ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ!

Share

ಅನಾರೋಗ್ಯದಿಂದ ಬಳಲುತ್ತಿದ್ದ  ಕನ್ನಡ ಚಿತ್ರರಂಗದ ಹಿರಿಯ ನಟಿ ಜಯಂತಿ(76) ನಿಧನರಾಗಿದ್ದಾರೆ.

ಕಳೆದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಎರಡು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಭಾನುವಾರ ರಾತ್ರಿ ಈ ಸಮಸ್ಯೆ ಉಲ್ಭಣಗೊಂಡು ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್‍ನಲ್ಲಿ ಬೆಳೆದರು.

1968ರಲ್ಲಿ ‘ಜೇನುಗೂಡು’ ಚಿತ್ರದ ಮೂಲಕ ಸಿನಿ ಕ್ಷೇತ್ರಕ್ಕೆ ಪ್ರವೇಶಿಸಿದ್ದ ನಟಿ ಜಯಂತಿ ಕನ್ನಡದ ಒಟ್ಟು 190 ಸಿನಿಮಾ ಸೇರಿ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿನಯ ಶಾರದೆ ಎನಿಸಿಕೊಂಡಿದ್ದರು. ಇವರು ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಹೀಗೆ ಆರು ಭಾಷೆ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತಿ ಹೊಂದಿದ್ದರು.

ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದ ನಟಿ ಜಯಂತಿ, ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು.

ಜಯಂತಿ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಅಭಿನಯ ಶಾರದೆ ಕಳೆದುಕೊಂಡ ಸ್ಯಾಂಡಲ್‌ವುಡ್‌ನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


Share

ಶೌಚಾಲಯ ನಿರ್ಮಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟ

Share

 

ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಸಗರ ಗ್ರಾಮದ ಹೆಣ್ಣು ಮಕ್ಕಳು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮಹಿಳೆಯರಿಗೆ ಶೌಚಾಲಯ ಸುಮಾರು ವರ್ಷಗಳಿಂದ ಸಮಸ್ಯೆ ಇದ್ದು ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಶಹಪುರ್ ತಶೀಲ್ದಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟ ಮಾಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಮಹೇಶಗೌಡ ಸುಬೇದಾರ್ ಕಾರ್ಯಧ್ಯಕ್ಷರು ಅನೀಫ್ ಹತ್ತಿಕುಣಿ ಚಂದಪ್ಪ ಗಾಯಿ ಶರಣು ಉಳ್ಳಿ ಕಲ್ಲಪ್ಪ ಸತ್ಯಮಪೇಟ ಸಗರ್ ಗ್ರಾಮದ ಮಹಿಳೆಯರು ಭಾಗವಹಿಸಿ ಧರಣಿ. ವರದಿ : ಶಂಕರ ಗೌಡ ಯಾದಗಿರಿ


Share

Investor Success Story: 25 ವರ್ಷಕ್ಕೇ ಕೋಟ್ಯಧಿಪತಿಯಾದ ಈ ಯುವಕನ ಬಳಿ ಸ್ವಂತ ಕಾರಿಲ್ಲ; ಅರುಣ್ ಹೇಳಿದ ಹೂಡಿಕೆ ಸೂತ್ರ

Share

“ಇಂಗ್ಲಿಷ್ ಹಾಗೂ ಗಣಿತದ ಮೇಲೆ ಗಮನ ಕೊಡು. ಯಾವುದೇ ಕಾರಣಕ್ಕೂ ಷೇರು ಮಾರ್ಕೆಟ್​ ಕಡೆ ತಲೆ ಕೂಡ ಹಾಕಬೇಡ,” – ಈ ಎರಡು ಸಲಹೆಗಳನ್ನು ಬಂಗಾಲಿಗಳು ತಮಗಿಂತ ಕಿರಿಯರಿಗೆ ನೀಡುತ್ತಾರೆ. ಮಕ್ಕಳು ಶಾಲೆಯಲ್ಲಿ ಇರುವಾಗಲೇ ಅವರನ್ನು ಹೀಗೆ ಬೆಳೆಸಲಾಗುತ್ತದೆ. ಈ ಕಾರಣಕ್ಕೆ ಷೇರು ಮಾರ್ಕೆಟ್​ ಅಂದರೆ ಬಂಗಾಲಿಗಳಲ್ಲಿ ಒಂದು ಭಯ ಹಾಗೇ ಉಳಿದುಹೋಗುತ್ತದೆ. ಆದರೆ 32 ವರ್ಷದ ಅರುಣ್ ಮುಖರ್ಜಿ ಮಾತ್ರ ಬೇರೆಯದೇ ದಾರಿಯನ್ನು ಆರಿಸಿಕೊಂಡು, ಇವತ್ತಿಗೆ ಯಶಸ್ವಿಯಾಗಿ ಕಣ್ಣೆದುರು ನಿಂತಿದ್ದಾರೆ. ತಮ್ಮ ಮಗನಿಗೆ ಒಳ್ಳೆ ಇಂಗ್ಲಿಷ್ ಕಲಿಸಬೇಕು ಅನ್ನೋ ಕಾರಣಕ್ಕೆ ಅರುಣ್ ಪೋಷಕರು ಪ್ರತಿ ನಿತ್ಯ ಇಂಗ್ಲಿಷ್ ಪತ್ರಿಕೆ ಓದಿಸುತ್ತಿದ್ದರು. ಈ ಮೂಲಕವೇ ಷೇರು ಮಾರುಕಟ್ಟೆಗೆ ಪರಿಚಯವಾದರು. ತಮಗೆ ಎಲ್ಲರೂ ಹೇಳುತ್ತಾ ಬಂದಿದ್ದ ಸಲಹೆಗಳನ್ನೆಲ್ಲ ಮೀರಿ ಆ ಕಡೆಗೆ ಆಕರ್ಷಿತರಾದರು.

