ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ಕೆಸಿಆರ್ 500 ಕೋಟಿ ಡೀಲ್: ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು?

Share

ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ರಾಜ್ಯ ಕಾಂಗ್ರೆಸ್ ನಾಯಕನಿಗೆ 500 ಕೋಟಿ ರೂಪಾಯಿ ಸುಪಾರಿ ನೀಡಲಾಗಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಸುದ್ದಿಗೋಷ್ಠಿ ಇದೀಗ ದೇಶದಲ್ಲೇ ಭಾರಿ ತಲ್ಲಣ ಸೃಷ್ಟಿಸಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಲು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ಕರ್ನಾಟಕದ ಕಾಂಗ್ರೆಸ್ ನಾಯಕನೊಬ್ಬನ ಕರೆಸಿ ಮೂರು ಮೂರು ಬಾರಿ ಮೀಟಿಂಗ್ ನಡೆಸಿದ್ದಾರೆ. ಇಷ್ಟೇ ಅಲ್ಲ 500 ಕೋಟಿ ರೂಪಾಯಿ ಆಫರ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಆರೋಪಕ್ಕೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಸೋಲಿಸಲು ಕೆಸಿಆರ್ ಸುಪಾರಿ ನೀಡಿದ್ದಾರೆ ಅನ್ನೋ ವಿಚಾರ ನನಗೆ ಗೊತ್ತಿಲ್ಲ. ಯಾರು ಯಾರನ್ನೂ ಬೇಕಾದರೂ ಭೇಟಿ ಮಾಡುತ್ತಾರೆ. ಕಾಂಗ್ರೆಸ್ ಸೋಲಿಸಿದರೆ ಕೆ ಚಂದ್ರಶೇಖರ್ ರಾವ್‌ಗೆ ಲಾಭ ಏನು? ಕೆಸಿಆರ್ ಅವರ ಹೋರಾಟ ಬಿಜೆಪಿ ವಿರುದ್ಧ. ಕಾಂಗ್ರೆಸ್ ವಿರುದ್ಧ ಅಲ್ಲ ಎಂದಿದ್ದಾರೆ.

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಯಾವ ಹಿನ್ನಲೆಯಲ್ಲಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ನನಗೆ ಜನತೆಯ ಆಶೀರ್ವಾದ, ನನಗೆ ಜನತೆಯ ಬೆಂಬಲ ಇದೆ. ಹೀಗಾಗಿ ಈ ವಿಚಾರಗಳ ಕುರಿತು ನಾನು ಗಮನ ಹರಿಸುವುದಿಲ್ಲ. ನನಗೆ ಹಣದ ಅವಶ್ಯಕತೆ ಇಲ್ಲ. ಕರ್ನಾಟಕದಲ್ಲಿ ಯಾತ್ರೆ ಮೂಲಕ ಸಂಚರಿಸುತ್ತಿದ್ದೇನೆ. ಅಭೂತಪೂರ್ವ ಯಶಸ್ಸು ಸಿಕ್ಕಿದೆ ಎಂದು ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.   

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾತನಾಡಿ ರೇವಂತ್ ರೆಡ್ಡಿ ಅವರ ಆರೋಪದ ಬಗ್ಗೆ ವರದಿಗಳನ್ನು ಓದಿದ್ದೇನೆ ಮತ್ತು ಈ ವಿಷಯದ ಬಗ್ಗೆ ಸತ್ಯವನ್ನು ಖಚಿತಪಡಿಸಿಕೊಂಡ ನಂತರವೇ ಪ್ರತಿಕ್ರಿಯಿಸುತ್ತೇನೆ ಎಂದು ಹೇಳಿದರು


Share

ಧರ್ಮ-ಸಂಘರ್ಷ, ಪಿ.ಎಸ್.ಐ ಹಗರಣ-ಸಿ.ಎಂ. ಮೌನ.

Share

ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ತಲೆದೂಗುತ್ತಿದ್ದು ಈ ಎಲ್ಲಾ ಸಮಸ್ಯೆಗಳಿಗೆ ಉತ್ತರಿಸಬೆಕಾದ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಯವರ ಮೌನದ ಹಿಂದದೆ ಲೆಕ್ಕವಿಲ್ಲದಷ್ಟು ಅರ್ಥಗಳು ಇರಬಹುದು. ಆದರೆ ಅಭಿಪ್ರಾಯದ ಲೆಕ್ಕದಲ್ಲಿ ಹೇಳುವುದಾದರೆ ಕರ್ನಾಟಕದ ಇಂದಿನ ಪರಿಸ್ಥಿತಿಗೆ ಜೆ.ಸಿ.ಬಿ ರಾಜಕಾರಣಿಗಳೇ ಕಾರಣ. ಧರ್ಮದ ಬೆಂಕಿ ಹಚಿಚಿ ಗುಂಡಾಗಿರಿ ನಡೆಸುತ್ತಿರುವುದು ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ ಅತಿ ಹೆಚ್ಚಾಗಿರುವುದು ,ಸಂತೋಷ ಆತ್ಮಹತ್ಯೆ, ಹಿಂದೂ ಮುಸ್ಲಿಂ ಗಲಾಟೆಗಳು ಈಗ 545 ಪಿ.ಎಸ್.ಐ ಹುದ್ದೆನೆಮಕತಿ ಪ್ರಕರಣದಲ್ಲಿ ಹಗರಣ ಹೀಗೆ ಸಲು ಸಲು ಸಮಸ್ಯೆಗಳು ಇರುವಗಲೂ ಸಿ.ಎಂ ಬಸವರಜ್ ಬೊಮ್ಮಯಿ ಅವರು ಮೌನÀವಹಿಸಿರುವುದನ್ನು ನೋಡಿದರೆ ಆಡಳಿತ ಯಂತ್ರ ಕುಸಿದಿರುವುದು ಕಂಡು ಬಂದರೂ ಕೂಡ ಪ್ರತಿಕ್ರಯೆ ನೀಡದಷ್ಟು ಸಿ.ಎ. ದೂರ ನಿಂತಿರುವುದನ್ನು ಕಂಡರೆ ಪಕ್ಷದ ಒತ್ತಡ ರಾಜಕಾರಣಿಗಳ, ಅಧಿಕರಿಗಳು ಮತ್ತು ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿದ್ದಾರಾ ಎಂಬ ಪ್ರಶ್ನೆ ಮೂಡುತ್ತಿದೆ. ಅದರಲ್ಲಿಯೂ ರಾಜ್ಯ, ದೇಶ ಕಂಡರಿಯದ ಪಿ.ಎಸ್.ಐ ಹಗರಣವೊಂದು ರಾಜ್ಯದಲ್ಲಿ ನಡೆದಿದೆ. ಈ ಹಗರಣದ ಮುಖ್ಯರುವಾರಿ ಕಲ್ಬುರ್ಗಿಯ ದಿವ್ಯಾ ಹಾಗರಗಿ ತಲೆ ಮರೆಸಿಕೊಂಡಿದ್ದು ಇದರ ಮಧ್ಯೆಯು ಹಳೆಯ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಅಕ್ರಮವು ಸೇರಿದಂತೆ 2011 ಕೆ.ಪಿ.ಸಿ.ಎಸ್ ಹಗರಣವು ಹೀಗೆ ಸಾಲು ಸಾಲು ಹಗರಣಗಳ ಜೀವಚಿತಿಕೆ ಮಧ್ಯೆ ಪಿ.ಎಸ್.ಐ ಹಗರಣದ ಬಗ್ಗೆ ಸಿಐಡಿ ತನಿಖೆಯನ್ನು ತೀವ್ರಗೊಳಿಸಿದ್ದು ಈ ಪಿ.ಎಸ್.ಐ ಪರೀಕೆಯು ಅಕ್ರಮದಲ್ಲಿ ಓ ಎಂ. ಆರ್ ಶೀಟ್ ತದ್ದುಪಡಿ ಸೆರಿದಂತೆ ಬ್ಲೂ ಟೂತ್ ಬಳಕೆ, ಬನಿಯನ್ ನಲ್ಲಿ ಹೈಟೆಕ್ ತಂತ್ರಜ್ಞಾನ ಬಳಸಿ ಪರೀಕ್ಷೆಯಲ್ಲಿ, ಉತ್ತರ ಬರೆಸಿದ ಕೇಂದ್ರವು ಕಲ್ಬುರ್ಗಿಯ ಜ್ಞಾನ ಜ್ಯೋತಿ ಕಾಲ್ಭೆಜ್ ಆಗಿದ್ದು. 545 ಅಭ್ಯರ್ಥಿಗಳ ಪೈಕಿ ಸುಮಾರು 20 ಅಭ್ಯರ್ಥಿಗಳು ಈ ಕೇಂದ್ರದಲೇ ಆಯ್ಕೆಯಾಗಿರುವುದು ಬೆಳಕಿಗೆ ಬಂದಿದೆ. 1 ಪಿ.ಎಸ್.ಐ ಹುದ್ದೆಗೆ ಆಯ್ಕೆಯಾಗಲೂ ಸಹಾಯ ಮಾಡುವುದಕ್ಕ್ಕಾಗಿ 30 ರಿಂದ 40 ಲಕ್ಷ ನಿಗದಿ ಪಡಿಸಲಾಗಿತ್ತು. ಈಗಾಗಲೇ ಹತ್ತಾರು ಜನರನ್ನು ಬಂಧಿಸಿದ ಸಿಐಡಿಗೆ ಪ್ರಕರಣದ ದಿಕ್ಕು ಇನ್ನೂ ಹೆಚ್ಚಾಗುತ್ತಿದ್ದು ಯಾದಗಿರಿ, ರಾಯಚೂರು, ಕಲ್ಬುರ್ಗಿಯ ಪ್ರಮುಖ ಅಧಿಕಾರಿಗಳು , ವ್ಯಕ್ತಿಗಳು ಭಾಗಿಯಾಗಿದ್ದು ಅದರಲ್ಲಿಯೂ ಕಲ್ಬುರ್ಗಿ ಜಿಲ್ಲೆಯ ಅಫ್ಜಲ್‍ಪುರ್ ತಾಲೂಕಿನ 43 ಕ್ಕೂ ಅಧಿಕ ಅಭ್ಯರ್ಥಿಗಳು ಪಿ.ಎಸ್.ಐ ಪರೀಕ್ಷೆಯಲ್ಲಿ ಆಯ್ಕೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿವೆ. ಇದರ ಮಧ್ಯೆ ಆಳಂದ ಶಾಸಕ ಪಾಟೀಲರ ಅಂಗರಕ್ಷಕನ ಬಂಧನವು ಈ ಪ್ರಕರಣದ ರತಾಜಕೀಯ ವಾಸನೆಯನ್ನು ತಿಳಿಸುತ್ತದೆ. ಇತ್ತ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಈ ಪ್ರಕರಣದ ವಿರುದ್ದ ಗಟ್ಟಿಧ್ವನಿ ಎತ್ತಿದರೂ ಕೂಡ ರಾಜ್ಯದ ಗೃಹ ಸಚಿವ ಅರಗಜ್ಞಾನೇಂದ್ರ ಮತ್ತು ಸಿ.ಎಂ.ಬಸವರಾಜ ಬೊಮ್ಮಾಯಿ ಮೌನದ ಹಿಂದೆ ನಿಗೂಢ ಅರ್ಥಗಳಿವೆ. ಅರಗಜ್ಞಾನೇಂದ್ರ ಬೇರೆ ಪ್ರಕರಣಗಳಲ್ಲಿ ಬಾಯ್ಬಿಟ್ಟರೂ ಕೂಡ ಪಿ.ಎಸ್.ಐ ಪ್ರಕರಣದಲ್ಲಿ ಮೌನಕ್ಕೆ ಜಾರಿದ್ದರೆ. ಸಿಐಡಿ ಪೋಲಿಸರು ದಿವ್ಯ ಹಾಗರಗಿ ಬಂಧಿಸುವಲ್ಲಿ ಪ್ರಯತ್ನ ಮಾಡುತ್ತಿರುವಾಗಲೇ ಇನ್ನೋಂದಿಷ್ಟು ಹೊಸ ಹೊಸ ವ್ಯಕ್ತಿಗಳ ಆಗಮನ ಮತ್ತು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದಿಷ್ಟು ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ.
ಹಿಜಾಬ್ ಕೇಸರಿ, ಧರ್ಮ ವ್ಯಾಪಾರ, ಮುಸ್ಲಿಂರಿಗೆ ವ್ಯಾಪರ ನಿಷೇಧ, ಹಲಾಲ್, ಜಟಕಾಕಟ್ ಶಿವಮೊಗ್ಗ ಹರೀಶನ ಹತ್ಯೆ ಶ್ರೀರಾಮ ಸೇನೆಯ ಪ್ರಮೋದ್ ಮುತಲಿಕ್ ಹೇಳಿಕೆಗಳು, ಹುಬ್ಬಳಿಯ ಮೌಲ್ವಿಯ ಹೇಳಿಕೆ, ರಾಜ್ಯದ ಗುಪ್ತದಳ ಹೇಳುವಂತೆ ಹುಬ್ಬಳಿಯ ಗಲಭೆಯು ಬೆಂಗಳೂರಿನ ಡಿ.ಜೆ.ಹಳ್ಲಿ, ಉತ್ತರಹಳ್ಳಿಗಳಂತೆ ಪೂರ್ವ ನಿಯೋಜಿತ ಘಟನೆಗಳಾಗಿದ್ದು ಹಾಗಾದರೆ ಹಿಜಾಬ್ ನಿಂದ ಹಿಡಿದು ಹುಬ್ಬಳ್ಳಿಯ ಗಲಾಟೆವರೆಗೂ ಸಂತೋಷನ ಆತ್ಮಹತ್ಯೆಯಿಂದಿಡಿದು ಪಿ.ಎಸ್.ಐ ಅಕ್ರಮದವರೆಗೂ ಎಲ್ಲರೂ ಮಾತನಾಡಿದರೂ ಮುಖ್ಯಮಂತ್ರಿ ಏಕೆ ಮಾತನಾಡುತ್ತಿಲ್ಲ? ಕೇಂದ್ರದ ನಾಯಕರ ಒತ್ತಡವೋ ಹಿರಿಯ ನಾಯಕರ ಆಜ್ಞೆಯೋ ಅಥವಾ ಈ ಪ್ರಕರಣಗಳನ್ನು ಹೇಗೆ ನಿಭಾಯಿಸಬೇಕೆಂದು ಸಿ.ಎಂ ಗೆ ಅರ್ಥವಾಗುತ್ತಿಲ್ಲವೋ ಅಥವಾ ಇದುವರೆಗೆ ಬೇರೆ ಬೇರೆ ಹುದ್ದೆಗಳನ್ನು ನಿರ್ವಹಿಸಿದ ಬೊಮ್ಮಾಯಿಯವರಿಗೆ ಸಿ.ಎಂ ಎಂಬ ಮಹತ್ವದ ಹುದ್ದೆಯನ್ನು ನಿರ್ವಹಿಸಲು ಆಗುತ್ತಿಲ್ಲವೋ, ಎಸ್.ಆರ್.ಬೊಮ್ಮಾಯಿ ಯಂತೆ ಮಗ ಬಸವರಾಜ್ ಬೊಮ್ಮಾಯಿ ಆಡಳಿತ ನಡೆಸಲು ಆಗುತ್ತಿಲ್ಲ ಏಕೆ? ಇಚಿತಹ ಹಲವರು ಪ್ರಶ್ನೆಗಳನ್ನು ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು ಸ್ಭೆರಿದಂತೆ ರಾಜಕಾರಣಿಗಳು , ಬೇರೆ ಪಕ್ಷದ ಕಾರ್ಯಕರ್ತರು, ಜನ ಸಾಮಾನ್ಯರು ಪ್ರಶ್ನೆ ಮಾಡಬೇಕು? ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಷ್ಟು ಸಮಸ್ಯೆಗಳು ಒಚಿದೇ ಸಾರಿ ಬಂದಿರುವುದು ಇದೇ ಮೊದಲು ಎನ್ನಬಹುದು. ಜೊತೆಗೆ ಸಿ.ಎಂ. ಒಬ್ಬರು ಮೌನವಾಗಿರುವುದು ಇದೇ ಮೊದಲು ಎನ್ನಬಹುದು. ಪ್ರತಿಯೊಬ್ಬರು ಪ್ರಶ್ನೆಯನ್ನು ಮಾಡಲೇಬೇಕು. ಸಮಸ್ಯೆಗಳ ಮಧ್ಯೆಯು ಮೌನವಹಿಸುವುದನ್ನು ಕಂಡರೆ ಇತಿಹಸದಲ್ಲಿ ಒಬ್ಬ ರಾಜ ಅರಮನೆಗೆ ಬೆಂಕಿ ಬಿದ್ದಾಗ ಪಿಟೀಲು ನುಡಿಸುತ್ತಿದ್ದನಂತೆ ಹಾಗೆ ನಮ್ಮ ಕರ್ನಾಟಕದ ಪರಿಸ್ಥಿತಿಯಾಗಿದೆ. ಪಕ್ಷ ಮರೆತು ಪ್ರಶ್ನೆ ಮಾಡಿ ಪ್ರಜಾ ಪ್ರಭುತ್ವ ಉಳಿಸಿ.


