ಸ್ವಾಮಿ ವಿವೇಕಾನಂದ

Share

ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ 12, 1863 – ಜುಲೈ 4, 1902) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ 12 ರಂದು ರಾಷ್ಟ್ರೀಯ “ಯುವದಿನ”ವೆಂದು ಆಚರಿಸಲಾಗುತ್ತದೆ.
ಜನನ
ವಿವೇಕಾನಂದರ ಪೂರ್ವದ ಹೆಸರು ನರೇಂದ್ರನಾಥ ದತ್ತ. ಇವರು 1863, ಜನವರಿ 12ರಂದು ಕೊಲ್ಕತ್ತದಲ್ಲಿ ಜನಿಸಿದರು. ತಂದೆ ವಿಶ್ವನಾಥ ದತ್ತ. ತಾಯಿ ಭುವನೇಶ್ವರಿ ದೇವಿ. ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ‘ವಿವೇಕಾನಂದ’ ಎಂಬ ಹೆಸರನ್ನು ಪಡೆದರು. ಕಲ್ಕತ್ತೆಯ ಸ್ಕಾಟಿμï ಚರ್ಚ್ ಕಾಲೇಜಿನಲ್ಲಿ ತತ್ತ್ವಶಾಸ್ತ್ರ ಅಧ್ಯಯನ ಮಾಡಿದರು. ರಾಮಕೃಷ್ಣರ ಒಡನಾಟ :
ನರೇಂದ್ರರಿಗೆ ರಾಮಕೃಷ್ಣರ ಮೊದಲ ಪರಿಚಯ ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಿ. ಹೆಸ್ಟಿಯವರು ವಿಲಿಯಮ್ ವಡ್ಸ್ರ್ವವರ್ತ್ ಅವರ “ದ ಎಕ್ಸ್ಸಕರ್ಶನ್” ಎಂಬ ಕವಿತೆಯಲ್ಲಿನ “ಸಮಾಧಿ” ಪದವನ್ನು ವಿವರಿಸುವಾಗ ಸಮಾಧಿಯ ನಿಜವಾದ ಅರ್ಥ ತಿಳಿಯಲು ದಕ್ಷಿಣೇಶ್ವರದ ರಾಮಕೃಷ್ಣರನ್ನೊಮ್ಮೆ ಭೇಟಿ ನೀಡಿ ಎಂದು ಸಲಹೆ ಇತ್ತರು. ಇವರ ಸಲಹೆಯ ಮೇರೆಗೆ ಹಲವಾರು ವಿದ್ಯಾರ್ಥಿಗಳು ರಾಮಕೃಷ್ಣರನ್ನು ನೋಡಲು ಉತ್ಸುಕರಾದರು. ಆವರಲ್ಲಿ ನರೇಂದ್ರರೂ ಒಬ್ಬರು.
1881ನೇ ಇಸವಿ ನವೆಂಬರದಲ್ಲಿ ಎಫ್.ಎ (ಲಲಿತಕಲೆ) ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾಗ, ರಾಮಚಂದ್ರದತ್ತರು ರಾಮಕೃಷ್ಣರು ಪ್ರವಚನ ನಡೆಸುತ್ತಿದ್ದರು ಸುರೇಂದ್ರನಾಥ ಮಿತ್ರರ ಮನೆಗೆ ಕರೆದರು. ಅಲ್ಲಿ ರಾಮಕೃಷ್ಣರು ನರೇಂದ್ರನಿಗೆ ಹಾಡಲು ಕೇಳಿಕೊಂಡರು. ಅವರ ಗಾಯನ ಪ್ರತಿಭೆಯನ್ನು ಮೆಚ್ಚಿ ರಾಮಕೃಷ್ಣರು ನರೆಂದ್ರನನ್ನು ದಕ್ಷಿಣೇಶ್ವರಕ್ಕೆ ಬರಲು ಆಮಂತ್ರಿಸಿದರು. ಆದರೆ ನರೇಂದ್ರರು ಅದರ ಬಗ್ಗೆ ಉತ್ಸಾಹ ತೊರಿಸಲಿಲ್ಲ.
1882 ರಲ್ಲಿ ನರೇಂದ್ರರು ತನ್ನ ಇಬ್ಬರು ಗೆಳೆಯರೊಂದಿಗೆ ರಾಮಕೃಷ್ಣರನ್ನು ಭೇಟಿ ಮಾಡಲು ದಕ್ಷಿಣೇಶ್ವರಕ್ಕೆ ಹೋದರು. ರಾಮಕೃಷ್ಣರ ಆ ಭೇಟಿ ಅವರ ಜೀವನಕ್ಕೆ ಮಹತ್ವದ ತಿರುವನ್ನು ಕೊಟ್ಟಿತು. ಆದರೂ ನರೇಂದ್ರರು ರಾಮಕೃಷ್ಣರನ್ನು ಗುರುಗಳನ್ನಾಗಿ ಒಪ್ಪಿಕೊಳ್ಳಲಿಲ್ಲ. ರಾಮಕೃಷ್ಣರ ಆಲೋಚನೆಗಳನ್ನು ಒಪ್ಪಿಕೊಳ್ಳದಿದ್ದರೂ, ಅವರ ಮಗುವಿನಂಥ ವ್ಯಕ್ತಿತ್ವ ಅವರನ್ನು ಪದೇ ಪದೇ ದಕ್ಷಿಣೀಶ್ವರಕ್ಕೆ ಭೇಟಿ ನೀಡಲು ಪ್ರೇರೇಪಿಸಿತು.
ಮೊದಮೊದಲಿಗೆ ರಾಮಕೃಷ್ಣರ ಭಾವಪರವಶತೆಯ ಮತ್ತು ದೂರದೃಷ್ಟಿಯನ್ನು ಕೇವಲ ಕಾಲ್ಪನಿಕ ಬರಿ ಭ್ರಮೆ ಎಂದು ಭಾವಿಸಿದ್ದರು. 1884 ಇಸವಿಯಲ್ಲಿ ಅನಿರೀಕ್ಷಿತವಾಗಿ ನರೇಂದ್ರರ ತಂದೆಯವರು ಇಹಲೋಕ ತ್ಯಜಿಸಿದರು. ಅವರ ಮರಣಾ ನಂತರ ಕುಟುಂಬ ದಿವಾಳಿಯಾಯಿತು, ಸಾಲಗಾರರ ಬಾಧೆ ಶುರುವಾಯಿತು.ಅವರ ಕುಟುಂಬದವರು ಪೂರ್ವಜರ ಮನೆಯಿಂದ ಹೊರಗೆ ಹಾಕಿದರು.
ಅವರು ಕೆಲಸ ಹುಡುಕುವುದರಲ್ಲಿ ವಿಫಲರಾದಾಗ, ದೇವರ ಅಸ್ತಿತ್ವದ ಬಗ್ಗೆಯೇ ಸಂದೇಹಪಟ್ಟರು. ಆದರೆ ರಾಮಕೃಷ್ಣರ ಸಾನಿಧ್ಯ ಅವರಿಗೆ ಸಾಂತ್ವನ ನೀಡುತಿತ್ತು. ಒಂದು ದಿನ ನರೇಂದ್ರರು ಅವರ ಕುಟುಂಬದ ಅಭ್ಯುದಯಕ್ಕೋಸ್ಕರ ಕಾಳಿ ದೇವಿಯನ್ನು ಪ್ರಾರ್ಥಿಸುವಂತೆ ರಾಮಕೃಷ್ಣರನ್ನು ಕೇಳಿಕೊಂಡರು. ಅದಕ್ಕೆ ಅವರು ನೀನೊಬ್ಬನೇ ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ಪ್ರಾರ್ಥಿಸು ಎಂದು ಸಲಹೆ ನೀಡಿದರು. ಅವರ ಸಲಹೆಯಂತೆ ಎರಡು, ಮೂರು ಸಲ ದೇವಸ್ಥಾನಕ್ಕೆ ಹೋದರು.
ಆದರೆ ಅವರು ಯಾವುದೇ ರೀತಿಯ ಲೌಕಿಕ ಅವಶ್ಯಕತೆಗಳನ್ನು ಪೂರೈಸಲು ದೇವಸ್ಥಾನಕ್ಕೆ ಹೋಗಿ ಪ್ರಾರ್ಥಿಸುವುದರಲ್ಲಿ ವಿಫಲರಾದರು. ಆದರೆ ಪ್ರತಿ ಬಾರಿಯು ಮುಕ್ತಿಗಾಗಿ ಕೇಳಿಕೊಳ್ಳಲμÉ್ಟೀ ಶಕ್ತರಾದರು. ಕೊನೆಗೆ ಅವರು ಸರ್ವಸಂಗ ಪರಿತ್ಯಾಗ ಮಾಡಿ ರಾಮಕೃಷ್ಣರನ್ನು ಗುರುಗಳನ್ನಾಗಿ ಸ್ವೀಕಾರ ಮಾಡಿದರು. 1885 ರಲ್ಲಿ ರಾಮಕೃಷ್ಣರು ಕಲ್ಕತ್ತಾದ ಕೊಸ್ಸಿಪುರದಲ್ಲಿ ಇರುವ ಅವರ ತೋಟದ ಮನೆಯಲ್ಲಿ ಗಂಟಲಿನ ಹುಣ್ಣಿನಿಂದ ಬಳಲುತಿದ್ದರು.
ನರೇಂದ್ರರು ತಮ್ಮ ಆಧ್ಯಾತ್ಮಿಕ ವಿಧ್ಯಾಭ್ಯಾಸವನ್ನು ಮುಂದುವರಿಸಿದರು. ಅವರು ಕೊಸ್ಸಿಪುರದಲ್ಲಿ ನಿರ್ವಿಕಲ್ಪ ಸಮಾಧಿಯನ್ನು ಅನುಭವಿಸಿದರು. ನರೇಂದ್ರ ಮತ್ತು ರಾಮಕೃಷ್ಣರ ಇತರ ಶಿಷ್ಯರು ಗುರುಗಳ ಅದೇಶದಂತೆ ಅವರಂತೆ ನಿಲುವಂಗಿ ಮತ್ತು ಕಾವಿ ತೊಟ್ಟುಕೊಂಡರು. ಜನ ಸೇವೆಯೇ ಜನಾರ್ದನನ ಸೇವೆ ಎಂದರು. ರಾಮಕೃಷ್ಣರು ನರೇಂದ್ರರನ್ನು ತಮ್ಮ ಶಿಷ್ಯವೃಂದದ ನಾಯಕರನ್ನಾಗಿ ನೇಮಿಸಿದರು. ರಾಮಕೃಷ್ಣರು 1886, ಆಗಸ್ಟ 16 ರಂದು ನಿಧನ ಹೊಂದಿದರು.
ರಾಮಕೃಷ್ಣ ಮಠದ ಸ್ಥಾಪನೆ
ರಾಮಕೃಷ್ಣರ ಮರಣಾ ನಂತರ ಅವರ ಮಠಕ್ಕೆ ಬರುವ ಆದಾಯವು ಕಡಿಮೆಯಾಯಿತು. ಇದರಿಂದಾಗಿ ಅವರು ಬೇರೆ ಜಾಗವನ್ನು ಹುಡುಕಬೇಕಾಯಿತು. ಬಾರನಗರದಲ್ಲಿ ನರೇಂದ್ರರು ಶಿಥಿಲವಾದ ಮನೆಯನ್ನು ಖರೀದಿಸಿ, ಆ ಮನೆಯನ್ನು ಅವರು ಮಠವನ್ನಾಗಿ ಪರಿವರ್ತಿಸಲು ಆಲೋಚಿಸಿದರು. ಆ ಮನೆಯ ಬಾಡಿಗೆಯನ್ನು ಭಿಕ್ಷಾಟನೆ ಮೂಲಕ ತುಂಬುತಿದ್ದರು.
ಈ ಮನೆಯೆ ರಾಮಕೃಷ್ಣರ ಮಠದ ಮೊದಲ ಶಾಖೆಯಾಯಿತು. ಅಲ್ಲಿ ನರೇಂದ್ರ ಮತ್ತು ಅವರ ಶಿಷ್ಶರು ಹೆಚ್ಚಿನ ಸಮಯವನ್ನು ಧ್ಯಾನ ಮತ್ತು ಧಾರ್ಮಿಕ ವಿಷಯಗಳನ್ನು ಅಭ್ಯಾಸ ಮಾಡುವಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದರು. ಮುಂದಿನ ಆ ದಿನಗಳನ್ನು ನೆನೆಸುತ್ತಾ “ಪ್ರತಿದಿನ ಬೆಳಿಗ್ಗೆ 3 ರಿಂದ ರಾತ್ರಿಯವರೆಗು ನಾವು ಧ್ಯಾನದಲ್ಲೆ ಕಳೆಯುತ್ತಿದ್ದೆವು.
ಜಗತ್ತಿನ ಪರಿವೆಯೆ ಇಲ್ಲದೆ, ನಮ್ಮ ಸಾಧನಾ ಪ್ರಪಂಚದಲ್ಲಿ ಮುಳುಗಿದ್ದೆವು” 1881 ನೇ ಇಸವಿಯಲ್ಲಿ ನರೇಂದ್ರರು ವೈಷ್ಣವ ಚರಣ್ ಬಾಸ್ಕರವರ ಜೊತೆ ಬಂಗಾಳಿ ಭಾμÉಯ ಕವಿತೆಗಳನ್ನೊಳಗೊಂಡ “ಸಂಗೀತ ಕಲ್ಪತರು “ಎಂಬ ಪುಸ್ತಕವನ್ನು ಸಂಗ್ರಹಿಸಿದರು. ಆದರೆ ಹಲವು ಸಮಸ್ಯೆಗಳಿಂದ ಅದನ್ನು ಪ್ರಕಟಿಸಲಾಗಲಿಲ್ಲ..