“ಬೇರೆಲ್ಲರಂತೆ ನನ್ನ ತಂದೆ ಕೂಡ ತಮ್ಮ ಹಿರಿಯ ಮಗನಿಗೆ ಅಸ್ಖಲಿತ ಇಂಗ್ಲಿಷ್ ಬರುವಂತೆಯೇ ಯೋಚಿಸಿದವರು. ಮನೆಗೆ ತರಿಸುತ್ತಿದ್ದ ಬಿಜಿನೆಸ್ ನ್ಯೂಸ್ ಪೇಪರ್​ಗಳನ್ನು ಓದುವಂತೆ ಹೇಳುತ್ತಿದ್ದರು. ಒಂದು ದಿನ ದಿನಪತ್ರಿಕೆ ಓದುತ್ತಾ ಇದ್ದೆ. Excel sheetನಂಥದ್ದನ್ನು ನೋಡುವಾಗ ಅಲ್ಲಿ ನಿಂತುಬಿಟ್ಟೆ. ಅದೇನು ಅಂತ ಕೇಳಿದಾಗ, ಸ್ಟಾಕ್ ಬೆಲೆಗಳು ಅಂತ ಹೇಳಲಾಯಿತು,” ಎನ್ನುವುದನ್ನು ನೆನಪಿಸಿಕೊಳ್ಳುತ್ತಾರೆ ಮುಖರ್ಜಿ. ಆದರೆ ಅರುಣ್ ಅವರ ತಂದೆ ಸಲಹೆ ಏನಾಗಿತ್ತೆಂದರೆ, ಷೇರು ಮಾರ್ಕೆಟ್​ನಲ್ಲಿ ಶೇ 90ರಷ್ಟು ಹೂಡಿಕೆದಾರರು ಹಣ ಕಳೆದುಕೊಳ್ಳುತ್ತಾರೆ ಎನ್ನುವುದಾಗಿತ್ತು. “ನನ್ನಲ್ಲೊಂದು ಕ್ರಾಂತಿಕಾರಿ ಆಲೋಚನೆ ಇತ್ತು. ಬಹುತೇಕರು ದೊಡ್ಡ ಸಮಯವನ್ನು ಎಲ್ಲಿ ಕಳೆದುಕೊಳ್ಳುತ್ತಾರೋ ಅಲ್ಲಿ ಗೆಲುವು ಸಾಧಿಸಬೇಕು ಎಂಬುದೇ ನನ್ನ ಪಾಲಿಗೆ ಸ್ಫೂರ್ತಿಯಾಯಿತು,” ಎನ್ನುತ್ತಾರೆ ಅರುಣ್ ಮುಖರ್ಜಿ.