Share

ಎಲ್ಲಿದ್ದೇ ಇಲಿಯತನಕ-ಸೋಗಲಾಡಿ ರಾಜಕಾರಣ

Share

ಕರ್ನಾಟಕ ವಿಧಾನ ಸಭೆಯ ಅವಧಿಯು ಮೇ 2023ಕ್ಕೆ ಮುಗಿಯುತ್ತದೆ.ಇದರ ಮಧ್ಯ ಕೇಲವು ರಾಜಕಾರಣಿಗಳು ಮತ್ತು ರಾಜಕೀಯ ಚಿಂತಕರ ಅಭಿಪ್ರಾಯದಂತೆ ಇದೇ ವರ್ಷ ನವಂಬರ್ ಅಥವಾ ಡಿಸೆಂಬರ್‍ನಲ್ಲಿ ಚುನಾವಣೆ ನಡೆಯಬಹುದು ಅಂತ ರಾಜಕೀಯ ವಲಯದಲ್ಲಿ ಬಾರಿ ಚರ್ಚೆ ನಡೆಯುತ್ತಿದೆ. ಬಿಜೆಪಿಯು ಕೂಡಾ ಸಂಪುಟ ವಿಸ್ತರಿಸುವ ಬದಲಿಗೆ ಚುನಾವಣೆಗೆ ಹೋಗುವ ಇಂಗಿತ ವ್ಯಕ್ತವಾದಂತೆ ಕಾಣುತ್ತದೆ. ರಾಜ್ಯ ಸೇರಿದಂತೆ ದೇಶದಲ್ಲಿ ಈ ಹಿಂದಿನ 4 ವರ್ಷಗಳಲ್ಲಿ ಹಲವಾರು ಬದಲಾವಣೆಗಳು ಕಂಡುಬಂದಿವೆ. ಕರೋನ ಇಡೀ ಜಗತ್ತನ್ನು 15ರಿಂದ 20 ವರ್ಷ ಹಿಂದಕ್ಕೆ ಒಯ್ಯುವ ಜೊತೆಗೆ ಮಾನವಕುಲಕ್ಕೆ ಭಯದ ಪರಿಚಯ ಮಾಡಿಸಿದೆ. ಇದು ದೇಶ ಮತ್ತು ರಾಜ್ಯದಲ್ಲೂ ನಡೆದಿದ್ದು, ಅಭಿವೃದ್ಧಿ ಮಾಡುವುದಕ್ಕಿಂತ ಬದುಕುವುದು ಮತ್ತು ಬದುಕಿಸುವುದೇ ದೊಡ್ಡ ಸಾಧನೆ ಆಗಿತ್ತು ಕರೋನ ಮೊದಲ ಅಲೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿ ಕೊಟ್ಟಿತ್ತು ಎರಡನೆಯ ಅಲೆಗೆ ಕರ್ನಾಟಕ ಸ್ಭೆರಿಂದಂತೆ ಭಾರತವು ಸಿದ್ದವಾಗಿತ್ತು. ಈಗ ಮತ್ತೆ ಮೂರನೆಯ ಅಲೆಯ ಸದ್ದು ಮಾಡುತ್ತಿದೆ. ಇದರ ಮಧ್ಯ ಚುನಾವಣೆಗಳು ರಾಜಕಾರಣಿಗಳ ಪಕ್ಷಾಂತರ, ಅಧಿಕಾರಕ್ಕಾಗಿ ರಸ್ತೆಗಿಳಿದು ಜಗಳ ಹೀಗೆ ಮಾಡುತ್ತಾ ಕಾಲಕಳೆದ ರಾಜಕಾರಣಿಗಳು ಚುನಾವಣೆ ಹತ್ತಿರ ಬರುತ್ತಲ್ಲೆ ಜನರತ್ತ ಮುಖ ಮಾಡಿದ್ದಾರೆ. ಜೀವನವನ್ನೆ ನಡೆಸಲು ಕಷ್ಟವಾದಾಗ, ತಮ್ಮವರೇ ಸತ್ತಾಗ ಮುಖ ನೋಡಲು ಆಗದಿದ್ದಾಗ ಮತ್ತು ಬದುಕುವುದಕ್ಕಿಂತ ಸಾಯುವುದೇ ಮೇಲು ಅಂತ ಅನ್ನಿಸಿದ್ದಾಗ ಕಾಣದ ರಾಜಕಾರಣಿಗಳು ಈಗ ಕಷ್ಟ ಕೇಳಲು ಮನೆಗೆ ಬರುತ್ತಿದ್ದಾರೆ.
ಬಿಜೆಪಿ,ಕಾಂಗ್ರೇಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಯ ತಯಾರಿಗೆ ಸಿದ್ದತೆ ನಡೆಸುತ್ತಿವೆ. ಕಾಂಗ್ರೇಸ್ ಪಕ್ಷವು ಮೇಕೆದಾಟು ಹೋರಾಟ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ಹೇಳಿಕೆಗಳು ಮತ್ತು ಹೋರಾಟಗಳು 2023 ಚುನಾವಣೆಗೆ ಬೆಂಬಲವಾಗಿವೆ ಹೊರತು ರಾಜ್ಯಕ್ಕೆ ಅನುಕೂಲವಾಗಲಿ ಅಂತ ಇಲ್ಲ. ಇನ್ನೂ ಜೆಡಿಎಸ್‍ವು ಜನತಾ ಜಲಧಾರೆ ಎಂಬ ಕಾರ್ಯಕ್ರಮ ರೂಪಿಸಿಕೊಂಡು ಜನತೆಯ ಹತ್ತಿರವಾಗುತ್ತಿದ್ದಾರೆ. ಕುಮಾರಸ್ವಾಮಿ ಅದೇ ಹಳೆಯ ವರ್ಷೆ ಪ್ರಾರಂಭಿಸಿದ್ದಾರೆ- ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ಪಕ್ಷವನ್ನು ವಿಸರ್ಜಸುತ್ತೇವೆ ಅನ್ನುತ್ತಲ್ಲೆ ಕಣ್ಣಿರು ಹಾಕುತ್ತಿದ್ದಾರೆ. ಹಿಂದೆ ಯಡ್ಡಿಯೂರಪ್ಪ ಅಧಿಕಾರ ನೀಡದೇ ಮೋಸ ಮಾಡಿದ ಕುಮಾರಸ್ವಾಮಿ ಮತ್ತು ಕಾಂಗ್ರೇಸ್‍ಗೂ ಅನ್ಯಾಯ ಮಾಡಿದ್ದಾರೆ ಆದರೂ ಕೂಡ ತಾವು ಅತ್ಯಂತ ಪ್ರಾಮಾಣಿಕ ಸಿದ್ದಾಂತವಾದಿ ರಾಜಕಾರಣಿಯಂತೆ ಪೋಜ್ ಕೋಡುತ್ತಿದ್ದಾರೆ. ತಾವೇ ಮುಖ್ಯಮಂತ್ರಿಯಾದಾಗ ಕೇಳಿದ ಸಮಸ್ಯೆಗಳನ್ನು ಬಗ್ಗೆ ಹರಿಸದೇ ಈಗ ಅವುಗಳನ್ನೆ ಕಾಂಗ್ರೇಸ್ ಮತ್ತು ಬಿಜೆಪಿ ಮೇಲೆ ಹಾಕುತ್ತಾ ಜನರನ್ನು ಮರಳು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ.ಕುಮಾರ ಸ್ವಾಮಿ ಒಮ್ಮೆ ಬಿಜೆಪಿ ವಿರೋಧಿಸಿದ್ದರೆ ಮತ್ತೊಮ್ಮೆ ಹೋಗಳುತ್ತಾರೆ. ಇತ್ತ ಕಾಂಗ್ರೇಸ್ ಜೊತೆಗೂ ಅದೇ ರೀತಿ ನಡೆದುಕೊಳ್ಳುತ್ತಾರೆ. ಜೆಡಿಎಸ್ ಪಕ್ಷವು ಕನ್ನಡಿಗರ ಪಕ್ಷ ಅನ್ನುವುದಕ್ಕಿಂತ ದೇವೆಗೌಡರ ಕುಟುಂಬ ಪಕ್ಷ ಅನ್ನಬಹುದು. ಕುಮಾರಸ್ವಾಮಿಯ ನಾಟಕಗಳು ಚುನಾವಣೆ ಹತ್ತಿರವಾಗುತ್ತಲ್ಲೆ ಹೆಚ್ಚಾಗುತ್ತವೆ. ಇದೇ ಸಾಲಿನಲ್ಲಿ ಆಮ್ ಆದ್ಮೀ ಪಕ್ಷ ಮತ್ತು ಕೆ.ಆರ್.ಎಸ್ ಪಕ್ಷಗಳು ಕೂಡ ಚುನಾವಣೆ ಗೆಲ್ಲಬೇಕು ಅನ್ನುವ ಒಚಿದೇ ಕಾರಣಕ್ಕೆ ಒಂದಿಷ್ಟು ಕ್ರಿಯಾಶೀಲವಾಗಿ ಕಾಣುತ್ತಿವೆ.ಇಲ್ಲಿಯವರೆಗೆ ಸುಮ್ಮನಿದ್ದು ಚುನಾವಣೆ ಹತ್ತಿರ ಬರುತ್ತಲ್ಲೆ ಹೋರಾಟ, ಸೇವೆ ಮತ್ತು ಕಾರ್ಯಕ್ರಮಗಳು ಮತ್ತು ಭವಿಷ್ಯದ ದೃಷ್ಠಿಕೋನಗಳು ಹೀಗೆ ಹೇಳುತ್ತಾ ಜನರಿಗೆ ಹತ್ತಿರವಾಗುತ್ತಿರುವ ರಾಜಕಾರಣಿಗಳ ಸೋಗಲಾಡಿತನವನ್ನು ಜನ ಅರ್ಥ ಮಾಡಿಕೊಳ್ಳಬೇಕು. ಹಿರಿಯ ಕಿರಿಯ ರಾಜಕಾರಣಿಗಳು ಕ್ಷೇತ್ರ ಸುತ್ತುವ ಜೊತೆಗೆ ಜನರ ಮನೆ ಬಾಗಲಿಗೆ ಹೋಗುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ಸಮಯಸಾಧಕರು ತಮ್ಮ ಲಾಭಕ್ಕಗಿ ಜನರನ್ನು ಮರಳು ಮಾಡಲು ಬರುತ್ತಿದ್ದಾರೆ.
ಚುನಾವಣೆ ಹತ್ತಿರ ಬರುತ್ತಲ್ಲೆ ಹೊಸ ಪಕ್ಷಗಳು ಹುಟ್ಟಿಕೊಳ್ಳುತ್ತವೆ, ಯುವ ನಾಯಕರು ಹುಟ್ಟಿಕೊಳ್ಳುತ್ತಾರೆ, ಸಮಾಜ ಸೇವಕರು ಹುಟ್ಟಿಕೊಳ್ಳುತ್ತಾರೆ ಹಾಗೂ ಪತ್ರಿಕೆಗಳು ಮಾಧ್ಯಮಗಳು ಹುಟ್ಟಿಕೊಳ್ಳುತ್ತವೆ ಚುನಾವಣೆ ಮುಗಿದ ನಂತರ ಎಲ್ಲವು ಮಾಯ ! ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಪ್ರಾದೇಶಿಕ ಪಕ್ಷಗಳು ಮತ್ತು ಹೊಸ ಪಕ್ಷಗಳು ಚುನಾವಣೆಗೆ ಕೊಡುವಷ್ಟು ಮಹತ್ವವನ್ನು ಅಭಿವೃದ್ದಿಗೆ ನೀಡಿದ್ದರೆ ಸಮಸ್ಯೆಮುಕ್ತ ಜಗತ್ತಿನ ನಂಬರ್ ಒನ್ ದೇಶ ನಮ್ಮದಾಗಿರುತ್ತಿತ್ತು.ಜನ ಮರಳೋ ಜಾತ್ರೆ ಮರಳೋ ಅನ್ನುವಂತೆ ಜನತೆಯನ್ನು ಮರಳು ಮಾಡುತ್ತಿದ್ದಾರೆ ರಾಜಕಾರಣಿಗಳು. ಚುನಾವಣೆ ದೂರ ಇರುವಾಗ ಒಂದು ರೂಪಾಯಿ ಖರ್ಚು ಮಾಡದ ರಾಜಕಾರಣಿಗಳು ಚುನಾವಣೆ ಬರುತ್ತಲ್ಲೆ ಕೋಟಿ-ಕೋಟಿ ಖರ್ಚು ಮಾಡುತ್ತಾರೆ.ಕೇಳಿದ್ದು ಕೊಡುತ್ತಾರೆ. ಹೀಗೆ ಚುನಾವಣೆಗೆಗಾಗಿ ಚರ್ಚು ಮಾಡುವುದನ್ನೆ ಕೇಲವರು ಭವಿಷ್ಯದ ದೃಷ್ಟಿ ಅಥವಾ ಸಮಾಜಸೇವೆ ಅಂತ ಹೇಳುತ್ತಾರೆ.ಚುನಾವಣೆ ಮುಗಿದ ನಂತರ ನಾಪತ್ತೆ ಆಗುವ ರಾಜಕಾರಣಿಗಳು ಅಂದರೆ ಗೆದ್ದªರು ಸೋತ್ತವರು ಇಬ್ಬರು ಅಷ್ಟೆ ಏಕೆಂದರೆ ಒಂದೇ ಬಾವಿಯ ಕಪ್ಪೆಗಳಂತೆ ಈ ರಾಜಕಾರಣಿಗಳ ಬುದ್ದಿ.
ಚುನಾವಣೆಯ ಪ್ರಣಾಳಿಕೆ ಹೆಸರಿನಲ್ಲಿ ಜನತೆಗೆ ಹಲವಾರು ಆಶೆ ತೋರಿಸಿ ಮತ ಕಿತ್ತುಕೊಳ್ಳುತ್ತಾರೆ,ಕೆಲವರಿಗೆ ಹಣ ಹೆಚಿಡ ಬಟ್ಟೆ ಕುಕ್ಕರ್ ಇತ್ಯಾದಿ ಕೊಟ್ಟು ಕೊಂಡುಕೊಳ್ಳುತ್ತಾರೆ.ಹೀಗೆ ಮಾರಿದ ಅಥವಾ ಆಸೆಯಿಂದ ಕೊಟ್ಟ ಮತದಿಂದ ಕೊಳ್ಳೆಹೊಡೆಯುತ್ತಾರೆ.ಕಷ್ಟಕ್ಕೆ ಬರದ ರಾಜಕಾರಣಿಗಳು ಇನ್ನು ಮುಂದೆ ಬರುತ್ತಾರೆ ಏಕೆಂದರೆ 2023ಕ್ಕೆ ಚುನಾವಣೆಗಾಗಿ ಇದು ಹೇಗೆ ಅಂದರೆ ಅಂದು ಬ್ರಿಟಿಷರು ವ್ಯಾಪಾರಕ್ಕಾಗಿ ಬಂದು ದೇಶ ಆಳಿದರು ಇಂದು ಸಹಾಯ ಮಾಡುತ್ತೇವೆ ಅಥವಾ ಕನಸು ತುಂಬಿ ದೇಶ ಲೂಟಿ ಮಾಡುವ ಪ್ರಬುದ್ಧ ಕ್ರಿಮೀನಲ್ ಬರುತ್ತಾರೆ ಈಗಲಾದರೂ ಎಚ್ಚರದಿಂದ ಇರಿ. ಭವಿಷ್ಯದ ಅಭಿವೃದ್ಧಿಗಾಗಿ ಮತನೀಡಿ-ಪ್ರಜಾಪ್ರಭುತ್ವ


