ಅಂಕೋಲಾ :- ಕರ್ನಾಟಕ ಮೀಡಿಯಾ ಕ್ಲಬ್ ಬೆಂಗಳೂರು ವತಿಯಿಂದ ನೀಡಲಾಗುವ ಪ್ರಶಸ್ತಿಯನ್ನು ಡಾ ಈಶ್ವರಪ್ಪ ಗೆ ಪ್ರಧಾನ ಮಾಡಲಾಯಿತು.ಅಂಕೋಲಾ ತಾಲೂಕ ಆಸ್ಪತ್ರೆಯಲ್ಲಿ ಜನರು ಮನಗೆದ್ದ ವೈದ್ಯರಿಗೆ ಕರ್ನಾಟಕ ಮೀಡಿಯಾ ಕ್ಲಬ್ 2024/2025 ಸಾಲಿನ ಪ್ರಶಸ್ತಿಯನ್ನು ಡಾ ಈಶ್ವರಪ್ಪಗೆ ನೀಡಿ ಗೌರವಿಸಿದೆ.ಈ ಸಂಧರ್ಭದಲ್ಲಿ ಶ್ರೀ ಡಾ ಬಸವ ರಾಮಾನಂದ ಮಹಾಸ್ವಾಮಿ,ನಿವೃತ್ತ ನ್ಯಾಯಮೂರ್ತಿಗಳಾದ ಸಂತೋಷ ಹೆಗಡೆ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆಯಾದ ನಾಗಲಕ್ಷ್ಮೀ ಚೌಧರಿ ಹಿರಿಯ ಕಲಾವಿದರು ಹಾಗೂ ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಹಾಗೂ ಕರ್ನಾಟಕ ಪ್ರೆಸ್ ಕ್ಲಬ್ ಗೌರವಧ್ಯಕ್ಷರಾದ ಎಸ್ ರಾಮಸ್ವಾಮಿ, ರಾಜ್ಯಾಧ್ಯಕ್ಷರಾದ ದಯಾನಂದ ಎಂ ಪ್ರಧಾನ ಕಾರ್ಯದರ್ಶಿ ರಮೇಶ್ ಎಸ್ ಜಿ ಮತ್ತಿತರರು ಇದ್ದರು.
Category: LiveTV
ಸಾರ್ವಜನಿಕರಿಗೆ ಬೆದರಿಕೆ ಆರೋಪ…ನಂಜನಗೂಡು ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ದೂರು…ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಪತ್ರ…
ನಂಜನಗೂಡು,ಜು3,Tv23 ಕನ್ನಡ
ನಂಜನಗೂಡು ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಸಹಾಯಕ ಕಿರಣ್ ಕುಮಾರ್ ವಿರುದ್ದ ಸಾರ್ವಜನಿಕರು ದೂರು ನೀಡಿದ್ದಾರೆ.ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅಡ್ಡಿ ಉಂಟು ಮಾಡುವುದು ಹಾಗೂ ಬೆದರಿಕೆ ಹಾಕುತ್ತಾರೆ ಎಂದು ದೂರು ಸಲ್ಲಿಸಿರುವ ಹಿನ್ನಲೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.ಈ ಸಂಭಂಧ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ಮೈಸೂರು ಉಪವಿಭಾಗಾಧಿಕಾರಿಗಳ ಕಚೇರಿಗೆ ಪತ್ರ ರವಾನೆ ಆಗಿದ್ದು ಅಗತ್ಯ ಕ್ರಮ ಕೈಗೊಂಡು ದೂರುದಾರರಿಗೆ ಮಾಹಿತಿ ನಂತರ ಕಚೇರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.ಆದರೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಪತ್ರ ರವಾನೆ ಆಗಿ ಒಂದು ತಿಂಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವೂ ಇದೆ.ಜಿಲ್ಲಾಧಿಕಾರಿಗಳ ಪತ್ರಕ್ಕೆ ಮನ್ನಣೆ ನೀಡದಿರುವುದು ಭಾರಿ ಅನುಮಾನಕ್ಕೆ ಕಾರಣವಾಗಿದೆ.