16ನೇ ವಯಸ್ಸಿಗೇ ಸಿದ್ಧತೆ
ಇತರ ಗೆಳೆಯರು ಲವ್ ಅಂದುಕೊಂಡು ಹುಡುಗಿಯರ ಕಡೆಗೊಂದು ಬೆರಗಿನ ನೋಟ ಬೀರುತ್ತಾ ಇರುವಾಗಲೇ, ಅಂದರೆ 16 ವರ್ಷಗಳ ಹಿಂದೆ ಅರುಣ್ ಮುಖರ್ಜಿ ಮಾತ್ರ ಪ್ರತಿ ನಿತ್ಯ ವಾಣಿಜ್ಯ ನಿಯತಕಾಲಿಕೆಗಳನ್ನು ಓದುತ್ತಿದ್ದರು ಹಾಗೂ ಸ್ಟಾಕ್, ಷೇರು ಮಾರುಕಟ್ಟೆ ಹೇಗೆ ಕೆಲಸ ಮಾಡುತ್ತದೆ ಎಂದು ಕಲಿಯಲು ಆರಂಭಿಸಿದ್ದರು. ಈ ಪರಿಶ್ರಮದಿಂದಲೇ ಅರುಣ್​ಗೆ ಕ್ಯಾಪ್ಲಿನ್ ಪಾಯಿಂಟ್, ಅವಂತಿ ಫೀಡ್ಸ್, ಸಿಂಫೋನಿ, ಸೆರಾ ಸ್ಯಾನಿಟಿವೇರ್, ಮಿಂಡಾ ಇಂಡಸ್ಟ್ರೀಸ್ ಹಾಗೂ ಹೆಸ್ಟರ್ ಬಯೋದಂಥ ಸ್ಟಾಕ್​ಗಳನ್ನು ಗುರುತಿಸಲು ನೆರವಾಯಿತು ಮತ್ತು ಅರುಣ್​ಗೆ 25 ವರ್ಷದೊಳಗೆ ಕೋಟ್ಯಧಿಪತಿ ಆಗಲು ಕಾರಣವಾಯಿತು. ಸದ್ಯಕ್ಕೆ ಅವರು ಲಿಸ್ಟೆಡ್ ಕಂಪೆನಿಗಳು ಮತ್ತು ಸ್ಟಾರ್ಟ್​ ಅಪ್​ಗಳ ಕಂಪೆನಿಗಳಲ್ಲಿ ಹೂಡಿಕೆ ಮಾಡುತ್ತಾರೆ. ದೇಶದಾದ್ಯಂತ ಹಾಗೂ ಹೊರದೇಶಗಳಲ್ಲೂ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸುತ್ತಾರೆ.

ಹೂಡಿಕೆ ಮಾಡುವಾಗ ಅನುಸರಿಸುವ ಪದ್ಧತಿ ಏನು?
ನಾನು ವಿಶ್ವದಾದ್ಯಂತ ಪ್ರಯಾಣ ಮಾಡ್ತೀನಿ, ಬುದ್ಧಿವಂತ ಜನರನ್ನು ಭೇಟಿ ಆಗ್ತೀನಿ. ಅವರೊಂದಿಗೆ ಚರ್ಚೆ ಮಾಡ್ತಿರ್ತೀನಿ. ನನ್ನ ಸಂಶೋಧನೆಯಲ್ಲಿ ಸೂಕ್ತ ಎಂದು ಕಂಡುಬರುತ್ತದೋ ಅದನ್ನು ಸೇರ್ಪಡೆ ಮಾಡುತ್ತೇನೆ. ಈ ರೀತಿಯ ವಿಚಾರ ವಿನಿಮಯ ನನ್ನ ಪಾಲಿಗೆ ಅದ್ಭುತಗಳನ್ನು ಮಾಡಿವೆ ಎನ್ನುತ್ತಾರೆ ಮುಖರ್ಜಿ. ಆದರೆ ಕೆಲವು ಮ್ಯಾನೇಜ್​ಮೆಂಟ್​ನವರು ಉತ್ಪ್ರೇಕ್ಷೆ ಮಾಡಿ ಹೇಳುವಂಥ ವಿಚಾರಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಸಹ ಸೇರಿಸುತ್ತಾರೆ.

ಮುಖರ್ಜಿ ತಮ್ಮದೇ ಸ್ವಂತದ್ದನ್ನು ಮಾಡಲು ಬಯಸುತ್ತಾರೆ. ಹೂಡಿಕೆದಾರರ ಮಧ್ಯೆ ಅರುಣ್​ಗೆ ಭಾರೀ ಫಾಲೋಯಿಂಗ್ ಇದೆ. ಟ್ವಿಟ್ಟರ್​ನಲ್ಲಿ 80 ಸಾವಿರಕ್ಕೂ ಹೆಚ್ಚು ಫಾಲೋವರ್ ಇದ್ದಾರೆ. ಈಗ ಬಂಗಾಲಿಗಳು, ಯಾರು ತಮ್ಮ ಕುಟುಂಬದವರಿಂದ ಉತ್ತೇಜನ ಸಿಕ್ಕಿರಲ್ಲವೋ ಅಂಥವರು ತಮ್ಮ ಪೋರ್ಟ್​ಫೋಲಿಯೋ ವಿಚಾರದಲ್ಲಿ ಗೊಂದಲಗಳಿದ್ದಲ್ಲಿ ಅರುಣ್ ಅವರ ಸಲಹೆ ಕೇಳುತ್ತಾರೆ.