Share

ಪಂಚ ಚುನಾವಣೆ ಲೋಕ ಸಭೆಯ ಮುನ್ಸೂಚನೆಯೇ?

Share


ಇತ್ತೀಚೆಗೆ ನಡೆದ ಉತ್ತರ ಪ್ರದೇಶ, ಉತ್ತರಖಂಡಾ, ಗೋವಾ, ಮಣಿಪುರ ಮತ್ತು ಪಂಜಾಬ್ ದಲ್ಲಿ ನಡೆದ ಚುನಾವಣೆಯು ಜಾಗತೀಕ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಚುನಾವಣೆಯಿಂದ ಮುಂದೆ ಬರುವ ಲೋಕಸಭೆಯ ಚುನಾವಣೆ ಮೇಲೆ ನೇರ ಪರಿಣಾಮ ಬೀರುತ್ತದೆ. ಹೇಗೆಂದರೆ ದೇಶದಲ್ಲಿ ಉತ್ತರ ಪ್ರದೇಶವು ಅತಿ ಹೆಚ್ಚು ಲೋಕಸಭಾ ಚುನಾವಣೆಯನ್ನು ಹೊಂದಿದ ರಾಜ್ಯವಾಗಿದೆ. ಉತ್ತರ ಪ್ರದೇಶದ ವಿಧಾನ ಸಭಾ ಚುನಾವಣೆಯನ್ನು ದೇಶದ ಮಿನಿ ಮಹಾ ಚುನಾವಣೆಯೆಂದೆ ಪರಿಗಣಿಸುವುದು ವಾಡಿಕೆ. 2024 ರಲ್ಲಿ ಲೋಕಸಭಾ ಚುನಾವಣೆ ಬರಲಿದ್ದು ಈ ಚುನಾವಣೆಯಲ್ಲಿ ಉತ್ತರ ಪ್ರದೇಶ ಒಂದರಿಂದಲೇ ಬಿಜೆಪಿ 50 ರಿಂದ 60 ಸೀಟುಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯನ್ನು ಹೊಂದಿದೆ. ಈ ಪಂಚ ರಾಜ್ಯಗಳ ಪೈಕಿ ಉತ್ತರ ಪ್ರದೇಶ ಮತ್ತು ಉತ್ತರಖಂಡಾದಲ್ಲಿ ಸಂಪೂರ್ಣ ಬಹುಮತದೊಂದಿಗೆ ಬಿ.ಜೆ.ಪಿ ಅಧಿಕಾರ ಹಿಡಿಯುತ್ತದೆ. ಗೋವಾ ಮತ್ತು ಮಣಿಪುರದಲ್ಲಿ ಒಂದಿಬ್ಬರ ಸಹಾಯದೊಂದಿಗೆ ಅಧಿಕಾರ ಹಿಡಿಯುವ ಬಲ ಬಿಜೆಪಿಗಿದೆ. ಇನ್ನು ಈ ಹಿಂದೆ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷಕ್ಕೆ ಮುಖ ಭಂಗವಾಗಿದ್ದು ಬಿ.ಜೆ.ಪಿಯ ರೈತ ವಿರೋಧಿ ನೀತಿಯನ್ನು ಅರವಿಂದ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷವು ಸರಳವಾಗಿ ಬಹುಮತ ಪಡೆದು ಪಂಜಾಬಿನಲ್ಲಿ ಅಧಿಕಾರವನ್ನು ಹಿಡಿದಿದೆ ಇದರ ಮಧ್ಯೆ ಕಾಂಗ್ರೆಸ್ ಇನ್ನೋಂದು ರಾಜ್ಯವನ್ನು ಕಳೆದುಕೊಂಡು ಮೌನವಾಗಿದೆ. 2023 ರಲ್ಲಿ ಕರ್ನಾಟಕ ಸೇರಿದಂತೆ ಹಲವಾರು ವಿಧಾನ ಸಭೆಗಳ ಚುನಾವಣೆಗಳಿದ್ದು ಈ ಪಂಚ ರಾಜ್ಯಗಳ ಚುನಾವಣೆಯು ಪ್ರಭಾವ ಬೀರುತ್ತದೆ. ಇತ್ತ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಮೂಡಿದರೆ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸೋಲಿನ ಭೀತಿ ಕಾಡುತ್ತಿದೆ. ರಾಹುಲ್ ಗಾಂಧಿ ಈ ಚುನಾವಣೆಯ ಸೋಲನ್ನು ಒಪ್ಪಿಕೊಂಡಿದ್ದು ಸೋನಿಯಾ ಗಾಂಧಿ ಪರಾಮರ್ಶೆ ಮಾಡಿ ಕೊಳ್ಳುತ್ತಿದ್ದಾರೆ. ಬಿಜೆಪಿ ಪಾಳೆಯದಲ್ಲಿ ಮೋದಿ ಯೋಗಿ, ಅಮಿತ್‍ಶಾ ನಡ್ಡ ಮುಂತಾದವರು ಗೆಲುವನ್ನು ಕಾರ್ಯಕರ್ತರ ಜೊತೆ ಹಂಚಿಕೊಳ್ಳುವುದರ ಜೊತೆಗೆ ಗೆಲುವಿಗಾಗಿ ಶ್ರಮಿಸಿದವರಿಗೆ ಧನ್ಯವಾದ ತಿಳಿಸಿದ್ದಾರೆ. ಈ ಚುನಾವಣೆಯಲ್ಲಿ ಹಲವಾರು ವಿಸ್ಮಯಗಳು ನಡೆದಿದ್ದು ಅದರಲ್ಲಿಯೂ ಉತ್ರರ ಪ್ರದೇಶದಲ್ಲಿ ಬಿಜೆಪಿಗೆ ಶೇ42% ರಷ್ಟು ಮತ ಪಡೆಯುವುದರೊಂದಿಗೆ ದಾಖಲೆ ಸೃಷ್ಟಿಯಾಗಿದೆ. ಇನ್ನೊಂದು ಆಶ್ಚರ್ಯಕರ ಬೆಳವಣಿಗೆಯೆಂದರೆ ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೇಂದ್ರ ಸಿಂಗ್ ಕೂಡ ಸೋತಿದ್ದಾರೆ. ಪಂಜಾಬಿನ Pಅಅ ಅಧ್ಯಕ್ಷ ನವಜೋತ್ ಸಿಂಗ್ ಸಿದ್ದು ಕೂಡ ಸೋತಿದ್ದಾರೆ. ಉತ್ತರಖಂಡಾದ ಅಒ ಪುಷ್ಕಾರ್ ಸಿಂಗ್ ಧಾಮಿ ಕೂಡ ಸೋತು ಭಾರತ ಇತಿಹಾಸದಲ್ಲಿ ಚುನಾವಣಾ ವಿಷಯದಲ್ಲಿ ಹೊಸ ದಾಖಲೆಯನ್ನು ಬರೆದಿದ್ದಾರೆ. ಈ ಐದು ರಾಜ್ಯಗಳ ಚುನಾವಣಾ ಫಲಿತಾಂಶವು ಬಿಜೆಪಿಯನ್ನು ಎಲ್ಲಾ ರೀತಿಯ ಜನ ಒಪ್ಪಿಕೊಂಡಿದ್ದಾರೆ ಎನ್ನುವುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ. ಬಿಜೆಪಿಯ ಧರ್ಮ ನೀತಿಗಳು ವಿದೇಶಾಂಗ ನೀತಿಗಳು ಮತ್ತು ರೈತ ವಿರೋಧಿ ಕಾನೂನುಗಳ ಮಧ್ಯೆಯೂ ದೇಶದ ಯುವ ಜನತೆ ಸೇರಿದಂತೆ ಪ್ರಬುದ್ದ ಮತದಾರ ಕೂಡ ಬಿಜೆಪಿ ಯತ್ತ ಒಲವು ತೋರಿಸುತ್ತಿರುವುದನ್ನು ನೋಡಿದರೆ ಬಿಜೆಪಿ ಲೋಕಸಭೆಯಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ಖಚಿತವಾಗಿದೆ ಎನ್ನಬಹುದು. ಈ ಪಂಚ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿಯು ಶೇ%ವಾರು ಮತಗಳಿಕೆ ಯಲ್ಲಿಯೂ ಹೆಚ್ಚಾಗಿರುವುದನ್ನು ನೋಡಿದರೆ ಬಿಜೆಪಿಗೆ ಮತ್ತೊಂದು ಅವಕಾಶ ಇರುವುದು ಖಚಿತವಾಗಿರುತ್ತದೆ.