ವಚನ ಸಾಹಿತ್ಯಕ್ಕಾಗಿ ಬದುಕು ಮೀಸಲಾಗಿಟ್ಟದ್ದ ಶರಣ ಡಾ.ಫ.ಗು.ಹಳಕಟ್ಟಿ
ಸುರಪುರ: ವಚನ ಸಾಹಿತ್ಯಕ್ಕಾಗಿ ತಮ್ಮ ಇಡೀ ಆಸ್ತಿಯನ್ನೆಲ್ಲ ದಾಸೋಹ ಮಾಡಿ ವಚನಗಳ ಸಂರಕ್ಷಣೆ ಮಾಡಿದ ವಚನ ಸಂರಕ್ಷಕ ಡಾ.ಫ.ಗು ಹಳಕಟ್ಟಿಯವರು ಬದುಕನ್ನೆ ವಚನ ಸಾಹಿತ್ಯಕ್ಕಾಗಿ ಮೀಸಲಾಗಿಟ್ಟಿದ್ದರು ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತ ಯುವ ಘಟಕದ ರಾಜ್ಯ ಸಂಚಾಲಕ ಪ್ರಕಾಶ ಅಂಗಡಿ ಕನ್ನೆಳ್ಳಿ ಮಾತನಾಡಿದರು. ಪರಿಷತ್ತಿನ ತಾಲೂಕ ಘಟಕದಿಂದ ನಗರದ ಬಸವಪ್ರಭು ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಡಾ.ಫ.ಗು ಹಳಕಟ್ಟಿಯವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಇಂದು ನಾವೆಲ್ಲರು ವಚನ ಸಾಹಿತ್ಯವನ್ನು ಓದುತ್ತೇವೆ ಎಂದರೆ ಅದಕ್ಕೆ ಡಾ.ಫ.ಗು ಹಳಕಟ್ಟಿಯವರ ಕೊಡುಗೆ ದೊಡ್ಡದಿದೆ ಎಂದರ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪರಿಷತ್ತಿನ ತಾಲೂಕ ಘಟಕದ ಅಧ್ಯಕ್ಷ ರಾಜು ಕುಂಬಾರ ಮಾತನಾಡಿ,ಡಾ.ಫ.ಗು ಹಳಕಟ್ಟಿಯವರು ತಮ್ಮ ಸ್ವಂತ ಮನೆಯನ್ನೆ ಮಾರಾಟ ಮಾಡಿ ಬಂದ ಹಣದಲ್ಲಿ ವಚನಗಳ ಗ್ರಂಥವನ್ನು ಪ್ರಕಟಿಸಿದರು.ಸ್ವತಃ ಪತ್ರಕರ್ತರಾಗಿದ್ದ ಹಳಕಟ್ಟಿಯವರು ಶಿವಾನುಭವ ಎನ್ನುವ ಮಾಸ ಪತ್ರಿಕೆಯನ್ನು ನಡೆಸುತ್ತಿದ್ದರು.ನ್ಯಾಯವಾದಿಗಳಾಗಿ ಅನೇಕರಿಗೆ ನ್ಯಾಯ ಕೊಡಿಸಿದ ಕೇರ್ತಿಯೂ ಹಳಕಟ್ಟಿಯವರಿಗೆ ಸಲ್ಲುತ್ತದೆ.ಇಂದು ಸರಕಾರವೇ ಹಳಕಟ್ಟಿಯವರ ಜಯಂತಿಯನ್ನು ಆಚರಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ.ಅವರ ಜೀವನ ಚರಿತ್ರೆ ಪಠ್ಯಗಳಲ್ಲಿ ಪ್ರಕಟವಾಗಬೇಕು ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಡಾ.ಫ.ಗು.ಹಳಕಟ್ಟಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಂದಿಸಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾ.ಪ್ರ.ಕಾರ್ಯದರ್ಶಿ ಜಗದೀಶ ಪಾಟೀಲ್ ಮುಖಂಡ ಶಿವಶರಣಪ್ಪ ಹೆಡಗಿನಾಳ ಉಪಸ್ಥಿತರಿದ್ದರು.ರವಿಗೌಡ ಹೆಮನೂರ ಕಾರ್ಯಕ್ರಮ ನಿರೂಪಿಸಿದರು,ಶರಣ ಚನ್ನಮಲ್ಲಿಕಾರ್ಜುನ ಗುಂಡಾನೂರ ವಚನಗಾಯನ ಮಾಡಿದರು,ಪ್ರಕಾಶ ಹೆಮ್ಮಡಗಿ ಸ್ವಾಗತಿಸಿ,ವಂದಿಸಿದರು.ಮಹಿಳೆಯರು,ಮಕ್ಕಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕೊಡಗಿನಲ್ಲಿ ಬಾಂಗ್ಲಾ ನುಸುಳುಕೋರರ ಆತಂಕ – ಕಾರ್ಮಿಕರ ಮೇಲೆ ನಿಗಾ ವಹಿಸುವಂತೆ ಎಚ್ಚರಿಕೆ
ಮಡಿಕೇರಿ: ಕಳೆದ ಹಲವು ತಿಂಗಳಿನಿಂದ ಕೊಡಗು (Kodagu) ಜಿಲ್ಲೆಗೆ ಆಗಮಿಸುತ್ತಿರುವ ಅಸ್ಸಾಂ ಮೂಲದ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು, ಈ ಪೈಕಿ ಕೆಲವು ಬಾಂಗ್ಲಾ ನುಸುಳುಕೋರರು (Bangladeshi Infiltrators) ಇದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ.