ಅಮದಹಾಗೆ, ವಯಸ್ಸು ಮುಖರ್ಜಿ ಅವರ ಪರವಾಗಿದೆ. ಆದ್ದರಿಂದ ರಿಸ್ಕ್ ತೆಗೆದುಕೊಳ್ಳುವುದಕ್ಕೆ ಹೆದರುವುದಿಲ್ಲ. ಉತ್ತಮ ತಂಡ ಹಾಗೂ ದೃಷ್ಟಿಕೋನ ಇರುವ ತಂಡ ಇರುವ ಸಂಸ್ಥೆಗಳ ಹುಡುಕಾಟ ನಡೆಸುತ್ತಾರೆ. ಸ್ಟಾರ್ಟ್ ಅಪ್ಸ್ ಮತ್ತು ಅನ್​ಲಿಸ್ಟೆಡ್ ಕಂಪೆನಿಗಳಲ್ಲಿ ಸಿಕ್ಕಾಪಟ್ಟೆ ಹೂಡಿಕೆ ಮಾಡುತ್ತಾರೆ. ಲಿಸ್ಟೆಡ್ ಕಂಪೆನಿಗಳಿಗಿಂತ ಹೆಚ್ಚಾಗಿ ಅನ್​ಲಿಸ್ಟೆಡ್​ನಲ್ಲೇ ಮುಖರ್ಜಿ ಅವರ ಹೂಡಿಕೆ ಹೆಚ್ಚಾಗಿದೆ. ಇನ್ನು ಅರುಣ್ ಹೇಳುವಂತೆ, ಆರಂಭದ ತಪ್ಪುಗಳಿಂದ ಪಾಠ ಕಲಿಯುತ್ತೇವೆ. ಅದನ್ನು ಪುನರಾವರ್ತನೆ ಮಾಡಬಹುದು, ಅಷ್ಟೇ ಎನ್ನುತ್ತಾರೆ. ಬುದ್ಧಿವಂತ ಹೂಡಿಕೆದಾರ ಯಾವಾಗಲೂ ಏರಿಕೆ ಆಗುವ ಆಸ್ತಿಗಳ ಮೇಲೆ ಹೂಡಿಕೆ ಮಾಡುತ್ತಾನೆ ಹೊರತು ಇಳಿಕೆ ಆಗುವುದರ ಮೇಲಲ್ಲ ಎನ್ನುತ್ತಾರೆ.

ಈಗಲೂ ಅರುಣ್ ಬಳಿ ಸ್ವಂತ ಕಾರಿಲ್ಲ
ಆ ಕಾರಣಕ್ಕೆ ಇಂದಿಗೂ ನನ್ನ ಬಳಿ ಸ್ವಂತ ಕಾರಿಲ್ಲ. ಮನೆ ಎಂಬುದು ಅಗತ್ಯ. ನನ್ನ ಬಳಿ ಹೆಚ್ಚು ಮನೆಗಳಿವೆ. ಹೊಸ ಮನೆ ನನಗೆ ಹೆಚ್ಚು ಸ್ಥಳಾವಕಾಶ ಹಾಗೂ ವಿಶ್ರಾಂತಿ ನೀಡುತ್ತದೆ. ಆದ್ದರಿಂದ ನನ್ನ ಗುರಿಯು ಬೆಲೆ ಹೆಚ್ಚಳ ಆಗುವ ಆಸ್ತಿಗಳ ಕಡೆಗೆ ಇರುತ್ತದೆ ಎನ್ನುತ್ತಾರೆ.

ಆರಂಭದ ಹೂಡಿಕೆದಾರರಿಗೆ ಸಲಹೆ ಏನು?
ಈಗಿನ ತಲೆಮಾರು ನೋಟು ನಿಷೇಧದ ನಂತರ ಬ್ಯಾಂಕಿನ ಎಫ್​ಡಿಯಲ್ಲಿ ಹಣ ಹಾಕುತ್ತಿಲ್ಲ. ಒಂದು ಕಂಪ್ಯೂಟರ್ ಇಟ್ಟುಕೊಂಡು ಮಾಡುವ ಬಿಜಿನೆಸ್​ ಕೂಡ ಆಕರ್ಷಕವಾಗಿದೆ. ಆ ಲಕ್ಷಣಗಳು ಕಾಣುತ್ತಿವೆ. ಯಾಕೆ ನಿವೃತ್ತಿ ಆಗುವುಕ್ಕೆ 60ರ ತನಕ ಕಾಯಬೇಕು, 40ನೇ ವಯಸ್ಸಿನಲ್ಲೇ ಆಗಬಹುದಲ್ಲಾ? ಶ್ರೀಮಂತರಾಗಿ ನಿವೃತ್ತರಾಗಲು ಈಕ್ಷಿಟಿ ಷೇರು ಸರಿಯಾದ ದಾರಿ, ಬೇಗ ರಿಟೈರ್ ಆಗಿ ಎನ್ನುವುದು ಅರುಣ್ ಮಾತು.