Share

ಶಾಂತಿ ಕದಲಿದ ಹಿಂದೂ ಮುಸ್ಲಿಂ ಬುದ್ಧಿವಂತರು

Share


ಕರ್ನಾಟಕದಲ್ಲಿ ಇತ್ತೀಚೆಗೆ ಧರ್ಮಗಳ ಸಂಘರ್ಷದಲ್ಲಿ ಶಾಂತಿಯನ್ನು ಕೆಲವರು ಕದಲುತ್ತಿದ್ದಾರೆ. ರನ್ನ ಪಂಪನಿಂದ ಹಿಡಿದು ಆಧುನಿಕತೆಯ ಕವಿಗಳಾದ ಕುವೆಂಪುವರೆಗೂ ಅಂದರೆ ಕವಿರಾಜ ಮಾರ್ಗದಿಂದ ಹಿಡಿದು ಇಂದಿನ ಚಂದ್ರಶೇಖರ ಕಂಬಾರ ಅವರ ಸಾಹಿತ್ಯದವರೆಗೂ ಕನ್ನಡ ನಾಡನ್ನು ಶಾಂತಿಯ ತವರು, ಬನವಾಸಿಯ ಬೀಡು, ಶ್ರೀ ಗಂಧದ ನಾಡು, ಸರ್ವಜನರ ಶಾಂತಿಯ ತೋಟ ಎಂದೆಲ್ಲ ಕನ್ನಡ ನಾಡನ್ನು ಹಾಡಿ ಹೊಗಳಿದ್ದಾರೆ. ಹುಟ್ಟಿದರೆ ಕನ್ನಡ ನಾಡಲ್ಲೇ ಹುಟ್ಟಬೇಕು. ಎಂಬ ಗೀತೆಯೊಂದಿಗೆ ನಾಡಿನ ಮಹತ್ವವನ್ನು ಡಾ|| ರಾಜ್‍ಕುಮಾರ್ ರವರ ಕಂಠ ಸಿರಿಯಲ್ಲಿ ಹೇಳಿದ ಈ ಕನ್ನಡ ನಾಡು ಇಂದು ಧರ್ಮ ಸಂಘರ್ಷದ ಮೂಲ ಸ್ಥಾನವಾಗಿ ಬಿಂಬಿತವಾಗುತ್ತಿದೆ. ಉಡುಪಿಯ ಕಾಲೇಜ್ ಒಂದರಲ್ಲಿ ಪ್ರಾರಂಭವಾದ ಹಿಜಾಬ್ ಕೇಸರಿ ಕದನವು ರಾಜ್ಯ ವ್ಯಾಪ್ತಿ ವ್ಯಾಪಿಸಿ ನ್ಯಾಯಾಲಯದ ಮುಂದೆ ನಿಂತಾಗ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಸೇರಿದಂತೆ ಧಾರ್ಮಿಕ ಉಡುಪುಗಳನ್ನು ನಿಷೇಧಿಸಿ ಹಿಜಾಬ್‍ಗೆ ಅನುಮತಿಯನ್ನು ನಿರಾಕರಿಸಿತು. ಈ ವಿಚಾರದಲ್ಲಿ ಹೊತ್ತಿಕೊಂಡ ಬೆಂಕಿಯು ಮುಸ್ಲಿಂ ಸಮುದಾಯದಲ್ಲಿ ಮಾರ್ಚ್ 17ರಂದು ಹಿಜಾಬ್ ತೀರ್ಪನ್ನು ವಿರೋಧಿಸಿ ತಮ್ಮ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿ ಕರ್ನಾಟಕ ಬಂದ್ ಮಾಡಿದರು. ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಹಿಂದೂ ಸಂಘಟನೆಗಳು ಹಿಂದೂ ಯುವ ಜನತೆ ಹಿಜಾಬ್‍ಗೋಸ್ಕರ ಒಂದು ದಿನ ನೀವು ಅಂಗಡಿ ಮುಚ್ಚುವುದಾದರೆ ಮುಂದಿನ ದಿನಗಳಲ್ಲಿ ಹಿಂದೂಗಳು ಮುಸ್ಲಿಂ ಅಂಗಡಿಗಳಲ್ಲಿ ವ್ಯಾಪಾರ ಮಾಡದಂತೆ ಜಾಗೃತಿ ಮೂಡಿಸಲು ಪ್ರಾರಂಭ ಮಾಡಿದರು. ಈ ಜಾಗೃತಿ ಮುಂದುವರೆದು ಕರಾವಳಿ ಕರ್ನಾಟಕದ ಕೆಲವು ಗ್ರಾಮಗಳ ಜಾತ್ರೆಗಳಲ್ಲಿ ಮುಸ್ಲಿಂ ಅಂಗಡಿಗಳಿಗೆ ಅನುಮತಿ ಬೇಡ ಎಂಬ ಹೋರಾಟ ಪ್ರಾರಂಭವಾಯಿತು ಈ ಹೋರಾಟವು ಮೊದಮೊದಲು ಶಿವಮೊಗ್ಗ, ಉಡುಪಿ, ಚಿಕ್ಕಮಂಗಳೂರು ನಂತರದ ದಿನಗಳಲ್ಲಿ ಕಲ್ಬುರ್ಗಿ, ಬೆಂಗಳೂರಿಗೂ ವ್ಯಾಪಿಸಿ ಇಂದು ರಾಜ್ಯಾದ್ಯಂತ ಮುಸ್ಲಿಂ ವ್ಯಾಪಾರದ ವಿರುದ್ದ ಹಿಂದೂತ್ವದ ಹೆಸರಿನಲ್ಲಿ ಧ್ವನಿಯೆತ್ತಲಾಗುತ್ತಿದೆ. ಈ ಸಂಘರ್ಷದ ಮಧ್ಯೆ ಹಲಾಲ ಮಾಂಸದ ವ್ಯಾಪಾರವು ಉತ್ತುಂಗಕ್ಕೇರಿದೆ. ಹಿಂದೂ ಬುದ್ದಿ ಜೀವಿಗಳು, ಮಠಾಧೀಶರು ಸೇರಿದಂತೆ ರಾಜಕಾರಣಿಗಳು ಹಿಂದೂ ಪರ ಸಂಘಟನೆಗಳು ಈ ಸಂಘರ್ಷಕ್ಕೆ ಬೆಂಕಿಯಿಡುತ್ತಿದ್ದಾರೆ. ಇತ್ತೀಚೆಗೆ ಈ ಒಂದು ಸಮಸ್ಯೆಯನ್ನು ರಾಜಕೀಯ ಮಾಡಿಕೊಂಡು ಕೆಲವು ರಾಜಕಾರಣಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ. ಭಾರತ ಸಂವಿಧಾನದ ಮೂಲ ಆಸೆಯಂತೆ ದೇಶವು ಜಾತ್ಯಾತೀತ ಆಗಬೇಕಿತ್ತು. 75 ವರ್ಷಗಳಿಗಿಂತ ಹೆಚ್ಚು ಕಳೆದರೂ ಜಾತಿ – ಧರ್ಮದ ವಿಷಯದಲ್ಲಿ ನಾವು ಬದುಕುತ್ತಿದ್ದೇವೆ ಎನ್ನುವುದಾದರೆ ಅಂಬೇಡ್ಕರ್ ಸೇರಿದಂತೆ ಹಲವಾರು ಮಹಾನಿಯರಿಗೆ ನಾವು ಮಾಡುತ್ತಿರುವ ಅವಮಾನವಲ್ಲವೇ? ಅನಾದಿಕಾಲದಿಂದಲೂ ಹಿಂದೂ ಮುಸ್ಲಿಂ ಸೇರಿದಂತೆ ಹಲವಾರು ಧರ್ಮಿಯರು, ಜಾತಿಯವರು ಒಂದಾಗಿ ಬದುಕುತ್ತಿದ್ದಾರೆ. ಅಧಿಕಾರಕ್ಕಾಗಿ, ಹೆಸರಿಗಾಗಿ ಮತ್ತು ಬಾಯಿ ಚಪಲಕ್ಕಾಗಿ ಸಮಾಜದಲ್ಲಿ ವಿಷ ಬೀಜ ಬಿತ್ತುವ ಕಾರ್ಯವು ನಡೆಯುತ್ತಿವೆ. ಇದರ ಮಧ್ಯೆ ಕಾಳಿ ಸ್ವಾಮಿಯಂತಹ ಕೆಲವು ವಿಕೃತ ಮನಸ್ಸಿನ ಹೋರಾಟಗಾರರು ಮುಸ್ಲಿಂರನ್ನು ವಿರೋಧಿಸುವ ಧಾವಂತದಲ್ಲಿ ನಮ್ಮ ಧರ್ಮದ ತನ್ನ ಸ್ಥಾನದ ಸಾಮಾನ್ಯ ಪ್ರಜ್ಞೆಯನ್ನು ಕಳೆದುಕೊಂಡಂತೆÉ ವರ್ತಿಸುತ್ತಿದ್ದಾರೆ. ಹಿಂದೂ ಮತ್ತು ಹಿಂದೂತ್ವದ ಪರಿಕಲ್ಪನೆಯಲ್ಲಿ ಮತ್ತು ಇಸ್ಲಾಂ ಮತ್ತು ಭಾರತೀಯ ಮುಸ್ಲಿಂ ಎಂಬ ವಿಚಾರಗಳಲ್ಲಿ ಪರಿಪೂರ್ಣ ವ್ಯಾಖ್ಯಾನಗಳಿಲ್ಲದಿದ್ದರೂ ಕೂಡ ಅರೆಬೆಂದ ಅಜ್ಞಾನಿಗಳು ಹುಚ್ಚು ನಾಯಿಯಂತೆ ಕಿರುಚುವುದನ್ನೆ ಉದ್ಯೋಗ ಮಾಡಿಕೊಂಡಿದ್ದಾರೆ. ಬಿ.ಜೆ.ಪಿ ಯವರು ತಮ್ಮ ಓಟ್ ಬ್ಯಾಂಕಿಗಾಗಿ ಹಿಂದೂತ್ವದ ಅಜಾಂಡದಲ್ಲಿ ಕಾಂಗ್ರೆಸ್‍ನವರು ಅಲ್ಪಸಂಖ್ಯಾತರು ಮತ್ತು ಮುಸ್ಲಿಂರನ್ನು ತಮ್ಮ ಓಟ್ ಬ್ಯಾಂಕಿಗಾಗಿ ಬೆಂಕಿ ಹಚ್ಚಿ ಸಮಾಜದ ನೆಮ್ಮದಿಯನ್ನು ಕೆಡಿಸುತ್ತಿದ್ದಾರೆ. ಈ ವಿಕೃತ ಮನಸ್ಸಿನ ರಾಜಕೀಯ ವ್ಯವಸ್ಥೆಯಿಂದ ಸಾಮಾನ್ಯ ಜನರಿಗೆ, ಕಾರ್ಮಿಕ ವರ್ಗಕ್ಕೆ, ಸಣ್ಣ ಪುಟ್ಟ ವ್ಯಾಪರಸ್ಥರಿಗೆ ತೊಂದರೆಯಾಗುತ್ತದೆಯೇ ಹೊರೆತು ಹುಚ್ಚು ನಾಯಿಯಂತೆ ಬೊಗಳುವ ಹೋರಾಟಗಾರರಿಗಾಗಲೀ, ಸಮಾಜದಲ್ಲಿ ಬೆಂಕಿ ಹಚ್ಚಿ ತಮ್ಮ ರಾಜಕೀಯ ಜೀವನವನ್ನು ಉಜ್ವಲ ಮಾಡಿಕೊಳ್ಳುವ ನಾಮರದ ರಾಜಕಾರಣಿಗಳಿಗಾಗಲಿ ಆಗುವುದಿಲ್ಲ ರಾಜಕಾರಣಿಗಳು ಕಾರ್ಪೊರೆಟ್ ಬಿಸನೆಸ್ ಮ್ಯಾನತರ ಸಮಾಜದ ನೆಮ್ಮದಿಯನ್ನು ಹಾಳುಮಾಡಿ ತಮ್ಮ ರಾಜಕೀಯ ಬಿಸ್‍ನೆಸ್ ಅನ್ನು ಅಭಿವೃದ್ಧಿ ಪಡಿಸಿಕೊಳ್ಳುತ್ತಿದ್ದಾರೆ. ರಾಮ, ರಹೀಮ್, ಅಲ್ಲಾ, ಯೇಸು ಧರ್ಮ ಸಂಕಟದ ಮಧ್ಯೆ ರಕ್ತ ಹರಿದರೆ ಬಂದು ಕಾಪಾಡುವುದಿಲ್ಲ.
ಕರ್ನಾಟಕವನ್ನು ಶಾಂತಿ ಸೌಹರ್ದತೆಯ ತೋಟ ಎನ್ನುತ್ತಾರೆ ಇಂತಹ ತೋಟದಲ್ಲಿ ಓದುವ ಮಕ್ಕಳ ತಲೆಯಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತಿ ಪರೀಕ್ಷೆಗಳನ್ನು ಆತಂಕದಲ್ಲಿ ಬರೆಯುವಂತೆ ಸ್ವಯಂಘೋಷಿತ ಬುದ್ದಿ ಜೀವಿಗಳು, ಧರ್ಮ ಪಾಲಕರು, ಧರ್ಮ ಅನುಯಾಯಿಗಳು ಮತ್ತು ಹೋರಾಟಗಾರರು ತಮ್ಮ ತಮ್ಮ ಉಳಿವಿಗಾಗಿ ಇಂತಹ ಬೆಂಕಿ ಹಚ್ಚುತ್ತಿದ್ದಾರೆಯೇ ಹೊರತು ಬೇರೆ ಯಾವುದೇ ಕಾರಣಗಳಿಲ್ಲ. ಒಬ್ಬ ನಿಜವಾದ ಮುಸ್ಲಿಂನಿಗೆ ಹಲಾಲ್, ಬುರ್ಕಾ, ಹಿಜಾಬ್, ತಲಾಖ್ ಮುಖ್ಯ ಅನ್ನುವುದಾದರೆ ಅದೇ ಖುರಾನಿನಲ್ಲಿ ಪ್ರತಿಯೊಬ್ಬರನ್ನು ಗೌರವಿಸಬೇಕು ಬೇರೆಯವರನ್ನು ಪ್ರೀತಿಸಬೇಕು, ದಾನಧರ್ಮ (ಜಕಾತ್) ಮಾಡಬೇಕು ಅಂತಹ ಅದೆಷ್ಟೋ ಒಳ್ಳೆಯ ವಿಚಾರಗಳು ಅರ್ಥವಾಗಿಲ್ಲವೇ? ಹಿಂದೂ ಧರ್ಮವು ಮೂಢನಂಬಿಕೆಯಿಂದ ಕೂಡಿದೆ ಎನ್ನುವ ನೀವು ನಿಮ್ಮ ಧರ್ಮದ ಮೂಢನಂಬಿಕೆಗಳು, ಕೆಟ್ಟ ಪದ್ದತಿಗಳು ಮತ್ತು ಮಹಿಳಾ ಶೋಷಣೆಯ ವಿರುದ್ಧ ಏಕೆ ಧ್ವನಿಯೆತ್ತುವಿದಿಲ್ಲ? ಹಾಗೆಯೇ ಹಿಂದೂ ಧರ್ಮದ “ವಸುದೈವ ಕುಟುಂಬಕಂ” ಮತ್ತು ಸ್ವಾಮಿ ವಿವೇಕಾನಂದರು ಹೇಳುವಂತೆ “ಬೇರೆ ಧರ್ಮದ ಬಗ್ಗೆ ತಪ್ಪು ಸಂದೇಶ ಸಾರುವ ಮುನ್ನ ಹಿಂದೂ ಧರ್ಮದ ಒಳ್ಳೆಯ ವಿಚಾರಗಳನ್ನು ಹೇಳು” ಸೇರಿದಂತೆ ಹಲವಾರು ಹಿಂದೂ ತಪ್ಪುಗಳನ್ನು ಸ್ವಯಂ ಘೋಷಿತ ಹಿಂದೂ ರಾಜಕಾರಣಿಗಳು ಖಾವಿ ತೊಟ್ಟ ಸ್ವಾಮಿಗಳು ಅರಿತಿದ್ದಾರ ಸತ್ಯಗಳೇ ಗೊತ್ತಿಲ್ಲದ ಅರೆಜ್ಞಾನಿಗಳಿಂದ ಆಧುನಿಕ ತಂತ್ರಜ್ಞಾನದ ಜಗತ್ತು ತಲೆಯಲ್ಲಿ ಇರಬೇಕಾದದ್ದು ಗೂಗಲ್‍ನಲ್ಲಿದೆ. ಗೂಗಲ್‍ನಲ್ಲಿ ಇರಬೇಕಾಗಿದ್ದು ತಲೆಯಲ್ಲಿದೆ. ಮನುಷ್ಯನ ವಿಕೃತ ವಾದಗಳು ಹೆಚ್ಚಾಗುತ್ತಿರುವ ಈ ಕಾಲಘಟ್ಟದಲ್ಲಿ ಕನ್ನಡ ನಾಡಿನ ಶಾಂತಿಯನ್ನು ಕದಲುವ ಜೊತೆಗೆ ಕರ್ನಾಟಕದ ಗೌರವವನ್ನು ಅಂತರ್ ರಾಷ್ರ್ಟೀಯ ಮಟ್ಟದಲ್ಲಿ ಹಾಳು ಮಾಡುವ ಪ್ರಯತ್ನ ನಡೆಯುತ್ತಿದೆ. ಭಾರತ ಅಂದರೆ ಹಿಂದೂ ಹಿಂದೂನೇ ಇಲ್ಲಿ ಸಾರ್ವಭೌಮ ಆದರೆ ಮುಸ್ಲಿಂ ಇಲ್ಲದ ಭಾರತವನ್ನು ಕಲ್ಪಿಸಿಕೊಳ್ಳುವುದು ಅಸಾಧ್ಯ. ಏಕೆಂದರೆ ವಾಹನಗಳ ರಿಪೇರಿ, ಹಳೇ ವಸ್ತುಗಳ ಮರುಬಳಕೆ ಮತ್ತು ಬಿರಿಯಾನಿಯಂತಹ ಅಡುಗೆಗೆ ನಮ್ಮ ಮುಸ್ಲಿಂನೇ ಬೇಕು. ಪಾಯಸ, ಹೋಳಿಗೆ ಹಿಂದೂ ಮನೆಯಲ್ಲಿ ತಿಂದರೆ ಬಿರಿಯಾನಿ ಮುಸ್ಲಿಂ ಮನೆಯಲ್ಲಿ ತಿನ್ನಬೇಕು. ಅದೇ ಚೆಂದ ಮನುಷ್ಯ ಬದುಕುವುದೇ 60 ರಿಂದ 70 ವರ್ಷ ಇದರ ಮಧ್ಯೆ ಹಲಾಲ್, ಜಟಕಾ ಬೇಕಾ? ನಾ ಅಳಿದರೂ, ಉಳಿದರೂ ನಾನು, ನನ್ನವರು ಸತ್ತರು ನನ್ನ ತನವು ನಶಿಸಿ ಹೋದರೂ ಕನ್ನಡ ನಾಡಿಗೆ ಒಂದು ಇತಿಹಾಸವಿದೆ. ಕನ್ನಡ ಮಣ್ಣಿಗೆ ಒಂದು ಧರ್ಮವಿದೆ. ಪಾಲಿಸಲು ಕಲಿಯಿರಿ ಈ ಮೂರು ದಿನದ ಸಂತೆಯಲಿ. ಸಂತೆ ಮುಗಿದ ಮೇಲೆ ಚಟ್ಟಕ್ಕೆ ಹೆಗಲು ಕೊಡುವವರು ಯಾರೋ ಗೊತ್ತಿಲ್ಲ. ಮಸಣದ ಮಣ್ಣು ಅಗೆಯುವವರು ಯಾರೊ ಗೊತ್ತಿಲ್ಲ. ಧರ್ಮವನ್ನು ಪಾಲಿಸಿ ಅಂಧರಾಗಿ ಅಲ್ಲ ಬೆಳಕಿನಿಂದ ಕನ್ನಡ ನಾಡಿನ ಶಾಂತಿಯನ್ನು ಕಾಪಾಡಲು ನಿಮ್ಮ ಸಂಯಮವು ಅತ್ಯಂತ ಮುಖ್ಯವಾಗಿದೆ.


