ಗುಡ್ ನ್ಯೂಸ್ ಸಂಸ್ಥಾಪಕ ರಾಘವೇಂದ್ರ ಜೈಲುಪಾಲಾಗಿದ್ದಾನೆ. 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಲಾಗಿದೆ. ಜಾತಿನಿಂದನೆ ಪ್ರಕರಣದಲ್ಲಿ ಯುಟ್ಯೂಬರ್ ರಾಘವೇಂದ್ರ ಅರೆಸ್ಟ್ ಆಗಿದ್ದಾನೆ.ಎಸ್ಸಿ ಗಳನ್ನ ಚಪ್ಪಲಿ ಬಿಡುವ ಜಾಗದಲ್ಲಿ ಬಿಡಬೇಕು ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದ ಆಡಿಯೋ ವೈರಲ್ ಆಗಿತ್ತು.
ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎರಡು ಅಟ್ರಾಸಿಟಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ನಂತರ ರಾಘವೇಂದ್ರ ತಲೆ ಮರೆಸಿಕೊಂಡಿದ್ದ.ರಾಘವೇಂದ್ರನ ಬಂಧನಕ್ಕೆ ಪೊಲೀಸರ ಮೇಲೆ ಒತ್ತಡ ಹೇರಲಾಗಿತ್ತು.ರಾಘವೇಂದ್ರನ ಬಂಧನಕ್ಕೆ ತಂಡ ರಚಿಸಲಾಗಿತ್ತು. ಕುವೆಂಪುನಗರ ಠಾಣೆ ಪೊಲೀಸರು ಹೊರರಾಜ್ಯದಲ್ಲಿ ಅರೆಸ್ಟ್ ಮಾಡಿದ್ದಾರೆಂಬ ಮಾಹಿತಿ ಇದೆ.ತಾನು ಮಾತನಾಡಿದ್ದು ತಪ್ಪಾಗಿದೆ ಎಂದು ತನ್ನ ಚಾನೆಲ್ ನಲ್ಲೇ ಹೇಳಿಕೆ ನೀಡಿ ಸಮುದಾಯದ ಕ್ಷಮೆ ಕೇಳುವ ಮೂಲಕ ಪ್ರಕರಣಕ್ಕೆ ರಾಘವೇಂದ್ರ ಪುರಾವೆ ನೀಡಿದ್ದ.
ರಾಘವೇಂದ್ರ ವಿರುದ್ದ 15 ಲಕ್ಷ ಬ್ಲಾಕ್ ಮೇಲ್ ಮಾಡಿದ ಆರೋಪವೂ ಇದೆ.ಇದೀಗ ಅಟ್ರಾಸಿಟಿ ಪ್ರಕರಣದಲ್ಲಿ ತಗಲಾಕಿಕೊಂಡ ಯುಟ್ಯೂಬರ್ ರಾಘವೇಂದ್ರ ಜೈಲು ಪಾಲಾಗಿದ್ದಾನೆ.
Category: ಪ್ರಮುಖ ಸುದ್ದಿಗಳು
ಅನ್ಯಭಾಷಿಕರ ದಬ್ಬಾಳಿಕೆ ವಿರುದ್ಧ ಗರ್ಜನೆ : ಕೆ. ಮಂಜುನಾಥ ದೇವ ನೇತೃತ್ವದಲ್ಲಿ ಡಿ. 7ಕ್ಕೆ ಪಥಸಂಚಲನ
ಅತ್ತಿಬೆಲೆ :- ಕರ್ನಾಟಕದಲ್ಲಿ ಕನ್ನಡಿಗರು ಎದುರಿಸುತ್ತಿರುವ ಉದ್ಯೋಗ, ಶಿಕ್ಷಣ ಮತ್ತು ವ್ಯಾಪಾರ ಕ್ಷೇತ್ರದಲ್ಲಿನ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತಲು ಹಾಗೂ ಕನ್ನಡಿಗರ ಐಕ್ಯತೆ, ಏಕತೆ, ಸಮಗ್ರತೆ ಮತ್ತು ಸಾರ್ವಭೌಮತ್ವವನ್ನು ಸಾರಲು ಕನ್ನಡ ಜಾಗೃತಿ ವೇದಿಕೆಯು ಬೃಹತ್ ‘ಸ್ವಾಭಿಮಾನಿ ಕನ್ನಡಿಗರ ಮಹಾ ಪಥಸಂಚಲನ’ಕ್ಕೆ ಕರೆ ನೀಡಿದೆ.
ಕನ್ನಡ ಜಾಗೃತಿ ವೇದಿಕೆಯ ಮಾನ್ಯ ರಾಜ್ಯಾಧ್ಯಕ್ಷರಾದ ಶ್ರೀ ಕೆ. ಮಂಜುನಾಥ ದೇವಣ್ಣನವರ ನೇತೃತ್ವದಲ್ಲಿ, ಈ ಬೃಹತ್ ಕಾರ್ಯಕ್ರಮವು ಡಿಸೆಂಬರ್ 7, 2025 ರ ಭಾನುವಾರದಂದು ಬೆಳಗ್ಗೆ 11:30 ಕ್ಕೆ ಅತ್ತಿಬೆಲೆಯಲ್ಲಿ ನಡೆಯಲಿದೆ.