ಈಕ್ವಿಟಿಯೇ ಊಟ, ನಿದ್ರೆ ಎಲ್ಲವೂ
“ದೀರ್ಘಾವಧಿಯ ಬಂಡವಾಳ ಲಾಭದ ಪ್ರಮಾಣ ಕೇವಲ ಶೇ 10ರಷ್ಟು ಮಾತ್ರ. 26 ಪರ್ಸೆಂಟ್​ನ ಕಾಂಪೌಂಡ್​ ಬೆಳವಣಿಗೆಯು ನಿಮ್ಮ ಸಂಪತ್ತನ್ನು 10 ವರ್ಷಗಳಲ್ಲಿ 10 ಪಟ್ಟು ಹೆಚ್ಚಿಸುತ್ತದೆ ಮತ್ತು ಇದು ಹಣದುಬ್ಬರವನ್ನು ಮೀರಿ ಬೆಳೆದಿರುತ್ತದೆ. ನೀವು ಸರಿಯಾಗಿ ಹೂಡಿಕೆ ಮಾಡಲು ಸಾಧ್ಯವಾದರೆ 30 ವರ್ಷಗಳಲ್ಲಿ 1000 ಪಟ್ಟು ಗಳಿಸುವುದೂ ದೊಡ್ಡ ವಿಷಯವಲ್ಲ. ವಿಶ್ವದ ಯಾವುದೇ ಆಸ್ತಿ ಕ್ಲಾಸ್ ಆ ಪ್ರಮಾಣದ ಸಂಪತ್ತನ್ನು ಸೃಷ್ಟಿಸಲು ಸಾಧ್ಯವಿಲ್ಲ. ನೀವು ಮಾಸಿಕ ಸ್ಟಾಕ್ ಎಸ್‌ಐಪಿ ಮಾಡುತ್ತೀರಿ ಅಥವಾ ಲಾಭಾಂಶವನ್ನು ಮತ್ತೆ ಹೂಡಿಕೆ ಮಾಡುತ್ತೀರಿ ಅಂತಾದರೆ ಇದೆಲ್ಲವೂ ನಿಮ್ಮ ಪೋರ್ಟ್​ ಫೋಲಿಯೊವನ್ನು ಅಂತಹ ಮಟ್ಟಕ್ಕೆ ಕೊಂಡೊಯ್ಯುತ್ತದೆ. ಅದು ನೀವು ಸಹ ಅರಿಯಬಹುದು,” ಎಂದು ಅರುನ್ ಹೇಳುತ್ತಾರೆ.

ಅಂದಹಾಗೆ, ಈ ಲೆಕ್ಕಾಚಾರಗಳನ್ನೆಲ್ಲ ಬಾಲ್ಯದ ಗಣಿತಶಾಸ್ತ್ರದ ಪಾಠಗಳಲ್ಲಿ ಕಲಿತಿರುತ್ತೀರಿ ಎಂದು ಹೇಳುವುದನ್ನು ಅವರು ಮರೆಯುವುದಿಲ್ಲ.