ವಿವೇಕಾನಂದರ ಭಾರತ ಪರ್ಯಟನೆ
1888 ನರೇಂದ್ರರು ಭಾರತ ಪರ್ಯಟನೆಗೆ ಹೊರಟರು. ಅವರು ಪರ್ಯಟನೆಗೆ ಹೋಗುವಾಗ ಅವರ ಜೊತೆಗೆ ಕಮಂಡಲು ದಂಡ ಮತ್ತು ಅವರಿಗೆ ಪ್ರಿಯವಾದ ಭಗವದ್ಗೀತೆ ಹಾಗೂ “ದಿ ಇಮಿಟೆಶ್ನ್ ಆಫ್ ಕ್ರೈಸ್ತ್” ಎಂಬೆರಡು ಪುಸ್ತಕಗಳನ್ನು ತಮ್ಮ ಜೊತೆಗೆ ಒಯ್ಯುತ್ತಿದ್ದರು. ನರೇಂದ್ರರು ಸತತವಾಗಿ ಐದು ವರ್ಷಗಳ ಕಾಲ ಭಾರತವನ್ನು ಸಂಚರಿಸಿದರು.
ಉತ್ತರ ಭಾರತ
1888 ರಲ್ಲಿ ಗೌತಮ ಬುದ್ಧ ಮತ್ತು ಆದಿ ಶಂಕರಾಚಾರ್ಯರು ಧರ್ಮ ಪ್ರಚಾರ ಮಾಡಿದ ವಾರಣಾಸಿಗೆ ಭೇಟಿ ನೀಡಿದರು. ಅಲ್ಲಿ ಅವರು ಬಂಗಾಳಿ ಬರಹಗಾರ ಭೂದೇವ ಮುಖ್ಯೋಪಾಧ್ಯಾಯ ಮತ್ತು ಹಿಂದು ಸಂತ ತ್ರ್ಯೆಲಂಗರನ್ನು ಭೇಟಿ ಮಾಡಿದರು. ಭೂದೇವ ಮುಖ್ಯೋಪಾಧ್ಯಾಯರು “ಇಂತಹ ದೂರದೃಷ್ಟಿ ಮತ್ತು ವಿಚಾರವಾದವನ್ನು ಇಷ್ಟು ಕಿರಿಯ ಪ್ರಾಯದಲ್ಲಿ ಪಡೆದುಕೊಂಡ ನೀನು ಮುಂದೊಂದು ದಿನ ದೊಡ್ಡ ವ್ಯಕ್ತಿಯಾಗುವೆ” ಎಂದು ಪ್ರಶಂಸಿಸಿದರು. ನಂತರ ಸಂಸ್ಕ್ರತ ಮತ್ತು ವ್ಯೆದಿಕ ವಿದ್ವಾಂಸರಾದ ಬಾಬು ಪರಮದಾಸ್ ಮಿತ್ರ ಅವರನ್ನು ಭೇಟಿ ಮಾಡಿದರು. ನಂತರ ಅವರು ಅಯೋಧ್ಯಾ, ಲಕ್ನೋ ವೃಂದಾವನ ಮತ್ತು ಋಷಿಕೇಶಕ್ಕೆ ಭೇಟಿ ನೀಡಿದರು.
ಅದ್ವೈತ ಸಿದ್ಧಾಂತದ ಉಪಯುಕ್ತತೆ
ಕೇವಲ ರಾಮಕೃಷ್ಣ ಪರಮಹಂಸರ ಶಿಷ್ಯರಾಗದೆ ತಮ್ಮದೇ ಶೈಲಿಯಲ್ಲಿ ದೊಡ್ಡ ಚಿಂತಕರಾಗಿ ವಿವೇಕಾನಂದರು ಹೆಸರು ಪಡೆದಿದ್ದಾರೆ. ಅವರ ಮುಖ್ಯ ಕಾಣಿಕೆಯೆಂದರೆ ಕೇವಲ ತಾತ್ವಿಕವಾಗಿ ಉಚ್ಚ ತತ್ತ್ವಜ್ಞಾನ ಮಾತ್ರವಲ್ಲದೆ ಸಾಮಾಜಿಕ ಹಾಗೂ ರಾಜಕೀಯ ದೃಷ್ಟಿಯಿಂದಲೂ ಉಪಯುಕ್ತ ಎಂಬುದನ್ನು ತೋರಿಸಿಕೊಟ್ಟರು. ಅವರ ಅಭಿಪ್ರಾಯದಂತೆ, ರಾಮಕೃಷ್ಣರಿಂದ ಅವರು ಪಡೆದ ಮುಖ್ಯ ಬೋಧನೆಗಳಲ್ಲಿ ಒಂದೆಂದರೆ ಎಲ್ಲರಲ್ಲಿಯೂ ದೇವರಿದ್ದಾನೆ ಎಂಬುದು.
ಇದೇ ಅವರ ಮಂತ್ರವಾಯಿತು ಮತ್ತು ಅವರ “ದರಿದ್ರ ನಾರಾಯಣ ಸೇವೆ’ ಎಂಬ ತತ್ತ್ವಕ್ಕೆ ದಾರಿ ಮಾಡಿ ಕೊಟ್ಟಿತು. ಈ ತತ್ತ್ವದಂತೆ ಬಡ ಜನರ ಸೇವೆಯಲ್ಲಿಯೇ ದೇವರ ಸೇವೆಯನ್ನು ಮಾಡುವ ದಾರಿಯನ್ನು ಅವರು ಪಾಲಿಸಿದರು. ಎಲ್ಲರಲ್ಲಿಯೂ ದೇವರಿದ್ದು ಎಲ್ಲರೂ ಸಮಾನರೆಂದಾದ ಮೇಲೆ ಕೆಲವರಿಗೆ ಮಾತ್ರ ಏಕೆ ಹೆಚ್ಚು ಬೆಲೆ ಬರಬೇಕು ಎಂಬ ಪ್ರಶ್ನೆಯನ್ನು ವಿವೇಕಾನಂದರು ಕೇಳಿಕೊಂಡರು.
ಅವರ ಅಂತಿಮವಾದ ತೀರ್ಮಾನವೆಂದರೆ ಭಕ್ತನು ಮೋಕ್ಷವನ್ನು ಅನುಭವಿಸಿದಾಗ ನಮ್ಮಲ್ಲಿರುವ ಎಲ್ಲ ಭೇದಗಳೂ ಮಾಯವಾಗಿ, ಉಳಿಯುವುದೆಂದರೆ ಬ್ರಹ್ಮನೊಂದಿಗೆ ತಮ್ಮ ಐಕ್ಯವನ್ನು ಅರಿಯದ ಮತ್ತು ಕೆಳತುಳಿಯಲ್ಪಟ್ಟಿರುವ ಜನರ ಬಗೆಗೆ ಸಂತಾಪ ಮತ್ತು ಅವರಿಗೆ ಸಹಾಯ ಮಾಡುವ ಸದೃಢ ನಿಶ್ಚಯ.
ವಿವೇಕಾನಂದರ ವಿಶ್ವಪರ್ಯಟನೆ
ವಿವೇಕಾನಂದರು ಭಾರತದ ತತ್ವಜ್ಞಾನ, ಯೋಗ, ವೇದಾಂತ ಇವೆಲ್ಲವನ್ನು ಪಾಶ್ಚಿಮಾತ್ಯದೇಶಗಳಲ್ಲಿ ಪ್ರಚಾರ ಮಾಡಿದರು. ಅವರು ತಮ್ಮ ಗುರುಗಳ ಒಳ್ಳೆಯ ಮನೋಭಾವದ ಕಡೆಗೆ ವಾಲಿದರು. ಅವರು ಸನ್ಯಾಸಿಯಾಗಿ ದೇವರಸೇವೆ ಹೇಗೆ ಮಾಡಬಹುದೆಂದು ನಿರೂಪಿಸಿದರು. ಗುರು ರಾಮಕೃಷ್ಣರ ಮರಣಾ ನಂತರ ವಿವೇಕಾನಂದರು ಭಾರತ ಪ್ರವಾಸ ಕೈಗೊಂಡರು.
ಭಾರತದ ಉಪಖಂಡದಲ್ಲಿ ಬ್ರಿಟೀಷರ ಷರತ್ತುಗಳನ್ನು ಆಧ್ಯಯನ ಮಾಡಿದರು. ನಂತರ ಅವರು ಅಮೇರಿಕಾ ಪ್ರವಾಸ ಕೈಗೊಂಡರು. 1893ರಲ್ಲಿ ಚಿಕಾಗೋದಲ್ಲಿ ನಡೆದ ಸಮ್ಮೇಳನದಲ್ಲಿ ಭಾರತೀಯರ ಧಾರ್ಮಿಕತೆಯನ್ನು ಎತ್ತಿ ಹಿಡಿದರು. ವಿವೇಕಾನಂದರು ನೂರಕ್ಕು ಹೆಚ್ಚು ಖಾಸಗಿ ಹಿಂದೂಸಂಸ್ಥೆಗಳಲ್ಲಿ ತಮ್ಮ ವಿಚಾರಧಾರೆಯನ್ನು ಹರಿಸಿದರು. ದೇಶ ವಿದೇಶಗಳಲ್ಲಿ ಹಿಂದೂಧರ್ಮದ ತತ್ವವನ್ನು ಭೋಧಿಸಿದರು.
ಅವರು ಪ್ರಪಂಚದಾದ್ಯಂತ ಪ್ರಯಾಣ ಮಾಡಿ, ಅಲ್ಲಿನ ಭಕ್ತರನ್ನುದ್ದೇಶಿಸಿ ಮಾಡಿದ ಭಾಷಣಗಳನ್ನು ಒಟ್ಟುಗೂಡಿಸಿ ಬರೆಯಲ್ಪಟ್ಟ ಅವರ ನಾಲ್ಕು ಪುಸ್ತಕಗಳು ಹಿಂದೂ ಧರ್ಮದ ಯೋಗ ಸಿದ್ಧಾಂತವನ್ನು ತಿಳಿಯ ಬಯಸುವವರಿಗೆ, ಮೂಲಭೂತ ಪಠ್ಯಗಳೆಂದೇ ಪರಿಗಣಿತವಾಗಿವೆ. *ವಿವೇಕಾನಂದರ ನಂಬಿಕೆಗಳಲ್ಲಿ ಮುಖ್ಯವಾದುದು ನಮ್ಮಲ್ಲಿ ಎಲ್ಲರೂ ಮುಕ್ತರಾಗುವವರೆಗೆ ಯಾರೊಬ್ಬರೂ ಮುಕ್ತರಾಗಲಾರರೆಂಬುದು.
ವೈಯಕ್ತಿಕ ಮುಕ್ತಿಯ ಆಸೆಯನ್ನು ಬಿಟ್ಟು ಎಲ್ಲರ ಮುಕ್ತಿಗಾಗಿ ಶ್ರಮಿಸುವವನೇ ಅವರ ದೃಷ್ಟಿಯಲ್ಲಿ ಪ್ರಬುದ್ಧ ವ್ಯಕ್ತಿ. ವಿವೇಕಾನಂದರು, ಧರ್ಮ ಮತ್ತು ಸರ್ಕಾರ ದ ನಡುವೆ ಕಟ್ಟುನಿಟ್ಟಾದ ದೂರವಿಡುವಂತೆ ಮನವಿ ಮಾಡಿದರು. ಸಾಮಾಜಿಕ ಕಟ್ಟಲೆಗಳು ಧರ್ಮದ ಮೂಲಕ ರೂಪುಗೊಂಡಿರುತ್ತವೆಯಾದರೂ, ಸರ್ಕಾರಿ ಕೆಲಸಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಪ್ರಾಶಸ್ತ್ಯವಿರಬಾರದು ಎಂದು ಅವರ ನಂಬಿಕೆಯಾಗಿತ್ತು.
ಅವರ ಕಲ್ಪನೆಯ ಆದರ್ಶ ಸಮಾಜವೆಂದರೆ ಬ್ರಾಹ್ಮಣ ಜ್ಞಾನ, ಕ್ಷತ್ರಿಯ ಸಂಸ್ಕøತಿ, ವೈಶ್ಯ ದಕ್ಷತೆ ಮತ್ತು ಶೂದ್ರರ ಸಮಾನತೆಯ ಮೇಲೆ ನಿಂತಿರುವಂಥ ಸಮಾಜ. ಯಾವುದೇ ಒಂದು ವರ್ಗದ ಪ್ರಾಶಸ್ತ್ಯ ಸಮಾಜದಲ್ಲಿ ಸಮಾನತೆಯನ್ನು ಹಾಳುಗೆಡವುತ್ತದೆ ಎಂಬುದು ಅವರ ಸಾಮಾಜಿಕ ದೃಷ್ಟಿ. ಆಳವಾಗಿ ಸಮಾಜವಾದಿಯಾಗಿದ್ದರೂ, ಧರ್ಮದ ಮೂಲಕ ಸಮಾಜವಾದವನ್ನು ಹೇರುವುದು ತಪ್ಪೆಂದೂ, ಸಮಾಜವಾದ ಎಂಬುದು ವೈಯಕ್ತಿಕವಾಗಿ ಸಂದರ್ಭ ಸರಿಯಿದ್ದಾಗ ಜನರು ಕೈಗೊಳ್ಳಬೇಕಾದ ನಿರ್ಧಾರವೆಂದೂ ಅವರ ದೃಷ್ಟಿ.
ಸರ್ವಧರ್ಮಸಮ್ಮೇಳನದಲ್ಲಿ ಮಾಡಿದ ಭಾಷಣ
ಸರ್ವಧರ್ಮಸಮ್ಮೇಳನ, ದ ಭಾಷಣದಲ್ಲಿ ಪ್ರತಿಪಾದಿಸಿದ ಹಿಂದೂ ಧರ್ಮದ ಸಿದ್ಧಾಂತಗಳು, ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಶಿಸಿದವು. ವಿವೇಕಾನಂದರ ಅತಿ ಪ್ರಸಿದ್ಧ ಯಶಸ್ಸು1893 ರಲ್ಲಿ ಶಿಕಾಗೊ ನಗರದಲ್ಲಿ ನಡೆದ ಪ್ರಪಂಚ ಮತಗಳ ಸಂಸತ್ತಿನಲ್ಲಿ ಬಂದಿತು. ಅವರ ಭಾಷಣದಲ್ಲಿ ಮೊದಲ ವಾಕ್ಯವಾಗಿದ್ದ “ಅಮೆರಿಕದ ಸಹೋದರ ಸಹೋದರಿಯರೇ” ಎಂಬ ವಾಕ್ಯ ಚಿರಸ್ಮರಣೀಯವಾಗಿದೆ.