ಪಥಸಂಚಲನದ ಮುಖ್ಯ ಉದ್ದೇಶಗಳು ಮತ್ತು ವೇದಿಕೆಯ ಕಳಕಳಿ
ಕನ್ನಡ ಜಾಗೃತಿ ವೇದಿಕೆಯ ಅಧ್ಯಕ್ಷರ ಹೇಳಿಕೆ
“ಕರ್ನಾಟಕ ಏಕೀಕರಣಗೊಂಡು 70 ವರ್ಷಗಳಾಗಿವೆ. ಕನ್ನಡಿಗರೇ ನಮ್ಮ ನಾಡಿನ ಭಾಷೆ, ಕಲೆ, ಸಾಹಿತ್ಯ, ಸಂಸ್ಕೃತಿಯ ಅಭಿವೃದ್ಧಿಯ ಜವಾಬ್ದಾರಿ ಹೊರಬೇಕಿದೆ. ಆದರೆ ಇಂದು, ಅನ್ಯಭಾಷಿಕರ ಹೆಚ್ಚಿದ ವಲಸೆಯಿಂದಾಗಿ ನಮ್ಮ ರಾಜ್ಯದ ಉದ್ಯೋಗ, ಶಿಕ್ಷಣ ಮತ್ತು ವ್ಯಾಪಾರ-ವ್ಯವಹಾರಗಳ ಮೇಲೆ ತೀವ್ರ ದಾಳಿ ನಡೆಯುತ್ತಿದೆ. ರಾಜ್ಯದ ಯುವಕರ ಮೇಲೆ ಹೊರ ರಾಜ್ಯದವರಿಂದ ದೌರ್ಜನ್ಯ ಮತ್ತು ದಬ್ಬಾಳಿಕೆ ಮಿತಿ ಮೀರಿದೆ.”

ಅಭಿವೃದ್ಧಿ ಮತ್ತು ಅಸ್ಮಿತೆಯ ಮೇಲಿನ ದಾಳಿ
ಸಣ್ಣ ವ್ಯಾಪಾರದಿಂದ ಹಿಡಿದು ದೊಡ್ಡ ಉದ್ಯಮಗಳವರೆಗೆ ಹೊರರಾಜ್ಯದವರು ಹಿಡಿತ ಸಾಧಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ. ಪರಿಣಾಮವಾಗಿ, ಕನ್ನಡಿಗರು ಕರ್ನಾಟಕದಲ್ಲಿಯೇ ಬಡತನ, ನಿರುದ್ಯೋಗ ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಾರೆ.
ಖಾಸಗಿ ಶಿಕ್ಷಣ ಕ್ಷೇತ್ರದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ, ನಾಡಗೀತೆಯನ್ನು ಹಾಡುತ್ತಿಲ್ಲ. ಕನ್ನಡ ಮಾತನಾಡಿದರೆ ವಿದ್ಯಾರ್ಥಿಗಳಿಗೆ ದಂಡ ವಿಧಿಸುವ ಹಂತಕ್ಕೆ ಖಾಸಗಿ ಆಡಳಿತ ಮಂಡಳಿಗಳು ತಲುಪಿವೆ.
ಖಾಸಗಿ ಕಾರ್ಖಾನೆಗಳಲ್ಲಿ ಕನ್ನಡಿಗರನ್ನು ನಿರ್ಲಕ್ಷಿಸಲಾಗಿದ್ದು, ಕನ್ನಡ ರಾಜ್ಯೋತ್ಸವವನ್ನು ಸಹ ಆಚರಿಸಲಾಗುತ್ತಿಲ್ಲ.
ಸಾರ್ವಭೌಮತ್ವ ಸಾರಲು ಕರೆ
ಇಂತಹ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸಲು, ಕನ್ನಡ, ಕನ್ನಡಿಗ, ಕರ್ನಾಟಕದ ವೈಭವದ ದಿನಗಳನ್ನು ಮರುಸ್ಥಾಪಿಸಲು, ಕನ್ನಡಿಗರ ಒಗ್ಗಟ್ಟು, ಏಕತೆ, ಐಕ್ಯತೆ ಮತ್ತು ಸಾರ್ವಭೌಮತ್ವವನ್ನು ಸಾರಲು ಈ ಬೃಹತ್ ಪಥಸಂಚಲನವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರಲ್ಲಿ ಮನವಿ
ಕನ್ನಡ ಜಾಗೃತಿ ವೇದಿಕೆಯ ರಾಜ್ಯಧ್ಯಕ್ಷ ಕೆ. ಮಂಜುನಾಥ ದೇವ ಅವರು, “ಈ ಸ್ವಾಭಿಮಾನಿ ಕನ್ನಡಿಗರ ಮಹಾ ಪಥಸಂಚಲನದಲ್ಲಿ ಕನ್ನಡದ ಅಭಿಮಾನಿಗಳು, ಯುವಕ-ಯುವತಿಯರು, ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಮಹಿಳೆಯರು, ಕಾರ್ಮಿಕರು, ಆಟೋ, ಟೆಂಪೋ, ಲಾರಿ ಚಾಲಕರು, ಕವಿಗಳು, ಸಾಹಿತಿಗಳು, ಬರಹಗಾರರು, ರೈತರು ಮತ್ತು ಎಲ್ಲಾ ಕ್ಷೇತ್ರದ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಭರ್ಜರಿಯಾಗಿ ಯಶಸ್ವಿಗೊಳಿಸಬೇಕೆಂದು” ಕಳಕಳಿಯ ಮನವಿ ಮಾಡಿದ್ದಾರೆ.
ಸಂಜೆ ಮನೋರಂಜನೆ ಹಾಗೂ ಸನ್ಮಾನ ಕಾರ್ಯಕ್ರಮ
ಪಥಸಂಚಲನದ ನಂತರ ಸಂಜೆ 7.00 ಗಂಟೆಗೆ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು, ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಹಾಗೂ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಜಲ ಜೀವನ್ ಮಿಷನ್ ಕಾಮಗಾರಿಗೆ ಹಣ ನೀಡುವಂತೆ ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ
ಬೆಂಗಳೂರು: ಜಲ ಜೀವನ್ ಮಿಷನ್(ಜೆಜೆಎಂ) ಅಡಿಯಲ್ಲಿ ಬಾಕಿ ಇರುವ ಕೇಂದ್ರದ ಪಾಲಿನ ಹಣ ಬಿಡುಗಡೆ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಕೇಂದ್ರ ಜಲಶಕ್ತಿ ಸಚಿವ ಸಿ ಆರ್ ಪಾಟೀಲ್ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕರ್ನಾಟಕವು ಈ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಪೂರೈಸಲಾಗುತ್ತಿದೆ. 2023-24, 2024-25 ಮತ್ತು 2025-26ರ ಆರ್ಥಿಕ ವರ್ಷಗಳಲ್ಲಿ ಗಮನಾರ್ಹ ಭೌತಿಕ ಮತ್ತು ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದೆ ಎಂದು ತಿಳಿಸಿದರು.