Share

ಬೆಂಗಳೂರಿನಲ್ಲಿ ಆಟೋ ರಾಮಣ್ಣ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ

Share

ಕನ್ನಡ ಚಿತ್ರರಂಗದ ಅಪ್ರತಿಮ ನಾಯಕ ನಟರಾದ ಕರಾಟೆ ಕಿಂಗ್ ಶಂಕರ್ ನಾಗ್ ಅವರ ಅಭಿಮಾನಿ ಆಟೋ ರಾಮಣ್ಣನವರ ಆಟೋ ರಾಮಣ್ಣ ಚಿತ್ರದ ಧ್ವನಿ ಸುರುಳಿ ಕಾರ್ಯಕ್ರಮ ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್ ರೇಣುಕಾಂಬ ಥಿಯೇಟರ್ ನಲ್ಲಿ ಚಿತ್ರ ರಸಿಕರ ನಡುವೆ ಸರಳವಾಗಿ ನಡೆಯಿತು. ಚಿಕ್ಕವಯಸ್ಸಿನಿಂದಲೂ ಮೆಟ್ರೋ ರಾಜ ಶಂಕರ್ ನಾಗ್ ರವರ ಅಭಿಮಾನಿಯಾಗಿದ್ದ ಈ ಆಟೋ ರಾಮಣ್ಣನವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುವ ಮುನ್ನವೇ, ತನ್ನ ಹುಟ್ಟೂರಿನಲ್ಲಿ ಹಸು ಮೇಯಿಸಿ, ಪಟ್ಟಣದಲ್ಲಿ ಹೋಟೆಲ್ ಕೆಲಸಕ್ಕೆ ಸೇರಿ ಕ್ಲೀನರ್ ಆಗಿ, ನಂತರದ ವರ್ಷಗಳಲ್ಲಿ ಆಟೋ ಡ್ರೈವರ್ ಆಗಿ ಜನರ ಸಾರಥಿಯಾಗಿ ನೋಡುಗರಿಗೆ ಆಟೋ ರಾಮಣ್ಣ ಎಂದೇ ಹೆಸರನ್ನುಗಳಿಸಿಕೊಂಡು, ತನ್ನ ನಿರ್ದೇಶನದ ಕನ್ನಡ ಚಿತ್ರವೊಂದಕ್ಕೆ ಕಥೆ ಚಿತ್ರಕಥೆ ಸಾಹಿತ್ಯ ಸಂಭಾಷಣೆ ಸಾಹಸ ಗಾಯನ ನೃತ್ಯದ ಜೊತೆಗೆ ನಿರ್ಮಾಣ ಮಾಡಿದ್ದಾರೆ ಎಂದರೆ, ನಿಜಕ್ಕೂ ಅಚ್ಚರಿಯೇ ; ಹಾಗೇ ಸಿನಿಮಾ ಯುವ ವರ್ಗದವರಿಗೆ ಸ್ಪೂರ್ತಿಯೇ ಹೌದು !

ಚಿತ್ರದ ನಾಯಕ ಆಟೋ ರಾಮಣ್ಣ ಮಾತನಾಡಿ ” ನನ್ನ ಸನ್ನಿಧಾನಕ್ಕೆ ಬಂದ 25 ಜನರ ಹುಡುಗಿಯರ ಭಾವಚಿತ್ರದಲ್ಲಿ ಯೋಗಶ್ರೀ ಹುಡುಗಿಯನ್ನು ನನ್ನ ಚಿತ್ರಕ್ಕೆ ಆಯ್ಕೆ ಮಾಡಿದಾಗ, ಕೆಲವರು ಈ ಹುಡುಗಿ ಮುಖ ಲಕ್ಷಣ ಚೆನ್ನಾಗಿಲ್ಲ ಎಂದರು. ಅವರ ಮಾತಿಗೆ ನಾನು ತಲೆಕೆಡಿಸಿಕೊಳ್ಳದೇ, ಅವಳ ಪ್ರತಿಭೆಯನ್ನು ಈ ಚಿತ್ರಕ್ಕೆ ಹಿಂಡಿ ಬಳಸಿಕೊಂಡಿದ್ದೇನೆ. ಅಲ್ಲದೇ ನನ್ನ ಚಿತ್ರದಲ್ಲಿ ಪ್ರತೀಕ್ಷಾ ಅನ್ನೋ ಹುಡುಗಿ ಚೆನ್ನಾಗಿ ಅಭಿನಯ ಮಾಡಿದೆ. ನಾನು ಚಿತ್ರರಂಗಕ್ಕೆ ಬರುವ ಮುನ್ನವೇ, ಹಲವು ಜನರ ಮಾತಿನಿಂದ ನೊಂದು ಅವಮಾನ ಗೊಂಡಿದ್ದೇನೆ. ಅವಮಾನಗಳೇ ನನಗೆ ಮೆಟ್ಟಿಲಾಗಿ ಸನ್ಮಾನ ಗಳಾಗಿವೆ. ನಾನು ಸಾಯುವ ಮುನ್ನ ಇತಿಹಾಸವನ್ನು ಸೃಷ್ಟಿಸಿ ಹೋಗಬೇಕೆನ್ನುವ ಬಯಕೆ ಇದೆ. ಚಿತ್ರರಂಗಕ್ಕೆ ನಾನು ಬರಲು ನನ್ನ ಹೆಂಡತಿಗೆ ಇಷ್ಟವಿರಲಿಲ್ಲ. ಬಂದ ನಂತರ ನನ್ನ ಹೆಂಡತಿ ವಿಷ ಕುಡಿದಳು ಅವಳನ್ನು ಬದುಕಿಸಿಕೊಳ್ಳಲು 50 ಸಾವಿರ ಬೇಕಾಯಿತು. ನಮ್ಮ ಸ್ನೇಹಿತರು ನನಗೆ ಸಹಾಯ ಮಾಡಿದರು ಅವರಿಗೆ ನಾನು ಅಭಾರಿ, ನನ್ನ ಚಿತ್ರವನ್ನು ಪ್ರೇಕ್ಷಕರು ಬೆಂಬಲಿಸಿದರೆ, 10 ವರ್ಷದಲ್ಲಿ 50 ಚಿತ್ರವನ್ನು ತೆಗೆಯಬೇಕು ಎಂದುಕೊಂಡಿದ್ದೇನೆ ನಿಮ್ಮೆಲ್ಲರ ಸಹಕಾರ ನನಗೆ ಅಗತ್ಯ ಎಂದರು.