‘ವಿಶ್ವದ ಧರ್ಮಗಳ ಸಂಸತ್ತು’ ಸೆಪ್ಟೆಂಬರ್ 11, 1893 ರಂದು ವಿಶ್ವದ ಕೊಲಂಬಿಯನ್ ಪ್ರದರ್ಶನದ ಭಾಗವಾಗಿ ಈಗ ಚಿಕಾಗೋದ, “ಆರ್ಟ್ ಇನ್ಸ್ಟಿಟ್ಯೂಟ್ನ ಶಾಶ್ವತ ಸ್ಮಾರಕ ಕಲಾ ಭವನ” ದಲ್ಲಿ (ವಿಶ್ವದ ಕಾಂಗ್ರೆಸ್ ಸಹಾಯಕ ಕಟ್ಟಡ ಎಂದೂ ಗುರುತಿಸಲ್ಪಟ್ಟಿದೆ) ಪ್ರಾರಂಭವಾಯಿತು. ವಿವೇಕಾನಂದರು ಆ ದಿನ ತಮ್ಮ ಮೊದಲ ಉಪನ್ಯಾಸವನ್ನು ನೀಡಿದರು. ಇವರ ಸರದಿಯನ್ನು ತುಂಬಾ ಮುಂದೂಡುವಿಕೆಯ ನಂತರ ಮಧ್ಯಾಹ್ನದ ಹೊತ್ತಿಗೆ ಇವರ ಸರದಿ ಬಂದಿತು. ಆರಂಭದಲ್ಲಿ ಅವರು ಆತಂಕಕ್ಕೊಳಗಾಗಿದ್ದರೂ, ಅವರು ಹಿಂದೂ ವಿದ್ಯಾ ದೇವತೆಯಾದ ಸರಸ್ವತಿಗೆ ನಮಸ್ಕರಿಸಿದರು, ಮತ್ತು ಅವರು ತಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪಡೆದುಕೊಂಡಿರವುದಾಗಿ ಭಾವಿಸಿದರು; ಯಾರೋ ಅಥವಾ ಇನ್ನೊಬ್ಬರು ತಮ್ಮ ದೇಹವನ್ನು ಆಕ್ರಮಿಸಿಕೊಂಡಿದ್ದಾರೆ ಎಂದು ಅವರು ಭಾವಿಸಿದರು- (ಅದು”ದಿ ಸೋಲ್ ಆಫ್ ಇಂಡಿಯಾ, ಋಷಿಯ ಪ್ರತಿಧ್ವನಿ, ರಾಮಕೃಷ್ಣರ ಧ್ವನಿ, ಪುನರುತ್ಥಾನಗೊಂಡ ಸಮಯದ ಚೈತನ್ಯದ ಮುಖವಾಣಿ”) ನಂತರ “ಸಿಸ್ಟರ್ಸ್ ಅಂಡ್ ಬ್ರದರ್ಸ್ ಆಫ್ ಅಮೆರಿಕಾ!” ಎಂದು ಸಂಬೋಧಿಸಿ ಮಾತು ಆರಂಭಿಸಿದರು. ಈ ಮಾತುಗಳಿಗೆ ಅವರು ಅಲ್ಲಿದ್ದ ಏಳು ಸಾವಿರ ಜನಸಮೂಹದಿಂದ ‘ನಿಂತು ಚಪ್ಪಾಳೆಯ ಮೆಚ್ಚಗೆ ಸೂಚಿಸಿಸ ಗೌರವ’ ಪಡೆದರು, ಅದು ಎರಡು ನಿಮಿಷಗಳ ಕಾಲ ನಡೆಯಿತು. ಮೌನವನ್ನು ಪುನಃಸ್ಥಾಪಿಸಿದಾಗ ಅವರು ತಮ್ಮ ಭಾಷಣವನ್ನು ಪ್ರಾರಂಭಿಸಿದರು. “ವಿಶ್ವದ ಅತ್ಯಂತ ಪ್ರಾಚೀನ ವೈದಿಕ ಕ್ರಮ ಅನುಸರಿಸಿದ ಸನ್ಯಾಸಿಗಳ, ಜಗತ್ತಿಗೆ ಸಹಿಷ್ಣುತೆ ಮತ್ತು ಸಾರ್ವತ್ರಿಕ ಸ್ವೀಕಾರ ಎರಡನ್ನೂ ಕಲಿಸಿದ ಧರ್ಮದ ಪರವಾಗಿ ಅವರು ಯುವ ರಾಷ್ಟ್ರಗಳನ್ನು ಅಭಿನಂದಿಸಿದರು.!” (ಭಾರತಕ್ಕಿಂತ ಅವು ಕಿರಿಯ/ ಯುವ ರಾಷ್ಟ್ಟ್ರಗಳು)
ಈ ಸಂದರ್ಭದಲ್ಲಿಯೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ಹಿಂದೂ ಧರ್ಮದ ಬಗೆಗೆ ಆಸಕ್ತಿಯನ್ನೂ ಕೆರಳಿಸಿದರು. ‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಮೂಲಭೂತ ಮಹತ್ವವುಳ್ಳ ಸಂಪ್ರದಾಯಗಳು, ಪಾಶ್ಚಾತ್ಯ ರಾಷ್ಟ್ರಗಳಲ್ಲಿಯೂ ಗುರುತಿಸಲ್ಪಟ್ಟವು. ಈ ಸಂದರ್ಭದ ಕೆಲವೇ ವರ್ಷಗಳಲ್ಲಿ ‘ನ್ಯೂಯಾರ್ಕ್’ ಮತ್ತು ‘ಲಂಡನ್’ ನಗರಗಳಲ್ಲಿ ವೇದಾಂತ ಕೇಂದ್ರಗಳನ್ನು ಸ್ಥಾಪಿಸಿ ಅನೇಕ ವಿಶ್ವವಿದ್ಯಾಲಯಗಳಲ್ಲಿ ಭಾಷಣಗಳನ್ನು ಮಾಡಿದರು.
ಇದರ ನಂತರ ಭಾರತಕ್ಕೆ ಮರಳಿ ರಾಮಕೃಷ್ಣ ಮಿಷನ್ ಅನ್ನು ಸ್ಥಾಪಿಸಿದರು. ಹಾಗೆಯೇ “ಆತ್ಮನೋ ಮೋಕ್ಷಾಥರ್ಂ ಜಗದ್ ಹಿತಾಯ ಚ” (ಸ್ವತಃ ಮೋಕ್ಷಕ್ಕಾಗಿ ಮತ್ತು ಜಗತ್ತಿನ ಹಿತಕ್ಕಾಗಿ) ಎಂಬ ತತ್ತ್ವವನ್ನೂ ಸ್ಥಾಪಿಸಿದರು. ಇದು ಈಗ ಭಾರತದ@ ಧಾರ್ಮಿಕ ಸಂಸ್ಥೆಗಳಲ್ಲಿ ಬಹಳ ಹೆಸರು ಮಾಡಿರುವ ಮತ್ತು ಗೌರವಿತ ಸಂಸ್ಥೆಯಾಗಿದೆ.
‘ಸ್ವಾಮಿ ವಿವೇಕಾನಂದ’ರು ದಿವಂಗತರಾದಾಗ ಕೇವಲ 39 ವರ್ಷದವರಾಗಿದ್ದರು. ಯುವಕರಿಗೆ ದಾರಿ ದೀಪವಾಗಿದ್ದರು. ಸ್ವಾಮಿ ಅವರ ಭಾಷಣದ ಆಯ್ದ ಭಾಗ ಹೀಗಿದೆ:-“ನಾನು ಮಾಡಿರುವ ಅಲ್ಪ ಕಾರ್ಯ ಕೇವಲ ನನ್ನಲ್ಲಿರುವ ಶಕ್ತಿಯಿಂದಲ್ಲ. ನನ್ನ ಪರಮಮಿತ್ರ ಪ್ರಿಯತಮ ಮಾತೃಭೂಮಿಯಿಂದ ಹೊರಟ ಉತ್ತೇಜನ ಶುಭಾಶಯ ಆಶೀರ್ವಾದಗಳು”.
ಸ್ವದೇಶ ಮಂತ್ರ
ಹೋ ಜಂಬೂದ್ವೀಪದ ಮೂಲ ನಿವಾಸಿಗಳೇ, ಮರೆಯದಿರಿ, ನಿಮ್ಮ ಸ್ತ್ರೀಯರ ಆದರ್ಶ ಸೀತಾ, ಸಾವಿತ್ರಿ, ದಮಯಂತಿಯರು. ಮರೆಯದಿರಿ, ನೀವು ಪೂಜಿಸುವ ಜಗದೀಶ್ವರನು ತ್ಯಾಗಿಕುಲ ಚೂಡಾಮಣಿ, ಉಮಾವಲ್ಲಭ ಶಂಕರ. ಮರೆಯದಿರಿ, ನಿಮ್ಮ ವಿವಾಹ, ನಿಮ್ಮ ಐಶ್ವರ್ಯ, ನಿಮ್ಮ ಜೀವನ ಬರಿಯ ಇಂದ್ರಿಯ ಭೋಗಕ್ಕಲ್ಲ, ವ್ಯಕ್ತಿಗತ ಸುಖಕ್ಕಲ್ಲ. ಮರೆಯದಿರಿ, ನಿಮ್ಮ ಜನ್ಮವಿರುವುದೇ ಜಗನ್ಮಾತೆಯ ಅಡಿದಾವರೆಗಳಲ್ಲಿ ಬಲಿದಾನಕ್ಕಾಗಿ!
ಮರೆಯದಿರಿ, ನಿಮ್ಮ ಸಾಮಾಜಿಕ ರಚನೆ ಅನಂತ ವಿಶ್ವವ್ಯಾಪಿ ಜಗಜ್ಜನನಿಯ ಕಾಂತಿಯನ್ನು ಪ್ರತಿಬಿಂಬಿಸುವುದಕ್ಕಾಗಿ ಇರುವುದು. *ಮರೆಯದಿರಿ, ಅಂತ್ಯಜರು, ಮೂಢರು, ದರಿದ್ರರು, ನಿರಕ್ಷರಕುಕ್ಷಿಗಳು, ಚಂಡಾಲರು ಮತ್ತು ಚಮ್ಮಾರರು – ಎಲ್ಲರೂ ನಿಮ್ಮ ರಕ್ತಬಂಧುಗಳಾದ ಸಹೋದರರು ! ವೀರಾತ್ಮರೇ, ಧೀರರಾಗಿ, ನೆಚ್ಚುಗೆಡದಿರಿ. ಭಾರತೀಯರು ನಾವು ಎಂದು ಹೆಮ್ಮೆ ತಾಳಿ. ಸಾರಿ ಹೇಳಿ, ಭಾರತೀಯರು ನಾವು, ಭಾರತೀಯರೆಲ್ಲ ನಮ್ಮ ಸಹೋದರರು.
ಸಾರಿ ಹೇಳಿ, ಮೂರ್ಖ ಭಾರತೀಯರೂ ನಮ್ಮ ಸಹೋದರರು, ಬ್ರಾಹ್ಮಣ ಭಾರತೀಯರೆಮ್ಮ ಸಹೋದರರು, ಪಂಚಮ ಭಾರತೀಯರೆಮ್ಮ ಸಹೋದರರು. ನೀವು ಒಂದು ಚಿಂದಿಬಟ್ಟೆಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದರೂ ಕೂಡ, ಅಭಿಮಾನಪೂರ್ವಕವಾಗಿ ದಿಕ್‍ತಟಗಳು ಅನುರಣಿತವಾಗುವಂತೆ ತಾರಸ್ವರದಿಂದ ಸಾರಿ ಹೇಳಿ “ಭಾರತೀಯರು ನಮ್ಮ ಸಹೋದರರು, ಭಾರತೀಯರು ನಮ್ಮ ಪ್ರಾಣ. ಭಾರತೀಯ ದೇವ ದೇವತೆಗಳೆಲ್ಲರೂ ನಮ್ಮ ದೇವರು. ಭಾರತೀಯ ಸಮಾಜ, ನಮ್ಮ ಬಾಲ್ಯದ ತೊಟ್ಟಿಲು, ತಾರುಣ್ಯದ ನಂದನವನ, ವೃದ್ಧಪ್ಯದ ವಾರಾಣಸಿ”. ಸಹೋದರರೆ, ಹೀಗೆ ಸಾರಿ “ಭಾರತ ಭೂಮಿಯೆ ನಮ್ಮ ಪರಂಧಾಮ. ಭಾರತದ ಶುಭವೆ ನಮ್ಮ ಶುಭ.” ಹಗಲೂ ರಾತ್ರಿಯೂ ಇದು ನಿಮ್ಮ ಪ್ರಾರ್ಥನೆಯಾಗಲಿ, “ಹೇ ಗೌರೀನಾಥ, ಹೇ ಜಗನ್ಮಾತೆ, ಪೌರುಷವನ್ನು ಎಮಗೆ ದಯಪಾಲಿಸು. ಹೇ ಸರ್ವಶಕ್ತಿಶಾಲಿನಿ, ನಮ್ಮ ದೌರ್ಬಲ್ಯವನ್ನು ದಹಿಸು. ಕ್ಲೈಬ್ಯವನ್ನು ಹೋಗಲಾಡಿಸು. ನಮ್ಮ ಷಂಡತನವನ್ನು ಹೋಗಲಾಡಿಸಿ, ನಮ್ಮಲ್ಲಿ ವೀರತ್ವವನ್ನು ತುಂಬು.
ಚಿಕಾಗೋದಲ್ಲಿ ಒಬ್ಬ ಕ್ರಿಶ್ಚನ್ನ ಯುವಕರು ತಮ್ಮಗ್ರಂಥವನ್ನು ಭಗವದ್ಗೀತೆಯ ಕೆಳಗಿಟ್ಟು ತಮ್ಮಧರ್ಮ ಶ್ರೇಷ್ಠ ಎಂಬ ಮಂಡುವಾದ ಮಾಡಿದರು. ಆ ಪುಸ್ತಕ ಸರಿಸಿದ ವಿವೇಕಾನಂದರು ಕೆಳಗಿದ್ದ ಪುಸ್ತಕ ವನ್ನು ಕುರಿತು ಎಲ್ಲಾಧರ್ಮಗಳಿಗಿಂತ ಮೂಲ ಧರ್ಮ ನಮ್ಮಧರ್ಮ.ಎಲ್ಲಾ ಧರ್ಮವು ಒಂದೇ ಎಂದು ಹೇಳಿದರು.