ಇಲ್ಲಿಯವರೆಗೆ, ಶೇಕಡಾ 86 ಕ್ಕಿಂತ ಹೆಚ್ಚು ಗ್ರಾಮೀಣ ಮನೆಗಳಿಗೆ ನೀರಿನ ಸಂಪರ್ಕಗಳನ್ನು ಒದಗಿಸಲಾಗಿದೆ ಮತ್ತು ಇತರ ಬಹು-ಗ್ರಾಮ ಮತ್ತು ಏಕ-ಗ್ರಾಮ ಯೋಜನೆಗಳು ಪ್ರಗತಿಯ ವಿವಿಧ ಹಂತಗಳಲ್ಲಿವೆ ಎಂದು ಖರ್ಗೆ, ಕೇಂದ್ರ ಸಚಿವರಿಗೆ ವಿವರಿಸಿದ್ದಾರೆ.
ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದಿರುವ ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಸಚಿವ ಖರ್ಗೆ ಅವರು, ರಾಜ್ಯವು ಬಜೆಟ್ ಹಂಚಿಕೆ ಮತ್ತು ಸಕಾಲಿಕ ಹಣ ಬಿಡುಗಡೆ ಮಾಡುವ ಮೂಲಕ ಈ ಯೋಜನೆಗೆ ಪೂರ್ವಭಾವಿಯಾಗಿ ಬೆಂಬಲ ನೀಡುತ್ತಿದೆ ಎಂದು ಎತ್ತಿ ತೋರಿಸಿದ್ದಾರೆ, ಇದರಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ 11,050 ಕೋಟಿ ರೂ.ಗಳ ಹಂಚಿಕೆಯೂ ಸೇರಿದೆ.
“ಒಟ್ಟು 35,698.58 ಕೋಟಿ ರೂ.ಗಳ ವೆಚ್ಚದಲ್ಲಿ, ರಾಜ್ಯದ ಪಾಲು 24,598.45 ಕೋಟಿ ರೂ.ಗಳಾಗಿದ್ದರೆ, ಕೇಂದ್ರದ ಪಾಲು ಕೇವಲ 11,786.63 ಕೋಟಿ ರೂ.ಆಗಿದೆ. ಈ ಹಣಕಾಸು ವರ್ಷದಲ್ಲಿಯೂ ಸಹ, ರಾಜ್ಯ ಸರ್ಕಾರವು 1,500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯವರೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ” ಎಂದು ಖರ್ಗೆ ಹೇಳಿದ್ದಾರೆ.
“ಈ ಯೋಜನೆಗೆ ಕೇಂದ್ರ ಅನುದಾನ ಬಿಡುಗಡೆ ಮಾಡುವುದು ಸೇರಿದಂತೆ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಭಾರತ ಸರ್ಕಾರದಿಂದ ನಿರಂತರ ಬೆಂಬಲದ ಅಗತ್ಯವಿದೆ. ಪ್ರಸ್ತುತ, ಸರಿಸುಮಾರು 1,700 ಕೋಟಿ ರೂ. ಬಿಲ್ಗಳು ಪಾವತಿ ಬಾಕಿ ಇದೆ ಮತ್ತು ರೂ. 2,600 ಕೋಟಿ ಮೊತ್ತದ ಬಿಲ್ಗಳು ಪೈಪ್ಲೈನ್ನಲ್ಲಿವೆ” ಎಂದು ಅವರು ಹೇಳಿದರು.
ಕೇಂದ್ರ ಹಣ ಬಿಡುಗಡೆ ಮಾಡಲು ಮತ್ತಷ್ಟು ವಿಳಂಬ ಮಾಡಿದರೆ ಕಾಮಗಾರಿಗಳು ನಿಧಾನವಾಗಬಹುದು ಅಥವಾ ಸ್ಥಗಿತಗೊಳಿಸಬಹುದು ಎಂದು ಸಚಿವರು ಎಚ್ಚರಿಸಿದ್ದಾರೆ.
“ಮೇಲಿನದನ್ನು ಗಮನದಲ್ಲಿಟ್ಟುಕೊಂಡು, ಕಾಮಗಾರಿಗಳನ್ನು ಸಕಾಲಿಕವಾಗಿ ಪೂರ್ಣಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ತನ್ನ ಪಾಲಿನ ಹಣವನ್ನು ತ್ವರಿತವಾಗಿ ಬಿಡುಗಡೆ ಮಾಡಬೇಕೆಂದು ವಿನಂತಿ. ಇದರಿಂದಾಗಿ ಗ್ರಾಮೀಣ ಮನೆಗಳಿಗೆ ಸುರಕ್ಷಿತ ಕುಡಿಯುವ ನೀರು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ನಿರಂತರ ಬೆಂಬಲವನ್ನು ನಾವು ಎದುರು ನೋಡುತ್ತಿದ್ದೇವೆ” ಎಂದು ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.
ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಅನುಗ್ರಹ ಕಾಲೇಜು ವಿದ್ಯಾರ್ಥಿ
ಕುಶಾಲನಗರ : ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವಿದ್ಯಾರ್ಥಿಗಳ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕುಶಾಲನಗರ ಅನುಗ್ರಹ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಹೆಚ್ ಎಸ್ ಜೀವನ್ ಜಿಮ್ನಾಸ್ಟಿಕ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ಇವನಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು ಪ್ರಾಂಶುಪಾಲರು ದೈಹಿಕ ಶಿಕ್ಷಣ ನಿರ್ದೇಶಕರು, ಉಪನ್ಯಾಸಕ ವೃಂದದವರು ಆಡಳಿತ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ ಹಾಗೂ ರಾಷ್ಟ್ರಮಟ್ಟದಲ್ಲಿಯೂ ಇದೇ ರೀತಿಯಾದ ಸಾಧನೆಯನ್ನು ಮಾಡಿ ತಂದೆ ತಾಯಿಗಳಿಗೆ ಹಾಗೂ ಕಾಲೇಜಿಗೆ ಕೀರ್ತಿ ತರಲೆಂದು ಶುಭ ಹಾರೈಸಿರುತ್ತಾರೆ.
ಹೆಚ್ ಎಸ್ ಜೀವನ್, ಶಿವಕುಮಾರ್ ಮತ್ತು ಪೂರ್ಣಿಮಾ ದಂಪತಿಯವರ ಸುಪುತ್ರ.
ಛದ್ಮವೇಷ ಸ್ಪರ್ಧೆಯಲ್ಲಿ ಅಯ್ಯಪ್ಪ ಸ್ವಾಮಿ ವೇಷದಾರಿಗೆ ಪ್ರಥಮ ಸ್ಥಾನ
ನಾಗಮ್ಮ ಟೌನ್ ಕ್ಲಸ್ಟರ್ ನಂಜನಗೂಡು ಇವರ ವತಿಯಿಂದ ಈ ವರ್ಷದಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ಪಟ್ಟಣದ ಕನಕದಾಸ ಸರಕಾರಿ ಕಿರಿಯಾ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆಯನ್ನು ನಡೆಸಲಾಯಿತು. ಈ ಪ್ರತಿಭಾ ಕಾರಂಜಿ ಹಬ್ಬದಂತೆ ಸಂಭ್ರಮವಾಗಿ ನಡೆಯಿತು ಅಭಿನಯ ಗೀತೆ, ಭಾವಗೀತೆ, ಏಕ ಪಾತ್ರ ಅಭಿನಯ, ಛದ್ಮವೇಷ ಸ್ಪರ್ಧೆ, ದೇಶಭಕ್ತಿ ಗೀತೆ, ಕಂಠಪಾಠ ಮುಂತಾದ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಸ್ಪರ್ಧೆಯಲ್ಲಿ ಛದ್ಮವೇಷ ಸ್ಪರ್ಧೆಯಾದ ಅಯ್ಯಪ್ಪ ಸ್ವಾಮಿ ವೇಷದಾರಿಯು ಪ್ರಥಮ ಸ್ಥಾನ ಹೆಚ್ಚು ಪ್ರಶಂಸೆಯನ್ನು ಪಡೆಯಿತು. ಈ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾದ ಭಾಗ್ಯ ಲಕ್ಷ್ಮಿ, ಎಲ್ಲಾ ಶಾಲೆಗಳ ಮುಖ್ಯೋಪಾಧ್ಯಾಯರು ಸಹಶಿಕ್ಷಕರು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನಗರದ 5 ಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳ ಪಟ್ಟಿ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡಿ: ಅಧಿಕಾರಿಗಳಿಗೆ GBA ಸೂಚನೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸ್ವತ್ತುಗಳನ್ನು ಪಟ್ಟಿ ಮಾಡಿ, ಆಸ್ತಿ ತೆರಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಸೂಚನೆ ನೀಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಸಂಗ್ರಹ, ಇ-ಖಾತಾ, ಬಿ ಖಾತಾಯಿಂದ ಎ-ಖಾತಾಗೆ ಪರಿವರ್ತನೆ ಮಾಡುವ ಕುರಿತು ಸೋಮವಾರ (ನವೆಂಬರ್ 24) ನಡೆದ ವರ್ಚ್ಯುವಲ್ ಸಭೆಯಲ್ಲಿ ಮಹೇಶ್ವರ್ ರಾವ್ ಅವರು ಈ ಸೂಚನೆ ನೀಡಿದ್ದಾರೆ.
ಆಯಾ ನಗರ ಪಾಲಿಕೆಗಳಲ್ಲಿ ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು, ಆಸ್ತಿ ತೆರಿಗೆ ಪರಿಷ್ಕರಣೆ ಪ್ರಕರಣಗಳನ್ನು ಪತ್ತೆ ಹಚ್ಚಿ ಅದರಿಂದ ಬಾಕಿ ಬರಬೇಕಿರುವ ಆಸ್ತಿ ತೆರಿಗೆಯನ್ನು ವಸೂಲಿ ಮಾಡುವಂತೆ ಸೂಚನೆ ನೀಡಿದರು.
ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗುಳಿದವರನ್ನು ಹುಡುಕಿ, ಅವರನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ತರುವ ಕೆಲಸ ಮಾಡಬೇಕು. ಆಯಾ ನಗರ ಪಾಲಿಕೆಗಳ ಆಯುಕ್ತರುಗಳು ಆಸ್ತಿ ತೆರಿಗೆ ಸಂಗ್ರಹಿಸುವ ಸಲುವಾಗಿ ಹೆಚ್ಚು ಗಮನ ನೀಡಬೇಕು. ಈ ಸಂಬಂಧ ಪ್ರತಿನಿತ್ಯ ಕಂದಾಯ ಅಧಿಕಾರಿಗಳ ಜೊತೆ ಪರಿಶೀಲನೆ ಸಭೆ ನಡೆಸಿ ಅಗತ್ಯ ನಿರ್ದೇಶನಗಳನ್ನು ನೀಡಿ, ಹೆಚ್ಚು ಆಸ್ತಿ ತೆರಿಗೆ ಸಂಗ್ರಹಿಸಲು ಕ್ರಮವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಶೇಷ ಆಯುಕ್ತ (ಕಂದಾಯ) ಮುನೀಶ್ ಮೌದ್ಗಿಲ್ ಅವರು, ಐದು ನಗರ ಪಾಲಿಕೆಗಳಿಗೆ 6,700 ಕೋಟಿ ರೂ. ತೆರಿಗೆ ಸಂಗ್ರಹದ ಗುರಿಯನ್ನು ನೀಡಲಾಗಿದೆ, ಅದರಲ್ಲಿ ಇಲ್ಲಿಯವರೆಗೆ 3,533 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಹೇಳಿದರು.