Share

ಈಶ್ವರಪ್ಪನ ದೇಶ ದ್ರೋಹಕ್ಕೆ : ಕಾಂಗ್ರೆಸ್ ತೆರಿಗೆ ಗುಳುಂ

Share

ವಿಧಾನ ಸಭೆ ಮತ್ತು ವಿಧಾನ ಪರಿಷತ್ 2022ರ ಮೊದಲ ಅಧಿವೇಶನವು ಪ್ರಾರಂಭವಾಗುತ್ತಲೇ ಈಶ್ವರಪ್ಪನ ದೇಶ ದ್ರೋಹದ ಹೇಳಿಕೆಗಳು ತೀವ್ರ ಚರ್ಚೆಗೀಡಾದವು. “ಇನ್ನು ಕೆಲವೇ ದಿನಗಳಲ್ಲಿ ಕೆಂಪು ಕೋಟೆಯ ಮೇಲೆ ರಾಷ್ಟ್ರ ಧ್ವಜದ ಜೊತೆಗೆ ಕೇಸರಿ ಧ್ವಜವನ್ನು ಹಾರಿಸಲಾಗುತ್ತದೆ” ಎಂದು ಈಶ್ವರಪ್ಪ ಹೇಳಿರುವ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ಖಂಡಿಸಿ ಅಹೋ ರಾತ್ರಿ ಧರಣಿ ಸತ್ಯಾಗ್ರಹ ಪ್ರತಿಭಟನೆಯಿಂದ ಕರ್ನಾಟಕ ವಿಧಾನ ಸಭೆಯ ಕಲಾಪಗಳಿಗೆ ಅಡ್ಡಿಯಾಗಿ ಯಾವುದೇ ರೀತಿಯ ಮಹತ್ವದ ಚರ್ಚೆಗಳಿಗೆ ವಿರೋಧ ಪಕ್ಷ ಕಾಂಗ್ರೆಸ್ ಬಿಡದೇ ರಾಜ್ಯದ ತೆರಿಗೆ ಹಣವನ್ನು ಪೋಲುಮಾಡಿತ್ತಿದೆ. ಒಂದು ದಿನದ ಕಲಾಪಗಳು ನಡೆಯಲು ಶಾಸಕರ ಭತ್ಯೆ ಸೇರಿದಂತೆ ಊಟ-ತಿಂಡಿ, ವಸತಿಗೆ ಒಟ್ಟಾರೆಯಾಗಿ ಸರಿಸುಮಾರು 80 ಲಕ್ಷ ಖರ್ಚಾಗುತ್ತದೆ. ಈ 80 ಲಕ್ಷವು ಯಾವುದೇ ಪಕ್ಷಕ್ಕೆ ಸೇರಿದ ಹಣವಲ್ಲ. ಅದು ಸಾಮಾನ್ಯ ವ್ಯಕ್ತಿಯ ತೆರಿಗೆ ಹಣವಾಗಿರುತ್ತದೆ. ಬಿ.ಜೆ.ಪಿ ಪಕ್ಷದ ಪರವಾಗಿ ಹೇಳುವುದಾದರೆ ಬಸವರಾಜ್ ಯತ್ನಾಳ್ , ಈಶ್ವರಪ್ಪ ಆಗಾಗ ನಾಲಿಗೆಯನ್ನು ಹರಿಬಿಡುತ್ತಾರೆ. ಆದರೆ ಈ ಹಿಂದಿನ ಹೇಳಿಕೆಯನ್ನು ಮುಖ್ಯಮಂತ್ರಿ ಸೇರಿದಂತೆ ಬಿ.ಜೆ.ಪಿಯ ಎಲ್ಲಾ ಶಾಸಕರು ಸಮರ್ಥಿಸಿ ಕೊಳ್ಳುತ್ತಿದ್ದಾರೆ. ಕಾನೂನಿನ ವ್ಯಾಖ್ಯಾನಗಳನ್ನು ಮಾಡುವಾಗ ಈ ಹೇಳಿಕೆಯು ಅತ್ಯಂತ ಸೂಕ್ಷ್ಮವಾಗಿದ್ದು ರಾಷ್ಟ್ರಧ್ವಜಕ್ಕೆ ಅವಮಾನ ಮತ್ತು ಗೌರವಗಳೊಂದಿಗೆ ಸಂವಿಧಾನದಲ್ಲಿ ಸಾಕಷ್ಟು ಉಲ್ಲೇಖಗಳಿದ್ದರೂ ಕೂಡ ರಾಷ್ಟ್ರಧ್ವಜದ ಜೊತೆಗೆ ಇನ್ನೊಂದು ಧ್ವಜವನ್ನು ಏರಿಸುತ್ತೇನೆ ಎಂಬುದಕ್ಕೆ ಸ್ಪಷ್ಟ ನಿರ್ದೇಶನಗಳಿಲ್ಲ. ಆದರೂ ಕೂಡ ತ್ರಿವರ್ಣ ಧ್ವಜದ ಜೊತೆಗೆ ಅದರ ಪಕ್ಕದಲ್ಲಿಯೇ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಇನ್ನೊಂದು ಧ್ವಜವನ್ನು ಏರಿಸುವುದು ದೇಶ ದ್ರೋಹದ ಕೆಲಸವಾಗುತ್ತದೆ. ಅದಕ್ಕೆ ಕಾನೂನಿನಲ್ಲಿ ತಕ್ಕ ಶಿಕ್ಷೆಯುಂಟು. ಆದರೆ ಈಶ್ವರಪ್ಪನ ಹೇಳಿಕೆಯಲ್ಲಿ ಈ ಸ್ಪಷ್ಟತೆಯಿಲ್ಲದಿರುವುದರಿಂದ ದೇಶ ದ್ರೋಹದ ಕಾನೂನಿನಡಿ ಶಿಕ್ಷೇ ನೀಡಲು ಸಾಧ್ಯವೇ? ಈ ಹೇಳಿಕೆಯನ್ನು ವಿಧಾನ ಸಭೆಯ ಹೊರಗಡೆ ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ತನ್ನ ಪ್ರಬುದ್ಧತೆಯನ್ನು ಮೆರೆಯಬೇಕಾಗಿತ್ತು ಆದರೂ ಕೂಡ ವಿಧಾನ ಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಈಶ್ವರಪ್ಪ ಒಬ್ಬನನ್ನು ಹಿಡಿದುಕೊಂಡು ಪ್ರತಿಭಟನೆಯ ಹೆಸರಿನಲ್ಲಿ ಕಲಾಪಗಳಲ್ಲಿ ನಡೆಯ ಬೇಕಾದ ಚರ್ಚೆಗಳು ಮತ್ತು ನಿಡುವಳಿಗಳು ಮತ್ತು ಅಂಗೀಕಾರಗಳಿಗೆ ಅಡ್ಡಿಪಡಿಸುತ್ತಿದ್ದಾರೆ. ಕಾಂಗ್ರೆಸ್‍ನ ಶಾಸಕರು ಮೊದಲು ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವ ಪ್ರಯತ್ನ ಮಾಡಬೇಕು. ರಾಜ್ಯದಲ್ಲಿ ಹಿಜಾಬ್ ಕೇಸರಿ ಕದನವು ಶಾಂತಿಯನ್ನು ಕದಲುತ್ತಿದೆ. ರಾಜ್ಯ ವ್ಯಾಪ್ತಿ ಮೂಲಭೂತ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರವು ಸೋತಿದೆ. ಕೋವಿಡ್ ಸಮಸ್ಯೆ, ನಿರುದ್ಯೋಗ, ಶಾಲಾ-ಕಾಲೇಜುಗಳ ಸಮಸ್ಯೆಗಳು ಹೀಗೆ ಹತ್ತಾರು ಸಮಸ್ಯೆಗಳಿರುವಾಗ ಈಶ್ವರಪ್ಪನ ಒಂದು ಹೇಳಿಕೆಯನ್ನು ದೊಡ್ಡದು ಮಾಡಿಕೊಂಡು ನಾಲ್ಕೈದು ದಿನ ಕಲಾಪಗಳನ್ನು ಅಡ್ಡಿಪಡಿಸುವುದು ಯಾವ ನ್ಯಾಯ? ಒಂದು ದಿನಕ್ಕೆ 80 ಲಕ್ಷ ಖರ್ಚಾಗುತ್ತದೆ ಎಂದರೆ 5 ದಿನಕ್ಕೆ 4 ಕೋಟಿ ಆಗುತ್ತದೆ. ಇದು ಯಾರಪ್ಪನ ದುಡ್ಡು? ಕಾನೂನಿನ ಪದವಿ ಓದಿದ ಸಿದ್ದರಾಮಯ್ಯಗೆ ಇಷ್ಟು ಜ್ಞಾನವಿಲ್ಲವೇ? ಡಿ.ಕೆ.ಶಿಯ ಮಾತಿಗೆ ನಿಂತು ಸಿದ್ದರಾಮಯ್ಯ ರಾಜಕೀಯ ನೈತಿಕತೆಯನ್ನು ಕಳೆದುಕೊಂಡರೆ ಈಶ್ವರಪ್ಪನ ಹೇಳಿಕೆಯನ್ನು ಕುರಿತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೂಕ್ಷ್ಮವಾಗಿ ಪ್ರತಿಕ್ರಿಯಿಸಿ ರಾಜ್ಯದ ಹಿತಕ್ಕಾಗಿ ಕಾಂಗ್ರೆಸ್‍ವು ಪ್ರತಿಭಟನೆ ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಕಾಂಗ್ರೆಸ್ ಪ್ರತಿಭಟನೆಯನ್ನು ನಿಲ್ಲಿಸದಿದ್ದರೆ ಸ್ಪೀಕರ್ ಆದ ಖಾಗೇರಿಯವರಿಗೆ ಕಲಾಪಗಳನ್ನು ಅನಿರ್ಧಿಷ್ಟ ಅವಧಿಗೆ ಮುಂದೂಡಲು ಸೂಚಿಸಿದ್ದಾರೆ. ಕಾಂಗ್ರೆಸ್‍ನ ಹೋರಾಟವನ್ನು ಚಿಕ್ಕ ಮಕ್ಕಳು ಮತ್ತು ಬುದ್ಧಿ ಹೇಡಿಗಳು ಮಾಡುವ ಹೋರಾಟ ಎನ್ನಬಹುದು. ಭವಿಷ್ಯದಲ್ಲಿ ಇದರಿಂದ ಕಾಂಗ್ರೆಸ್‍ಗೆ ಏನು ದೊಡ್ಡ ಪ್ರಯೋಜನವಾಗುವುದಿಲ್ಲ. ಇಂತಹ ಸಿಲ್ಲಿ ಹೋರಾಟಗಳನ್ನು ಬಿಟ್ಟು ಪ್ರಭುತ್ವ ಪಕ್ಷದಂತೆ ಮತ್ತು ಪ್ರಬುದ್ಧ ವಿಚಾರಗಳತ್ತ ಕಾಂಗ್ರೆಸ್ ಪಕ್ಷವು ಪ್ರಯತ್ನಿಸಬೇಕು. ಕಾಂಗ್ರೆಸ್ ನಡೆಯನ್ನು ರಾಜ್ಯವು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಹತ್ತಾರು ಪ್ರಮುಖ ಸಮಸ್ಯೆಗಳಿದ್ದರು ಒಂದು ಸಣ್ಣ ವಿಚಾರಕ್ಕೆ ದೊಡ್ಡ ಮಟ್ಟದ ಹೋರಾಟ ಮಾಡುತ್ತಿರುವುದು ಅತ್ಯಂತ ಕೀಳು ಮಟ್ಟದ ವಿಚಾರವಾಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಹೋರಾಟದ ಕುರಿತು ಕರ್ನಾಟಕ ಜನತೆಗೆ ಸರಿಯಾದ ಉತ್ತರ ಕೊಡುವುದರ ಜೊತೆಗೆ ತಕ್ಷಣ ಕಲಾಪದಲ್ಲಿ ಹೋರಾಟ ಮಾಡುವುದನ್ನು ಬಿಟ್ಟು ಬೇರೆ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿ ಜನರಿಗೆ ಸರ್ಕಾರದತ್ತ ಇನ್ನಷ್ಟು ಉತ್ತಮವಾದ ಸೌಲಭ್ಯಗಳನ್ನು ಕೊಡಿಸುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು.