ಹೌದು. ಕೊಡಗು ಜಿಲ್ಲೆಯ ಮಡಿಕೇರಿ, ಸುಂಟಿಕೊಪ್ಪ, ಕುಶಾಲನಗರ, ವಿರಾಜಪೇಟೆ, ಗೋಣಿಕೊಪ್ಪಲು, ನಾಪೋಕ್ಲು ಸೇರಿದಂತೆ ಕೊಡಗಿನ ಪ್ರಮುಖ ಪಟ್ಟಣಗಳಲ್ಲಿ ನಡೆಯುವ ವಾರದ ಸಂತೆಗಳಲ್ಲಿ ಹೊಸ ಮುಖಗಳೇ ಹೆಚ್ಚಾಗಿ ಕಂಡುಬರುತ್ತಿವೆ. ಸಂತೆಗಳಲ್ಲಿ ವ್ಯಾಪಾರ ಮಾಡುವುದರಿಂದ ಆರಂಭಿಸಿ ಹೋಂ ಸ್ಟೇ, ರೆಸಾರ್ಟ್ ಗಳಲ್ಲಿ ರೂಮ್ ಬಾಯ್ ತನಕವೂ ಹೊರ ರಾಜ್ಯದ ಕಾರ್ಮಿಕರೇ ಹೆಚ್ಚಾಗಿ ಕಂಡುಬರುತ್ತಿದ್ದಾರೆ. ಇತ್ತೀಚೆಗೆ ಕೆಲವು ಅಪರಾಧ ಪ್ರಕರಣಗಳಲ್ಲೂ ಹೊರ ರಾಜ್ಯದವರೇ ಕಾಣಿಸಿಕೊಳ್ಳುತ್ತಿದ್ದಾರೆ. ಹೀಗಾಗಿ ನಿಗಾ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಕೊಡಗಿಗೆ ಬರುವ ವಲಸೆ ಕಾರ್ಮಿಕರು ಜಿಲ್ಲಾದ್ಯಂತ ಚದುರಿ ಹೋಗುತ್ತಿದ್ದಾರೆ. ಇದರಿಂದ ಅಕ್ರಮ ವಲಸಿಗರನ್ನು ಪತ್ತೆ ಮಾಡುವುದು ಕಷ್ಟವಾಗುತ್ತಿದೆ. ಹೀಗಾಗಿ ಕೆಲಸ ನೀಡುವ ಕಾಫಿ ತೋಟದ ಮಾಲೀಕರು, ಕಾರ್ಮಿಕರನ್ನು ಕರೆ ತರುವ ದಲ್ಲಾಳಿಗಳು ಆಯಾ ಕಾರ್ಮಿಕರ ಪೂರ್ವಾಪರ ವಿಚಾರಿಸಿ ಬಳಿಕ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ಎಚ್ಚರಿಸಿದ್ದಾರೆ.
ಒಂದು ವೇಳೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡುವಂತೆ ಕೊಡಗು ಎಸ್ಪಿ ರಾಮರಾಜನ್ ಮನವಿ ಮಾಡಿದ್ದಾರೆ.
ದುಶ್ಚಟಗಳಿಂದ ದೂರವಿರಿ: ಪಿಎಸ್ಐ ಐಗಳಿ
ಸಾವಳಗಿ: ಮಾದಕ ವಸ್ತುಗಳು ಹಾಗೂ ದುಶ್ಚಟಗಳಿಂದ ದೂರವಿದ್ದರೆ ಉತ್ತಮ ಜೀವನ ರೂಪಿಸಿಕೊಳ್ಳಬಹುದು. ಯುವಜನರು ಜೀವಕ್ಕೆ ಮಾರಕವಾಗುವ ವ್ಯಸನಗಳನ್ನು ಬೆಳೆಸಿಕೊಳ್ಳಬಾರದು. ಮಾದಕ ವಸ್ತುಗಳನ್ನು ಮಾರುವುದು ಅಥವಾ ಬಳಸುತ್ತಿರುವುದು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು. ಆರೋಗ್ಯಕರ ಸಮಾಜ ನಿರ್ಮಾಣದ ಹೊಣೆ ಎಲ್ಲರ ಮೇಲೂ ಇದೆ ಎನ್ನುವುದನ್ನು ಮರೆಯಬಾರದು ಎಂದು ಸಾವಳಗಿ ಪಿಎಸ್ಐ ಅಪ್ಪಣ್ಣ ಐಗಳಿ ಹೇಳಿದರು.
ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದ ಎಸ್. ಡಿ. ಎಸ್. ಜಿ ಪಿಯು ಹಾಗೂ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾದಕ ವ್ಯಸನ ಮುಕ್ತ ದಿನ ಪ್ರತಿಜ್ಞಾ ಭೋದನೆ ಕಾರ್ಯಕ್ರಮ ನಡೆಸಿ ಅವರು ಮಾತನಾಡಿ ‘ಸಂಚಾರ ನಿಯಮಗಳನ್ನು ಪಾಲಿಸಬೇಕು. ಇದರಿಂದ, ಅಪಘಾತಗಳ ಪ್ರಮಾಣವನ್ನು ತಪ್ಪಿಸಬಹುದಾಗಿದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯವಾಗಿದೆ. ಉತ್ತಮ ಸಮಾಜಕ್ಕಾಗಿ ಉತ್ತಮ ಆರೋಗ್ಯ ಅತ್ಯವಶ್ಯ ಎನ್ನುವುದನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.