ಬೆಂಗಳೂರಿನ 5 ನಗರ ಪಾಲಿಕೆಗಳಲ್ಲಿ 24 ಸಾವಿರ ಆಸ್ತಿಗಳ ಆಸ್ತಿತೆರಿಗೆ ಪರಿಷ್ಕರಣೆ ಪ್ರಕರಣಗಳಿದ್ದು, ಅದರಿಂದ ಸುಮಾರು 170 ಕೋಟಿ ರೂ. ಸಂಗ್ರಹಿಬೇಕಿದೆ. ಅಲ್ಲದೆ ಸುಮಾರು 22 ಸಾವಿರ ಸುಸ್ತಿದಾರರಿಂದ 598 ಕೋಟಿ ರೂ. ಬರಬೇಕಿದ್ದು, ಅದರ ಮೇಲೆ ಹೆಚ್ಚು ಗಮನ ನೀಡಿ ಸಂಗ್ರಹಿಸಲು ಸೂಚನೆ ನೀಡಿದರು.
ಬೆಂಗಳೂರಿನ ಆಯಾ ನಗರ ಪಾಲಿಕೆಗಳಲ್ಲಿ ವಿಭಾಗವಾರು 100 ಪರಿಷ್ಕರಣೆ ಪ್ರಕರಣಗಳು, 100 ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರನ್ನು ಪಟ್ಟಿ ಮಾಡುವುದಕ್ಕೆ ಸೂಚನೆ ನೀಡಲಾಗಿದೆ. ಅಲ್ಲದೇ ಕಂದಾಯ ಪರಿವೀಕ್ಷಕರು/ಕಂದಾಯ ವಸೂಲಿಗಾರರಿಗೆ ನಿಗದಿತ ಗುರಿ ನೀಡಿ ವಾಣಿಜ್ಯ ಸ್ವತ್ತುಗಳನ್ನು ಸೀಲ್ ಮಾಡಿ ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬೇಕೆಂದು ಆಯುಕ್ತರು ಸೂಚನೆ ಕೊಟ್ಟರು.
ಐಟಿ ಸಿಟಿ ಬೆಂಗಳೂರಿನ ಮಕ್ಕಳು ಕಲಿಕೆಯಲ್ಲಿ ಹಿಂದೆ: 3ರಿಂದ 5ನೇ ಕ್ಲಾಸಿನ ಶೇ.18ರಷ್ಟು ಮಕ್ಕಳು ಮಾತ್ರ 2ನೇ ತರಗತಿ ಪಠ್ಯ ಓದಬಲ್ಲರು !
ಬೆಂಗಳೂರು: ರಾಜ್ಯದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಐಟಿ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರು ನಗರ ಮತ್ತು ರಾಜಧಾನಿಗೆ ಹತ್ತಿರದಲ್ಲಿಯೇ ಇರುವ ಬೆಂಗಳೂರು ಗ್ರಾಮೀಣ ಭಾಗದ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವು ಅತ್ಯಂತ ಕಡಿಮೆಯಾಗಿದ್ದು, ರಾಜ್ಯದ ಸರಾಸರಿಗಿಂತ ಕಡಿಮೆಯಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬಿಡುಗಡೆ ಮಾಡಿದ ಮಕ್ಕಳ ಹಕ್ಕುಗಳ ಸೂಚ್ಯಂಕ (CRI) ವರದಿ ತಿಳಿಸಿದೆ.
ಬೆಂಗಳೂರು ನಗರದಲ್ಲಿ 3 ರಿಂದ 5 ನೇ ತರಗತಿಯವರೆಗಿನ ಮಕ್ಕಳಲ್ಲಿ ಕೇವಲ ಶೇಕಡಾ 17.6 ರಷ್ಚು ಮಕ್ಕಳು ಮಾತ್ರ 2 ನೇ ತರಗತಿಯ ಪಠ್ಯಪುಸ್ತಕವನ್ನು ನಿರರ್ಗಳವಾಗಿ ಓದಬಲ್ಲರು ಎಂಬ ಆತಂಕಕಾರಿ ವಿಷಯ ವರದಿಯಿಂದ ಬಹಿರಂಗವಾಗಿದೆ. ಬೆಂಗಳೂರು ಗ್ರಾಮೀಣ ಮಕ್ಕಳಿಗೆ ಇದು ಶೇಕಡಾ 17.3 ರಷ್ಟಾಗಿದೆ. ಬೆಂಗಳೂರು ಗ್ರಾಮೀಣ ಭಾಗದ ಮಕ್ಕಳಲ್ಲಿ ಕೇವಲ 44.7% ಮತ್ತು ಬೆಂಗಳೂರು ನಗರದಲ್ಲಿ 49.7% ಮಕ್ಕಳು ಸರಳ ವ್ಯವಕಲನ ಸಮಸ್ಯೆಗಳನ್ನು ಪರಿಹರಿಸಬಲ್ಲರು. ಇದು ರಾಜ್ಯದ ಸರಾಸರಿ 34% ಕ್ಕಿಂತ ಕಡಿಮೆಯಾಗಿದೆ.
ಮಕ್ಕಳಲ್ಲಿ ಶಿಕ್ಷಣದ ಗುಣಮಟ್ಟ ತೀರಾ ಇಳಿಮುಖವಾಗಿರುವ ಜಿಲ್ಲೆಗಳಲ್ಲಿ ಶಿಕ್ಷಣ, ಮೂಲಸೌಕರ್ಯ ಮತ್ತು ಕಲಿಕಾ ವಿಧಾನಗಳ ಗುಣಮಟ್ಟವನ್ನು ಬಲಪಡಿಸುವಂತೆ ವರದಿ ಸೂಚಿಸಿದೆ. ಕೋವಿಡ್ -19 ಸಮಯದಲ್ಲಿ ಲಾಕ್ಡೌನ್ ಇದ್ದ ಕಾರಣ ಮಕ್ಕಳ ಓದುವ ಸಾಮರ್ಥ್ಯ ಮತ್ತು ಸಮಸ್ಯೆ ಪರಿಹರಿಸುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರಿದೆ. ನಾಲ್ಕು ವರ್ಷಗಳ ನಂತರ, ಮಕ್ಕಳು ತಮ್ಮ ಕಲಿಕೆಯಲ್ಲಿ ಸಾಂಕ್ರಾಮಿಕ ಪೂರ್ವದ ಮಟ್ಟವನ್ನು ತಲುಪಿಯೇ ಇಲ್ಲ ಎಂದು ವರದಿ ತಿಳಿಸಿದೆ.
Institute for Social and Economic Change ನ ಎಸ್ ಮಾದೇಶ್ವರನ್ ಮತ್ತು ಬಿ ಪಿ ವಾಣಿ ಅವರ ಅಧ್ಯಯನದಿಂದ ಈ ವರದಿ ಸಿದ್ಧಪಡಿಸಲಾಗಿದೆ. ಅವರು ವಾರ್ಷಿಕ ಶಿಕ್ಷಣ ಸ್ಥಿತಿ ವರದಿ 2024 ರ ಸಂಶೋಧನೆಗಳನ್ನು ಸಹ ಬಳಸಿಕೊಂಡಿದ್ದಾರೆ. ಗ್ರಾಮೀಣ ಕರ್ನಾಟಕದಲ್ಲಿ, 3 ನೇ ತರಗತಿಯ ಮಕ್ಕಳು 2 ನೇ ತರಗತಿಯ ಪಠ್ಯವನ್ನು ಓದಬಲ್ಲರು, ಅವರ ಶೇಕಡಾವಾರು ಪ್ರಮಾಣ ಗಂಡುಮಕ್ಕಳಲ್ಲಿ 32.4% ಮತ್ತು ಹೆಣ್ಣು ಮಕ್ಕಳಲ್ಲಿ 35.6% ಆಗಿದೆ. ಅದೇ ರೀತಿ, ವಿವಿಧ ವರ್ಗಗಳಲ್ಲಿ ಮಕ್ಕಳ ಗಣಿತದ ಸಾಮರ್ಥ್ಯವು ವರ್ಷಗಳಲ್ಲಿ ತುಂಬಾ ಕಳಪೆಯಾಗಿದೆ ಎಂದು ವರದಿ ಹೇಳಿದೆ.
ಗ್ರಾಮೀಣ ಕರ್ನಾಟಕದಲ್ಲಿ, 5 ನೇ ತರಗತಿಯ ಕೇವಲ 35.3% ವಿದ್ಯಾರ್ಥಿಗಳು ಮತ್ತು 39.9% ವಿದ್ಯಾರ್ಥಿನಿಯರು ಸರಳ ಭಾಗಾಕಾರ ಸಮಸ್ಯೆಯನ್ನು ಪರಿಹರಿಸಬಲ್ಲರು ಎಂಬುದು ಗೊತ್ತಾದರೆ ಕಲಿಕೆ ಗುಣಮಟ್ಟ ನಿರಾಶದಾಯಕವಾಗಿದೆ ಎಂದು ವರದಿ ತಿಳಿಸಿದೆ.
ಮಾನ್ಯತೆ ಪಡೆದ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ಶಿಕ್ಷಕ ಲೋಕೇಶ್ ತಾಳಿಕೋಟೆ, ಇದು ಸರ್ಕಾರಿ ಶಾಲೆಗಳಿಗೆ ಮಾತ್ರ ಸೀಮಿತವಾಗಿಲ್ಲ, ಖಾಸಗಿ ಶಾಲೆಗಳಲ್ಲಿಯೂ ಇದೇ ರೀತಿ ಇದೆ. B.Ed ಪೂರ್ಣಗೊಳಿಸಿದ ಹೆಚ್ಚಿನ ಶಿಕ್ಷಕರಿಗೆ ಬೋಧನಾ ಕೌಶಲ್ಯದ ಕೊರತೆಯಿದೆ ಎಂದು ಹೇಳಿದರು.
ಶಿಕ್ಷಕರು, ರಾಜ್ಯ ಪಠ್ಯ ಕ್ರಮದ ಸಮಸ್ಯೆಗಳೇನು?
ಖಾಸಗಿ ಶಾಲೆಯಲ್ಲಿ ಶಿಕ್ಷಕರನ್ನು ನೇಮಿಸಿಕೊಳ್ಳಲು ನಾವು ಸಂದರ್ಶನ ನಡೆಸಿದಾಗ, ಚೆನ್ನಾಗಿ ಕಲಿಸಬಲ್ಲ ನುರಿತ ಅಭ್ಯರ್ಥಿಯನ್ನು ನಾವು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. ಸರ್ಕಾರಿ ಶಾಲಾ ಶಿಕ್ಷಕರಿಗೆ ಕೆಲವೇ ಕೆಲವು ಶಿಕ್ಷಕರ ತರಬೇತಿ ಕಾರ್ಯಕ್ರಮಗಳನ್ನು ಮಾತ್ರ ಆಯೋಜಿಸಲಾಗುತ್ತದೆ. ಮಕ್ಕಳು ಓದಲು, ಬರೆಯಲು ಮತ್ತು ಸಮಸ್ಯೆ ಪರಿಹರಿಸಲು ಸಮರ್ಥರಾಗುವಂತೆ ಮಾಡಲು ಮಕ್ಕಳು ಕಲಿಯುವುದನ್ನು ಬಿಟ್ಟು ಶಿಕ್ಷಕರು ತಾವೂ ಕಲಿಯಬೇಕು ಎಂದರು.
