಳಿಗೆಗಳು ಮಾತ್ರವಾದ್ದರಿಂದ ಭಕ್ತರಿಗೆ ಬಲುಬೇಗ ನಿನ್ನ ಅನುಗ್ರಹ ಪ್ರಾಪ್ತಿಗಾಗಿಯೂ, ನೀನು ನನಗೆ ಪಶ್ಚಿಮ ಮೂಖನಾಗಿ ದರ್ಶನಕೊಟ್ಟಿದ್ದರಿಂದ, ಪಶ್ಚಿಮಮುಖನಾಗಿಯೇ ಶಿಲಾರೂಪ ಧರಿಸಿ ಶ್ರೀ ಲಕ್ಷ್ಮೀ ಸಮೇತನಾಗಿ ಇಲ್ಲೇ ನೆಲಸಬೇಕೆಂದು ಪ್ರಾರ್ಥಿಸಲು, ಸ್ವಾಮಿಯ ಅದೇರೀತಿ ನೆಲೆಸಿದನು.
ಸಂರಕ್ಷಣಕಾರ್ಯ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ನ್ಯಾಸ ಟ್ರಸ್ಟ್ ಅಕ್ಕಿಹೆಬ್ಬಾಳಿನ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಸಮಿತಿಯ ಸಹಯೋಗದೊಂದಿಗೆ ದೇವಾಲಯದ ಪುನರುಜೀವನ ಕಾರ್ಯವನ್ನು ನೆರವೇರಿಸಲಾಗಿದೆ. ಈ ಸಂರಕ್ಷಣಕಾರ್ಯದ ವೆಚ್ಚದ ಮೊತ್ತದಲ್ಲಿ ಶೇ 50 ಭಾಗವನ್ನು ಗ್ರಾಮಸ್ಥರನ್ನು ಒಳಗೊಂಡ ದೇವಾಲಯ ಸಮಿತಿ ಮತ್ತು ಉಳಿದ 50 ಭಾಗವನ್ನು ಮಂಜುನಾಥೇಶ್ವರ ಟ್ರಸ್ಟ್ ನೀಡಿದೆ. ಈ ದೇವಾಲಯ ಪ್ರಾಕೃತಿಕವಾಗಿತನ್ನ ಭದ್ರತೆಯನ್ನು ಕಳೆದುಕೊಂಡಿತ್ತು. ದೇವಾಲಯದ ಪ್ರಾಕಾರ ಮಣ್ಣಿನಿಂದ ಆವೃತವಾಗಿ ಅದಿμÁ್ಟನದ ಭಾಗ ಮಣ್ಣಿನಲ್ಲಿ ಹುದುಗಿಹೊಗಿತ್ತು. ಪ್ರಥಮ ಹಂತದಲ್ಲಿ ದೇವಾಲಯದ ಪ್ರಾಕಾರ ಮತ್ತು ಮಹಾದ್ವಾರದ ಮುಂದೆ ಆವರಿಸಿದ್ದ ಮಣ್ಣಿನ ಪದರಗಳನ್ನು ಉತ್ಕನನ ಮಾಡಿತೆಗೆಯಲಾಯಿತು. ದೇವಾಲಯದ ಗರ್ಭ ಗೃಹ ಅಂತರಾಳದ ಗೋಡೆಗಳು ಹಾಗು ತಳಪಾಯ ಕುಸಿದಿತ್ತು. ನಶಿಸಿದ್ದ ಗೋಡೆಗಳಿಗೆ ಆಧಾರ ಗೋಡೆಗಳನ್ನು ಕಟ್ಟಿ ಅವುಗಳನ್ನು ಕಾಪಾಡಿದ್ದರು. ದೇವಾಲಯದ ಗರ್ಭ ಗೃಹ ಅಂತರಾಳದ ಗೋಡೆಯ ಹೊರಕವಚಗಳನ್ನು ಬಿಚ್ಚಿದೇವಾಲಯದ ಸಂಪೂರ್ಣ ತಳಪಾಯವನ್ನು ಭದ್ರಗೊಳಿಸಿ ನಂತರ ಗೋಡೆಗಳನ್ನು ಪುನರ್ ನಿರ್ಮಿಸಲಾಯಿತು. ದೇವಾಲಯದ ಗರ್ಭಗೃಹದ ಮೇಲಿದ್ದ ವಿಮಾನ, ಸ್ವಾಮಿಯ ಆಲಯದ ಪಕ್ಕದಲ್ಲಿದ್ದ ಶ್ರೀ ಲಕ್ಷ್ಮೀ ಆಲಯದ ತಳಪಾಯ, ಗೋಡೆ ಹಾಗು ವಿಮಾನ ಮತ್ತು ಮಂಟಪಗಳು ಶಿಥಿಲವಾಗಿದ್ದು ಅವುಗಳನ್ನು ಪ್ರಾಚೀನ ಮಾದರಿಯಲ್ಲಿ ಪುನರ್ರಚಿಸಲಾಗಿದೆ. ದೇವಾಲಯದ ಸುತ್ತಲು ಹಾಸು ಕಲ್ಲುಗಲ್ಲುಗಳನ್ನು ಹಾಕಿಸಿ ದೇವಾಲಯದ ತಳಪಾಯಕ್ಕೆ ನೀರು ಸೇರದಂತೆ ಮಾಡಲಾಗಿದೆ. ಪ್ರಾಕಾರದ ಗೋಡೆಗಳಲ್ಲಿ ಇದ್ದಯ ಜ್ಞಶಾಲೆ ಮಂಟಪಗಳು ಸಂಪೂರ್ಣವಾಗಿ ನಾಶವಾಗಿದ್ದವು, ಅವುನ್ನು ಸಹ ಸಂರಕ್ಷಿಸಲಾಗಿದೆ. ಮಹಾದ್ವಾರದ ಮೇಲಿನ ಗೋಪುರದಲ್ಲಿ ಇದ್ದ ಗಾರೆಯಿಂದ ನಿರ್ಮಿತವಾದ ಶಿಲ್ಪಗಳು ಕೆಲವು ನಾಶವಾಗುವ ಹಂತವನ್ನು ತಲುಪಿದ್ದಾರೆ ಮತ್ತೆ ಕೆಲವು ಭಗ್ನವಾಗಿದ್ದವು. ಅಂತಹ ಮೂರ್ತಿಗಳನ್ನು ಸರಿಪಡಿಸಿ ಉಳಿದವುಗಳನ್ನು ಸಂರಕ್ಷಿಸುವ ಕಾರ್ಯಗಳನ್ನು ಮಾಡಲಾಗಿದೆ. ಅಕ್ಕಿಹೆಬ್ಬಾಳಿನ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿದೇವಾಲಯದಲ್ಲಿ ಬ್ರಹ್ಮರಥೋತ್ಸವ (ಮಾಘ ಮಾಸದಕಳ ಪಕ್ಷ, ಪ್ರತಿಪತ್-ದ್ವಿತೀಯ ಮಹಾ ನಕ್ಷತ್ರ), ಶ್ರೀ ನರಸಿಂಹ ಜಯಂತಿ, ಶಂಕರಜಯಂತಿ ಹಾಗು ರಾಮ ನವಮಿ, ಪ್ರತಿ ನಿತ್ಯ ಸ್ವಾಮಿಗೆ ನಿತ್ಯ ಪೂಜೆ ನಡೆಯುತ್ತದೆ.

ಮೊಹಮ್ಮದ್ ಅಜರುದ್ದೀನ್
ಯುವಸಾಹಿತಿ


Share

ಹನುಮ ಜಯಂತಿ

Share

ಚೈತ್ರಮಾಸದಲ್ಲಿ ಶ್ರೀರಾಮನವಮಿಯ ನಂತರ ಆಚರಿಸಲ್ಪಡುವ ಮುಖ್ಯ ಹಬ್ಬ ಹನುಮ ಜಯಂತಿ. ಅಂದು ಆರಾಧಿಸಲ್ಪಡುವ ದೇವರು ಹನುಮಂತ, ಆಚಿಜನೇಯ, ಮಾರುತಿ, ಪ್ರಾಣದೇವರು,ತಿರುವಡಿ ಮುಂತಾದ ಹೆಸರುಗಳಿಂದ ಜ್ಞಾನಿಗಳ ಮತ್ತು ಭಕ್ತರ ಸಾಹಿತ್ಯದಲ್ಲಿ ಪ್ರಸಿದ್ಧನಾಗಿರುವ ಮಹಾತ್ಮ. ರಾಮನವಮಿಯಂದು ಶ್ರೀರಾಮನನ್ನು ಪೂಜಿಸಿದ ನಂತರ ಅದಕ್ಕೆ ಹತ್ತಿರದಲ್ಲಿ ಬರುವ ಒಂದು ಪರ್ವದಲ್ಲಿ, ಭಕ್ತ ಜನಪ್ರಿಯನೂ,ಬಹುಜನಪ್ರಿಯನೂ ಆಗಿರುವ ಈ ದೇವನನ್ನು ಆರಾಧಿಸುವುದು ವಾಡಿಕೆಯಾಗಿದೆ.