ಬಿಎಲ್ ಡಿ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ಪ ಎಚ್ ಮಾತನಾಡಿ ಮಾದಕ ವಸ್ತುಗಳ ಸೇವನೆಯಿಂದ ವ್ಯಕ್ತಿಗೆ ಮಾತ್ರವಲ್ಲ ಕುಟುಂಬ ಹಾಗೂ ಇಡೀ ಸಮಾಜಕ್ಕೆ ತೊಂದರೆಯಾಗುತ್ತದೆ. ಮಕ್ಕಳು ದುಶ್ಚಟಗಳಿಗೆ ಒಳಗಾಗದೇ ಇರುವಂತೆ ಪಾಲಕರು ಗಮನಹರಿಸಬೇಕು’ ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಬಿರಾದಾರ, ಪೊಲೀಸ್ ಸಿಬ್ಬಂದಿಗಳಾದ ಶಿವಾನಂದ ಭಜಂತ್ರಿ, ವೈಬೂಬ ಮುಲ್ಲಾ, ಐ. ಎ. ನದಾಪ, ಬಿ. ಎಮ್. ಹೊಸಮನಿ, ಶಾಲಾ ಶಿಕ್ಷಕರು, ವಿದ್ಯಾರ್ಥಿ- ವಿದ್ಯಾರ್ಥಿನಿಯರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ನಂದಿ ಬೆಟ್ಟದಲ್ಲಿ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆ
ನಂದಿ ಬೆಟ್ಟದ ಪರಿಸರದ ವ್ಯವಸ್ಥೆಯನ್ನು ಭವಿಷ್ಯದ ಪೀಳಿಗೆಗೆ ಉಳಿಸಿರುವುದುರ ಜೊತೆಗೆ ನಂದಿ ಬೆಟ್ಟದಲ್ಲಿ ಹುಟ್ಟುವ ಐದು ನದಿಗಳನ್ನು ಪುನಶ್ಚೇತಗೊಳಿಸುವುದು ಮತ್ತು ನಂದಿ ಬೆಟ್ಟದ ಸುತ್ತಲಿನ ಪ್ರದೇಶವನ್ನು ಕಳೆದ ದಶಕದಲ್ಲಿ ವಾಣಿಜ್ಯೀಕರಣ ಗೊಳಿಸಲಾಗಿದೆ, ಪ್ರವಾಸೋದ್ಯಮವನ್ನು ಉತ್ತೇಜಿಸಲು ನಿರ್ಧರಿಸಲಾಗಿದ್ದು ಇದರಿಂದ ಆರೋಗ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ಆದಕಾರಣ 2-7 -2025ರ ಬುಧವಾರದಂದು ನಂದಿ ಬೆಟ್ಟದಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಪರಿಸರದ ಮೇಲಿನ ಅತ್ಯಾಚಾರ ನಿಲ್ಲಿಸಲು ಪರಿಸರಸ್ನೇಹಿ ಶಾಸನಬದ್ಧ ಜವಾಬ್ದಾರಿಯುತವಾದ ನಿರ್ಧಾರವನ್ನು ಕೈಗೊಳ್ಳಬೇಕೆಂದು ಮತ್ತು ನಂದಿ ಬೆಟ್ಟವನ್ನು ಜೀವವೈವಿಧ್ಯ ಕೇಂದ್ರವೆಂದು ಘೋಷಿಸಲು ವ್ಯವಸ್ಥೆ ಮಾಡಬೇಕೆಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಲಾಯಿತು, ಪತ್ರಿಕಾಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದಂತ ಪರಿಸರವಾದಿಗಳಂತ ಡಾಕ್ಟರ್ ಯಾ ಲ್ಲಪ್ಪನವರು ನಂದಿ ಬೆಟ್ಟಗಳು ಭೂಮಿಯ ಹೊರಪದರದ ಅತ್ಯಂತ ಹಳೆಯ ಮತ್ತು ಸ್ಥಿರವಾದ ಭಾಗದಲ್ಲಿ ನೆಲೆಗೊಂಡಿದೆ. ಈ ಬೆಟ್ಟದಲ್ಲಿ ಅರ್ಕಾವತಿ,ಪಾಲರ್, ಪೆನ್ನಾರ್ ದಕ್ಷಿಣ ಪೆನ್ನಾರ್ ಮತ್ತು ಚಿತ್ರಾವತಿ ನದಿಗಳು ಮಳೆಗಾಲದಲ್ಲಿ ಮಾತ್ರ ತುಂಬಿ ಹರಿಯುತ್ತವೆ ಲಕ್ಷಾಂತರ ಜನರಿಗೆ ಜೀವನೋಪಾಯ ಕಲ್ಪಿಸಿದೆ
ಆದರೆ ಇಂದು ಪ್ರವಾಸೋದ್ಯಮದ ಹೆಸರಿನಲ್ಲಿ ಯಂತ್ರೋಪಕರಣ ಗಳಿಂದ ನೈಸರ್ಗಿಕ ಪರಿಸರ ವ್ಯವಸ್ಥೆಗೆ ಅಡ್ಡಿಯಾಗಿದೆ ಸ್ಥಳೀಯ ಸಸ್ಯ ಜಾತಿಗಳು ನಾಶವಾಗಿದೆ ನೀರಿನ ಮೂಲಗಳು ಮತ್ತು ಮಣ್ಣಿನ ಗುಣಮಟ್ಟದ ಅವನತಿ ಕಾಣುತ್ತಿದೆ ಶಬ್ದ ಮಾಲಿನ್ಯಕ್ಕೆ ಕಾರಣವಾಗಿದೆ. ಕಲ್ಲು ಗಣಿಗಾರಿಕೆ ಚಟುವಟಿಕೆಗಳು ಈಗಾಗಲೇ ಗಮನಾರ್ಹಾಹಾ ನಿಯನ್ನುಂಟು ಮಾಡಿದೆ ಎಂದು ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆ ಹೂವಿನ ವರ್ತಕರ ಸಂಘದ ಅಧ್ಯಕ್ಷರಾದಂತಹ ಶ್ರೀಧರ್ ಅವರು ಮಾತನಾಡುತ್ತಾ ಚಿಕ್ಕಬಳ್ಳಾಪುರದ ಸುಂದರ ಪರಿಸರವನ್ನ ನಾಶ ಮಾಡುವಂತಹ ಯೋಜನೆಗಳನ್ನು ರೂಪಿಸಿರುವುದು ಖಂಡನೀಯ . ರೈತರ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲದಂತಹ ಸರ್ಕಾರ ಕನಿಷ್ಠ ಪಕ್ಷ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಯೆನ್ನಾದರೂ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಗೆ ಕೊಡಲಿ. ನಂದಿ ಬೆಟ್ಟದ ಸುತ್ತಮುತ್ತಲು ನಡೆಯುತ್ತಿರುವ ಗಣಿಗಾರಿಕೆ ನಿಲ್ಲಲಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಈ ಪತ್ರಿಕಾಗೋಷ್ಠಿಯಲ್ಲಿ. ಕಿರಣ್, ಲಾಯರ್ ಜ್ಯೋತಿ. ಇತರರು ಉಪಸ್ಥಿತರಿದ್ದರು.