ಸಾಹಿತಿ ದೊಡ್ಡರಂಗೇಗೌಡರು ಮಾತನಾಡಿ, ಈ ಚಿತ್ರಕ್ಕೆ ನಾನು ಸಹ ಆರು ಸನ್ನಿವೇಶಗಳಿಗೆ ಹಾಡುಗಳನ್ನು ಬರೆದಿರುವೆ, ಇಡೀ ಭಾರತೀಯ ಚಿತ್ರರಂಗವೇ ನೋಡುವ ಒಂದು ಗೋವಿನ ಹಾಡಿದೆ. ಆ ಹಾಡಿನ ಮೇಲೆ ನನಗೆ ವಿಶ್ವಾಸವಿದೆ ಒಬ್ಬ ಬರಹಗಾರನಾಗಿ ನಾನು ಹೇಳ್ತಾ ಇದ್ದೀನಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಆ ಹಾಡು ಜಯಭೇರಿ ಬಾರಿಸುತ್ತದೆ ಎಂಬ ವಿಶ್ವಾಸ ನನಗಿದೆ ಎಂದರು. ಇನ್ನೂ ಹಾಸ್ಯನಟ ಡಿಂಗ್ರೀ ನಾಗರಾಜು ಮಾತನಾಡಿ ” ನಾನು ಬೇರೆ ಚಿತ್ರದ ಶೂಟಿಂಗ್ ನಲ್ಲಿ ಭಾಗವಹಿಸಿದ್ದಾಗ ಆಟೋ ರಾಮಣ್ಣ ನನ್ನ ಬಳಿ ಬಂದು, ಸರ್ ನಾನು ಚಿತ್ರ ಮಾಡ್ತಾ ಇದ್ದೀನಿ ನಾನು ದಿನಕ್ಕೆ ನಿಮಗೆ 5000 ಕೊಡ್ತೀನಿ ತಾವು ಒಪ್ಪಿ ಚಿತ್ರ ಮುಗಿಸಿ ಕೊಡಿ ಎಂದರು. ಆಗ ನಾನು ಒಪ್ಪಿಕೊಂಡು ನಂತರ ಬೆಳಿಗ್ಗೆ ನಾನು ಇದ್ದ ಕಡೆ ಆಟೋ ಬಂದಾಗ, ಸರ್ ಆಟೋ ಬಂದಿದೆ ಹೋಗೋಣ ಹತ್ತಿ ಎಂದರು. ನಾನು ಅವಾಗ ಇದೇನಪ್ಪಾ..! ಶೂಟಿಂಗ್ ಸ್ಥಳಕ್ಕೆ ಆಟೋದಿಂದ ಡ್ರಾಪ ಎಂದು ಆಶ್ಚರ್ಯಪಟ್ಟೆ, ಆದ್ರೂ ರಾಮಣ್ಣ ಶೂಟಿಂಗ್ ಮುಗಿಯುವ ತನಕ ಚಿತ್ರಕ್ಕೆ ಶ್ರಮಿಸಿರುವ ಎಲ್ಲರನ್ನೂ ಆಟೋದಿಂದಲೇ, ಶೂಟಿಂಗ್ ಸ್ಥಳದಿಂದ ಮನೆಗೆ ಮನೆಯಿಂದ ಶೂಟಿಂಗ್ ಸ್ಥಳಕ್ಕೆ ಡ್ರಾಪ್ ಮಾಡಿಸ್ತ ಇದ್ರು. ಆಟೋದಲ್ಲಿ ಅವರು ದುಡಿದು ಅದರಿಂದ ಬಂದ ಲಾಭದಲ್ಲಿ ಈ ಚಿತ್ರವನ್ನು ಮಾಡಿಯೇ ಇವತ್ತು ಧ್ವನಿಸುರುಳಿ ಬಿಡುಗಡೆ ಮಾಡಿ ಇನ್ನೇನೋ, ಬಿಡುಗಡೆ ಹಂತಕ್ಕೆ ತಂದಿದ್ದಾರೆ ಎಂದರೇ, ಅವರಿಗೆ ದೊಡ್ಡದೊಂದು ಸಲಾಂ ಸಲ್ಲಿಸಬೇಕು. ಶೂಟಿಂಗ್ ಸ್ಥಳಕ್ಕೆ ಊಟವನ್ನು ಅಷ್ಟೇ, ಆಟೋದಲ್ಲಿ ತರಿಸುತ್ತಿದ್ದರು. ಕಲಾವಿದರಿಗೂ ಅಷ್ಟೇ ಸರಿಯಾದ ಸಮಯಕ್ಕೆ ಹಣ ಕೊಡುತ್ತಿದ್ದರು. ಈ ರಾಜ್ಯದಲ್ಲಿರುವ ಪ್ರತಿಯೊಬ್ಬ
ಆಟೋ ಡ್ರೈವರ್ ಗಳು ಸಿನಿಮಾ ನೋಡಿದ್ರೆ ಖಂಡಿತವಾಗಲೂ ಇವರು ಇನ್ನೊಂದು ಸಿನಿಮಾ ಮಾಡ್ತಾರೆ. ಈಗಾಗಲೇ ಅವರು ಕಥೆ ಬರೆದು ತಯಾರಿ ಮಾಡಿಕೊಂಡಿದ್ದಾರೆ ಎನ್ನುವ ಮೂಲಕ ಈ ಚಿತ್ರಕ್ಕೆ ಶುಭ ಹಾರೈಸಿದರು.