Share

ತಮಿಳುನಾಡಿನ ಜಲಧಾಹ ನೀಗುವುದು ಯಾವಾಗ ?

Share

ಕರ್ನಾಟಕ ಮತ್ತು ತಮಿಳುನಾಡು ಎನ್ನುತ್ತಲೇ ಪ್ರತಿಯೊಬ್ಬರಿಗೂ ನೆನಪಾಗುವುದು ಕಾವೇರಿ ನದಿ ಸಮಸ್ಯೆ. ಇದಕ್ಕೆ ಪ್ರಮುಖ ಕಾರಣ ಹಲವು ವರ್ಷಗಳಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಕಾವೇರಿಯ ವಿಚಾರವಾಗಿ ಗಲಾಟೆಗಳು ಹೋರಾಟಗಳು ನಡೆಯುತ್ತಲೇ ಬಂದಿವೆ. ಇದರ ಮಧ್ಯೆ ಕರ್ನಾಟಕ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಯು ಗಮನ ಸೆಳೆಯಿತು. ಏಕೆಂದರೆ ಕರ್ನಾಟಕ ಸರ್ಕಾರ ಕುಡಿಯುವ ನೀರಿಗಾಗಿ ರಾಮನಗರದ ಮೇಕೆದಾಟು ಎಂಬಲ್ಲಿ ಕಿರು ಅಣೆಕಟ್ಟು ಕಟ್ಟಿ ಬೆಂಗಳೂರಿಗೆ ಕುಡಿಯುವ ನೀರು ಮತ್ತು ಜಲವಿದ್ಯುತ್ ಉತ್ಪಾದಿಸಲು ಯೋಜನೆಯೊಂದನ್ನು ರೂಪಿಸಿಕೊಂಡು ಕೇಂದ್ರ ಜ¯ಸಂಪನ್ಮೂಲ ಇಲಾಖೆಯ ಒಪ್ಪಿಗೆಯನ್ನು ಪಡೆದಾಗ ತಮಿಳುನಾಡಿನ ರಾಜಕಾರಣಿಗಳಿಗೆ ಉರಿ ಹತ್ತಿಕೊಂಡಿತು. ಇದುವರೆಗೆ ತಮಿಳುನಾಡು ಕಾವೇರಿ ನೀರನ್ನು ಬಳಸಿಕೊಂಡಿರುವುದಕ್ಕಿಂತ ರಾಜಕೀಯ ಲಾಭವನ್ನು ಪಡೆದಿದೆ ಎನ್ನಬಹುದು. ಜಯಲಲಿತ ತನ್ನ ರಾಜಕೀಯ ಜೀವನದುದ್ದಕ್ಕೂ ಕಾವೇರಿಯ ಹೆಸರಲ್ಲೇ ರಾಜಕೀಯ ಮಾಡಿ ಕಾವೇರಿ ನದಿಯ ಪ್ರದೇಶಗಳಲ್ಲಿ ಗೆದ್ದಿದ್ದಾಳೆ ಎನ್ನಬಹುದು. ಇದರ ಹಿಂದೆ ರಾಜಕೀಯ ಹುನ್ನಾರಗಳಿವೆಯೇ ಹೊರತು ಕನ್ನಡ ಮತ್ತು ತಮಿಳು ರೈತರ ಹಿತಾಸಕ್ತಿ ಹೊಂದಿಲ್ಲ. ಕಾವೇರಿ ನದಿಯ ಹಂಚಿಕೆ ಪ್ರಾಧಿಕಾರ ಹೇಳುವಂತೆ ತಮಿಳುನಾಡಿಗೆ 404 ಖಿಒಅ ಕರ್ನಾಟಕಕ್ಕೆ 284 ಖಿಒಅ ಕೇರಳಕ್ಕೆ 30 ಖಿಒಅ ಪಾಂಡಿಚೇರಿಗೆ 7 ಖಿಒಅ ಪರಿಸರ ರಕ್ಷಣೆಗಾಗಿ 10 ಖಿಒಅ ಮೀಸಲಿಟ್ಟು ಆದೇಶ ಹೊರಡಿಸಿರುವುದನ್ನು ನೋಡಿದರೆ ಪ್ರತಿಯೊಂದು ರಾಜ್ಯಗಳಿಗೂ ನ್ಯಾಯವನ್ನು ನೀಡಿ ಕಾವೇರಿಯನ್ನು ಸದುಪಯೋಗ ಪಡಿಸಲು ಆದೇಶವಾಗಿರುತ್ತದೆ. ಈಗ ಕರ್ನಾಟಕವು ಮೇಕೆದಾಟು ಯೋಜನೆಯನ್ನು ಪ್ರಾರಂಭಿಸುವುದರಿಂದ 65 ರಿಂದ 66 ಖಿಒಅ ಹೆಚ್ಚುವರಿಯ ನೀರನ್ನು ಬಳಸಿಕೊಳ್ಳುವ ಉದ್ದೇಶ ಇದಾಗಿದೆ. ಏಕೆಂದರೆ ಪ್ರಸ್ತುತ ಬೆಂಗಳೂರು ನಗರಕ್ಕೆ 1350 ಮಿಲಿಯನ್ ಲೀಟರ್ ಕಾವೇರಿ ನೀರು ಹರಿಯುತ್ತಿದ್ದು 2030ರ ವೇಳೆಗೆ 2285 ಮಿಲಿಯನ್ ಲೀಟರ್ ನೀರು ಬೇಕಾಗುತ್ತದೆ. ತಮಿಳುನಾಡಿನ ಈಗಿನ ಪಾಲಿನ 177 ಖಿಒಅ ನೀರನ್ನು ಬಿಟ್ಟು ಅನವಶ್ಯಕವಾಗಿ ಪೋಲಾಗುವ 65 ಖಿಒಅ ನೀರನ್ನು ಬಳಸಿಕೊಂಡು ಈ ಯೋಜನೆಯನ್ನು 5912 ಕೋಟಿ ವೆಚ್ಚ ಮಾಡಿ ಯೋಜನೆಯನ್ನು ರೂಪಿಸಲಾಗಿದೆ. ಈ ಯೋಜನೆಯಿಂದ 64 ಖಿಒಅ ನೀರನ್ನು ಸಂಗ್ರಹಿಸಬಹುದು. ಮತ್ತು 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು. ಇದರಿಂದ ತಮಿಳುನಾಡಿಗೆ ಯಾವ ಧಕ್ಕೆಯು ಆಗುವುದಿಲ್ಲ. ಆದರೂ ಕೂಡ ತಮಿಳುನಾಡು ಖ್ಯಾತೆ ತೆಗೆದಿದೆ. 1892 ರಿಂದ ನಡೆದ ಘಟನೆಗಳು ಕರ್ನಾಟಕದ ಮೈಸೂರು ಸಂಸ್ಥಾನಕ್ಕೂ ಮದ್ರಾಸ್ ಸಂಸ್ಥಾನಕ್ಕೂ ನಡೆಯುತ್ತಲೇ ಬಂದಿದ್ದು ಮೈಸೂರಿನ ರಾಜಮನೆತನಗಳು ಕಾವೇರಿ ನೀರನ್ನು ಸಂಗ್ರಹಿಸಲು ಈ ಭಾಗದ ಜನರಿಗೆ ನೀರು ಕುಡಿಯಲು ಮತ್ತು ಕೃಷಿ ಬಳಕೆಗಾಗಿ ಉಪಯೋಗವಾಗಲೆಂದು ಅಣೆಕಟ್ಟನ್ನು ಕಟ್ಟಿ 1924ರಲ್ಲಿ ಮೈಸೂರು ಸಂಸ್ಥಾನ ಮತ್ತು ಮದ್ರಾಸ್ ಸಂಸ್ಥಾನಗಳ ಮಧ್ಯೆ 50 ವರ್ಷಗಳ ಒಪ್ಪಂದವಾಗಿತ್ತು. ಕಾವೇರಿ ಹುಟ್ಟಿದ್ದು ಕರ್ನಾಟಕದಲ್ಲಿ ಏ.ಖ.S ಅನ್ನು ಕಟ್ಟಿರುವುದು ಕನ್ನಡದ ರಾಜರು, ಸರ್.ಎಂ.ವಿಶ್ವೇಶ್ವರಯ್ಯನವರ ಪ್ಲ್ಯಾನ್ ಪ್ರಕಾರ ಅಣೆಕಟ್ಟು ಕಟ್ಟಲು ಕನ್ನಡಿಗರು ಬೆವರು ಹರಿಸಿದ್ದಾರೆ. ಈ ಅಣೆಕಟ್ಟು ಕಟ್ಟಲು ಮೈಸೂರಿನ ರಾಜಮನೆತನದವರು ತಮ್ಮ ಹೆಣ್ಣುಮಕ್ಕಳ ಬಂಗಾರದ ಒಡವೆ ಜೊತೆಗೆ ಆಸ್ತಿಪಾಸ್ತಿಗಳನ್ನು ದಾನ ಮಾಡಿದ್ದಾರೆ. ಜೊತೆಗೆ ಈ ಅಣೆಕಟ್ಟಿನ ಹಿನ್ನೀರಿನಿಂದ 13,923 ಎಕ್ಕರೆ ಖುಷ್ಕಿ ಭೂಮಿ, 9,520 ಎಕ್ಕರೆ ತರಿ ಭೂಮಿ, 8500 ಸರ್ಕಾರಿ ಭೂಮಿ, 25 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿವೆ. 15,000 ದಷ್ಟು ಜನರು ವಸತಿ ಕಳೆದುಕೊಂಡಿದ್ದರು. ಈ ಎಲ್ಲಾ ಸಮಸ್ಯೆಗಳಿಗೆ ಮೈಸೂರಿನ ರಾಜ ಮನೆತನ ಮತ್ತು ಕರ್ನಾಟಕ ಸರ್ಕಾರದಿಂದ ಪರಿಹಾರ ಸಿಕ್ಕಿದೆಯೇ ಹೊರತು ತಮಿಳುನಾಡಿನಿಂದಲ್ಲ. ಕಾವೇರಿ ಉಗಮ ಸ್ಥಾನವು ಕರ್ನಾಟಕದಲ್ಲಿ ಆಗಿದ್ದರೂ ಕೂಡ ತಮಿಳುನಾಡಿನಲ್ಲಿ ಅತಿ ಹೆಚ್ಚು ಉದ್ದಕ್ಕೂ ಹರಿದು, ಕೇರಳ, ಪಾಂಡಿಚೇರಿಯಲ್ಲಿಯೂ ಹರಿದು ಸಮುದ್ರ ಸೇರುತ್ತದೆ. ಏ.ಖ.S ಇಲ್ಲದಿದ್ದರೆ ಇಂದು ತಮಿಳುನಾಡು ನೀರು ಕೇಳುವ ಪರಿಸ್ಥಿತಿಯಿರಲಿಲ್ಲ ಏಕೆಂದರೆ ಮಳೆಗಾಲದಲ್ಲಿ ಏ.ಖ.S ನಲ್ಲಿ ನೀರು ಸಂಗ್ರಹಿಸದಿದ್ದರೆ ಬೇಸಿಗೆಯಲ್ಲಿ ತಮಿಳುನಾಡು ಸೇರಿದಾಗ ಕಾವೇರಿ ಬತ್ತುತ್ತಾಳೆ. ನ್ಯಾಯ ಸಮ್ಮತವಾಗಿ ತಮಿಳುನಾಡಿಗೆ ನೀರು ಕೊಡಬಹುದು ಆದರೆ ಪದೇಪದೇ ಖ್ಯಾತೆ ತೆಗೆಯುವುದು ಅನವಶ್ಯಕವಾಗಿ ಕರ್ನಾಟಕದ ವಿಷಯದಲ್ಲಿ ತಲೆತೂರುವುದು ಮತ್ತು ತನಗೆ ಸಂಬಂಧವಿಲ್ಲದ ಮೇಕೆದಾಟು ಯೋಜನೆಯನ್ನು ಅನುಷ್ಠಾನ ಮಾಡದಂತೆ ಸರ್ಕಾರವು ನಿರ್ಣಯ ಮಂಡಿಸಿ ಕೇಂದ್ರಕ್ಕೆ ಮನವಿ ಮಾಡುವುದು ಹೀಗೆ ಹಲವಾರು ಸಣ್ಣ ವಿಷಯಗಳಿಗೆ ಖ್ಯಾತೆ ತೆಗೆಯುವುದು ತಮಿಳುನಾಡಿನ ವ್ಯವಸ್ಥೆಗೆ ಶೋಭೆ ತರುತ್ತದೆಯೇ. ಕಾವೇರಿಯನ್ನು ಹೊರತು ಪಡಿಸಿ ತಮಿಳುನಾಡಿನಲ್ಲಿ ಸಾಕಷ್ಟು ನದಿಗಳು ಇದ್ದು ಜೊತೆಗೆ ಕಾವೇರಿಯ ಪ್ರಸ್ತುತ ಜಲಾನಯನ ಪ್ರದೇಶದಲ್ಲಿ ಯಾವುದೇ ಅಭಿವೃದ್ದಿ ಮಾಡದೆ ಬೇರೆಯವರೊಂದಿಗೆ ಜಗಳ ತೆಗೆಯುವುದೇ ತಮಿಳುನಾಡಿನ ಉದ್ದೇಶವೇ? ತಮಿಳುನಾಡು ಕೆಲವು ತಮಿಳು ಸ್ಥಳೀಯ ಪತ್ರಿಕೆಗಳ 6-7 ಕಿಲೋ ಮೀಟರ್ ವ್ಯಾಪ್ತಿಯ ಜನವಸತಿಗೆ ಮತ್ತು ಧಾರ್ಮಿಕ ಸ್ಥಳಗಳಿಗೆ ಅಪಾರ ಪ್ರಮಾಣದ ಕಾಡು ನಾಶವಾಗುತ್ತದೆ. ಅದರಲ್ಲಿಯೂ 4996 ಹೆಕ್ಟರ್ ಅರಣ್ಯ ಭೂಮಿಯೂ ಮುಳುಗಡೆಯಾಗುತ್ತದೆ. ಇದರಲ್ಲಿ ಶೇ 90% ರಷ್ಟು ಅರಣ್ಯ ಭೂಮಿ ಮತ್ತು ಶೇ 10% ರಷ್ಟು ಕಂದಾಯ ಭೂಮಿ ಸೇರಿದೆ ಇದರಿಂದ ಆನೆ, ಜಿಂಕೆ ಸೇರಿದಂತೆ ವನ್ಯ ಸಂಕುಲಗಳಿಗೆ ತೊಂದರೆಯಾಗುತ್ತದೆ. ಸಂಗಮ ಅರಣ್ಯ ಪ್ರದೇಶದಲ್ಲಿನ ಆನೇಕಾರಿಡಾರ ತೊಂದರೆಯಾಗುತ್ತದೆ ಎಂದು ಪತ್ರಿಕೆಗಳ ವರದಿಗಳ ಆಧಾರದ ಮೇಲೆ ತಮಿಳುನಾಡು ಸರ್ಕಾರವು ಕೇಂದ್ರ ಪರಿಸರ ಖಾತೆಗೆ ಈ ಯೋಜನೆಯನ್ನು ತಡೆಯುವಂತೆ ಮನವಿ ಮಾಡಿದೆ. ಪತ್ರಿಕೆಗಳ ವರದಿಗಳನ್ನು ಒಪ್ಪಿಕೊಳ್ಳೋಣ ಪರಿಸರದ ಬಗ್ಗೆ ಅಷ್ಟು ಕಾಳಜಿ ತಮಿಳುನಾಡಿಗಿದ್ದರೆ ತನ್ನ ನೆರಳಲ್ಲಿ ಅರಣ್ಯ ಬೆಳೆಸಬಹುದಿತ್ತು. ರಾಜಕೀಯ ಲಾಭಕ್ಕಾಗಿ ಬಿಟ್ಟಿ ಯೋಜನೆಗಳನ್ನು ಕೊಟ್ಟು ರೈತರು ಹೊಲದ ಕಡೇನೆ ಹೋಗದಂತೆ ಮಾಡಿದ್ದು ಇದೇ ತಮಿಳುನಾಡು ಆಳಿದ ರಾಜಕಾರಣಿಗಳ ಸಾಧನೆ ಎನ್ನಬಹುದು. ಕರ್ನಾಟಕದಲ್ಲಾಗುವ ಅರಣ್ಯದ ಹಾನಿ ಮತ್ತು ಜನವಸತಿಯ ಪ್ರದೇಶಗಳಿಗಾಗುವ ಹಾನಿಯನ್ನು ಸರಿದೂಗಿಸುವ ಪ್ರಯತ್ನವನ್ನು ಇಲ್ಲಿಯ ಸರ್ಕಾರ ಮಾಡುತ್ತದೆ. ತನ್ನದಲ್ಲದ ವಿಚಾರವನ್ನು ಖ್ಯಾತೆ ತೆಗೆಯುತ್ತಾ ತನ್ನ ಗಣತಿಯನ್ನೇ ಕಳೆದುಕೊಳ್ಳುತ್ತಿದೆ. ಕರ್ನಾಟಕದ ಬಸವರಾಜ್ ಬೊಮ್ಮಯಿ ಸರ್ಕಾರವು ವಿಧಾನ ಸಭೆಯಲ್ಲಿ ಸರ್ವಾನು ಮತದಿಂದ ಪಕ್ಷ ಬೇಧ ಮರೆತು ತಮಿಳುನಾಡಿನ ನಿರ್ಣಯವನ್ನು ಖಂಡಿಸಿರುವುದು ಅತ್ಯಂತ ಸ್ವಾಗತಾರ್ಹ ಬೆಳವಣಿಗೆ ಇದರಿಂದಾದರೂ ಕನ್ನಡ ಭಾಷೆ, ನೆಲ, ಜಲಕ್ಕಾಗಿ ನಾವು ಒಂದಾಗುತ್ತೇವೆ. ನಿದ್ದೆಯಿಂದ ಎದ್ದ ರಾಜಕಾರಣಿಗಳು ಒಪ್ಪಿಕೊಂಡಿದ್ದಾರೆ. ತಮಿಳುನಾಡು ಮತ್ತು ಕರ್ನಾಟಕ ತಮ್ಮ ರಾಜಕೀಯ ಲಾಭವನ್ನು ಬದಿಗಿಟ್ಟು ಏ.ಖ.S ಹೂಳೆತ್ತುವ ಪ್ರಯತ್ನ ಮಾಡಿದರೆ ನೀರಿನ ಸಮಸ್ಯೆಯೇ ಬರುವುದಿಲ್ಲ. ತಮಿಳುನಾಡಿಗೆ ಅದರಲ್ಲಿಯೂ ಜಯಲಲಿತ ಮತ್ತು ಆಕೆಯ ಸರ್ಕಾರಕ್ಕೆ ಸಾಕಷ್ಟು ಬಾರಿ ನ್ಯಾಯಾಲಯ, ಕೇಂದ್ರ ಮತ್ತು ಪ್ರಾಧಿಕಾರಗಳ ಮುಂದೆ ಅವಮಾನವಾದರೂ ಕೂಡ ಕೇವಲ ಓಟಿಗಾಗಿ ಕಾವೇರಿ ಸಮಸ್ಯೆಯನ್ನು ಜೀವಂತವಾಗಿಟ್ಟಿದ್ದಾರೆ. ಅದೆಷ್ಟೋ ಬಾರಿ ತಮ್ಮ ಪಾಲನ್ನು ಕೇಳಿ ಪಡೆದು ಸಮುದ್ರಕ್ಕೆ ಹರಿಸಿದ್ದಾರೆ. ಈ ಮೊಂಡುತನದ ಜಲಧಾಹವು ತಮಿಳುನಾಡಿಗೆ ತೀರಬೇಕು. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯವು ಇನ್ನೊಂದು ರಾಜ್ಯದೊಂದಿಗೆ ಸೌಹರ್ದಯುತವಾಗಿ ನಡೆದುಕೊಳ್ಳುವುದು ಮತ್ತು ಸಮಸ್ಯೆಗಳನ್ನು ತಮ್ಮ ತಮ್ಮಲೇ ಮಾತುಕತೆಯ ಮೂಲಕ ಬಗೆ ಹರಿಸಿಕೊಳ್ಳುವುದು ಯೋಗ್ಯವಾಗಿರುತ್ತದೆ.