ಕನ್ನಡ ಪತ್ರಿಕಾ ದಿನ ಜುಲೈ ೧ರ ಹಿನ್ನಲೆ ಹಾಗೂ ಮಹತ್ವ.
ಜುಲೈ ೧ ಕನ್ನಡ ಪತ್ರಿಕಾ ದಿನವಾಗಿದೆ. ಈ ದಿನವನ್ನು ಕನ್ನಡದ ಮೊಟ್ಟಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟವಾದ ದಿನವಾಗಿ ಆಚರಿಸಲಾಗುತ್ತದೆ. ಈ ದಿನವನ್ನು ಕರ್ನಾಟಕ ಮಾಧ್ಯಮ ಅಕಾಡೆಮಿ ಆಚರಿಸುತ್ತದೆ, ಮತ್ತು ಪತ್ರಿಕೆಗಳ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.
ಜುಲೈ ೧, ೧೮೪೩ ರಂದು ಮಂಗಳೂರಿನಲ್ಲಿ ಮಂಗಳೂರು ಸಮಾಚಾರ ಪತ್ರಿಕೆಯ ಮೊದಲ ಸಂಚಿಕೆ ಪ್ರಕಟವಾಯಿತು. ಇದು ಕನ್ನಡದ ಮೊದಲ ಮುದ್ರಿತ ಪತ್ರಿಕೆಯಾಗಿದೆ. ಈ ಪತ್ರಿಕೆಯನ್ನು ಜರ್ಮನ್ ಮಿಷನರಿ ಹೆರ್ಮನ್ ಫ್ರೆಡ್ರಿಕ್ ಮೊಗ್ಲಿಂಗ್ ಅವರು ಸ್ಥಾಪಿಸಿದರು. ಅವರು ಬಾಸೆಲ್ ಮಿಷನ್ನಲ್ಲಿದ್ದರು ಮತ್ತು ಕನ್ನಡ ಭಾಷೆಯನ್ನು ಕಲಿತು ಈ ಪತ್ರಿಕೆಯನ್ನು ಪ್ರಕಟಿಸಿದರು. ಈ ಪತ್ರಿಕೆಯು ಎರಡು ವರ್ಷಗಳ ಕಾಲ ನಡೆಯಿತು, ಮತ್ತು ಇದು ಕನ್ನಡ ಪತ್ರಿಕೋದ್ಯಮಕ್ಕೆ ಬಹಳ ಮಹತ್ವದ ಕೊಡುಗೆಯಾಗಿದೆ.
ಈ ದಿನವನ್ನು ಆಚರಿಸುವ ಮುಖ್ಯ ಉದ್ದೇಶವೆಂದರೆ, ಪತ್ರಿಕೆಗಳು ಸಮಾಜದಲ್ಲಿ ಹೇಗೆ ಪ್ರಮುಖ ಪಾತ್ರವಹಿಸುತ್ತವೆ ಎಂಬುದನ್ನು ತಿಳಿಸುವುದು. ವಿಶೇಷವಾಗಿ, ಪತ್ರಿಕೆಗಳು ಸಮಾಜದಲ್ಲಿನ ವದಂತಿಗಳನ್ನು ತಡೆಯಲು ಮತ್ತು ಸತ್ಯ ಮಾಹಿತಿಯನ್ನು ಒದಗಿಸಲು ಸಹಾಯ ಮಾಡುತ್ತವೆ.
ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ ೧ ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.
ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ ೧೮೪೩ ರ ಜುಲೈ ೧ ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.ಮಂಗಳೂರು ಸಮಾಚಾರ ಪ್ರಾರಂಭದ ಬಗ್ಗೆ ಹಲವಾರು ವಿವಾದಗಳು ಉಂಟು ಕನ್ನಡ ಪತ್ರಿಕೆ ಮೊದಲು ಮಂಗಳೂರಿನಲ್ಲಿ ಅಥವಾ ಬಳ್ಳಾರಿಯಲ್ಲಿ ಪ್ರಾರಂಭದ ಬಗ್ಗೆ ಸಾಕಷ್ಟು ಬೇರೆ ಬೇರೆ ವಿಚಾರಗಳು ಇವೆ.
ಮಂಗಳೂರು ಸಮಾಚಾರ ಪತ್ರಿಕೆ ೮ ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆAದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.
ಮಂಗಳೂರುಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿOದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾಷೆಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. ೧೮೪೦ ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.
ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿAದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆOಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬOಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್ನ ಎರ್ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು ೧೮೫೮ ರಲ್ಲಿ ಮೋಗ್ಲಿಂಗ್ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು ೮ ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊAದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್ಗಳು, ದೇಶದಲ್ಲೇ ಗರಿಷ್ಠ ಎಂಬAತೆ ಬಹುಭಾಷಾ ಪ್ರಾದೇಶಿಕ ಚಾನೆಲ್ಗಳು, ಆನ್ಲೈನ್ ಆವೃತ್ತಿಗಳು, ವೆಬ್ಸೈಟ್ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್ಬುಕ್- ವಾಟ್ಸ್ಪ್ಪ್ ಮಾಹಿತಿ- ಇಂರ್ನೆಟ್ ವಿನಿಮಯ ಗ್ರೂಪ್ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಮಾಧ್ಯಮ ಬರವಣೆಗೆ ಹಾಗೂ ನಿರೂಪಣೆಗಳು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಮಹತ್ವ ಪಡೆದಿವೆ. ಬರವಣೆಯ ಶುದ್ಧತೆ, ವ್ಯಾಕರಣ ಹಾಗೂ ವಿಷಯ ಮಂಡನೆ ಎಲ್ಲವು ಅತ್ಯಂತ ಮಹತ್ವ ಪಡೆಯುತ್ತವೆ. ೭೦-೮೦ ದಶಕದ ಪತ್ರಕರ್ತರ ಮನೋಬಲ ಮತ್ತು ಬರವಣೆಯು ಅತ್ಯಂತ ನೇರ ಮತ್ತು ಸುಂದರವಾಗಿದ್ದು, ಇತ್ತಿಚಿಗೆ ಬರವಣೆಯಲ್ಲಿ ಗಂಧ-ಗಾಳಿ ಇಲ್ಲದಂತೆ ಆಗಿದೆ.ಪ್ರಜಾಪ್ರಭುತ್ವ ಹಾಗೂ ಭವಿಷ್ಯದ ದೃಷ್ಠಿಯಿಂದ ಮಾಧ್ಯಮವು ಬಲಗೊಳ್ಳಬೇಕು.ಹಾಗೂ ನೇರ, ನಿಷ್ಠುರ ಹಾಗೂ ಶುದ್ಧ ಬರಹಗಾರರು ಮಾಧ್ಯಮ ರಂಗಕ್ಕೆ ಅವಶ್ಯಕತೆ ಇದೆ.
ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ.
ಮಾದ್ಯಮದ ತಪ್ಪು ಬದಿಗಿಟ್ಟು, ಮಾದ್ಯಮದಲ್ಲಿ ಸಾಧಿಸಬೇಕಾದ ಅವಕಾಶಗಳು ಸಾಕಷ್ಟು ಇದ್ದು, ದೃಡ ನಿರ್ಧಾರದಿಂದ ಮಾದ್ಯಮದಲ್ಲಿ ಸಾಧನೆಗೆ ಸಾಕಷ್ಟು ಅವಕಾಶಗಳು ಇದ್ದು, ಪ್ರತಿಯೊಬ್ಬರು ಬಳಸಿಕೊಂಡು ಉತ್ತಮ ಸಮಾಜಕ್ಕಾಗಿ ಉತ್ತಮ ಮಾದ್ಯಮ ಬೆಳೆಸಬೇಕು.
ರಮೇಶ.ಎಸ್.ಜಿ
ಸಂಪಾದಕರು
ಕನಸಿನ ಭಾರತ
ಮಳೆಯಿಂದ ಆಗುವ ಅನಾಹುತಗಳಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ : ಕೆ.ಎಸ್ ಲತಾ ಕುಮಾರಿ
ಹಾಸನ: ಜಿಲ್ಲೆಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವ ನಿಟ್ಟಿನಲ್ಲಿ ಪರಿಶೀಲಿಸುವಂತೆ ಸೂಚಿಸಿದರಲ್ಲದೆ ತಕ್ಷಣ ಪರಿಹಾರ ನೀಡಲು ಕ್ರಮವಹಿಸಿ ಎಂದರು.
ಹಾವು ಕಡಿತ ಹಾಗೂ ಆಕಸ್ಮಿಕ ಸಾವು ಕುರಿತು ಪ್ರತ್ಯೇಕ ವರದಿ ನೀಡುವಂತೆ ನಿರ್ದೇಶನ ನೀಡಿದರಲ್ಲದೆ ಪರಿಹಾರ ವಿತರಣೆಗೆ ಕ್ರಮವಹಿಸುವಂತೆ ಸೂಚಿಸಿದರು.
ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಿರಂತರವಾಗಿ ಬೀಳುವ ಮಳೆಯಿಂದ ಹುಲ್ಲಿನ ಬಣವೆ ನೆನೆಯುವುದರಿಂದ ಫಂಗಸ್ ಆಗುವುದರಿಂದ ಜಾನುವಾರುಗಳು ತಿನ್ನಲು ಯೋಗ್ಯವಾಗಿರುವುದಿಲ್ಲ ಈ ನಿಟ್ಟಿನಲ್ಲಿ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡ ಜಾನುವಾರು ಸಣ್ಣ ಜಾನುವಾರುಗಳು ಆಕಸ್ಮಿಕವಾಗಿ ಸಾವು ಸಂಭವಿಸಿದಾಗ ಪರಿಹಾರ ನೀಡಲು ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಇಲಾಖೆಗೆ ಅಗತ್ಯ ವಾಹನ ಖರೀದಿಗಾಗಿ ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಚತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆರೆಕಟ್ಟೆ, ಗೋಕಟ್ಟೆ, ಬೃಹತ್ ನೀರಾವರಿಗಳ ಬಗ್ಗೆ ಪ್ರತ್ಯೇಕವಾಗಿ ಪಟ್ಟಿ ತಯಾರಿಸಿ ನೀಡುವಂತೆ ಸೂಚಿಸಿದ ಅವರು ನಗರದ ಸ್ವಚ್ಚತೆಗೆ ಹೆಚ್ಚು ಗಮನಹರಿಸಿ ನೀರು ನಿಲ್ಲದಂತೆ ಎಚ್ಚರವಹಿಸಿ ಎಂದ ಅವರು ಪ್ಲಾಸ್ಟಿಕ್ ರಸ್ತೆಗಳಲ್ಲಿ ಬಿಸಾಡುವುದನ್ನು ತಪ್ಪಿಸಲು ಕ್ರಮವಹಿಸಿ ಎಂದು ಸೂಚಿಸಿದರು.
ಮಳೆಗಾಳಿಗೆ ಬೀಳುವಂತಿರುವ ವಿದ್ಯುತ್ ಕಂಬಗಳು ಹಾಗೂ ಜೊತಾಡುವ ವಿದ್ಯುತ್ ತಂತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ವಿದ್ಯುತ್ ಕಂಬಗಳಿAದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡು ಬಳಕೆ ಮಾಡಲಾಗುತ್ತಿದೆಯೇ ಗಮನಹರಿಸಿ ಯಾವುದೇ ಅವಘಡ ಸಂಭವಿಸಿದಲ್ಲಿ ಹೊಣೆಗಾರಾರು ಯಾರು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ನಾಯಿ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಂದೋಲನ ರೀತಿಯಲ್ಲಿ ಸಂತಾನ ಹರಣ ಶಸ್ತçಚಿಕಿತ್ಸೆ ಮಾಡಿದಲ್ಲಿ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ನಾಯಿ ಹಾವಳಿಯನ್ನು ನಿಯಂತ್ರಿಸ ಬಹುದಾಗಿದೆ ಎಂದರು.
ಶಾಲಾ ಆವರಣ, ಆಸ್ಪತ್ರೆ ಆವರಣ ಹಾಗೂ ಮತ್ತಿತರ ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗೆ ತಾಗುವಂತಿದ್ದರೆ ಅವುಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ತಿಳಿಸದರು.
ಯಾವುದೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವರದಿ ಪರ್ವಿಜ್ ಅಹಮದ್ ಹಾಸನ
ಕಬ್ಬು ಕಟಾವು ಬಾಕಿ ಹಣ ಬಿಡುಗಡೆ ಕುರಿತು ಅಗ್ರಹ.
ಆಲಮೇಲ ತಾಲೂಕಿನ ಕಬ್ಬು ಕಟಾವ ಹಾಗೂ ಸಾಗಾಣಿಕೆ ದಾರರು ಸಂಘದ ಪದಾಧಿಕಾರಿಗಳಿಂದ ನಾವು ಕಳೆದ ವರ್ಷ ದಿನಾಂಕ. 28. 09. 2024 ರಂದು ಹಮ್ಮಿಕೊಂಡಿದ್ದ ಅನಿರ್ದಿಷ್ಟ ಅವಧಿ ಸತ್ಯಾಗ್ರದಲ್ಲಿ ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆಯಲ್ಲಿ ಬಾಲಾಜಿ ಕಾರ್ಖಾನೆ ಯರಗಲ್ ತಾಲೂಕಿನ ಮುದ್ದೇಬಿಹಾಳ ಇವರ ನೀಡಿರುವಂತಹ ಹಣ ನೀಡಲು ನಿರ್ಧರಿಸಿರುವುದು. ಇರುತ್ತದೆ ಅದರಂತ ಅವರು 57 ರೂಪಾಯಿ ಗಳಂತೆ ಎರಡು (2)ಕಂತುಗಳಲ್ಲಿ ನೀಡಿದ್ದು ಇರುತ್ತದೆ. ಆದರೆ ಕೆಪಿಆರ್ ಕಾರ್ಖಾನೆಯವರು 57 ಮತ್ತು 28. 5 ರೂಪಾಯಿಗಳನ್ನು ಮಾತ್ರ ನೀಡುತ್ತಾರೆ ಮತ್ತು 28.5 ಇನ್ನುವರೆಗೂ ನೀಡಿರುವುದಿಲ್ಲ ಈ ವರ್ಷ ಕರಾರು ಬಾಂಡಗಳಲ್ಲಿ ಅನೇಕ ರೀತಿಯ ಷರತುಗಳನ್ನು ಹಾಕಿದ್ದು ಈ ಎಲ್ಲಾ ಷರತ್ತುಗಳಿಗೆ ವಾಹನ ಮಾಲೀಕರು ಒಪ್ಪಿಗೆ ಇರುವುದಿಲ್ಲ. ಈ ಕರಾರುಗಳಿಗೆ ಒಪ್ಪಿದರೆ ಮಾತ್ರ ಅಗ್ರಿಮೆಂಟ್ ಮಾಡಿಕೊಳ್ಳುತ್ತೇವೆ ಅಂಥಾ ಕಟಾವು ಹಾಗೂ ಸಾಗಾಣಿಕೆ ದಾರರಿಗೆ ಸತಾಯಿಸುತ್ತಿದ್ದಾರೆ.