Share

ಜಗದ ಯುಗದ ಕವಿ – ರಾಷ್ಟ್ರಕವಿ ಕುವೆಂಪು

Share

ಕನ್ನಡ ಎನೆ ಕುಣಿದಾಡುವುದೆನ್ನೆದೆ
ಕನ್ನಡ ಎನೆ ಕಿವಿನಿಮಿರುವುದು
ಕನ್ನಡ.. ಕನ್ನಡ.. ಆ..ಸವಿ ಕನ್ನಡ..

ಎಂದು ಕನ್ನಡಗರನ್ನು ಸಾಹಿತ್ಯದಲೆಗಳ ಮೇಲೆ ತೇಲುವಂತೆ ಮಾಡಿದ ಶ್ವಬ್ದಮಾಂತ್ರಿಕ.. ಕರುನಾಡಿಗೆ ‘ಜಯಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕಮಾತೆ’ ಎಂಬ ನಾಡಿಗೀತೆಯ ಪದಪುಂಜಗಳಿಂದ ಕನ್ನಡಮಾತೆಗೆ ಶಬ್ಧಾರ್ಚನೆಮಾಡಿದ ಸಹ್ಯಾದ್ರಿ ಸಾಲ ಕವಿಕುಲೋತ್ತಮ ಕುವೆಂಪು ಕನ್ನಡ ಸಾಹಿತ್ಯ ಲೋಕದ ಅಪ್ಪಟ ಕವಿಕೋಗಿಲೆ.
ಕುವೆಂಪುರವರು ಕನ್ನಡ ನಾಡಿನ ಹೆಮ್ಮೆಯ ರಸಕವಿ, ಋಷಿಕವಿ, ರಾಷ್ಟ್ರಕವಿ ಕನ್ನಡದ ಮತ್ತೋರ್ವ ವರಕವಿಗಳಾದ ಬೇಂದ್ರೆಯವರಿಂದಲೇ ಯುಗದಕವಿ ಜಗದಕವಿ ಎಂದು ಕೀರ್ತಿತರಾಗಿದ್ದಂತಹವರು. ಕನ್ನಡದ ಹಿರಿಮೆಯನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸ್ತರಗಳಲ್ಲಿ ಎತ್ತಿ ಹಿಡಿದ ಮಹಾನ್ ಚೇತನ.
ಕುವೆಂಪು ಒಬ್ಬ ದಾರ್ಶನಿಕ ಲೇಖಕರು. ವರ್ತಮಾನದ ನಿತ್ಯವನ್ನೂ, ತ್ರಿಕಾಲದ ಭವ್ಯವನ್ನೂ, ಭೂಮವನ್ನೂ, ಅಲ್ಪವನ್ನೂ ಒಂದು ಪೂರ್ಣ ದೃಷ್ಟಿಯಲ್ಲಿ ಒಳಗೊಳ್ಳಲು ಪ್ರಯತ್ನಿಸಿದ ತಪಸ್ವಿಗಳು ‘ಕಾಡಿನ ಕೊಳಲಿದು, ಕಾಡ ಕವಿಯು ನಾ, ನಾಡಿನ ಜನರೊಲಿದಾಲಿಪುದು’ ಎಂಬ ಭಿನ್ನಹದೊಂದಿಗೆ ಕಳೆದ ಶತಮಾನದ 3ನೆಯ ದಶಕದಲ್ಲಿ ಕನ್ನಡ ನವೋದಯವನ್ನು ಪ್ರವೇಶಿಸಿದ ಈ ಕಾಡಿನ ಕವಿ ಅನಂತರ ನಾಡಿನ ಕವಿಯಾಗಿ ಕುವೆಂಪು ಎಂಬ ಮೂರಕ್ಷರದಿಂದಲೇ ಕನ್ನಡಿಗರ ಮನೆ ಮಾತಾದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ, ಹೊಸಗನ್ನಡ ಸಾಹಿತ್ಯದ ಹಿರಿಯ ಕವಿ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ, ಕನ್ನಡದ ಮಹಾನ್ ಚೇತನ.
ಬಾಲ್ಯ ಜೀವನದ ಕಂಪು :
ಕುವೆಂಪುರವರು ಹುಟ್ಟಿದ್ದು 29 ಡಿಸೆಂಬರ್ 1904, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ, ತಂದೆ ವೆಂಕಟಪ್ಪಗೌಡರು, ತಾಯಿ ಸೀತಮ್ಮ, ಆದರೆ ಕುವೆಂಪುರವರು ಹುಟ್ಟಿದ್ದು ತಾಯಿಯ ತವರಾದ ಚಿಕ್ಕಮಗಳೂರು ಜಿಲ್ಲೆಯ ಹಿರೇಕೊಡಗಿ ಗ್ರಾಮದಲ್ಲಿ. ಮಲೆನಾಡಿನ ಮಡಿಲಿನಲ್ಲಿ ಹುಟ್ಟಿ ಬೆಳೆದ ಕುವೆಂಪುರವರು ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಕಲಿತದ್ದಕ್ಕಿಂತ ಹೆಚ್ಚಿನ ವಿಷಯವನ್ನು ಕಲಿಸಿದ್ದು ಮಲೆನಾಡಿನ ಪ್ರಕೃತಿ, ಹೀಗಾಗೆ ಅವರ ಎಲ್ಲಾ ಕೃತಿಗಳಲ್ಲಿ ಮಲೆನಾಡಿನ ಸೊಬಗು ಕಂಗೊಳಿಸುತ್ತದೆ.