Share

ಬಡ ಜನರ ಕಷ್ಟಕ್ಕೆ ಸ್ಪಂದಿಸುವ ಯುವನಾಯಕ, ಕೆಲವೇ ತಿಂಗಳಲ್ಲಿ ಸೇಡಂ ಜನರ ಮನಗೆದ್ದ ಬಾಲರಾಜ್ ಗುತ್ತೇದಾರ್.

Share

ಸೇಡಂ : ಮಾಹಾಮರಿ ಕರೋನ ಎರಡನೇ ಅಲೆಯಿಂದ ದೇಶ ರಾಜ್ಯ ಜಿಲ್ಲೆ ತಾಲೂಕು ಸೇರಿದಂತೆ ಸಾವು -ನೋವುಗಳ ಅರಿತುಕೊಂಡ ಸರ್ಕಾರವು ಲಾಕ್ ಡೌನ್ ಜಾರಿಗೊಳಿಸಿ ಆದೇಶಿಸಿದಾಗ, ಬಡ ಜನರ ಸೇವೆಗಾಗಿ, ಖಾಸಗಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿವರ್ಗದವರಿಗೆ, ಅನಾಥ ನಿರ್ಗತಿಕರಿಗೆ,

ಕಡುಬಡವರಿಗೆ ಆಹಾರ ಧಾನ್ಯ ಕಿಟ್, ತಾಲೂಕ ಸೇರಿದಂತೆ ಎಲ್ಲಾ ಹಳ್ಳಿಗಳಲ್ಲಿ ಸ್ಯಾನಿಟೈಸರ್ ಸಿಂಪರಣೆ, ಉಚಿತ ಆಂಬುಲೆನ್ಸ್ ಸೇವೆ, ಬಡಮಕ್ಕಳ ಕೆಎಎಸ್, ಐಎಎಸ್, ಉನ್ನತಮಟ್ಟದ ಉಚಿತ ತರಬೇತಿ ಶಿಬಿರದ ಜವಾಬ್ದಾರಿ, ಉಚಿತ ವ್ಯಾಕ್ಸಿನೇಷನ್ ಅಭಿಮಾನದ ಮೂಲಕ ಯುವಕರ ಕಣ್ಮಣಿ ಯಾಗಿ, ಕೆಲವೇ ತಿಂಗಳಲ್ಲಿ ಜನರ ಅಚ್ಚುಮೆಚ್ಚಿನ ನಾಯಕರಾಗಿ , ಸರ್ಕಾರಿ ಅಧಿಕಾರಿಗಳು ಮೆಚ್ಚುವಂತಹ ಕೆಲಸ ಮಾಡುವುದರ ಜೊತೆಗೆ ಸೇಡಂ ಜನರ ಮನಗೆದ್ದ ಜೆಡಿಎಸ್ ಪಕ್ಷದ ಯುವ ನಾಯಕರೇ ಬಾಲರಾಜ್ ಅಶೋಕ್ ಗುತ್ತೇದಾರ್. ತಾಲೂಕಿಗೆ ಕೆಲವು ತಿಂಗಳುಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಮೂಲಕ ಕರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಜನರಿಗೆ ಮಾಡಿರುವಂತ ಸೇವೆಗಳು ಈ ಕೆಳಗಿನಂತಿವೆ.