ರಾಜ್ಯ ಮಂಡಳಿಯ ಪಠ್ಯಪುಸ್ತಕಗಳು 20 ವರ್ಷಗಳಿಂದ ಒಂದೇ ರೀತಿ ಉಳಿದಿವೆ ಎಂದು ಹೇಳಿದರು. ಪಠ್ಯಪುಸ್ತಕಗಳನ್ನು ಪರಿಷ್ಕರಿಸಲು ರಚಿಸಲಾದ ಕೊನೆಯ ಸಮಿತಿ ಬರಗೂರು ರಾಮಚಂದ್ರಪ್ಪ ಸಮಿತಿ. ಹೆಚ್ಚಿನ ವಿದ್ಯಾರ್ಥಿಗಳು ರಾಜ್ಯ ಮಂಡಳಿಯ ಪಠ್ಯಪುಸ್ತಕಗಳಲ್ಲಿ ಒಂದೇ ಪಠ್ಯಕ್ರಮವನ್ನು ಓದುವ ಬದಲು ಗುಣಮಟ್ಟದ ಶಿಕ್ಷಣವನ್ನು ಪಡೆಯಲು ಮತ್ತು AI ಪ್ರಪಂಚಕ್ಕೆ ಸಂಬಂಧಿಸಿದ ಪಾಠಗಳನ್ನು ಕಲಿಯಲು CBSE ಮತ್ತು ICSE ನ್ನು ಸಿಲೆಬಸ್ ಗೆ ಹೋಗುತ್ತಿದ್ದಾರೆ ಎಂದರು.
ಹೆಡ್ ಹೆಲ್ಡ್ ಹೈ ಫೌಂಡೇಶನ್ನ ಸಹ-ಸಂಸ್ಥಾಪಕ ಮದನ್ ಪದಕಿ, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ನೀತಿಗಳಲ್ಲಿ ಸೇರಿಸಲಾದ ಶಾಲೆಗಳಲ್ಲಿ ಹೊಸ ವಿಧಾನಗಳನ್ನು ಕಲಿಸಲು ಶಿಕ್ಷಕರು ತರಗತಿ ಕೊಠಡಿಗಳಲ್ಲಿ ಸಮಯ ಕಳೆಯುವಾಗ ಅವರಿಗೆ ಪ್ರೋತ್ಸಾಹ ಧನ ನೀಡುವುದು ಅವಶ್ಯಕ ಎಂದು ಅಭಿಪ್ರಾಯಪಟ್ಟರು.
ಏಕೆಂದರೆ ಅವರ ಕೆಲಸದ ಸಮಯ ಹೆಚ್ಚಾಗುತ್ತದೆ. ನೀವು ಅವರನ್ನು ಪ್ರೇರೇಪಿಸುವಂತೆ ಮಾಡಬೇಕು. ಇದಲ್ಲದೆ, ಪೋಷಕರು ಮಗುವಿನ ಕಲಿಕೆಯ ಫಲಿತಾಂಶಗಳತ್ತ ಗಮನ ಹರಿಸಬೇಕು, ಮಕ್ಕಳು ಶಾಲೆಗಿಂತ ಕುಟುಂಬದವರ ಜೊತೆ ಸಮಯವನ್ನು ಕಳೆಯುವುದು ಹೆಚ್ಚು. ಶಿಕ್ಷಣದ ಪರಿಸರ ವ್ಯವಸ್ಥೆಯಲ್ಲಿ ಅವರನ್ನು ಸಮಾನ ಪಾತ್ರಧಾರಿಗಳಾಗಿ ನೋಡಬೇಕು. ಪ್ರತಿಯೊಂದಕ್ಕೂ ಶಿಕ್ಷಕರು ಮತ್ತು ಶಾಲೆಗಳ ಮೇಲೆ ಜವಾಬ್ದಾರಿಯನ್ನು ಹೊರಿಸಲು ಸಾಧ್ಯವಿಲ್ಲ ಎಂದರು.
ದೆಹಲಿ ಸ್ಪೋಟ ಹಿನ್ನಲೆ ಮೈಸೂರಿನಲ್ಲಿ ಹೈ ಅಲರ್ಟ್…
ಮೈಸೂರು ದೆಹಲಿಯಲ್ಲಿ ನಡೆದ ಸ್ಪೋಟ ಹಿನ್ನಲೆ ಮೈಸೂರು ನಗರ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಡಿಜಿ ಮತ್ತು ಐಜಿ ರವರ ಸೂಚನೆ ಮೇರೆಗೆ ಮೈಸೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ರಾತ್ರಿ
ಮೈಸೂರು ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ನಗರ ವಿವಿಧ ಲಾಡ್ಜ್ಗಳಲ್ಲಿ ತಪಾಸಣೆ ನಡೆಸಲಾಗಿದೆ.