ಓದುವಾಗಲೇ ಕವಿಹೃದಯ :
ಎಸ್.ಎಸ್.ಎಲ್.ಸಿ ಓದುವಾಗಲೇ ಕುವೆಂಪುರವರ ಬರೆದಿದ್ದ ‘ಬಿಗಿನರ್ಸ್ ಮ್ಯೂಸ್’ ಎಂಬ ಇಂಗ್ಲೀಷ್ ಕವನ ಸಂಕಲನ ಭಾರತ ಭೇಟಿಗೆ ಬಂದಿದ್ದ ಐರಿಷ್ ಕವಿ ಜೆ.ಹೆಚ್.ಕಸಿನ್ಸ್‍ರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಅವರ ಸಲಹೆಯಂತೆ ಕನ್ನಡದಲ್ಲಿ ಬರೆಯಲಾರಂಭಿಸಿದ ಕುವೆಂಪುರವರು ಬರೆದ ಮೊದಲ ಕನ್ನಡ ಕವನ ಸಂಕಲನ ‘ಅಮಲನ ಕಥೆ’ ಚಿಕ್ಕಂದಿನಿಂದಲೇ ಮಲೆನಾಡಿನ ಪರಿಸರದಲ್ಲಿ ಬೆಳೆದ ಕುವೆಂಪುರವರಿಗೆ ಅಪಾರವಾದ ಪರಿಸರ ಪ್ರೇಮ, ಅವರ ಪರಿಸರ ಪ್ರೀತಿಯೇ ಅವರ ಕಾವ್ಯದಲ್ಲಿ ಜೀವಂತವಾಗಿ ಮೇಳೈಸಿದೆ.
ಮಹಾಮಹಿಮರ ಮಾರ್ಗದರ್ಶನ :
ಜೊತೆಗೆ ನಾಡು ಕಂಡ ಧೀಮಂತರಾದ ಶ್ರೀ ಟಿ.ಎಸ್.ವೆಂಕಣ್ಣಯ್ಯ, ಬಿ.ಎಂ.ಶ್ರೀ, ಎ.ಆರ್.ಕೃಷ್ಣಶಾಸ್ತ್ರಿರವರ ಒಡನಾಟ, ಮಾರ್ಗದರ್ಶನಗಳು ಅವರ ಸಾಹಿತ್ಯವನ್ನು ಶ್ರೀಮಂತಗೊಳಿಸಿದವು. 1925ರಲ್ಲಿ ಪ್ರಕಟವಾದ ಕುವೆಂಪುರವರ ‘ಬೊಮ್ಮನಹಳ್ಳಿ ಕಿಂದರಿ ಜೋಗಿ’ ನಾಡಿನಾದ್ಯಂತ ಮಕ್ಕಳ ಬಾಯಲ್ಲಿ ನಲಿದಾಡಿತು. ಸೆಂಟ್ರಲ್ ಕಾಲೇಜು ವಿದ್ಯಾರ್ಥಿಯಾಗಿದ್ದ ಕುವೆಂಪುರವರಿಗೆ ಕವಿ ಸಮ್ಮೇಳನದ ಅಧ್ಯಕ್ಷ ಪದವಿಯೂ ಇವರನ್ನು ಅರಸಿ ಬಂತು.
ವಿಶ್ವಮಾನವ ಸಂದೇಶ :
ಕುವೆಂಪು ತಮ್ಮ ಬದುಕಿನ ಸಂದೇಶವೆಂದು ‘ವಿಶ್ವಮಾನವನ’ ಪರಿಕಲ್ಪನೆಯೊಂದನ್ನು ಮಂಡಿಸಿದವರು ‘ಪ್ರತಿಯೊಂದು ಮಗುವು ಹುಟ್ಟುತ್ತಲೇ ವಿಶ್ವಮಾನವ, ಬೆಳೆಯುತ್ತಾ ನಾವು ಅದನ್ನು ಅಲ್ಪ ಮಾನವನ’ನ್ನಾಗಿ ಮಾಡುತ್ತೇವೆ. ಮತ್ತೇ ಅದನ್ನು ವಿಶ್ವಮಾನವನ್ನಾಗಿ ಮಾಡುವುದೇ ವಿದ್ಯೆಯ ಕರ್ತವ್ಯವಾಗಬೇಕು. ಇದನ್ನು ಕಾರ್ಯಗತಗೊಳಿಸಲು ಅಗತ್ಯವಾದ ಸಪ್ತ ಸೂತ್ರಗಳನ್ನು ಮಂಡಿಸುತ್ತಾ ‘ಮನುಷ್ಯಜಾತಿ ತಾನೊಂದೇ ವಲಂ’ ಎಂಬ ಕವಿ ಪಂಪನ ಸೂತ್ರವನ್ನು ನಿರುಪಾಧಿಕವಾಗಿ ಸ್ವೀಕರಿಸಬೇಕು ಎನ್ನುತ್ತಾರೆ ಕುವೆಂಪು, ಆದರೆ ಮನುಷ್ಯ ಮನುಷ್ಯನಾಗಿ ಬದುಕುವುದೇ ಸಾಧ್ಯವಾಗದಂತಹ ವಿದ್ಯಮಾನಗಳು ಸಂಭವಿಸುತ್ತಿರುವ ಈ ಹೊತ್ತಿನಲ್ಲಿ ಅನೇಕ ವಿಚ್ಛಿದ್ರಕಾರಕ ಶಕ್ತಿಗಳಿಂದ ಮನುಷ್ಯತ್ವವೇ ಚೂರು ಚೂರಾಗುತ್ತಿರುವ ಸಂದರ್ಭದಲ್ಲಿ ಕುವೆಂಪು ಅವರ ವಿಶ್ವಮಾನವ ಕಲ್ಪನೆ ಒಂದು ದೂರದ, ಎತ್ತರದ ಬೆಳಕು ಮಾತ್ರ!.
ಕಾಡು ಕವಿ :
ಪಂಪನಿಗೆ ಧರ್ಮ ಮತ್ತು ಕಾವ್ಯಧರ್ಮ ಹೇಗೆ ಬೇರೆ ಬೇರೆಯಾಗಿರಲಿಲ್ಲವೋ ಹಾಗೆಯೇ ಕುವೆಂಪು ಅವರಿಗೆ ಪ್ರಕೃತಿ ಮತ್ತು ಕಾವ್ಯ ಪ್ರಕೃತಿ ಬೇರೆ ಬೇರೆಯಾಗಿರಲಿಲ್ಲ. ಕಣ್ಣಿಗೆ ಕಾಣುವ ಪ್ರಕೃತಿ ಹಾಗೂ ಕಣ್ಣಿಗೆ ಕಾಣದ ಪ್ರಕೃತಿಗಳ ಅಂತರ ಸಂಬಂಧವನ್ನು, ಅಂತರ ವಿರೋಧವನ್ನು ತಮ್ಮ ಕೃತಿಗಳಲ್ಲಿ ಅನುಸಂಧಾನ ಮಾಡುತ್ತಾರೆ. ಕಾಡಿನ ರುದ್ರ ಭೀಕರತೆಯನ್ನು ಸೌಮ್ಯ ಸೌಂಧರ್ಯವನ್ನು ತಮ್ಮ ಪಾತ್ರಗಳ ವ್ಯಕ್ತಿತ್ವಗಳ ಬೆಳವಣಿಗೆಗೆ ಭಿತ್ತಿಯಾಗಿ ಬೆಳೆಸುತ್ತಾರೆ. ಕಾಡಿನ ಮಹತ್ವ, ಪ್ರಕೃತಿಯ ಅನಂತತೆಯನ್ನು ಸಾರುತ್ತಾರೆ. ಪ್ರಕೃತಿ ತನಗೋಸ್ಕರ ಇದೆ ಎಂಬ ಯಜಮಾನ ಧೋರಣೆಯನ್ನು ಖಂಡಿಸಿ ತಾನು ಅದರ ಒಂದು ಭಾಗ ಮಾತ್ರ ಎಂಬುದನ್ನು ಮನದಟ್ಟಾಗಿಸಿ ಮನುಷ್ಯ ಸಾಧ್ಯತೆಗಳ ಮಿತಿಯನ್ನು ತೋರಿಸುವುದು ಕುವೆಂಪು ಅವರ ಉದ್ಧೇಶವಾಗಿದೆ.
ಕುವೆಂಪು ತಮ್ಮ ಎರಡು ಕಾದಂಬರಿಗಳಲ್ಲೂ ಮಲೆನಾಡಿನ ಬದುಕನ್ನು ಚಿತ್ರಿಸಿದ್ದಾರೆ, ಹೀಗೆ ಚಿತ್ರಿಸುವಾಗ ಇದು ಸೌಂದರ್ಯ ವರ್ಣನೆ, ಇದು ಕಾಡಿನ ವರ್ಣನೆ, ಇದು ಸಂಪ್ರದಾಯದ ವರ್ಣನೆ ಎಂದೇನು ವಿಭಾಗಿಸಿಲ್ಲ. ಕುವೆಂಪು ಸಾಹಿತ್ಯದಲ್ಲಿ ಪರಿಸರ ಎಂದ ಕೂಡಲೇ ನಮ್ಮ ಮನಸ್ಸಿನಲ್ಲಿ ಮೂಡುವುದು ಅಲ್ಲಿನ ಮರಗಿಡ ಬಳ್ಳಿಗಳು, ನದಿ ತೊರೆಗಳು, ಬೆಟ್ಟ ಗುಡ್ಡಗಳು, ಪ್ರಾಣಿಪಕ್ಷಿಗಳು, ಇನ್ನಿತರ ಸಂಗತಿಗಳನ್ನು ಹೇಗೆ ವರ್ಣಿಸಿದ್ದಾರೆ ಎಂಬುದು ಬೇರೆಲ್ಲಾ ಅವರ ಕೃತಿಗಳಿಗಿಂತ ಕಾದಂಬರಿಗಳಲ್ಲಿ ಇವೆಲ್ಲದರ ವರ್ಣನೆ ಹೆಚ್ಚಾಗಿಯು ಇದೆ.
ಕುವೆಂಪು ಅವರ ಎರಡು ಕಾದಂಬರಿಗಳಲ್ಲಿ ಬರುವ ಪರಿಸರ ಚಿತ್ರಣ, ಕಾಡು, ಗಿಡ, ಮರ, ಬೆಟ್ಟ ಗುಡ್ಡಕ್ಕೆ ಮೀಸಲಿಲ್ಲ, ಅಜ್ಞಾನ, ಮೂಢನಂಬಿಕೆ, ಶೋಷಣೆ ಇವೆಲ್ಲವುಗಳಿಂದ ಮುಕ್ತವಾಗಿ ಬದುಕಲಿಕ್ಕೆ ಬೇಕಾದ ಸಹನೀಯ ವಾತಾವರಣ ನಿರ್ಮಿಸುವುದಾಗಿದೆ. ಒಂದು ಜೀವ ಬದುಕಲಿಕ್ಕೆ ಸಾಧ್ಯವಾಗದಂತಹ ಪರಿಸರ ನಿರ್ಮಾಣವಾಗಿರುವುದನ್ನು ವಿರೋಧಿಸುವ ಮೂಲಕ ಸಮಾನತೆಯ ಕಾಳಜಿಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಿದ್ದಾರೆ.
ವಿಚಾರವಾದಿಯ ರೂಪ :
ಇಂಗ್ಲೀಷ್ ಶಿಕ್ಷಣ, ಪ್ರಾಚ್ಯ – ಪಾಶ್ಚಾತ್ಯ, ತತ್ತ್ವಜ್ಞಾನಗಳ ತಳಸ್ಪರ್ಶಿಯಾದ ತಿಳುವಳಿಕೆ ಆಧುನಿಕ ವಿಜ್ಞಾನ ಮತ್ತು ಜಾಗತಿಕ ಸಮಾಜವಾದಿ ಚಿಂತನೆಗಳೊಂದಿಗೆ ನಡೆಸಿದ ಸಂವಾದ, ಶ್ರೀ ರಾಮಕೃಷ್ಣ – ವಿವೇಕಾನಂದ – ಗಾಂಧಿ – ಅರವಿಂದ ಮತ್ತು ಲೋಹಿಯಾ ಇಂತಹ ವ್ಯಕ್ತಿತ್ವಗಳ ಚಿಂತನೆಯ ಪ್ರಭಾವ ಇತ್ಯಾದಿಗಳಿಂದ ರೂಪುಗೊಂಡ ಕುವೆಂಪು ಅವರ ವೈಚಾರಿಕತೆಯು ಮನುಷ್ಯ ಚೈತನ್ಯದ ಚಲನಶೀಲತೆಯನ್ನು ಸ್ತಗಿತಗೊಳಿಸುವ ಎಲ್ಲಾ ವಿಕೃತಿಗಳನ್ನು ವಿರೋಧಿಸುತ್ತಾ, ಮನುಷ್ಯರೆಲ್ಲರ ಘನತೆಯನ್ನು ಎತ್ತಿ ಹಿಡಿಯುವ ಸ್ವರೂಪದ್ದಾಗಿದೆ.
ಕನ್ನಡಕ್ಕೆ ಕುವೆಂಪು ಸಾಹಿತ್ಯ ಕಾಣಿಕೆ :
ಕುವೆಂಪು ಅವರು ಬರೆದ ಎರಡು ಕಾದಂಬರಿಗಳಾದ ‘ಕಾನೂರು ಸುಬ್ಬಮ್ಮ ಹೆಗ್ಗಡತಿ’ ಮತ್ತು ‘ಮಲೆಗಳಲ್ಲಿ ಮಧುಮಗಳು’ ಭಾರತೀಯ ಸಾಹಿತ್ಯ ಪ್ರಪಂಚದಲ್ಲೇ ಶ್ರೇಷ್ಠಕೃತಿಗಳೆಂಬ ಪ್ರಶಂಸೆಗೆ ಪಾತ್ರವಾಗಿವೆ. ಕನ್ನಡಕ್ಕೆ ಮೊದಲ ಜ್ಞಾನಪೀಠವನ್ನು ತಂದು ಕೊಟ್ಟ ಹಿರಿಮೆಯನ್ನು ಹೊಂದಿದ ಇವರ ‘ಶ್ರೀ ರಾಮಾಯಣ ದರ್ಶನಂ’ ಮಹಾಕಾವ್ಯ ಸಂಸ್ಕøತ ಮತ್ತು ಹಿಂದಿ ಭಾಷೆಗೆ ಅನುವಾದಗೊಂಡಿದೆ.
ಇವರು ‘ಬೆರಳ್ಗೆ ಕೊರಳ್, ಶೂದ್ರ ತಪಸ್ವಿ, ಸ್ಮಶಾನ ಕುರುಕ್ಷೇತ್ರಂ, ರಕ್ತಾಕ್ಷಿ, ಜಲಗಾರ’ ಮೊದಲಾದ ನಾಟಕಗಳನ್ನು ಬರೆದಿದ್ದಾರೆ. ಜೊತೆಗೆ ಕೊಳಲು, ಅಗ್ನಿಹಂಸ, ಅನಿಕೇತನ, ಅನುತ್ತರಾ, ಇಕ್ಷುಗಂಗೋತ್ರಿ ಕಥನ ಕವನಗಳು ಕಲಾ ಸುಂದರಿ, ಕಿಂಕಿಣಿ, ಕೃತ್ತಿಕೆ, ಜೇನಾಗುವೆ, ನವಿಲು, ಪಕ್ಷಿಕಾಶಿ, ಚಿತ್ರಾಂಗದಾ ಮೊದಲಾದ ಕವನ ಸಂಕನಗಳು ರಾಮಕೃಷ್ಣ ಪರಮಹಂಸ, ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆಗಳನ್ನು ಇವರು ಬರೆದಿದ್ದಾರೆ. ‘ನೆನಪಿನ ದೋಣಿಯಲ್ಲಿ’ ಕುವೆಂಪುರವರ ಆತ್ಮ ಕಥೆ.
‘ಅನಿಕೇತನ’ ಪದ್ಯದ ಮೂಲಕ ವಿಶ್ವಮಾನವ ಸಂದೇಶವನ್ನು ಸಾರಿದ ಮಹಾಕವಿ ಕುವೆಂಪು, ‘ಮನುಷ್ಯ ಜಾತಿ ತಾನೊಂದೆ ವಲಂ’ ಎಂಬ ಪಂಪನ ತಾತ್ವಿಕತೆಯನ್ನು ವಿಸ್ತರಿಸಿದವರು ಕುವೆಂಪು. ನಮಗೆ ಬೇಕಾಗಿರುವುದು ಆ ಮತ ಈ ಮತ ಅಲ್ಲ, ಮನುಜ ಮತ. ಆ ಪಥ ಈ ಪಥ ಅಲ್ಲ, ಸರ್ವರ ಸರ್ವಸ್ತರರ ಬದುಕು ಎನ್ನುತ್ತಾರೆ ಕುವೆಂಪು ನಮ್ಮ ಹಳೆಯ ಶಾಸ್ತ್ರ ಪುರಾಣಗಳನ್ನು ಹೊಸ ಬೆಳಕಿನಲ್ಲಿಟ್ಟು ನೋಡಿ, ಅದರೊಳಗಿನ ಕಸ – ಕೊಳೆಗಳನ್ನು ತೆಗೆದೆಸೆದು ಅಲ್ಲಿ ಹೊಸ ದೃಷ್ಟಿಕೋನವನ್ನಿಟ್ಟು ಕಸಿ ಮಾಡಿದರು. ಜಾತಿ ವ್ಯವಸ್ಥೆ, ಅಸ್ಪøಶ್ಯತೆ ಮತ್ತು ಮೌಢ್ಯಗಳಿಂದ ಮುಕ್ತವಾದ ಸನಾತನ ಧರ್ಮ ಅವರ ಕನಸಾಗಿತ್ತು.
ಬೇಂದ್ರೆಯೂರಲ್ಲಿ ಅಧ್ಯಕ್ಷತೆ :
ಕುವೆಂಪುರವರು ಕನ್ನಡ ಸಾಹಿತ್ಯಕ್ಕೆ ಸಲ್ಲಿಸಿದ ಸೇವೆ ಅಪಾರ. ಇವರು ಧಾರವಾಡದಲ್ಲಿ ನಡೆದ 1957ನೇ ವರ್ಷದಲ್ಲಿ ನಡೆದ 39ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. 1956ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಪಡೆದರು.
ಮೊದಲ ಜ್ಞಾನಪೀಠ :
ಇವರ ಶ್ರೀ ರಾಮಾಯಣ ದರ್ಶನಂ ಕೃತಿಯು ಕನ್ನಡಕ್ಕೆ ಪ್ರಪ್ರಥಮ ಜ್ಞಾನಪೀಠ ಪ್ರಶಸ್ತಿಯನ್ನು ದೊರಕಿಸಿಕೊಟ್ಟಿತು. ಭಾರತ ಸರ್ಕಾರದ ಪದ್ಮವಿಭೂಷಣದಿಂದಲೂ ಪುರಸ್ಕøತಗೊಂಡ ಇವರು ‘ಜೈ ಭಾರತ ಜನನಿಯ ತನುಜಾತೆ’ ಕನ್ನಡ ನಾಡ ಗೀತೆಯನ್ನು ರಚಿಸಿದ ಮೇರುಕವಿ. ರಾಷ್ಟ್ರಕವಿ ಬಿರುದು ಪಡೆದ ಮಹಾನ್ ಕವಿ.
ಸಾಹಿತ್ಯದ ಮೂಲಕವೇ ನಾಡಿನ ಜನ ಮಾನಸವನ್ನು ಅವರಷ್ಟು ಬಲವಾಗಿ ಪ್ರಭಾವಿಸಿದ ಮತ್ತೊಬ್ಬ ಬರಹಗಾರ ಇಲ್ಲ. ಕುವೆಂಪುರವರಿಗೆ ಕುವೆಂಪು ಅವರೇ ಸಾಟಿ!
ಕನ್ನಡ ಸಾಹಿತ್ಯದಲ್ಲಿ 20ನೇ ಶತಮಾನವನ್ನು ‘ಕುವೆಂಪು ಯುಗ’ ಎಂದು ಕರೆಯಲಾಗಿದೆ. ಸುಮಾರು ಮುಕ್ಕಾಲು ಶತಮಾನದ ಕಾಲ ಅವರು ಕನ್ನಡ ಸಾಹಿತ್ಯ ಹಾಗೂ ಸಾಂಸ್ಕøತಿಕ ಕ್ಷೇತ್ರದಲ್ಲಿ ಅನಭಿಷಿಕ್ತ ಸಾಮ್ರಾಟರಾಗಿ ರಾರಾಜಿಸಿದರು. ಮಲೆನಾಡಿನ ಯಾವುದೋ ಒಂದು ಮೂಲೆಯಲ್ಲಿ ಹುಟ್ಟಿದ ಈ ಕವಿಚೇತನ ಅಸಾಧಾರಣ ಶ್ರದ್ಧಾಭಕ್ತಿಯಿಂದಲೂ, ತಮ್ಮ ಏಕಾಗ್ರತೆಯಿಂದಲೂ, ವ್ಯಾಸಂಗ ಅಭ್ಯಾಸಗಳನ್ನು ನಡೆಸಿ ಒಬ್ಬ ಮಹಾಕವಿಯಾಗಿ, ಚಿಂತನಶೀಲರಾಗಿ, ವಿಚಾರವಾದಿಯಾಗಿ, ವಿಫುಲ ಸಾಹಿತ್ಯ ರಚನೆ ಮಾಡಿ ಕನ್ನಡಿಗರ ಗೌರವಾಧರಗಳಿಗೆ ಪಾತ್ರರಾಗಿದ್ದಾರೆ.
ನಿಮಗೆ ನೀವೇ ಸರಿಸಾಟಿ :
ಕನ್ನಡ-ಕರ್ನಾಟಕದ ಬಗ್ಗೆ ಅವರು ಬರೆದಿರುವ ಭಾವಗೀತೆಗಳು ನಿತ್ಯನೂತನ, ಮನುಜ ಮತ ವಿಶ್ವಪಥವನ್ನು ಸಾರಿದ ಈ ಸಾಹಿತ್ಯ ಶ್ರೇಷ್ಠ ವಿಶ್ವಮಾನವರೆನಿಸಿದವರು. ಮಹಾಕಾವ್ಯ, ನಾಟಕ, ಖಂಡಕಾವ್ಯ, ಕಥನಕಾವ್ಯ, ಭಾವಗೀತೆಯೇ ಮೊದಲಾದ ಹಲವು ಪ್ರಕಾರಗಳಲ್ಲಿ ಅತ್ಯುತ್ತಮ ಕೃತಿಗಳನ್ನು ನೀಡಿದ ಅದ್ವೀತಿಯ. ಕುವೆಂಪು ಅವರಂತೆ ಸರ್ವ ಪ್ರಕಾರಗಳಲ್ಲೂ ಏಕ ಪ್ರಕಾರವಾದ ಸಿದ್ಧಿ ಪಡೆದ ಕವಿಗಳು ಅತಿ ವಿರಳ.
ಕುವೆಂಪು ಆ ಹೆಸರಲ್ಲೇ ಏನೋ ಒಂದು ವಿಧವಾದ ಕಂಪು. ಇದು ಕನ್ನಡದ ಕಂಪು. ಇಪ್ಪತ್ತನೆಯ ಶತಮಾನದ ಕನ್ನಡ ಸಾಹಿತ್ಯ ಏರುಗತಿಯಲ್ಲಿ ಸಾಗಲು ಕುವೆಂಪು ಕಾರಣಕರ್ತರು ಎಂದರೆ ತಪ್ಪಾಗಲಾರದು. ಕವನ, ಕಾವ್ಯ, ಸಣ್ಣಕಥೆಗಳು, ನಾಟಕ, ಕಾದಂಬರಿ, ಮಹಾಕಾವ್ಯ, ವಿಮರ್ಶೆ ಹೀಗೆ ಸಾಹಿತ್ಯದ ಹಲವಾರು ಪ್ರಕಾರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಾಗೂ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸುವ ಮೂಲಕ ಅಜರಾಮರವಾಗಿ ಉಳಿದಿದ್ದಾರೆ. ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ರಾಷ್ಟ್ರ ಮತ್ತು ಅಂತರರಾಷ್ಟ್ರ ಮಟ್ಟದ ಖ್ಯಾತಿಯನ್ನು ತಂದುಕೊಟ್ಟಿದ್ದಾರೆ.
ಸಂಸಾರ ನೌಕೆ :
1937 ಎಪ್ರಿಲ್ 30 ರಂದು ಹೇಮಾವತಿಯವರನ್ನು ಕೈ ಹಿಡಿದರು..ಪೂರ್ಣಚಂದ್ರ ತೇಜಸ್ವಿ ಮತ್ತು ಕೋಕಿಲೋದಯ ಚೈತ್ರ ಎಂಬ ಪುತ್ರರು, ಇಂದುಕಲಾ ಮತ್ತು ತರಿಣಿ ಎಂಬ ಇಬ್ಬ ಪುತ್ರಿಯರಿದ್ದಾರೆ. ರಾಮಕೃಷ್ಣ ಪರಮಹಂಸರ ಜೀವನದಿಂದ ಪ್ರಭಾವಿತರಾದ ಕುವೆಂಪುರವರು ಸ್ವಾಮಿ ಶಿವಾನಂದರಿಂದ ದೀಕ್ಷೆ ಪಡೆದಿದ್ದಾರೆ.

ಕುವೆಂಪು ರಾಷ್ಟೀಯ ಪ್ರತಿಷ್ಠಾನ ಇವರು ಜನಿಸಿದ ಮನೆಯನ್ನು ಕವಿಮನೆ ಹೆಸರಿನ ಮ್ಯೂಸಿಯಂ ಮಾಡಿದ್ದಾರೆ.1987 ರಲ್ಲಿ ಶಿವಮೊಗ್ಗದಲ್ಲಿ ಕುವೆಂಪುರವ ಗೌರವಾರ್ಥವಾಗಿ ಕುವೆಂಪು ವಿಶ್ವವಿದ್ಯಾಲಯ ಸ್ಥಾಪಿಸಲಾಯಿತು.

ಇಂತಹ ಮಹಾನ್ ಚೇತನ ನ.11 1994 ರಲ್ಲಿ ಮೈಸೂರಿನಲ್ಲಿ ಕೊನೆಯುಸಿರೆಳದರು ಕನ್ನಡ ಮಾತೆಯ ಮಡಿಲು ಸೇರಿಕೊಂಡರು. ಕುಪ್ಪಳಿಯ ಕವಿಶೈಲದಲ್ಲಿ ಇಂದಿಗೂ ಅವರ ಸಮಾಧಿ ಇದೆ. ಅವರು ಹುಟ್ಟಿದ ಮನೆಯನ್ನು ಪ್ರವಾಸಿಗರಿಗೆ ಪ್ರವಾಸಿ ಕ್ಷೇತ್ರವನ್ನಾಗಿಸಿದ್ದಾರೆ.