1) ಪಟ್ಟಣದ ಹಮಾಲರಿಗೆ, ಆಟೋ ಚಾಲಕರಿಗೆ, ತಾಲೂಕಿನ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ಹಳ್ಳಿಗಳಲ್ಲಿನ ಕಡುಬಡವರಿಗೆ 50 ಸಾವಿರ ಆಹಾರ ಧಾನ್ಯ ಕಿಟ್ ವಿತರಣೆ ಮಾಡುವ ಮೂಲಕ ಎರಡು ತಿಂಗಳಿಗೆ ಸಹಾಯ ಮಾಡಿದರು.2) ಪಟ್ಟಣ ಸೇರಿದಂತೆ ತಾಲೂಕಿನ ಎಲ್ಲಾ ಹಳ್ಳಿಯಲ್ಲಿ ಉಚಿತ ಸ್ಯಾನಿಟೈಸರ್ ಮಾಡಿಸುವ ಮೂಲಕ ಕರೋನ ಮುಕ್ತ ಗ್ರಾಮ ಮಾಡಲು ಮುಂದಾದರು.3) ರಂಜಾನ್ ಸಂದರ್ಭದಲ್ಲಿ 3000 ಆಹಾರ ಧಾನ್ಯ ಕಿಟ್ ವಿತರಿಸಿದರು.4) ಕರೋನ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕರೋನ ಸೇನಾನಿಗಳಾಗಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಪೆÇೀಲಿಸ್ ಇಲಾಖೆಯ ಸಿಬ್ಬಂದಿ ವರ್ಗದವರಿಗೆ ಸ್ಯಾನಿಟೈಸರ್ ಮಾಸ್ಕ್, ವಿತರಿಸಿದರು.5) ಬಾಲರಾಜ ಬ್ರಿಗೇಡ್ ಫೌಂಡೇಶನ್, ಹಾಗೂ ಶಾರದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಕ್ಸಿಜನ್ ಸೌಲಭ್ಯವಿರುವ ಎರಡು ಅಂಬುಲೆನ್ಸ್ 24 ಗಂಟೆ ಉಚಿತವಾಗಿ, ಕೋವಿಡ್ ರೋಗಿಗಳಿಗೆ, ಬಾಣತಿಯರಿಗೆ ಬಡಜನರಿಗಾಗಿ ನೀಡಿದರು. 6) 45 ಪಟ್ಟಣ ಹಳ್ಳಿಯ ಬಡಮಕ್ಕಳ ಕೆಎಎಸ್, ಐಎಎಸ್, ಉನ್ನತಮಟ್ಟದ ಉಚಿತ ತರಬೇತಿ ಶಿಬಿರದ ಜವಾಬ್ದಾರಿಯನ್ನು ಹೊತ್ತಿದ್ದಾರೆ. 7) ಕೋವಿಡ್ ಲಸಿಕಾ ಅಭಿಯಾನ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಮೂರನೇ ಅಲಿಯ ತಡೆಗಟ್ಟುವಲ್ಲಿ ಮುಂದಾಳತ್ವ ವಹಿಸಿದ್ದರು. 8) ಪಟ್ಟಣ ಹಾಗೂ ಹಳ್ಳಿಯ ಸಮಸ್ಯೆಗಳನ್ನು ನಮ್ಮ ಜೊತೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಿ…. ಬಾಲರಾಜ್ ಬ್ರಿಗೇಡ್ ಸದಸ್ಯರಾಗಿ ನಮ್ಮ ಯುವ ನಾಯಕ ಬಾಲರಾಜ್ ಅಶೋಕ್ ಗುತ್ತೆದಾರ ಅವರೊಂದಿಗೆ ಸಮಾಜ ಮುಖಿ ಕಾರ್ಯಗಳಲ್ಲಿ ಕೈ ಜೋಡಿಸಿ

ಸದಸ್ಯರಾಗಲು https://balrajguttedarjds.com ವೆಬ್ ಸೈಟ್ ಪ್ರಾರಂಭಿಸುವ ಮೂಲಕ ಜನರ ಸೇವೆಗೆ ಮುಂದಾಗಿರುವುದು ಮೆಚ್ಚುವಂತದ್ದು.9) ಜುಲೈ ತಿಂಗಳಿನಲ್ಲಿ ಪ್ರವಾಹಕ್ಕೆ ಕೊಚ್ಚಿ ಹೋದ ಸಂಗವಿ ಎಂ ಗ್ರಾಮದ ಮಹಿಳೆ ಹಾಗೂ ಪೆÇತಂಗಲ್ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ನೀಡಿ ವೈಯಕ್ತಿಕ ಸಹಾಯಧನ ನೀಡುವುದರ ಜೊತೆಗೆ ಮಕ್ಕಳ ಉನ್ನತ ದರ್ಜೆಯ ಶಿಕ್ಷಣವು ಉಚಿತವಾಗಿ ನೀಡುವುದಾಗಿ ಜವಾಬ್ದಾರಿ

ಹೊತ್ತುಕೊಂಡಿದ್ದಾರೆ.10 ) ರೈತರ ಜಮೀನಿಗೆ ಭೇಟಿ ನೀಡಿ ಪ್ರತಿ ಎಕರೆಗೆ 20 ಸಾವಿರ ವಿಶೇಷ ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಾಲರಾಜ್ ಗುತ್ತೇದಾರ್ ಆಗ್ರಹಿಸಿದರು. ಂ) ಅನಾಥ ಆಶ್ರಮದ ವೃದ್ದರಿಗೆ ಆಹಾರ ಬಡಿಸುತ್ತಿರುವ ಬಾಲರಾಜ್ ಗುತ್ತೇದಾರ್,ಃ) ಉಚಿತ ಕೋವಿಡ ಲಸಿಕೆ ಅಭಿಯಾನದ ಮೂಲಕ ಜನರಲ್ಲಿ ಜಾಗೃತಿ. ಅ) ಪಟ್ಟಣ ಸೇರಿದಂತೆ ಎಲ್ಲಾ ಹಳ್ಳಿಗಳಿಗೂ ಉಚಿತ ಸ್ಯಾನಿಟೈಸರ್ ಸಿಂಪರಣೆ ಮಾಡುವ ಕಾರ್ಯಕ್ರಮಕ್ಕೆ ಶ್ರೀ ಪರಮಪೂಜ್ಯ ಸದಾಶಿವ ಮಹಾಸ್ವಾಮೀಜಿ, ಹಾಲಪ್ಪಯ್ಯ ವಿರಕ್ತಮಠದ ಪರಮಪೂಜ್ಯ ಶ್ರೀ ಪಂಚಾಕ್ಷರಿ ಸ್ವಾಮಿಗಳು ಚಾಲನೆ ನೀಡಿದರು.ಆ) ಮುಧೋಳ್ ನಲ್ಲಿ ನಟಿ ರಾಗಿಣಿ ಭುವನ್ ನೇತೃತದಲ್ಲಿ ಬಡವರಿಗೆ ಆಹಾರ ಧಾನ್ಯ ಕಿಟ್ ವಿತರಣೆ ಸಂದರ್ಭ.ಊ)ಖಾಸಗಿ ಶಿಕ್ಷಣ ಸಂಸ್ಥೆಯ ಸಿಬ್ಬಂದಿ ವರ್ಗದವರಿಗೆ ಆಹಾರ ಧಾನ್ಯ ಕಿಟ್ ವಿತರಣೆ. ಎ) ಆಕ್ಸಿಜನ್ ಸೌಲಭ್ಯವಿರುವ ಎರಡು ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ ನೀಡಿರುವ ಸಂದರ್ಭದಲ್ಲಿ.ಏ) ಲಾಕ್ ಡೌನ್ ಸಂದರ್ಭದಲ್ಲಿ ಕಲ್ಲಂಗಡಿ ಹಣ್ಣು ಮಾರಾಟವಾಗದೆ ಕಷ್ಟ ಅನುಭವಿಸುತ್ತಿರುವ ರೈತರ ಜಮೀನಿಗೆ ಭೇಟಿ ನೀಡಿ ಪರಿಹಾರಕ್ಕಾಗಿ ಸರ್ಕಾರಕ್ಕೆ ಒತ್ತಾಯಿಸಿದರು. ಐ) ಸುಲೇಪೇಟ್ ವ್ಯಾಪ್ತಿಯಲ್ಲಿ, ಆಹಾರ ಧಾನ್ಯ ಕಿಟ್ ವಿತರಣೆ ಸಂದರ್ಭದಲ್ಲಿ.ಒ)

ವಿಶೇಷ ವರದಿ: ಬಿಜನಳ್ಳಿ ಸುರೇಶ್ ಉಪಸಂಪಾದಕರು ಕಲ್ಬುರ್ಗಿ


Share

ಸಿಎಂ ಬಸವರಾಜ ಬೊಮ್ಮಾಯಿ ಬದುಕಿನ ಪಯಣ

Share

ಬಸವರಾಜ ಬೊಮ್ಮಾಯಿ ಕರ್ನಾಟಕದ ಒಬ್ಬರು ರಾಜಕಾರಣಿ. ಭಾರತೀಯ ಜನತಾ ಪಕ್ಷದಿಂದ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿದ್ದಾರೆ. ಜುಲೈ 28, 2021 ರಂದು ಬಿ.ಎಸ್. ಯಡಿಯೂರಪ್ಪರವರ ನಂತರ ಬೊಮ್ಮಾಯಿ ಕರ್ನಾಟಕದ ೨೩ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಬಸವರಾಜ ಸೋಮಪ್ಪ ಬೊಮ್ಮಾಯಿ ಕರ್ನಾಟಕದ ಮಾಜಿ ಸಿಎಂ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್. ಆರ್. ಬೊಮ್ಮಾಯಿ-ಗಂಗಮ್ಮ ಅವರ ಪುತ್ರ. 1960 ರ ಜ.28 ರಂದು ಜನಿಸಿದ ಬೊಮ್ಮಾಯಿ ಬಿ.ವಿ ಬೊಮ್ಮರೆಡ್ಡಿ ಕಾಲೇಜ್ ಆಫ್ ಇಂಜಿನಿಯರಿಂಗ್ ನಿಂದ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪದವಿ ಪಡೆದ ಬೊಮ್ಮಾಯಿ ಮೂಲತಃ ವೃತ್ತಿಯಲ್ಲಿ ಕೃಷಿಕ ಮತ್ತು ಕೈಗಾರಿಕೋದ್ಯಮಿ.

ನೀರಾವರಿ ಯೋಜನೆಗಳಲ್ಲಿ ಹಾಗೂ ನೀರಾವರಿ ವಿಷಯಗಳಲ್ಲಿ ಆಳವಾದ ಜ್ಞಾನ ಹೊಂದಿರುವ ಅವರು, ಹಾವೇರಿ ಜಿಲ್ಲೆಯ ಶಿಗ್ಗಾಂವ್ ನಲ್ಲಿ ಭಾರತದಲ್ಲೇ ಮೊದಲ ಶೇ.100 ರಷ್ಟು ಕೊಳವೆ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು ಸೇರಿದಂತೆ ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದು ಜಲಸಂಪನ್ಮೂಲ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ರಾಯಕೀಯ ಜೀವನ

ಅವರು ಜನತಾದಳದಿಂದ ತಮ್ಮ ರಾಜಕೀಯವನ್ನು ಪ್ರಾರಂಭಿಸಿದರು.
1998 ಹಾಗೂ 2004 ರಲ್ಲಿ ಧಾರವಾಡ ಸ್ಥಳೀಯ ಅಧಿಕಾರಿಗಳ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು.
2008 ರಲ್ಲಿ ಜನತಾದಳವನ್ನು ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
2008 ರ ವಿಧಾನಸಭಾ ಚುನಾವಣೆಯಲ್ಲಿ ಶಿಗ್ಗಾಂವ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಬೊಮ್ಮಾಯಿ ಆಯ್ಕೆಗೊಂಡಿದ್ದರು. ಬೊಮ್ಮಾಯಿ ಅವರು ಈ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಜೆ. ಹೆಚ್. ಪಟೇಲ್ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಕಾನೂನು ಮತ್ತು ಸಂಸದೀಯ ಸಚಿವರಾಗಿ, ಸಹಕಾರ ಸಚಿವರಾಗಿ ಕಾರ್ಯನಿರ್ವಹಣೆ ಮಾಡಿರುವ ಅನುಭವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದಾರೆ.
ಯಡಿಯೂರಪ್ಪ ಅವರ ಸಂಪುಟದಲ್ಲಿ ಗೃಹ ಖಾತೆಯನ್ನು ನಿರ್ವಹಿಸಿ ಅನುಭವ ಹೊಂದಿರುವ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನಕ್ಕೇರಿದರು.
ಜನತಾದಳದಿಂದ ಸೋಮಪ್ಪ ರಾಯಪ್ಪ ಬೊಮ್ಮಾಯಿ (ಎಸ್ ಆರ್ ಬೊಮ್ಮಾಯಿ) ಅವರು ಮುಖ್ಯಮಂತ್ರಿಯಾಗಿದ್ದ (1988-89) 32-33 ವರ್ಷಗಳ ನಂತರ ಅವರ ಪುತ್ರ ಬಸವರಾಜ ಬೊಮ್ಮಾಯಿ ಅವರು ಬಿಜೆಪಿಯಿಂದ ಮುಖ್ಯಮಂತ್ರಿಯಾಗಿದ್ದಾರೆ.


Share

ಬೇಲೂರು ತಾಲ್ಲೂಕಿನ ಪುರಸಭೆ ಚುನಾವಣೆ : ಕಾಂಗ್ರೆಸ್ ಮೇಲುಗೈ

Share

ಬೇಲೂರು: ಬೇಲೂರು ತಾಲ್ಲೂಕಿನಲ್ಲಿ ನೆಡೆದ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ ಕಾಂಗ್ರೆಸ್ ಪಕ್ಷ 17 ಸದಸ್ಯರು ಜಯ ಸಾಧಿಸಿದ್ದಾರೆ ಮತ್ತು ಜೆ ಡಿ ಎಸ್ ಪಕ್ಷ 5 ಜಯ ಸಾಧಿಸಿದ್ದಾರೆ ಹಾಗೂ ಬಿ ಜೆ ಪಿ ಪಕ್ಷ 1 ಸ್ಥಾನ ಪಡೆದಿದೆ ಕಾಂಗ್ರೆಸ್ ಪಕ್ಷ ಕೆ ಪಿ ಸಿ ಸಿ ಉಪಾಧ್ಯಕ್ಷ ರಾದ ಬಿ ಶಿವಾರಂ ರವರು ಕಾಂಗ್ರೆಸ್ ಪಕ್ಷವು ಸಾರ್ವಜನಿಕರಿಗೆ ಉತ್ತಮವಾದ ಪಕ್ಷವಾಗಿದೆ ಈ ರಾಜ್ಯ. ದಲ್ಲಿ ನಮ್ಮ ಪಕ್ಷ ವಾದ ಕಾಂಗ್ರೆಸ್ ಪಕ್ಷವು ಸಾರ್ವಜನಿಕರಿಗೆ ಉತ್ತಮ ಆಡಳಿತವನ್ನು ಕೊಟ್ಟಿದೆ ಬೇಲೂರು ತಾಲ್ಲೂಕಿನ ಜನತೆಗೆ ಹೃದಯ ಪೂರಕವಾಗಿ ಸ್ವಾಗತಿಸುತ್ತನೆ ಹಾಗೂ ಬೇಲೂರು ಪುರಸಭೆಯಲ್ಲಿ ಕಾಂಗ್ರೆಸ್ ಪಕ್ಷ ದಿಂದ ಗೆದ್ದಿರುವರು ತಾಲ್ಲೂಕಿನ. ಅಭಿವೃದ್ಧಿ ಕಡೆಗೆ ಹೇಚ್ಚಿನ ಗಮನಹರಿಸಬೇಕು.ಎಂದು ಹೇಳಿದರು.


Share