ರಾಮಾಯಣ, ಮಹಾ ಭಾರತ,ಪುರಾಣ, ಧರ್ಮಶಾಸ್ತ್ರ, ಸಂಗೀತ, ಕಾವ್ಯ ಮುಂತಾದಗಳು ಮಾತ್ರವಲ್ಲದೆ, “ರಾಮನ ಬಂಟ ಹನುಮಂತ, ತಿರುಪತಿಯೆಂಬುದೆ ವೈಕುಂಠ” ಹನುಮನಿಲ್ಲದ ಹಳ್ಳಿಯೇ ? ಗಣಪನಿಲ್ಲದ ಗ್ರಾಮವೇ ?’
ಇವೇ ಮುಂತಾದ ಜನಪದ ಸಾಹಿತ್ಯದ ವಚನಗಳೂ, ಬಗೆಬಗೆಯ ಭಾವಭಂಗಿಗಳಿಂದ ಶೋಭಿಸುತ್ತಿರುವ ಅವನ ವಿಗ್ರಹಗಳೂ, ಚಿತ್ರಗಳೂ, ಗುಡಿಗೋಪುರಗಳೂ ನಮ್ಮ ಮನಸ್ಸಿನ ಮೇಲೆ ಬೀರಿರುವ ಪ್ರಭಾವವನ್ನು ಸಾರುತ್ತವೆ. ಆಚಿಜನೇಯನನ್ನು ಉಪಾಸನೆ ಮಾಡುವವರು ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.
ಹನುಮಂತ ಕೇಸರಿಪುತ್ರ; ಸಿಂಹದ ಮರಿ, ಶೌರ್ಯ ಧೈರ್ಯಗಳ ಮೂರ್ತಿ, ವೀರರ ಕಣ್ಮಣಿ, ಆದರ್ಶ ಭಕ್ತ, ಭಕ್ತಿ ಶಕ್ತಿಗಳ ಸಂಗಮ, ರುದ್ರಾಂಶ ಸಂಭೂತ, ನ್ಯಾಯ ನೀತಿಗಳ ನೆಲೆಗಟ್ಟು,ಬುದ್ಧಿವಂತರಲ್ಲಿ ಅಗ್ರೇಸರ ಜಿತೇಂದ್ರಿಯ. ಸುಗ್ರೀವ್ ರಾಜನ ಸೇನಾಪತಿ ಹಾಗೂ ಆಪ್ತಮಿತ್ರ ಮಾರುತಿಯ ಜನ್ಮದಿನ ಒಂದು ರೀತಿಯ ವೀರಪೂಜೆ. ನಿಸ್ವಾರ್ಥಸೇವೆಗೆ ಸಲ್ಲುವ ಗೌರವ, ವೀರ್ಯ ವಿನಯಗಳ ಪ್ರಯೋಗವನ್ನು ಆಚಿಜನೇಯನಲ್ಲಿ ಕಾಣಬೇಕು. ಅವನು ಒಂದೆಡೆ ಶೌರ್ಯದ ಸಿರಿಯಾದರೆ, ಇನ್ನೊಂದೆಡೆ ಭಕ್ತಿಯ ಝರಿ.