ಆದ ಕಾರಣ ಎಲ್ಲಾ ಗಾಡಿಯ ಮಾಲೀಕರು ಸೇರಿ ದಿನಾಂಕ 16/6/2025 ರಂದು ಬೆಳಗ್ಗೆ 11 ಗಂಟೆಗೆ ಕಾರ್ಖಾನೆ ಅಧಿಕಾರಿಗಳಿಗೆ ನಮ್ಮ ಬೇಡಿಕೆಗಳ ಮನವಿಯನ್ನು ಸಲ್ಲಿಸಿ. ಮೂರು ದಿನಗಳವಾದರೂ ಯಾವುದೇ ಉತ್ತರ ಬಂದಿರುವುದಿಲ್ಲ.ಆದ ಕಾರಣ ದಿನಾಂಕ.23.6.2025 ರಂದು ಕಾರ್ಖಾನೆ ಆವರಣದ ಮುಂದುಗಡೆ ಆನಿರ್ದಿಷ್ಟವಧಿ ಧರಣಿ ಸತ್ಯಾಗ್ರ ಹಮ್ಮಿಕೊಳ್ಳಲು ನಿರ್ಧರಿಸಿದ್ದೇವೆ ಎಂದು ಶ್ರೀ ಶಶಿಧರ್ ನಾಯ್ಕೋಡಿ ಅಧ್ಯಕ್ಷರು ಮಾಂತೇಶ್ ಕತ್ತಿ ಉಪಾಧ್ಯಕ್ಷರು ಮಹೇಶ್ ಹುನಳ್ಳಿ .ಕಾರ್ಯದರ್ಶಿ. ಕರಿಯಪ್ಪ ಹಿರೇ ಪೂಜಾರಿ ಬಸಪ್ಪ ಹಂಜಗಿ ರಾಜು ಮೇತ್ರಿ ನಬಿರರಸೂಲ ಸುಂಠಣ. ರಾಜಶೇಖರ.ಬಿರಾದರ.ಯಲ್ಲಪ್ಪ ಪೂಜಾರಿ.ಜಗದೇವಪ್ಪ ಹಲಕಟ್ಟಿ ಕನಸಿನ ಭಾರತ ಪತ್ರಿಕೆಗೆ ತಿಳಿಸಿದರು
ವರದಿ. ಉಮೇಶ ಕಟಬರ.
ನಮ್ಮ ಊರಿಗೆ ನಮ್ಮ ಶಾಸಕರು ಎಂಬ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್
ಚಿಕ್ಕಬಳ್ಳಾಪುರದ ಜನಪ್ರಿಯ ಶಾಸಕರಾದಂತ ಶ್ರೀ ಪ್ರದೀಪ್ ಈಶ್ವರ್ ರವರು ನಮ್ಮ ಊರಿಗೆ ನಮ್ಮ ಶಾಸಕರು ಎಂಬ ಕಾರ್ಯಕ್ರಮದ ಅಡಿಯಲ್ಲಿ ಇಂದು ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯ
ಇಟ್ಟಪ್ಪನಹಳ್ಳಿ, ಹಾಗೂ ಗೊಂಗಡಿಪುರ ಗ್ರಾಮಗಳಿಗೆ 36 ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಜೊತೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸುತ್ತಾ ಸ್ಥಳದಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ಪ್ರಯತ್ನವನ್ನು ಮಾಡಿದರು. ರಸ್ತೆಯನ್ನೇ ಕಾಣದಂತ ಈ ಹಳ್ಳಿಗಳಿಗೆ ಸಿಸಿ ರಸ್ತೆಯನ್ನು ಮಂಜೂರು ಮಾಡುವ ಭರವಸೆಯನ್ನು ನೀಡಿದರು. ಈ ಗ್ರಾಮಗಳಲ್ಲಿ ಒಳಚರಂಡಿಯ ವ್ಯವಸ್ಥೆಯೇ ಇರಲಿಲ್ಲ ಇದನ್ನು ನೋಡಿದ ಶಾಸಕರು ಇನ್ನು ಒಂದು ವಾರದ ಒಳಗೆ ಈ ಎಲ್ಲಾ ಚರಂಡಿ ವ್ಯವಸ್ಥೆ ಮತ್ತು ಸ್ವಚ್ಛತಾ ಕಾರ್ಯ ಆಗಬೇಕೆಂದು ಸೂಚಿಸಿದರು ಬೀದಿ ದೀಪದ ವ್ಯವಸ್ಥೆಯನ್ನು ಸರಿಪಡಿಸುವಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಆದೇಶಿಸಿದರು ಮಾನ್ಯ ಶಾಸಕರು ಮಾತನಾಡುತ್ತಾ ನಾನು ಶಾಸಕನಾದಾಗಿಂದ ಈ ಕ್ಷೇತ್ರದಲ್ಲಿ 186 ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸಿ ಅದಕ್ಕೆ ಪರಿಹಾರ ಸೂಚಿಸಿದ್ದೇನೆ ಮುಂದಿನ ದಿನಗಳಲ್ಲಿ ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಿರುವ ಯೋಜನೆಯನ್ನು ರೂಪಿಸಿಕೊಂಡಿದ್ದೇನೆ ಎಂದು ತಿಳಿಸಿದರು