ಡಿಸಿಪಿಗಳು ಎಸಿಪಿಗಳು, ಇನ್ಸಪೆಕ್ಟರ್ ಸಬ್ ಇನ್ಸಪೆಕ್ಟರ್ಗಳು ಪೊಲೀಸ್ ಸಿಬ್ಬಂದಿ ತಪಾಸಣೆಯಲ್ಲಿ ಭಾಗಿಯಾಗಿ ಸಂಪೂರ್ಣ ಪರಿಶೀಲನೆ ನಡೆಸಿದ್ದಾರೆ. ರೈಲು ನಿಲ್ದಾಣದ ಫ್ಲ್ಯಾಟ್ಫಾರಂ ಸೇರಿ ಹಲವು ಕಡೆ ತಪಾಸಣೆ ಮಾಡಲಾಗಿದೆ. ಪ್ರಯಾಣಿಕರ ಲಗೇಜು ಒಳಗೊಂಡತೆ ಸಂಪೂರ್ಣ ತಪಾಸಣೆ ಮಾಡಲಾಗಿದೆ. ಇನ್ನು ನಾಳೆ ತಪಾಸಣೆ ಮತ್ತಷ್ಟು ಚುರುಕುಗೊಳಿಸಲಾಗುವುದು. ಮೈಸೂರು ಅರಮನೆ ಸೇರಿದಂತೆ ಪ್ರವಾಸಿತಾಣಗಳು, ಮಾಲ್, ಪಾರ್ಕಿಂಗ್ ಸ್ಥಳಗಳು, ಹೋಟೆಲ್, ಲಾಡ್ಜ್ಗಳು, ದೇವಸ್ಥಾನಗಳು ಸೇರಿದಂತೆ ಎಲ್ಲಾ ಕಡೆ ಸಂಪೂರ್ಣ ಪರಿಶೀಲನೆ ನಡೆಸಲಾಗುತ್ತದೆ.
ಮೈಸೂರು ನಗರದ ಶಾಂತಿ, ಸುರಕ್ಷತೆ ನಮ್ಮ ಆದ್ಯತೆಯಾಗಿದ್ದು ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸರಿಗೆ ಸಹಕಾರ ನೀಡುವಂತೆ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಯಾವುದಾದರೂ ಅನುಮಾನಾಸ್ಪದ ವಸ್ತುಗಳು, ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ನೀಡಿ. ಈ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಲು ಸಹಕರಿಸುವಂತೆ ಕೋರಿದ್ದಾರೆ…
ಗ್ರಾಮ ಠಾಣಾ ಜಾಗ ಗುರುತಿಸಿ ಉಳಿಸಿ…ತಹಸೀಲ್ದಾರ್ ಗೆ ಇಓ ಪತ್ರ .5 ತಿಂಗಳಾದ್ರೂ ನೋ ಪ್ರೋಗ್ರೆಸ್…ಇಓ ಪತ್ರಕ್ಕೆ ಡೋಂಟ್ ಕೇರ್…
ಹುಣಸೂರುಗ್ರಾಮ ಠಾಣಾ ಸ್ಥಳಗಳನ್ನ ಗುರುತಿಸಿ ಹದ್ದುಬಸ್ತು ಮಾಡಿ ಸಾರ್ವಜನಿಕರಿಗೆ ನಿವೇಶನಗಳನ್ನಾಗಿ ನಿರ್ಮಿಸಿ ಕೊಡುವ ವಿಚಾರದಲ್ಲಿ ಹುಣಸೂರು ತಾಲೂಕು ಇಓ ಆಸಕ್ತಿ ತೋರಿದ್ದಾರೆ.ಈ ಸಂಬಂಧ ಹುಣಸೂರು ತಾಲೂಕು ವ್ಯಾಪ್ತಿಯ ಗ್ರಾಮ ಠಾಣಾ ಜಾಗಗಳನ್ನ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಇಓ ರವರು ತಹಸೀಲ್ದಾರ್ ಗೆ ಜೂನ್12,2025 ರಂದು ಪತ್ರ ಬರೆದಿದ್ದಾರೆ.ಪತ್ರ ಬರೆದು 5 ತಿಂಗಳು ಕಳೆದರೂ ಇದುವರೆಗೆ ತಹಸೀಲ್ದಾರ್ ಯಾವುದೇ ಕ್ರಮ ಕೈಗೊಂಡಿಲ್ಲ.ಇಓ ಪತ್ರಕ್ಕೆ ತಹಸೀಲ್ದಾರ್ ಡೋಂಟ್ ಕೇರ್ ಎಂದು ನಿರ್ಲಕ್ಷಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಮೇಲ್ನೋಟಕ್ಕೆ ಹುಣಸೂರು ತಾಲೂಕಿನ 60 ಗ್ರಾಮ ಠಾಣಾ ಜಾಗಗಳು ಖಾಸಗಿ ವ್ಯಕ್ತಿಗಳ ಕಪಿಮುಷ್ಠಿಯಲ್ಲಿದೆ.ಇವುಗಳನ್ನ ಬಿಡಿಸಿಕೊಂಡು ಬಡವರಿಗಾಗಿ ಬಡಾವಣೆ ರಚಿಸಿ ನಿವೇಶನಗಳನ್ನ ವಿತರಿಸಿ ಮನೆ ಕಟ್ಟಿಕೊಳ್ಳಲು ಅನುಕೂಲ ಮಾಡಿಕೊಡುವಂತೆ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಮನವಿ ಮಾಡಲಾಗಿತ್ತು.ಈ ಹಿನ್ನಲೆ ಇಓ ರವರು ಅಂತಹ ಜಾಗಗಳನ್ನ ಗುರಿತಿಸಿ ಹದ್ದುಬಸ್ತು ಮಾಡಿ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಗೆ ಪತ್ರ ಬರೆದಿದ್ದಾರೆ.5 ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ತಹಸೀಲ್ದಾರ್ ವರ್ತನೆ ಭಾರಿ ಅನುಮಾನಕ್ಕೆ ಕಾರಣವಾಗಿದೆ.ಇನ್ನಾದ್ರೂ ತಹಸೀಲ್ದಾರ್ ರವರು ಆಸಕ್ತಿ ವಹಿಸಿ ಬಡವರ ಪರ ಬ್ಯಾಟಿಂಗ್ ಆಡುವರೇ…?