ಸೂರ್ಯೋದಯ ಕಾಲದಲ್ಲಿ ಜನಿಸಿದ ಹನುಮಂತ ಹುಟ್ಟುತ್ತಲೇ ಕೆಂಪಾದ ಸೂರ್ಯನನ್ನು ಆಗಸದಲ್ಲಿ ಕಂಡು, ಹಣ್ಣೆಂದು ಭ್ರಮಿಸಿ ಸೂರ್ಯಮಂಡಲಕ್ಕೇ ಜಿಗಿದು ಸೂರ್ಯನಿಂದ ಶಹಭಾಸ್ ಗಿರಿ ಪಡೆದು ವಜ್ರದೇಹಿಯಾದವ, ರಾಮಕಥೆಯಿರುವತನಕ ತಾನು ಬದುಕಿರಬೇಕೆಂದು ವರಪಡೆದ ಚಿರಂಜೀವಿ-ಹನುಮಂತ. ಸದಾ ರಾಮನಿದ್ದಲ್ಲಿ ಅವನಿರಬೇಕು.
ಹನುಮಂತನ ಪರಿಚಯವನ್ನು ನಮಗೆ ಮಾಡಿಕೊಡುವ ಪ್ರಾಚೀನತಮ ಸಾಹಿತ್ಯವಾದ ವಾಲ್ಮೀಕಿ ರಾಮಾಯಣದ ಪ್ರಕಾರ ಹೇಳುವುದಾದರೆ., ಅವನೊಬ್ಬ ವಾನರ ಜಾತಿಯ ಮುಖಂಡ, ಕಿಷ್ಕಿಂಧೆಯ ಅರಸನಾದ ಕಪಿರಾಜ ಸುಗ್ರೀವನ ಮನೀಷಿಯೂ ಹಿತೈಷಿಯೂ ಆದ ಸಚಿವ, ಕೇಸರಿಯೆಂಬ ವಾನರ ನಾಯಕನ ಪತ್ನಿ ಅಚಿಜನಾದೇವಿಯ ಪುತ್ರ.
ಸಮುದ್ರಲಂಘನ, ಸೀತಾನ್ವೇಷಣ, ರಾಕ್ಷಸ ನಿಗ್ರಹ, ಲಂಕಾದಹನ,ಪರ್ವತಾರೋಹಣವೇ ಮುಂತಾದ ಇವನ ಎಲ್ಲಾ ಸಾಹಸಗಳೂ ರೋಮಾಂಚನಕರವಾದವು, ಬ್ರಹ್ಮಾದಿ ದೇವಪ್ರಧಾನರ ಅಸಾಧಾರಣ ವರಬಲದಿಂದ ಸಂಪನ್ನನಾದವನು,ಇಷ್ಟಾದರೂ ಆತ ಅತ್ಯಂತ ವಿನೀತ, ರಾಮನ ದಾಸನೆಂದು ತನ್ನನ್ನು ಕರೆದುಕೊಳ್ಳುವುದರಲ್ಲಿ ಹೆಮ್ಮೆ ಪಡುವ ದಾಸಶ್ರೇಷ್ಠ.
ಕಪಿಯ ರೂಪ ಮತ್ತು ಸ್ವಭಾವಗಳನ್ನು ಹೊಂದಿದ್ದರೂ, ಅವನು ದೇವತಾಪುತ್ರನೇ. ಇತಿಹಾಸ ರತ್ನವಾದ ಮಹಾಭಾರತವೂ ಮಾರುತಿಯ ವಿಷಯದಲ್ಲಿ ರಾಮಾಯಣವು ಹೇಳುವ ಅಭಿಪ್ರಾಯವನ್ನೇ ಸಮರ್ಥಿಸಿ ಆತನು ಭೀಮಸೇನನಿಗೂ ಅರ್ಜುನನಿಗೂ ಮಾಡಿದ ಪರಮೋಪಕಾರವನ್ನು ಉಲ್ಲೇಖಿಸುತ್ತದೆ. ಶ್ರೀಮದ್ಭಾಗವತವು ಆತನು ಪರಮಭಾಗವತ,ಕಿಂಪುರುಷ ವರ್ಷದಲ್ಲಿ ಸದಾ ಸೀತಾರಾಮನ ಉಪಾಸನೆಯಲ್ಲಿ ಮಗ್ನನಾಗಿರುವವನು ಎನ್ನುತ್ತದೆ. ಶಿವಪುರಾಣವು ಅವನ ದಿವ್ಯಮಹಿಮೆಯನ್ನು ಕೊಂಡಾಡುತ್ತಾ ಅವನು ರುದ್ರದೇವರ ಅವತಾರ ಎಂದು ಉದ್ಘೋಷಿಸುತ್ತದೆ.