ವಿಶ್ವ ಮಾನವ ದಿನ ;

ಕರ್ನಾಟಕ ಸರ್ಕಾರವು 2015ರ ಡಿಸೆಂಬರ್‍ನಲ್ಲಿ ಕುವೆಂಪು ಜನ್ಮದಿನವಾದ ಡಿಸೆಂಬರ್ 29 ಅನ್ನು “ವಿಶ್ವ ಮಾನವ” ದಿನವನ್ನಾಗಿ ಆಚರಿಸುವುದಾಗಿ ಆದೇಶ ಹೊರಡಿಸಿತು. ಈ ಮೂಲಕ ವಿಶ್ವಮಾನವ ಸಂದೇಶ ಸಾರಿದ ಕವಿಗೆ ಮತ್ತೊಂದು ಗೌರವ ಸಂದಾಯವಾದಂತಾಯ್ತು.

  • ಡಾ.ಡಿ.ಸಿ.ರಾಮಚಂದ್ರ

Share

ರೂರಲ್ ಐಟಿ ಕ್ವಿಜ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ

Share

ಪಾಂಡವಪುರ : ತಾಲೂಕಿನ ಎಸ್‌ಟಿಜಿ ಪಬ್ಲಿಕ್ ಶಾಲೆಯಲ್ಲಿ ೧೦ನೇ ತರಗತಿ ಓದುತ್ತಿರುವ ವಿದ್ಯಾರ್ಥಿ ಎಂ.ಜಯAತ್ ಅವರು ಟಿಸಿಎಸ್ ಕಂಪನಿಯವರು ನಡೆಸುವ ರೂರಲ್ ಐಟಿ ಕ್ವಿಜ್‌ನಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆಯುವ ಮೂಲಕ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಮೈಸೂರು ವಿಭಾಗದಿಂದ ವಿಭಾಗೀಯ ಮಟ್ಟದ ಐಟಿ ಕ್ವಿಜ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.
ಕ್ವಿಜ್‌ನಲ್ಲಿ ಒಟ್ಟು ೯ ಜಿಲ್ಲೆಗಳಿಂದ ಭಾಗವಹಿಸಿದ ಒಟ್ಟು ೧೩೫ ವಿದ್ಯಾರ್ಥಿಗಳಿಂದ ೬ ವಿದ್ಯಾರ್ಥಿಗಳಲ್ಲಿ ಮಂಡ್ಯ ಜಿಲ್ಲೆಯಿಂದ ಪ್ರಥಮ ಸ್ಥಾನದಲ್ಲಿ ಎಂ.ಜಯAತ್ ಆಯ್ಕೆಯಾಗಿದ್ದಾರೆ. ಕ್ವಿಜ್‌ನಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಎಂ.ಜಯAತ್ ಅವರನ್ನು ಎಸ್‌ಟಿಜಿ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕ ವರ್ಗ, ಆಡಳಿತ ಮಂಡಳಿ, ಪಾಂಡವಪುರ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ.ಲೋಕೇಶ್, ವಿದ್ಯಾರ್ಥಿ ತಂದೆ ಕೆ.ಆರ್.ಮೋಹನ, ಐಸಿಟಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಮತ್ತು ಸಂಪನ್ಮೂಲ ವ್ಯಕ್ತಿ ಕೆ.ಆರ್.ಪೇಟೆ ಹಾಗೂ ತಾಯಿ ಎಸ್.ವೈ.ಅನಿತಾ, ಶಿಕ್ಷಣ ಸಂಯೋಜಕರು ಪಾಂಡವಪುರ ಅವರುಗಳು ಅಭಿನಂದಿಸಿದ್ದಾರೆ.


Share

ಮಂಡ್ಯ ಟು ಇಸ್ರೇಲ್

Share

ಪಾಂಡವಪುರ ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಆಯೋಜಿಸಿದ್ದ `ಮಂಡ್ಯ ಟು ಇಸ್ರೇಲ್’ ವೈಜ್ಞಾನಿಕ ಕೃಷಿಯ ಸುತ್ತ ಪಕ್ಷಿನೋಟ ಸಂವಾದ ಕಾರ್ಯಕ್ರಮದಲ್ಲಿ ಪ್ರಗತಿಪರ ರೇಷ್ಮೆ ಕೃಷಿಕ ನವೀನ್ ಸಂಗಾಪುರ ಮಾತನಾಡಿದರು. ಮತ್ತೊಂದು ಚಿತ್ರದಲ್ಲಿ ಇಸ್ರೆಲ್ ಕೃಷಿಯ ವಿಡಿಯೋ ಚಿತ್ರೀಕರಣದೊಂದಿಗೆ ರೈತರಿಗೆ ನವೀನ್ ಸಂಗಾಪುರ ತಿಳಿಸಿಕೊಟ್ಟ ದೃಶ್ಯ.

ಪಾಂಡವಪುರ : ಇಸ್ರೇಲ್ ದೇಶದ ಕೃಷಿ ಬಹಳ ಅದ್ಭುತವಾಗಿದೆ. ಸಂಪೂರ್ಣವಾಗಿ ವೈಜ್ಞಾನಿಕ ಕೃಷಿಯಿಂದ ಅವರು ಜಗತ್ತಿನ ಬಹುಪಾಲು ರಾಷ್ಟçಗಳಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಗಳಿಸುತ್ತಾರೆ ಎಂದು ಪ್ರಗತಿಪರ ರೇಷ್ಮೆ ಕೃಷಿಕ ನವೀನ್ ಸಂಗಾಪುರ ಹೇಳಿದರು.
ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಆಯೋಜಿಸಿದ್ದ `ಮಂಡ್ಯ ಟು ಇಸ್ರೇಲ್’ ವೈಜ್ಞಾನಿಕ ಕೃಷಿಯ ಸುತ್ತ ಪಕ್ಷಿನೋಟ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇದಕ್ಕೆ ಪೂರಕವಾಗಿ ಅಲ್ಲಿನ ಸರ್ಕಾರ ರೈತರಿಗೆ ಅಗತ್ಯವಾದ ವಿದ್ಯುತ್, ನೀರು ಇತರೆ ಸೌಲಭ್ಯಗಳನ್ನು ವ್ಯತ್ಯಾಸವಿಲ್ಲದೆ ಒದಗಿಸುತ್ತದೆ. ಇದರಿಂದ ರೈತರು ಯಾವುದೇ ಆತಂಕವಿಲ್ಲದೆ ಕೃಷಿಯಲ್ಲಿ ಲಾಭಗಳಿಸುತ್ತಿದ್ದಾರೆ ಎಂದರು.
ಹನಿ ನೀರಾವರಿ ಯೋಜನೆ ಇಸ್ರೇಲ್ ಕೃಷಿಯ ಯಶಸ್ಸಿನ ಗುಟ್ಟಾಗಿದೆ. ಭತ್ತ, ಗೋದಿಯ ಜತೆ ವಿವಿಧ ಹಣ್ಣುಗಳನ್ನು ಅಂತಾರಾಷ್ಟಿçÃಯ ಗುಣಮಟ್ಟದಲ್ಲಿ ಬೆಳೆಯಲಾಗುತ್ತದೆ. ಅಲ್ಲದೇ ಇಲ್ಲಿನ ಮೀನು ಸಾಕಾಣಿಕೆ ಪದ್ಧತಿಯೂ ಅಮೋಘವಾಗಿದೆ. ಹೈನುಗಾರಿಕೆಯಲ್ಲೂ ಇಸ್ರೇಲ್ ಅದ್ಭುತ ಸಾಧನೆ ಮಾಡಿದೆ ಎಂದು ತಿಳಿಸಿದರು.
ನಮ್ಮ ರೈತರು ತಮ್ಮ ಬೆಳೆಗಳನ್ನು ಅಂತಾರಾಷ್ಟಿçÃಯ ಗುಣಮಟ್ಟದಲ್ಲಿ ಬೆಳೆದಾಗ ಮಾತ್ರ ಲಾಭ ಗಳಿಸಲು ಸಾಧ್ಯ. ಭಾರತದ ಕೃಷಿ ವಿಧಾನದಲ್ಲಿ ಅಮೂಲಾಗ್ರ ಬದಲಾವಣೆಯಾಗಬೇಕು. ಜನರು ಇಲ್ಲಿನ ಪಾರಂಪರಿಕ ಕೃಷಿ ಪದ್ಧತಿಯ ಜತೆಗೆ ಕಾಲಾನುಕಾಲಕ್ಕೆ ಬದಲಾಗುವ ವೈಜ್ಞಾನಿಕ ಕೃಷಿಗೆ ತಮ್ಮನ್ನು ಬದಲಾಯಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಹಸಿಲ್ದಾರ್ ಪ್ರಮೋದ್ ಎಲ್.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೃಷಿ ಪ್ರಧಾನವಾದ ಪಾಂಡವಪುರ ತಾಲೂಕಿನಲ್ಲಿ ವೈಜ್ಞಾನಿಕ ಪದ್ಧತಿಯಲ್ಲಿ ಕೃಷಿ ಮಾಡುವವರ ಸಂಖ್ಯೆ ತೀರಾ ಕಡಿಮೆ. ನವೀನ್ ಸಂಗಾಪುರ ಅವರಂತಹ ಪ್ರಗತಿಪರ ರೈತರು ಸಂವಾದ, ಚರ್ಚೆ, ಗೋಷ್ಠಿಗಳ ಮೂಲಕ ರೈತರನ್ನು ವೈಜ್ಞಾನಿಕ ಪದ್ಧತಿಗೆ ಆಕರ್ಷಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ರೈತಸಂಘದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಗತಿಪರ ರೈತರಾದ ಬೆಳ್ಳಾಳೆ ಮಲ್ಲೇಶ್, ಎಚ್.ಎಲ್.ನಂಜೇಗೌಡ, ಎಚ್.ಆರ್.ಧನ್ಯಕುಮಾರ್, ಸಾಹಿತಿ ಚಂದ್ರಶೇಖರಯ್ಯ, ಶಿಕ್ಷಕರಾದ ಪ.ಮ.ನಂಜುAಡಸ್ವಾಮಿ, ಪ್ರಕಾಶ್ ಮೇನಾಗರ, ಅಮಿತ್ ಕ್ಯಾತನಹಳ್ಳಿ ಇತರರಿದ್ದರು.
ಸಂವಾದದಲ್ಲಿ ನವೀನ್ ಸಂಗಾಪುರ ಅವರು ಕೃಷಿಯನ್ನು ವೈಜ್ಞಾನಿಕವಾಗಿ ಅನುಸರಿಸುವÀ ಮೂಲಕ ಸರಳ ಹಾಗೂ ಲಾಭಕರವಾಗಿ ಮಾಡಿಕೊಳ್ಳಬಹುದು ಎಂದು ನವೀನ್ ಸಂಗಾಪುರ ಅವರು ಸುದೀರ್ಘವಾಗಿ ರೈತರಿಗೆ ಮಾರ್ಗದರ್ಶನ ಮಾಡುವ ಮೂಲಕ ತಮ್ಮ ಇಸ್ರೇಲ್ ಪ್ರವಾಸದ ಕೃಷಿ ಅನುಭವಗಳನ್ನು ಹಂಚಿಕೊAಡರು. ರೇಷ್ಮೆ ಸಹಾಯಕ ನಿರ್ದೇಶಕ ರವಿಕುಮಾರ್, ರೈತ ಬೋಳಾರಿಗೌಡ, ಡಾ.ಕೆ.ವೈ.ಶ್ರೀನಿವಾಸ್ ಇತರರು ಸಂವಾದದಲ್ಲಿ ಪ್ರಶ್ನೆಗಳನ್ನು ಕೇಳಿದರು.