ವರದಿ : ಮಳವಳ್ಳಿ ಮಾದೇಶ್


Share

ಕೊಟ್ಟೂರು: ನೂತನ ಸಿಪಿಐ ಆಗಿ ಟಿ.ಎಸ್.ಮುರುಗೇಶ ಅಧಿಕಾರ ಸ್ವೀಕಾರ

Share

ಕೊಟ್ಟೂರು: ಕೊಟ್ಟೂರು ತಾಲೂಕು ಪೊಲೀಸ್ ಇಲಾಖೆಯ ಸಿಪಿಐ ದೊಡ್ಡಣ್ಣ ಕರ್ನಾಟಕ ಲೋಕಾಯುಕ್ತ ವಿಭಾಗಕ್ಕೆ ವರ್ಗಾವಣೆ ಯಾಗಿದ್ದು ಇವರ ಸ್ಥಳಕ್ಕೆ ಟಿಎಸ್.ಮುರುಗೇಶ ನೇಮಕಗೊಂಡಿದ್ದು ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಪೊಲೀಸ್ ಇಲಾಖೆಯ ಐಪಿಎಸ್ ಅಧಿಕಾರಿ ಡಾ ಎಂಎಸಲೀಂ ಆದೇಶ ಮಾಡಿದ್ದಾರೆ.ಸರ್ಕಾರದ ಆದೇಶದಂತೆ ಕೆಲಸಕ್ಕೆ ಹಾಜರಾಗಿ ಅಧಿಕಾರವಹಿಸಿಕೊಂಡರು.


Share

ಉಚಿತವಾಗಿ ವ್ಯಾಕ್ಸಿನೇಷನ್ ಅಭಿಯಾನ

Share

 

ಸೇಡಂ ಪಟ್ಟಣದಲ್ಲಿ ಇಂದು ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಶಾರದಾ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲರಾಜ್ ಗುತ್ತೇದಾರ್ ಬ್ರಿಗೇಡ್ ವತಿಯಿಂದ ಉಚಿತವಾಗಿ ವ್ಯಾಕ್ಸಿನೇಷನ್ ಅಭಿಯಾನ ಹಾಗೂ ಬಾಲರಾಜ್ ಗುತ್ತೇದಾರ್ ಬ್ರಿಗೇಡ್ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮಕ್ಕೆ ಹಾಲಪ್ಪಯ್ಯ ವಿರಕ್ತಮಠದ ಪರಮಪೂಜ್ಯ ಶ್ರೀ ಪಂಚಾಕ್ಷರಿ ಸ್ವಾಮೀಜಿಗಳು ಚಾಲನೆ ನೀಡಿದರು.


Share