ನಮ್ಮ ಸಂಪ್ರದಾಯವೂ ಕೂಡ ಮೇಲ್ಕಂಡ ಗ್ರಂಥಗಳ ಅಭಿಪ್ರಾಯವನ್ನು ಎತ್ತಿಹಿಡಿದು ಅವನನ್ನು ದೇವರನ್ನಾಗಿ ಆರಾಧಿಸುತ್ತಾ ಬಂದಿದೆ. ಹನುಮಜಯಂತಿಯನ್ನು ಅನುಷ್ಠಾನ ಮಾಡುವ ದಿವಸದ ಬಗೆಗೆ ಮೂರು ಸಂಪ್ರದಾಯಗಳನ್ನು ನೋಡುತ್ತೇವೆ. 1) ಚೈತ್ರ ಶುಕ್ಲ ಪೂರ್ಣಿಮೆಯಂದು ಆಚರಿಸುವ ಪದ್ಧತಿ 2) ಕಾರ್ತೀಕ ಕೃಷ್ಣ ಚತುರ್ದಶಿಯಂದು ಆಚರಿಸುವ ಪದ್ಧತಿ 3) ಮಾರ್ಗಶಿರ ಶುಕ್ಲ ತ್ರಯೋದಶಿಯಂದು ಆಚರಿಸುವ ಪದ್ಧತಿ, ಇವುಗಳಲ್ಲಿ ಕೊನೆಯದು ದಕ್ಷಿಣ ಭಾರತದಲ್ಲಿ ಹೆಚ್ಚಾಗಿ ಬಳಕೆಯಲ್ಲಿದೆ.
ಈ ದಿವಸ ವ್ರತವನ್ನು ಆಚರಿಸುವವರು ಉಪವಾಸ ಮಾಡಬೇಕು. ಉಪವಾಸ ಮಾಡಲು ಅಶಕ್ತರಾದವರು ದೇವರಿಗೆ ನಿವೇದನ ಮಾಡಿದ ಫಲಮೂಲ,ಕ್ಷೀರ ಮುಂತಾದ ಸಾತ್ವಿಕ ದ್ರವ್ಯಗಳನ್ನು ಸೇವಿಸಬಹುದು. ವ್ರತದ ಆಚರಣೆಯಿಲ್ಲದೆ ಪ್ರಾಣದೇವರ ಪೂಜೆಯನ್ನು ಮಾತ್ರ ಮಾಡುವವರು ಪೂಜಾಸಮಯದವರೆಗೂ ಉಪವಾಸವಿದ್ದು ಅನಂತರ ದೇವರ ಪ್ರಸಾದವನ್ನು ಸ್ವೀಕರಿಸಬೇಕು. ನೈವೇಧ್ಯಗಳಲ್ಲಿ ಪ್ರಶಸ್ತವಾದದು ಕಡಲೆ ಮತ್ತು ಬೆಲ್ಲಗಳಿಂದ ತಯಾರಾದ ಪ್ರಸಾದ. ದಾಸವರೇಣ್ಯನೂ ಭಗವಂತ ಭಗವತಿಯರಿಗೆ ಪ್ರಿಯತಮನೂ ಆಗಿರುವ ಶ್ರೀ ಹನುಮಂತನ ಜಯಂತಿಯ ಆಚರಣೆಯಿಂದ ಆದಿ-ವ್ಯಾಧಿ ಪರಿಹಾರಕ್ಕಾಗಿ ಭಗವತ್ ಪ್ರೀತಿ ಉಂಟಾಗುವುದರಿಂದ , ಶ್ರೇಯಸ್ಸನ್ನೂ, ಪ್ರೇಯಸ್ಸನ್ನೂ ಬಯಸುವ ಪ್ರತಿಯೊಬ್ಬನೂ ಆಚರಿಸಬೇಕಾದ ಮಂಗಳವ್ರತಗಳಲ್ಲಿ ಒಂದಾಗಿದೆ ಈ ಹಬ್ಬ.


Share