Share

ಹೃದಯವಂತ ಮಹೇಂದ್ರ ಮುಣೋತ್

Share

ಎಲ್ಲೆಲ್ಲೂ ಕರೋನ ಲಾಕ್‍ಡೌನ್ ಸಂದರ್ಭ ಬಡವರಿಗೆ, ನಿರಾಶ್ರಿತರಿಗೆ, ಕಾರ್ಮಿಕ ವರ್ಗಕ್ಕೆ ದಿಕ್ಕು ಕಾಣದೆ ಕಾಂಗಾಲಾದ ಸಂದರ್ಭ ಸಮಸ್ಯೆ ಮುಗಿದಿಲ್ಲ. ಒಂದು ಕಡೆ ಸಾವು ನೋವುಗಳ ಭೀಕರ ದೃಶ್ಯಗಳು. ಸಂಬಂಧಗಳನ್ನೇ ಮರೆತು ಮಾನವೀಯತೆಯ ಮೇಲೆ ಬಿದ್ದ ದೊಡ್ಡ ಪೆಟ್ಟು. ಇಡೀ ಪ್ರಪಂಚವೇ ಎಂದೂ ಕೇಳರಿಯದ ಕಷ್ಟದ ಕಾಲವನ್ನು ಈ ಎರಡು ವರ್ಷಗಳಲ್ಲಿ ನೋಡಲಾಯಿತು. ಇಡೀ ಪ್ರಪಂಚವು ಕರೋನ ಕಪಿಮುಷ್ಠಿಯಲ್ಲಿ ತತ್ತರಿಸಿ ಹೋದಾಗ ಸರ್ಕಾರ ಸೇರಿದಂತೆ ಆಡಳಿತ ವರ್ಗವೂ ಕೂಡಾ ಸಹಾಯ ಮಾಡಲು ಆಗದ ಸಂದರ್ಭ ಹಲವಾರು ದೇಶಗಳಿಗೆ ಬಂದೊದಗಿತು. ಇಂತಹ ಸಂದರ್ಭದಲ್ಲಿ ಮಾನವೀಯ ಹೃದಯವಂತ ಹಲವಾರು ಸಮಾಜ ಸೇವಕರು ಜನತೆಯ ನೆರಳಿಗೆ ನಿಂತರು. ಅಂತಹ ಸಾಲಿನಲ್ಲಿ ಸೂರ್ಯನಂತೆ ಬೆಳಗಿದ ಕರುನಾಡಿನ ಹೆಮ್ಮೆಯ ಪುತ್ರ ಮಾರುತಿ ಮೆಡಿಕಲ್‍ನ ಮಾಲೀಕರಾದ ಶ್ರೀ ಮಹೇಂದ್ರ ಮುಣೋತ್ ಮುಂಚೂಣಿಯಲ್ಲಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅದರಲ್ಲೂ ಬೆಂಗಳೂರಿನ ಸುತ್ತಮುತ್ತ ನಿರಾಶ್ರಿತರು, ಬಡವರು, ಕೂಲಿ ಕಾರ್ಮಿಕರಿಗೆ ಸಹಾಯದ ಮಹಾಪೂರವನ್ನೇ ಹರಿಸಿದರು. ಪ್ರತಿನಿತ್ಯವು ಲಕ್ಷಾಂತರ ಜನರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಿ ಅನ್ನದಾಸೋಹಿ ಎನ್ನಿಸಿಕೊಂಡಿದ್ದಾರೆ. ಇನ್ನು ಕೆಲ ಮಧ್ಯಮ ವರ್ಗಗಳಿಗೆ ಮತ್ತು ಕಾರ್ಮಿಕ ವರ್ಗಗಳಿಗೆ ಆಹಾರ ಕಿಟ್‍ಗಳನ್ನು ನೀಡುವ ಮೂಲಕ ನೊಂದು ದಿಕ್ಕು ಕಾಣದ ಜನತೆಯಲ್ಲಿ ನಿಮ್ಮೊಂದಿಗೆ ನಾವು ಮಾನವೀಯ ಮೌಲ್ಯಗಳೊಂದಿಗೆ ಸಹಾಯ ನೀಡುತ್ತೇವೆ ಧೈರ್ಯದಿಂದ ಈ ಸಮಯವನ್ನು ಕಳೆಯೋಣ ಎಂದು ಧೈರ್ಯ ತುಂಬಿದರು. “ಈ ಸಮಯವು ಕಳೆದು ಹೋಗುತ್ತದೆ” ಎಂಬ ಶೀ ಕೃಷ್ಣನ ಹೇಳಿಕೆಯಂತೆ ಕಷ್ಟವಾಗಲಿ ಸುಖವಾಗಲಿ ಸ್ವಲ್ಪ ಸಮಯದವರೆಗೆ ಇರುತ್ತದೆ. ಈ ಸಮಯ ಕಳೆದ ನಂತರ ಒಳ್ಳೆಯ ದಿನಗಳು ಬರುತ್ತವೆ ಎಂಬ ಅಚಲವಾದ ನಂಬಿಕೆಯೊಂದಿಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ರೀತಿಯ ಸಹಾಯವನ್ನು ಮಾಡಿರುತ್ತಾರೆ.
ಶ್ರೀ ಮಹೇಂದ್ರ ಮುಣೋತ್ ಅವರು ಮೂಲತಃ ಔಷಧಿ ವ್ಯಾಪಾರಿಗಳಾಗಿದ್ದರೂ ಕೂಡಾ ಕನ್ನಡ ನಾಡಿನ ಬಗ್ಗೆ ಅಪಾರವಾದ ಅಭಿಮಾನ ಕಲೆ, ಸಂಸ್ಕøತಿಗೆ ಸಹಾಯ, ಬಡವರಿಗೆ ಮತ್ತು ನಿರಾಶ್ರಿತರಿಗೆ ಸಹಾಯ ಹೊಸ ಪ್ರತಿಭೆಗಳಿಗೆ, ಹೊಸ ಯೋಜನೆಗಳಿಗೆ ಮುಕ್ತ ಮನಸ್ಸಿನಿಂದ ಸಹಾಯ ಸಹಕಾರ ನೀಡುತ್ತಾರೆ. ಲಕ್ಷಾಂತರ ಜನರಿಗೆ ಜೀವನ ರೂಪಿಸಿದ ಕೀರ್ತಿ ಶ್ರೀಯುತರಿಗೆ ಸಲ್ಲುತ್ತದೆ. ಕರೋನ ಸಂದರ್ಭವನ್ನು ಹೊರತುಪಡಿಸಿಯೂ ಕೂಡಾ ಸಹಾಯ ಮಾಡುವ ಕಾಯಕವು ಸದಾ ನಡೆಯುತ್ತಿರುತ್ತದೆ. ಸಹಾಯ ಕೇಳಿಕೊಂಡು ಬರುವ ಯಾರೇ ವ್ಯಕ್ತಿಗೂ ಬರಿಗೈಯಲ್ಲಿ ಮರಳಿ ಕಳುಹಿಸಿದ ಉದಾಹರಣೆಗಳೇ ಇಲ್ಲ. ಇಂತಹ ಮಾನವೀಯ ಮೌಲ್ಯಗಳನ್ನು ಹೊಂದಿರುವ ಶ್ರೀಯುತರು ಕರೋನ ಕುರಿತು ಅನೇಕ ಕಿರುಚಿತ್ರ ಹಾಡಿನ ಮೂಲಕ ಜಾಗೃತಿಯನ್ನು ಕೂಡ ಮೂಡಿಸಿದ್ದಾರೆ. ಕರ್ನಾಟಕ ಪ್ರೆಸ್ ಕ್ಲಬ್ ಸೇರಿದಂತೆ ಬೆಂಗಳೂರಿನ ಹಲವಾರು ಎನ್.ಜಿ.ಓ.ಗಳ ಸಹಕಾರದೊಂದಿಗೆ ಬೆಂಗಳೂರಿನ ನಾಗರೀಕರಿಗೆ ಆಹಾರ ಕಿಟ್ ವಿತರಣೆ, ಮಧ್ಯಾಹ್ನದ ಊಟದ ವ್ಯವಸ್ಥೆ, ವೈದ್ಯಕೀಯ ನೆರವು ಮತ್ತು ನೀರು ಸೇರಿದಂತೆ ಹಲವಾರು ರೀತಿಯ ಸಹಾಯವನ್ನು ಮಾಡುತ್ತಿದ್ದಾರೆ. ವಿವಿಧ ಕಾರ್ಮಿಕ ವರ್ಗಗಳಿಗೆ ಒಂದು ಲಕ್ಷಕ್ಕೂ ಅಧಿಕ ಆಹಾರ ಕಿಟ್‍ಗಳನ್ನು ನೀಡಿರುತ್ತಾರೆ. ಕರ್ನಾಟಕ ಪ್ರೆಸ್ ಕ್ಲಬ್ ಸಹಕಾರದೊಂದಿಗೆ ಮಾಧ್ಯಮ ವರ್ಗದವರಿಗೆ ಸುಮಾರು 2 ಸಾವಿರಕ್ಕಿಂತ ಅಧಿಕ ಆಹಾರ ಕಿಟ್‍ಗಳನ್ನು ನೀಡಿ ಮಾಧ್ಯಮ ವರ್ಗವನ್ನೂ ಸೇರಿದಂತೆ ಎಲ್ಲಾ ಕಾರ್ಮಿಕ ವರ್ಗದವರಿಗೆ ನಿಮ್ಮೊಂದಿಗೆ ನಾವು ಇದ್ದೇವೆ ಎಂಬ ಧೈರ್ಯವನ್ನು ನೀಡಿದ್ದಾರೆ. ಆರೋಗ್ಯದ ತುರ್ತು ಸೇವೆಗಳಾದ ಆಂಬುಲೆನ್ಸ್ ಮತ್ತು ಔಷಧ ವಿತರಣೆ ಮೂಲಕವು ಕರೋನ ರೋಗಿಗಳಿಗೆ ಸಹಾಯ ನೀಡುತ್ತಾ ಹೃದಯ ವೈಶಾಲ್ಯತೆಯನ್ನು ತೋರಿದ್ದಾರೆ.


Share

ದೈವತ್ವ ಪುರುಷೊತ್ತಮ ಶ್ರೀ ಎನ್.ಎಂ.ಆಂಜನೇಯ ಗುರೂಜಿ

Share

ಶ್ರೀಯೂತ ಆಂಜಿನೇಯ ವಕೀಲರು ಆಗು ಆಂಜಿನೇಯ ಆರಾಧ್ಯ ದೈವ ಆಂಜಿನೇಯ ಆರಾಧಕರಾದ ಆಂಜಿನೇಯ ಜ್ಯೋತಿಷ್ಯ ಗುರುಗಳಾದ, ನೆಡುದು ಬಂದ ಆಗು ಎಲ್ಲಾ ರಂಗದಲ್ಲೂ ಅವಕಾಶ ವಂಚಿತರಾದ . ನೆಡೆದಾಡುವಾ ದೇವ್ರು..

ಕರ್ನಾಟಕ ಸಾಂಸ್ಕೃತಿಕ ಅಕಾಡೆಮಿ (೨) ವಿಶ್ವ ವೀರಶೈವ ಸಂಸ್ಕೃತಿ ಪ್ರತಿಷ್ಠಾನ () ಪುರಸ್ಕೃತರು

ಆ೦: ಆಂಗೀರಸರಂತೆ
ಜ : ಜನಾನುರಾಗಿಯಾಗಿ
ಗು : ಗುಣಸಂಪನ್ನರಾಗಿ ಹಲವಾರು
ರೂ : ರೂಪರೇಷಗಳಿಂದ ಜನರನ್ನು
ಜಿ :ಜಿಷ್ಟು (ವಿಷ್ಣು )ವಿನಂತೆ ಪರಿಪಾಲಸಿತ್ತ ತಮಗೆ
ಆರಾಧ್ಯ ದೈವ
ನೇ :ನೇರ ದಿಟ್ಟ ನಿರಂತರ ನುಡಿಗಳಿಂದ
ಯ :ಯೊಥೋಚಿತ ಜನಸೇವೆ ಮಾಡುತ್ತಾ

ಅಂಗೀರಸ (ಬೃಹಸ್ಪತಿ) ರಂತೆ ಜನಾನುರಾಗಿಯಾಗಿ ನೇರ-ದಿಟ್ಟ-ನುಡಿಗಳಿಂದ ಯಥೋಚಿತ ಜನಸೇವೆ ಮಾಡುತ್ತಾ ಗುಣಸಂಪನ್ನರಾಗಿ ಹಲವಾರು ರೂಪರೇಷೆಗಳಿಂದ ಜನರನ್ನು ಅಷ್ಟು (ವಿಷ್ಣು) ಏನಂತೆ ಪರಿಪಾಲಿಸುತ್ತಿರುವ

ಶ್ರೀ ಗುರುಜ್ಞಾನಪೀಠ ಪ್ರಶಸ್ತಿ ಪಡಿದಿದ್ದರೆ
ಗೌರವ ಪೂರ್ವಕವಾಗಿ ಅಭಿನಂದನಾ ಪೂರ್ವಕವಾಗಿ ಸಲ್ಲಿಸಿದ್ದರೆ

ಗುರು ವಿಷ್ಣು ಗುರು ದೇವೋ ಮಹೇಶ್ವರಃ |

ಗುರು ಸಾಕ್ಷಾತ್ ಪರಬ್ರಹ್ಮ ತಸ್ಕೃ ಶ್ರೀ ಗುರವೇ ನಮಃ || ವಿಶ್ವದಲ್ಲಿಯೇ ಅತ್ಯಂತ ಶ್ರೇಷ್ಠವಾದ ನಮ್ಮ ಭಾರತ ಸಂಸ್ಕೃತಿಯು ವೇದ ಉಪನಿಷತ್ತುಗಳ ತವರೂರು, ಸನಾತನ ಸಂಸ್ಕೃತಿಯನ್ನು ಪೋಷಿಸಿ ಬೆಳೆಸಿರುವ ನಾಡು ನದ್ದು ಕನ್ನಡ ನಾಡು, ಅಲ್ಲಮಪ್ರಭು, ಕ್ರಾಂತಿಯೋಗಿ ಬಸವಣ್ಣನವರು, ಅಕ್ಕಮಹಾದೇವಿ ಮುಂತಾದ ಶಿವ ಶರಣೆಯರು ತಮ್ಮ ವಚನಗಳ ಮೂಲಕ ನಮ್ಮನ್ನು ಸುಸಂಸ್ಕೃತರನ್ನಾಗಿಸಿರುತ್ತಾರೆ. ಕನ್ನಡ ನಾಡಿನ ಸುಸಂಸ್ಕೃತ ಜಿಲ್ಲೆಯಲ್ಲಿ ಒಂದಾದ ದಾವಣಗೆರೆಯ ವ್ಯಾಪ್ತಿಯಲ್ಲಿ ಬರುವ ನೀಲಾನಹಳ್ಳಿ ಎಂಬ ಪುಟ್ಟ ಗ್ರಾಮದ ಪುಣ್ಯ ಭೂಮಿಯಲ್ಲಿ ಶ್ರೀಮತಿ ಕೆಂಚಮ್ಮ ಮತ್ತು ಶ್ರೀಯುತ ಮೂರ್ತಪ್ಪ ನವರ ಹೆಮ್ಮೆಯ ಪುತ್ರನಾಗಿ ದಿನಾಂಕ 10-05-1950 ರ ಅಕ್ಷಯ ತೃತೀಯ ಹಾಗೂ ಜಗಜ್ಯೋತಿ ಬಸವೇಶ್ವರ ಜಯಂತಿಯಂದು ಶ್ರೀಯುತ ಎನ್.ಎಂ.ಆಂಜನೇಯ ಎಂಬ ನಾಮಧೇಯದಿಂದ ಜನಿಸಿದ ಮಹಾನ್ ಸಾಧಕರು ತಾವು

ತದ್ದು ಬಾಲ್ಯದಿಂದಲೂ ದೈವತ್ವದ ಕಡೆ ಒಲವನ್ನು ತೋರುತ್ತಾ ಬಂದವರು ನೀವು, ಪ್ರಾಥಮಿಕ ವಿದ್ಯಾಭ್ಯಾಸದ ನಂತರ ಕಾನೂನು ಪದವಿಯನ್ನು ಪಡೆದು – ಜಯಸೀಲರಾಗಿ, “ಜಯಾ ಸೇವೆಯ ಜನಾರ್ದನ ಸೇವೆ” ಎಂದು ತಿಳಿದು, ಬಸವಣ್ಣನವರ ವಚನದಂತ “ಕಾಯಕವೇ ಕೈಲಾಸ” ಎಂಬುದನ್ನು ಸಾರ್ಥಕ ಮಾಡುವ ಸಲುವಾಗಿ, ತಾವು ಆಂಜನೇಯ ಸ್ವಾಮಿಯ ಆರಾಧಕರಾಗಿ ಜ್ಯೋತಿಷ್ಯ ಸಲಹೆಗಳನ್ನು ನೀಡುತ್ತಾ ಜನಸದೆ ಮಾಡುತ್ತಾ ಬಂದಿರುವಿರಿ, ತದ್ದು ಜನಪರ ಕಾಳಜಿಯನ್ನು ಪ್ರತ್ಯಕ್ಷ ಕಂಡ ಚಿತ್ರದುರ್ಗದ ಬೃಹನ್ಮಠದ ಹಿರಿಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿಯವರು ತದುಗೆ ಸಿದಲಿಂಗ ದೀಕ್ಷೆಯನ್ನು ನೀಡಿ ಹರಸಿರುತ್ತಾರೆ.

ಶ್ರೀಯುತರಾದ ತಾವು ಜನಪರ ಕಾಳಜಿಗೆ ಸಂಬಂಧಿಸಿದ ಎಲ್ಲಾ ರಂಗಗಳಲ್ಲಿಯೂ ಪ್ರಾವೀಣ್ಯತೆಯನ್ನು ಪಡೆದು, ಅಪಾರವಾದ ಅನುಭವವನ್ನು ಗಳಿಸಿ ನಾಡಿನ ಉದ್ದಗಲಕ್ಕೂ ಸಂಚಾರ ಮಾಡಿ, ಅಪಾರವಾದ ಕೀರ್ತಿ, ಗೌರವವನ್ನು ಸಂಪಾದಿಸಿರುತ್ತೀರಿ, ಜ್ಯೋತಿಷ್ಯ ಕ್ಷೇತ್ರದಲ್ಲಿ ಉತ್ತದು ಹೆಸರು ಸಂಪಾದಿಸಿ ಜನ ಸಾಮಾನ್ಯರಿಗೆ ಉಚಿತವಾಗಿ ಜ್ಯೋತಿಷ್ಯ ಸಲಹೆಗಳನ್ನು ನೀಡುವ ಸಲುವಾಗಿ ಹಾಗೂ ನಮ್ಮ ಯುವ ಪೀಳಿಗೆಯು ಪಾಶ್ಚಾತ್ಯ ಸಂಸ್ಕೃತಿಗೆ ಮಾರು ಹೋಗುತ್ತಿರುವುದನ್ನು ಗಮನಕ್ಕೆ ತಂದುಕೊಂಡ ತಾವು ಹಿಂದೂ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಸಲುವಾಗಿ ಅನೇಕ ಯೋಜನೆಗಳನ್ನು ರೂಪಿಸಿ ಆದ್ರಗಳನ್ನು ಕಾರ್ಯಗತ ಮಾಡುವ ಸಲುವಾಗಿ “ಶ್ರೀ ಆಶಿರ್ ಗುರು ಪೀರ” ವನ್ನು ಸ್ಥಾಪನೆ ಮಾಡಿರುತ್ತೀರಿ 1987ರ ಬಸವಜಯಂತಿಯ ದಿನದಂದು ಭಾಗ್ಯಲಕ್ಷ್ಮಿ ಎಂಬುವವರನ್ನ ವಿವಾಹವಾಗಿ, ಆದರ್ಶ, ಆಕಾಶ್, ಆರೀಫ್ ಎಂಬ ತ್ರಿಮೂರ್ತಿ ಪುತ್ರರನ್ನು ಪಡೆದಿರುತ್ತಾರೆ

ಶ್ರೀಯುತರು ತಮ್ಮ ಗುರುಪೀಠದಲ್ಲಿ ಜ್ಯೋತಿಷ್ಯ ಹಾಗೂ ದೈವ ಚಿಂತನೆಯ ಮೂಲಕ ಜನ ಸಾಮಾನ್ಯರ ಕುಂದುಕೊರತೆಗಳನ್ನು ನಿವಾರಿಸುವ ಸಲುವಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಪೀಠದ ಧರ್ಮಾಧಿಕಾರಿಗಳಾಗಿ ಅಪಾರ ಭಕ್ತವೃಂದವನ್ನು ನಾಡಿನಾದ್ಯಂತವಲ್ಲದೇ ದೇಶ ಹಾಗೂ ವಿದೇಶಗಳಲ್ಲಿಯೂ ಹೊಂದಿರುತ್ತಾರೆ. ಆದರ ಸಲಹೆ, ಮಾರ್ಗದರ್ಶನ ಪಡೆದ ಅನೇಕರು ಇಂದು ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುತ್ತಾರೆ. ಭಕ್ತವೃಂದದಿಂದ ಅವರಿಗೆ ಜ್ಯೋತಿರ್ವಿಜ್ಞಾ ಎಂಬ ಬಿರುದು ಬಂದಿದೆ. ಅಲ್ಲದೆ ಅನೇಕ ಸಂಘ ಸಂಸ್ಥೆಗಳು ತದುಗೆ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಗೌರವಿಸಿರುತ್ತಾರೆ. ಭಾರತಾಂಬೆಯ ಮಡಿಲಿನಲ್ಲಿ ಜನಿಸಿ ರಾಷ್ಟ್ರಕ್ಕೆ ಹಾಗೂ ರಾಜ್ಯಕ್ಕೆ ಅಮೋಘವಾದ ಸೇವೆ ಸಲ್ಲಿಸುತ್ತಿರುವ ನಿಮಗೆ ನಮ್ಮ ಸಂಸ್ಥೆಯ – ಪಿರಿ: ಜಿದ ಹಾಗೂ ಭಕ್ತ ವೃಂದದ ಪರವಾಗಿ ಲೇಪಿತ ಕಿರೀಟವನ್ನು ಆರ್ಷಿಸುತ್ತಿದ್ದರೆ, ಆ ದಾವ; ಎತ: ನಾದ ಭಗವಂತನು ತದುಗೆ ಆಯುರಾರೋಗ್ಯ ಐಶ್ವರ್ಯಾದಿಗಳನ್ನು ದಯಪಾಲಿಸಿ ಸಕಲ ಸನ್ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುತ್ತೇವೆ.

ಇವರು ಹಲವಾರು ಉಚಿತವಾಗಿ ಕಾರ್ಯಕ್ರಮ ಮಾಡುತ್ತಾ ಭಾಷಣಕಾರರಾಗಿ.
ಇವರು ಸ್ವಯಂ ವಕೀಲ ವೃತ್ತಿ ನಿರ್ವಹಿಸುತ್ತ,
ವಿರಾಮ ವೇಳೆಯೆಲ್ಲಿ ಇವರು ನೈಜವಾದ ಜೋತಿಷ್ಯ ನುಡಿಯುತ್ತಾ ಜನ ಸಾಮಾನ್ಯರಿಗೋಸ್ಕರ. ಇವರ ವೃತ್ತಿ ಮುಡಿಪಾಗಿಟ್ಟು.
ಒಳ್ಳೆಯ ಕಲೆ ಸಂಸ್ಕೃತಿ ತಿಳುಸುತ್ತ.
ಮಹಾನ್ ವ್ಯಕ್ತಿ ಕೂಡ ಹೌದು
ಇವರು ಕೂಡ ಡಾಕ್ಟರ್ಟ್ ಪದವಿ ಕೂಡ ದೊರಕಿದೆ.( ಶಾಂತಿ )ಎಂಬ ಪದವಿಗೆ.
ಇಂತಹ ಮಹಾನ್ ವ್ಯಕ್ತಿ ನಮ್ಮ ರಾಷ್ಟ್ರಕ್ಕೆ ಬೇಕು.
ಇವರು ಯಾವುದೇ ಜಾತಿ ಭೇದ ಭಾವವಿಲ್ಲದೆ ಇವರು ರಾಜ್ಯ್ದಂತ ಜನರ ಸೇವೆ ಮಾಡುತ್ತಾ ಸಾಗ್ತಾಇದ್ದರೆ ಇಂತಹ ದಿನಗಳಲ್ಲಿ
.. ಭವಿಷ್ಯ ಇವರು ಅಪಾರವಾದ ನಂಬಿಕೆ ವಕೀಲರು ಹಾಗೂ ಜ್ಯೋತಿಷ್ಯ ಸ್ವಾಮೀಜಿಯವರು..
ವರದಿ ಭರ್ಮಪ್ಪ ಮಾಗಳದ


Share

ಇತಿಹಾಸ ಪ್ರಸಿದ್ಧ ಈಚನೂರು ಕೆರೆ -ಕೆ.ಟಿ.ಶಾಂತಕುಮಾರ್

Share

ಕುಡಿಯುವ ನೀರು ಯೋಜನೆ ಈಚನೂರು ಕೆರೆಗೆ ಕೆ ,ಟಿ, ಶಾಂತಕುಮಾರ್ ಭೇಟಿ ನೀಡಿ ಪರಿಶೀಲಿಸಿ ಮಾತನಾಡುತ್ತಾ ಇತಿಹಾಸ ಪ್ರಸಿದ್ಧ ಈಚನೂರು ಕೆರೆ ಸುಮಾರು ಹತ್ತಾರು ಹಳ್ಳಿಗಳ ಜೀವನಾಡಿಯಾಗಿದ್ದು ಕೆರೆಯ ಹೂಳೆತ್ತುವ ಕಾರ್ಯದಲ್ಲಿ ಕೆರೆಯ ಫಲವತ್ತಾದ ಮಣ್ಣನ್ನು ಸುತ್ತಮುತ್ತಲಿನ ಗ್ರಾಮದ ರೈತರಿಗೆ ಒಂದು ಕಿಮೀ ಉಚಿತವಾಗಿ ನೀಡುತ್ತಿದ್ದು ರೈತರಿಗೆ ಅನ್ಯಾಯವಾಗಿದೆ ಕೆರೆಯ ಮಣ್ಣನ್ನು ಸುಮಾರು 5 ಕಿ ಮೀ ವರೆಗೆ ಉಚಿತವಾಗಿ ಕೆರೆಯ ಮಣ್ಣನ್ನು ರೈತರ ತೋಟಗಳಿಗೆ ತುಂಬಿಸುವ ಕೆಲಸ ಮಾಡಬೇಕೆಂದು ಮನವಿ ಮಾಡಿದರು.


Share

ಕಲ್ಪನಾ ಚಾವ್ಲಾ ಬಳಿಕ ಬಾಹ್ಯಾಕಾಶಯಾನಕ್ಕೆ ಆಂಧ್ರಪ್ರದೇಶ ಮೂಲದ ಮಹಿಳೆ ಸಿರಿಶಾ ಬಾಂಡ್ಲಾ!

Share

ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಆಂಧ್ರಪ್ರದೇಶ ಗುಂಟೂರಿನ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

ಕಲ್ಪನಾ ಚಾವ್ಲಾ ನಂತರ ಬಾಹ್ಯಾಕಾಶಯಾನ ಕೈಗೊಳ್ಳುತ್ತಿರುವ ಎರಡನೇ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದೆ 11ರಂದು ನ್ಯೂ ಮೆಕ್ಸಿಕೋದಿಂದ ವಿಎಸ್ಎಸ್ ಯುನಿಟಿ ಆಫ್ ವರ್ಜಿನ್ ಗೆಲಾಕ್ಟಿಕ್ ಎಂಬ ಹೆಸರಿನ ಬಾಹ್ಯಾಕಾಶ ನೌಕೆ ಪ್ರಯಾಣ ಕೈಗೊಳ್ಳುತ್ತಿದ್ದು, ಒಟ್ಟು ಆರು ಮಂದಿಯನ್ನೊಳಗೊಂಡ ಈ ನೌಕೆಯಲ್ಲಿ ಸಿರಿಶಾ ಅವರೊಂದಿಗೆ ಇನ್ನೋರ್ವ ಮಹಿಳೆ ಬೆತ್ ಮೊಸೆಸ್ ಇರಲಿದ್ದಾರೆ.

ಈ ಬಗ್ಗೆ ಮಾತನಾಡಿರುವ 34 ವರ್ಷದ ಭಾರತ ಮೂಲದ ಸಿರಿಶಾ ಬಾಂಡ್ಲಾ, ತಂಡದ ಯೋಜನೆಯ ಭಾಗವಾಗಿರುವುದು ಬಹಳ ಸಂತೋಷವಾಗಿದೆ . ಯನಿಟಿ22 ಪಯಣದಲ್ಲಿ ಆರು ಜನರೊಟ್ಟಿಗೆ ನಾನೂ ಒಬ್ಬಳಾಗಿರುತ್ತೇನೆ. ಎಲ್ಲ ಜನರಿಗೂ ಬಾಹ್ಯಾಕಾಶ ಕೈಗೆಟಕುವಂತಾಗಬೇಕು ಎನ್ನುವುದೇ ಈ ಯೋಜನೆಯ ಉದ್ದೇಶ ಎಂದು ಸಿರಿಶಾ ಟ್ವೀಟ್ ಮಾಡಿದ್ದಾರೆ.

ಸಿರಿಶಾ ಬಾಂಡ್ಲಾ ಮೂಲತಃ ಆಂಧ್ರಪ್ರದೇಶ ರಾಜ್ಯದ ಗುಂಟೂರಿನವರಾಗಿದ್ದು, ಟೆಕ್ಸಾಸ್ನಲ್ಲಿ ತಮ್ಮ ಬಾಲ್ಯ ಕಳೆದಿದ್ದಾರೆ. ಸಿರಿಶಾಳ ತಂದೆ ಡಾ.ಮುರಳೀಧರ ಬಾಂಡ್ಲಾ ವಿಜ್ಞಾನಿಯಾಗಿದ್ದು ಅಮೆರಿಕಾದಲ್ಲಿ ಸರ್ಕಾರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಕೆಯ ತಾತ ಬಾಂಡ್ಲಾ ರಾಘಯ್ಯಾ ಕೃಷಿ ವಿಜ್ಞಾನಿಯಾಗಿದ್ದು, ಗುಂಟೂರು ಜಿಲ್ಲೆಯ ಜನಪ್ದು ಹಳ್ಳಿಯಲ್ಲಿ ವಾಸವಿದ್ದಾರೆ. ಮೊಮ್ಮಗಳ ಈ ಸಾಧನೆಯ ಬಗ್ಗೆ ಕೇಳಿ ಪುಳಕಗೊಂಡಿದ್ದಾರೆ.


Share

ಪರಿಸರದಲ್ಲಿ ಒಂದು ಪಯಣ Tv23 ಯ ವಿಶೇಷ ಕಾರ್ಯ ಕ್ರಮ

Share

https://youtu.be/Yyd6Q4_80AY

 

ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ನಂದಿಹಳ್ಳಿ ಗ್ರಾಮದ ಆಶ್ರಮ ಶಾಲೆಯ ಆವರಣದಲ್ಲಿ ಸುಮಾರು ಮೂರು ಸಾವಿರ ವಿವಿಧ ಜಾತಿಯ ಮರಗಳು ಜನರನ್ನು ಇತ್ತ ಕೈಬಿಸಿ ಕರೆಯುತ್ತಿದೆ. ಶನಿವಾರ ದಿನ ಒಂದು ಈ ಪರಿಸರದ ವಾತಾವರಣದ ಸವಿಯನ್ನು ಸವಿದ ಜನರು ತುಂಬಾನೆ ಖುಷಿ ಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಮಾಹಿತಿ ಹಕ್ಕು ಸಂಪನ್ಮೂಲ ವ್ಯಕ್ತಿ ಎ ಎಂ ಪಿ ವಾಗೀಶ. ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ. ಬಿ ಶಿವಾನಂದ, ಉಪಾಧ್ಯಕ್ಷ ಅಂಗಡಿ ಬಸವರಾಜ, ಸದಸ್ಯ ಜಗದೀಶ್ ಗೌಡ, ಅರಣಿ ಬಸವರಾಜ, ಸಿ ಜೆ ಮಂಜುನಾಥ, ಡಿ ಪ್ರಕಾಶ, ಎಂ ಮಲ್ಲಿಕಾರ್ಜುನ, ತಿರುಕಪ್ಪ, ತೋಟಗಾರಿಕೆ ಇಲಾಖೆಯ ರೇವಣ್ಣಸಿದ್ದಪ್ಪ, ಫಾರೆಸ್ಟ್ ಇಲಾಖೆಯ ಮಹಾಂತೇಶ. ಗುಡ್ಡಪ್ಪ, ಬಳ್ಳಾರಿಯ ವಿಶ್ವಪತಿ, ಹಾಸ್ಟೆಲ್ ವಾರ್ಡನ್ ರಫಿ, ಜಂಕಣ್ಣ. ಸೇರಿದಂತೆ ಊರಿನ ಹಿರಿಯರು ಗ್ರಾಮ ಸ್ಥರು ಇದ್ದರು


Share